Homeರಾಜಕೀಯರಾಫೇಲ್ ಡೀಲ್ ಸ್ಫೋಟಕ ಸತ್ಯ: ಸುಪ್ರೀಂ ಕೋರ್ಟ್ಗೇ ಹಸೀ ಸುಳ್ಳು ಹೇಳಿದ ಮೋದಿ ಸರ್ಕಾರ

ರಾಫೇಲ್ ಡೀಲ್ ಸ್ಫೋಟಕ ಸತ್ಯ: ಸುಪ್ರೀಂ ಕೋರ್ಟ್ಗೇ ಹಸೀ ಸುಳ್ಳು ಹೇಳಿದ ಮೋದಿ ಸರ್ಕಾರ

- Advertisement -
- Advertisement -

ಬಹುಶಃ ಇದಕ್ಕಿಂತ ದೊಡ್ಡ ಹಗರಣ ಇತ್ತೀಚಿನ ದಿನಗಳಲ್ಲಿ ನಡೆದಿರಲಾರದು. ರಾಫೇಲ್ ಡೀಲ್ ವಿಚಾರದಲ್ಲಿ ಸತ್ಯವನ್ನು ಮುಚ್ಚಿ ಹಾಕಲು ಮೋದಿ ಸರ್ಕಾರ ಪ್ರಯತ್ನಿಸಿದಂತೆಲ್ಲಾ, ಹೊಸ ಹೊಸ ಹಗರಣಗಳನ್ನೇ ಮಾಡುತ್ತಿದೆ. ಅದರಲ್ಲಿ ಅತ್ಯಂತ ಹೊಸ ಹಗರಣ ಹಿಂದೆಂದಿಗಿಂತಲೂ ಆಘಾತಕಾರಿಯಾದುದು. ಮೋದಿ ಸರ್ಕಾರವು ಹಸೀ ಹಸೀ ಸುಳ್ಳನ್ನು ಸುಪ್ರಿಂಕೋರ್ಟಿಗೇ ಹೇಳಲಾಗಿದೆ.

ಹೌದು, ಇಂದು ರಾಫೇಲ್ ವಿಚಾರದಲ್ಲಿ ಸುಪ್ರೀಂಕೋರ್ಟು ತೀರ್ಪು ಹೊರಬಿದ್ದ ನಂತರ ಚುನಾವಣಾ ಸೋಲಿನಿಂದ ಕಂಗೆಟ್ಟಿದ್ದ ಬಿಜೆಪಿ ನಾಯಕರು ಮತ್ತು ಗೋದಿ ಮೀಡಿಯಾಗೆ ಇದ್ದಕ್ಕಿದ್ದಂತೆ ಭಾರೀ ಹುಮ್ಮಸ್ಸು ಬಂದಿತು. ಆದರೆ ಜಡ್ಜ್ಮೆಂಟ್ ಪ್ರತಿ ಹೊರಬಿದ್ದು ಅದನ್ನು ಸಂಪೂರ್ಣವಾಗಿ ಪರಿಶೀಲಿಸಿದ ನಂತರ ಇನ್ನೊಂದು ಹಗರಣ ಹೊರಬಿದ್ದಿತು.

ಸುಪ್ರೀಂಕೋರ್ಟು ಹೇಳಿದ್ದು ಇಷ್ಟು. ಈ ವ್ಯವಹಾರದ ತಾಂತ್ರಿಕ ಅಂಶಗಳನ್ನು ನಿರ್ಧರಿಸುವುದು ನಮ್ಮ ಪರಿಣಿತಿಯ ವಿಚಾರ ಅಲ್ಲ; ಡಸಾಲ್ಟ್ & ರಿಲೆಯನ್ಸ್ ನಡುವೆ ಏನು ನಡೆದಿದೆ ಅದು ಎರಡು ಕಾರ್ಪೋರೇಟ್ ಕಂಪೆನಿಗಳ ನಡುವಿನ ವ್ಯವಹಾರ; ಇದರಲ್ಲಿ ಪ್ರತಿವಾದಿ (ನರೇಂದ್ರ ದಾಮೋದರದಾಸ್ ಮೋದಿ)ಯ ಪಾತ್ರದ ಬಗ್ಗೆ ಏನು ಹೇಳಲಾಗುತ್ತಿದೆ ಅದನ್ನು ಅವರು ನಿರಾಕರಿಸಿದ್ದಾರೆ. ಈ ವ್ಯವಹಾರವನ್ನು ಸೂಕ್ತ ಪ್ರಕ್ರಿಯೆಗಳನ್ನು ಅನುಸರಿಸಿಯೇ ಮಾಡಲಾಗಿದೆ. (ಈ ಕುರಿತು ತೀರ್ಪಿನ 21ನೇ ಪುಟದ 25ನೇ ಪಾಯಿಂಟ್‌ನಲ್ಲಿ ಹೇಳಲಾಗಿದೆ) ವ್ಯವಹಾರದ ದರಗಳ ಕುರಿತು ಕಂಟ್ರೋಲರ್ & ಆಡಿಟರ್ ಜನರಲ್ (ಸಿಎಜಿ) ಮುಂದೆ ಇಡಲಾಗಿದೆ ಮತ್ತು ಅದನ್ನು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ (ಪಿಎಸಿ) ಪರಿಶೀಲಿಸಿದೆ. ಇವೆಲ್ಲಾ ಕಾರಣಗಳಿಂದ ಇದರಲ್ಲಿ ಮಧ್ಯಪ್ರವೇಶಿಸುವುದು ಸರಿಯಲ್ಲ ಎಂದು ನ್ಯಾಯಾಲಯವು ಭಾವಿಸಿ ಈ ಪಿಟಿಷನ್‌ಅನ್ನು ವಜಾಗೊಳಿಸುತ್ತೇವೆ.

ಈ ಎಲ್ಲಾ ವ್ಯವಹಾರವು ಸೂಕ್ತ ಪ್ರಕ್ರಿಯೆಯನ್ನನುಸರಿಸಿಯೇ ನಡೆದಿದೆ ಎಂದು ಸುಪ್ರೀಂಕೋರ್ಟು ಭಾವಿಸಲು ಇದು ಮುಖ್ಯ ಕಾರಣಗಳಲ್ಲೊಂದಾಗಿದೆ.

(ತೀರ್ಪಿನ ಪ್ರತಿಯ ಈ ಭಾಗವನ್ನೂ ನೋಡಬಹುದು)

ಆದರೆ, ವಾಸ್ತವವೇನು?

ಕಾಕತಾಳೀಯವಾಗಿ, ಈ ತೀರ್ಪು ಬಂದ ದಿನವೇ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಸಭೆ ಮಧ್ಯಾಹ್ನ 3 ಗಂಟೆಗೆ ನಡೆದಿದೆ. ಅದರ ಅಧ್ಯಕ್ಷರು ಡೆಪ್ಯುಟಿ ಸಿಎಜಿಯನ್ನು ‘ನಮ್ಮ ಮುಂದಿಟ್ಟಿದ್ದ ಆ ವರದಿ ಯಾವುದು?’ ಎಂದು ಕೇಳಿದ್ದಾರೆ. ಅಂತಹ ಯಾವ ವರದಿಯೂ ಇಲ್ಲವೆಂದು ಅವರು ಉತ್ತರಿಸಿದ್ದಾರೆ. ಅಂದರೆ, ಸಿಎಜಿಯ ಮುಂದಾಗಲೀ ಪಿಎಸಿಯ ಮುಂದಾಗಲೀ ಅಂತಹ ಯಾವ ಮಾಹಿತಿಯನ್ನೂ ಕೊಟ್ಟೇ ಇಲ್ಲ. ಅಷ್ಟೂ ಸಾಲದೆಂಬಂತೆ ಅವೆಲ್ಲವನ್ನೂ ಮಾಡಿಯಾಗಿದೆಯೆಂದು ಸುಪ್ರೀಂಕೋರ್ಟಿಗೇ ಸುಳ್ಳು ಹೇಳಲಾಗಿದೆ.

ಖುದ್ದು ಪಿಎಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರನ್ನೂ ಪಕ್ಕದಲ್ಲೇ ಕೂರಿಸಿಕೊಂಡು, ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ಗಾಂಧಿಯವರು ಇಂದು ಪತ್ರಿಕಾಗೋಷ್ಠಿ ನಡೆಸಿ ಇದೆಲ್ಲವನ್ನೂ ವಿವರಿಸಿದ್ದಾರೆ. (ಪತ್ರಿಕಾಗೋಷ್ಠಿಯ ವಿಡಿಯೋ ಇದರೊಂದಿಗಿದೆ, ನೋಡಬಹುದು)

ಹಾಗೆಯೇ ಸುಪ್ರೀಂಕೋರ್ಟಿನ ಅತ್ಯಂತ ಘನತೆವೆತ್ತ ನ್ಯಾಯವಾದಿಗಳಲ್ಲೊಬ್ಬರಾದ ಪ್ರಶಾಂತ್ ಭೂಷಣ್ ಏನು ಹೇಳಿದ್ದಾರೆಂಬುದರ ಕುರಿತೂ ಸದ್ಯದಲ್ಲೇ ವಿವರಗಳನ್ನು ನಿಮ್ಮ ಮುಂದಿಡಲಾಗುವುದು. ಎಲ್ಲಾ ವಿವರಗಳೂ ಈ ಸುದ್ದಿಯೊಂದಿಗೆ ಅಪ್‌ಡೇಟ್ ಆಗುತ್ತಿರುತ್ತದೆ, ಸರ್ಕಾರವು ಮತ್ತು ಸುಪ್ರೀಂಕೋರ್ಟು ನಂತರ ಏನೇನು ಹೇಳುತ್ತದೆ ಎಂಬ ವಿವರಗಳು ಇದರ ಜೊತೆಗೆ ಇರುತ್ತವೆ. ಆಗಿಂದಾಗ್ಗೆ ಈ ಪುಟವನ್ನು ನೀವು ನೋಡುತ್ತಿರಬಹುದು.

ಅದೇನೇ ಇರಲಿ, ಸುಪ್ರೀಂಕೋರ್ಟಿನ ತೀರ್ಪು ಬಂದು ಕ್ಲೀನ್‌ಚಿಟ್ ಸಿಕ್ಕಿತು ಎಂದು ಎಲ್ಲರೂ ಭಾವಿಸುತ್ತಿರುವಾಗ, ಅದು ಕ್ಲೀನ್‌ಚಿಟ್ ಅಲ್ಲ; ಪಾರ್ಲಿಮೆಂಟ್ ಸಮಿತಿಗೇ ವರದಿ ಕೊಟ್ಟಿದ್ದೇವೆಂದು ಸುಪ್ರೀಂಕೋರ್ಟಿಗೇ ಸ್ವತಃ ಕೇಂದ್ರ ಸರ್ಕಾರವೇ ಸುಳ್ಳು ಹೇಳಿದ ಪ್ರಕರಣ ಎಂದು ಬಿಚ್ಚಿಕೊಳ್ಳುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ.

ಈ ವಿಚಾರದಲ್ಲಿ ಹೊರಬರುವ, ಈ ವಾದಕ್ಕೆ ಪ್ರತಿಯಾಗಿ ಬರುವ ವಾದಗಳನ್ನೂ ನಿಮ್ಮ ಮುಂದಿಡುವ ಕೆಲಸವನ್ನು ಈ ಪುಟದಲ್ಲಿ ಮಾಡಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...