Homeರಾಜಕೀಯರಾಫೇಲ್ ಡೀಲ್ ಸ್ಫೋಟಕ ಸತ್ಯ: ಸುಪ್ರೀಂ ಕೋರ್ಟ್ಗೇ ಹಸೀ ಸುಳ್ಳು ಹೇಳಿದ ಮೋದಿ ಸರ್ಕಾರ

ರಾಫೇಲ್ ಡೀಲ್ ಸ್ಫೋಟಕ ಸತ್ಯ: ಸುಪ್ರೀಂ ಕೋರ್ಟ್ಗೇ ಹಸೀ ಸುಳ್ಳು ಹೇಳಿದ ಮೋದಿ ಸರ್ಕಾರ

- Advertisement -
- Advertisement -

ಬಹುಶಃ ಇದಕ್ಕಿಂತ ದೊಡ್ಡ ಹಗರಣ ಇತ್ತೀಚಿನ ದಿನಗಳಲ್ಲಿ ನಡೆದಿರಲಾರದು. ರಾಫೇಲ್ ಡೀಲ್ ವಿಚಾರದಲ್ಲಿ ಸತ್ಯವನ್ನು ಮುಚ್ಚಿ ಹಾಕಲು ಮೋದಿ ಸರ್ಕಾರ ಪ್ರಯತ್ನಿಸಿದಂತೆಲ್ಲಾ, ಹೊಸ ಹೊಸ ಹಗರಣಗಳನ್ನೇ ಮಾಡುತ್ತಿದೆ. ಅದರಲ್ಲಿ ಅತ್ಯಂತ ಹೊಸ ಹಗರಣ ಹಿಂದೆಂದಿಗಿಂತಲೂ ಆಘಾತಕಾರಿಯಾದುದು. ಮೋದಿ ಸರ್ಕಾರವು ಹಸೀ ಹಸೀ ಸುಳ್ಳನ್ನು ಸುಪ್ರಿಂಕೋರ್ಟಿಗೇ ಹೇಳಲಾಗಿದೆ.

ಹೌದು, ಇಂದು ರಾಫೇಲ್ ವಿಚಾರದಲ್ಲಿ ಸುಪ್ರೀಂಕೋರ್ಟು ತೀರ್ಪು ಹೊರಬಿದ್ದ ನಂತರ ಚುನಾವಣಾ ಸೋಲಿನಿಂದ ಕಂಗೆಟ್ಟಿದ್ದ ಬಿಜೆಪಿ ನಾಯಕರು ಮತ್ತು ಗೋದಿ ಮೀಡಿಯಾಗೆ ಇದ್ದಕ್ಕಿದ್ದಂತೆ ಭಾರೀ ಹುಮ್ಮಸ್ಸು ಬಂದಿತು. ಆದರೆ ಜಡ್ಜ್ಮೆಂಟ್ ಪ್ರತಿ ಹೊರಬಿದ್ದು ಅದನ್ನು ಸಂಪೂರ್ಣವಾಗಿ ಪರಿಶೀಲಿಸಿದ ನಂತರ ಇನ್ನೊಂದು ಹಗರಣ ಹೊರಬಿದ್ದಿತು.

ಸುಪ್ರೀಂಕೋರ್ಟು ಹೇಳಿದ್ದು ಇಷ್ಟು. ಈ ವ್ಯವಹಾರದ ತಾಂತ್ರಿಕ ಅಂಶಗಳನ್ನು ನಿರ್ಧರಿಸುವುದು ನಮ್ಮ ಪರಿಣಿತಿಯ ವಿಚಾರ ಅಲ್ಲ; ಡಸಾಲ್ಟ್ & ರಿಲೆಯನ್ಸ್ ನಡುವೆ ಏನು ನಡೆದಿದೆ ಅದು ಎರಡು ಕಾರ್ಪೋರೇಟ್ ಕಂಪೆನಿಗಳ ನಡುವಿನ ವ್ಯವಹಾರ; ಇದರಲ್ಲಿ ಪ್ರತಿವಾದಿ (ನರೇಂದ್ರ ದಾಮೋದರದಾಸ್ ಮೋದಿ)ಯ ಪಾತ್ರದ ಬಗ್ಗೆ ಏನು ಹೇಳಲಾಗುತ್ತಿದೆ ಅದನ್ನು ಅವರು ನಿರಾಕರಿಸಿದ್ದಾರೆ. ಈ ವ್ಯವಹಾರವನ್ನು ಸೂಕ್ತ ಪ್ರಕ್ರಿಯೆಗಳನ್ನು ಅನುಸರಿಸಿಯೇ ಮಾಡಲಾಗಿದೆ. (ಈ ಕುರಿತು ತೀರ್ಪಿನ 21ನೇ ಪುಟದ 25ನೇ ಪಾಯಿಂಟ್‌ನಲ್ಲಿ ಹೇಳಲಾಗಿದೆ) ವ್ಯವಹಾರದ ದರಗಳ ಕುರಿತು ಕಂಟ್ರೋಲರ್ & ಆಡಿಟರ್ ಜನರಲ್ (ಸಿಎಜಿ) ಮುಂದೆ ಇಡಲಾಗಿದೆ ಮತ್ತು ಅದನ್ನು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ (ಪಿಎಸಿ) ಪರಿಶೀಲಿಸಿದೆ. ಇವೆಲ್ಲಾ ಕಾರಣಗಳಿಂದ ಇದರಲ್ಲಿ ಮಧ್ಯಪ್ರವೇಶಿಸುವುದು ಸರಿಯಲ್ಲ ಎಂದು ನ್ಯಾಯಾಲಯವು ಭಾವಿಸಿ ಈ ಪಿಟಿಷನ್‌ಅನ್ನು ವಜಾಗೊಳಿಸುತ್ತೇವೆ.

ಈ ಎಲ್ಲಾ ವ್ಯವಹಾರವು ಸೂಕ್ತ ಪ್ರಕ್ರಿಯೆಯನ್ನನುಸರಿಸಿಯೇ ನಡೆದಿದೆ ಎಂದು ಸುಪ್ರೀಂಕೋರ್ಟು ಭಾವಿಸಲು ಇದು ಮುಖ್ಯ ಕಾರಣಗಳಲ್ಲೊಂದಾಗಿದೆ.

(ತೀರ್ಪಿನ ಪ್ರತಿಯ ಈ ಭಾಗವನ್ನೂ ನೋಡಬಹುದು)

ಆದರೆ, ವಾಸ್ತವವೇನು?

ಕಾಕತಾಳೀಯವಾಗಿ, ಈ ತೀರ್ಪು ಬಂದ ದಿನವೇ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಸಭೆ ಮಧ್ಯಾಹ್ನ 3 ಗಂಟೆಗೆ ನಡೆದಿದೆ. ಅದರ ಅಧ್ಯಕ್ಷರು ಡೆಪ್ಯುಟಿ ಸಿಎಜಿಯನ್ನು ‘ನಮ್ಮ ಮುಂದಿಟ್ಟಿದ್ದ ಆ ವರದಿ ಯಾವುದು?’ ಎಂದು ಕೇಳಿದ್ದಾರೆ. ಅಂತಹ ಯಾವ ವರದಿಯೂ ಇಲ್ಲವೆಂದು ಅವರು ಉತ್ತರಿಸಿದ್ದಾರೆ. ಅಂದರೆ, ಸಿಎಜಿಯ ಮುಂದಾಗಲೀ ಪಿಎಸಿಯ ಮುಂದಾಗಲೀ ಅಂತಹ ಯಾವ ಮಾಹಿತಿಯನ್ನೂ ಕೊಟ್ಟೇ ಇಲ್ಲ. ಅಷ್ಟೂ ಸಾಲದೆಂಬಂತೆ ಅವೆಲ್ಲವನ್ನೂ ಮಾಡಿಯಾಗಿದೆಯೆಂದು ಸುಪ್ರೀಂಕೋರ್ಟಿಗೇ ಸುಳ್ಳು ಹೇಳಲಾಗಿದೆ.

ಖುದ್ದು ಪಿಎಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರನ್ನೂ ಪಕ್ಕದಲ್ಲೇ ಕೂರಿಸಿಕೊಂಡು, ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ಗಾಂಧಿಯವರು ಇಂದು ಪತ್ರಿಕಾಗೋಷ್ಠಿ ನಡೆಸಿ ಇದೆಲ್ಲವನ್ನೂ ವಿವರಿಸಿದ್ದಾರೆ. (ಪತ್ರಿಕಾಗೋಷ್ಠಿಯ ವಿಡಿಯೋ ಇದರೊಂದಿಗಿದೆ, ನೋಡಬಹುದು)

ಹಾಗೆಯೇ ಸುಪ್ರೀಂಕೋರ್ಟಿನ ಅತ್ಯಂತ ಘನತೆವೆತ್ತ ನ್ಯಾಯವಾದಿಗಳಲ್ಲೊಬ್ಬರಾದ ಪ್ರಶಾಂತ್ ಭೂಷಣ್ ಏನು ಹೇಳಿದ್ದಾರೆಂಬುದರ ಕುರಿತೂ ಸದ್ಯದಲ್ಲೇ ವಿವರಗಳನ್ನು ನಿಮ್ಮ ಮುಂದಿಡಲಾಗುವುದು. ಎಲ್ಲಾ ವಿವರಗಳೂ ಈ ಸುದ್ದಿಯೊಂದಿಗೆ ಅಪ್‌ಡೇಟ್ ಆಗುತ್ತಿರುತ್ತದೆ, ಸರ್ಕಾರವು ಮತ್ತು ಸುಪ್ರೀಂಕೋರ್ಟು ನಂತರ ಏನೇನು ಹೇಳುತ್ತದೆ ಎಂಬ ವಿವರಗಳು ಇದರ ಜೊತೆಗೆ ಇರುತ್ತವೆ. ಆಗಿಂದಾಗ್ಗೆ ಈ ಪುಟವನ್ನು ನೀವು ನೋಡುತ್ತಿರಬಹುದು.

ಅದೇನೇ ಇರಲಿ, ಸುಪ್ರೀಂಕೋರ್ಟಿನ ತೀರ್ಪು ಬಂದು ಕ್ಲೀನ್‌ಚಿಟ್ ಸಿಕ್ಕಿತು ಎಂದು ಎಲ್ಲರೂ ಭಾವಿಸುತ್ತಿರುವಾಗ, ಅದು ಕ್ಲೀನ್‌ಚಿಟ್ ಅಲ್ಲ; ಪಾರ್ಲಿಮೆಂಟ್ ಸಮಿತಿಗೇ ವರದಿ ಕೊಟ್ಟಿದ್ದೇವೆಂದು ಸುಪ್ರೀಂಕೋರ್ಟಿಗೇ ಸ್ವತಃ ಕೇಂದ್ರ ಸರ್ಕಾರವೇ ಸುಳ್ಳು ಹೇಳಿದ ಪ್ರಕರಣ ಎಂದು ಬಿಚ್ಚಿಕೊಳ್ಳುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ.

ಈ ವಿಚಾರದಲ್ಲಿ ಹೊರಬರುವ, ಈ ವಾದಕ್ಕೆ ಪ್ರತಿಯಾಗಿ ಬರುವ ವಾದಗಳನ್ನೂ ನಿಮ್ಮ ಮುಂದಿಡುವ ಕೆಲಸವನ್ನು ಈ ಪುಟದಲ್ಲಿ ಮಾಡಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...