Homeರಾಜಕೀಯರಾಫೇಲ್ ಡೀಲ್ ಸ್ಫೋಟಕ ಸತ್ಯ: ಸುಪ್ರೀಂ ಕೋರ್ಟ್ಗೇ ಹಸೀ ಸುಳ್ಳು ಹೇಳಿದ ಮೋದಿ ಸರ್ಕಾರ

ರಾಫೇಲ್ ಡೀಲ್ ಸ್ಫೋಟಕ ಸತ್ಯ: ಸುಪ್ರೀಂ ಕೋರ್ಟ್ಗೇ ಹಸೀ ಸುಳ್ಳು ಹೇಳಿದ ಮೋದಿ ಸರ್ಕಾರ

- Advertisement -
- Advertisement -

ಬಹುಶಃ ಇದಕ್ಕಿಂತ ದೊಡ್ಡ ಹಗರಣ ಇತ್ತೀಚಿನ ದಿನಗಳಲ್ಲಿ ನಡೆದಿರಲಾರದು. ರಾಫೇಲ್ ಡೀಲ್ ವಿಚಾರದಲ್ಲಿ ಸತ್ಯವನ್ನು ಮುಚ್ಚಿ ಹಾಕಲು ಮೋದಿ ಸರ್ಕಾರ ಪ್ರಯತ್ನಿಸಿದಂತೆಲ್ಲಾ, ಹೊಸ ಹೊಸ ಹಗರಣಗಳನ್ನೇ ಮಾಡುತ್ತಿದೆ. ಅದರಲ್ಲಿ ಅತ್ಯಂತ ಹೊಸ ಹಗರಣ ಹಿಂದೆಂದಿಗಿಂತಲೂ ಆಘಾತಕಾರಿಯಾದುದು. ಮೋದಿ ಸರ್ಕಾರವು ಹಸೀ ಹಸೀ ಸುಳ್ಳನ್ನು ಸುಪ್ರಿಂಕೋರ್ಟಿಗೇ ಹೇಳಲಾಗಿದೆ.

ಹೌದು, ಇಂದು ರಾಫೇಲ್ ವಿಚಾರದಲ್ಲಿ ಸುಪ್ರೀಂಕೋರ್ಟು ತೀರ್ಪು ಹೊರಬಿದ್ದ ನಂತರ ಚುನಾವಣಾ ಸೋಲಿನಿಂದ ಕಂಗೆಟ್ಟಿದ್ದ ಬಿಜೆಪಿ ನಾಯಕರು ಮತ್ತು ಗೋದಿ ಮೀಡಿಯಾಗೆ ಇದ್ದಕ್ಕಿದ್ದಂತೆ ಭಾರೀ ಹುಮ್ಮಸ್ಸು ಬಂದಿತು. ಆದರೆ ಜಡ್ಜ್ಮೆಂಟ್ ಪ್ರತಿ ಹೊರಬಿದ್ದು ಅದನ್ನು ಸಂಪೂರ್ಣವಾಗಿ ಪರಿಶೀಲಿಸಿದ ನಂತರ ಇನ್ನೊಂದು ಹಗರಣ ಹೊರಬಿದ್ದಿತು.

ಸುಪ್ರೀಂಕೋರ್ಟು ಹೇಳಿದ್ದು ಇಷ್ಟು. ಈ ವ್ಯವಹಾರದ ತಾಂತ್ರಿಕ ಅಂಶಗಳನ್ನು ನಿರ್ಧರಿಸುವುದು ನಮ್ಮ ಪರಿಣಿತಿಯ ವಿಚಾರ ಅಲ್ಲ; ಡಸಾಲ್ಟ್ & ರಿಲೆಯನ್ಸ್ ನಡುವೆ ಏನು ನಡೆದಿದೆ ಅದು ಎರಡು ಕಾರ್ಪೋರೇಟ್ ಕಂಪೆನಿಗಳ ನಡುವಿನ ವ್ಯವಹಾರ; ಇದರಲ್ಲಿ ಪ್ರತಿವಾದಿ (ನರೇಂದ್ರ ದಾಮೋದರದಾಸ್ ಮೋದಿ)ಯ ಪಾತ್ರದ ಬಗ್ಗೆ ಏನು ಹೇಳಲಾಗುತ್ತಿದೆ ಅದನ್ನು ಅವರು ನಿರಾಕರಿಸಿದ್ದಾರೆ. ಈ ವ್ಯವಹಾರವನ್ನು ಸೂಕ್ತ ಪ್ರಕ್ರಿಯೆಗಳನ್ನು ಅನುಸರಿಸಿಯೇ ಮಾಡಲಾಗಿದೆ. (ಈ ಕುರಿತು ತೀರ್ಪಿನ 21ನೇ ಪುಟದ 25ನೇ ಪಾಯಿಂಟ್‌ನಲ್ಲಿ ಹೇಳಲಾಗಿದೆ) ವ್ಯವಹಾರದ ದರಗಳ ಕುರಿತು ಕಂಟ್ರೋಲರ್ & ಆಡಿಟರ್ ಜನರಲ್ (ಸಿಎಜಿ) ಮುಂದೆ ಇಡಲಾಗಿದೆ ಮತ್ತು ಅದನ್ನು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ (ಪಿಎಸಿ) ಪರಿಶೀಲಿಸಿದೆ. ಇವೆಲ್ಲಾ ಕಾರಣಗಳಿಂದ ಇದರಲ್ಲಿ ಮಧ್ಯಪ್ರವೇಶಿಸುವುದು ಸರಿಯಲ್ಲ ಎಂದು ನ್ಯಾಯಾಲಯವು ಭಾವಿಸಿ ಈ ಪಿಟಿಷನ್‌ಅನ್ನು ವಜಾಗೊಳಿಸುತ್ತೇವೆ.

ಈ ಎಲ್ಲಾ ವ್ಯವಹಾರವು ಸೂಕ್ತ ಪ್ರಕ್ರಿಯೆಯನ್ನನುಸರಿಸಿಯೇ ನಡೆದಿದೆ ಎಂದು ಸುಪ್ರೀಂಕೋರ್ಟು ಭಾವಿಸಲು ಇದು ಮುಖ್ಯ ಕಾರಣಗಳಲ್ಲೊಂದಾಗಿದೆ.

(ತೀರ್ಪಿನ ಪ್ರತಿಯ ಈ ಭಾಗವನ್ನೂ ನೋಡಬಹುದು)

ಆದರೆ, ವಾಸ್ತವವೇನು?

ಕಾಕತಾಳೀಯವಾಗಿ, ಈ ತೀರ್ಪು ಬಂದ ದಿನವೇ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಸಭೆ ಮಧ್ಯಾಹ್ನ 3 ಗಂಟೆಗೆ ನಡೆದಿದೆ. ಅದರ ಅಧ್ಯಕ್ಷರು ಡೆಪ್ಯುಟಿ ಸಿಎಜಿಯನ್ನು ‘ನಮ್ಮ ಮುಂದಿಟ್ಟಿದ್ದ ಆ ವರದಿ ಯಾವುದು?’ ಎಂದು ಕೇಳಿದ್ದಾರೆ. ಅಂತಹ ಯಾವ ವರದಿಯೂ ಇಲ್ಲವೆಂದು ಅವರು ಉತ್ತರಿಸಿದ್ದಾರೆ. ಅಂದರೆ, ಸಿಎಜಿಯ ಮುಂದಾಗಲೀ ಪಿಎಸಿಯ ಮುಂದಾಗಲೀ ಅಂತಹ ಯಾವ ಮಾಹಿತಿಯನ್ನೂ ಕೊಟ್ಟೇ ಇಲ್ಲ. ಅಷ್ಟೂ ಸಾಲದೆಂಬಂತೆ ಅವೆಲ್ಲವನ್ನೂ ಮಾಡಿಯಾಗಿದೆಯೆಂದು ಸುಪ್ರೀಂಕೋರ್ಟಿಗೇ ಸುಳ್ಳು ಹೇಳಲಾಗಿದೆ.

ಖುದ್ದು ಪಿಎಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರನ್ನೂ ಪಕ್ಕದಲ್ಲೇ ಕೂರಿಸಿಕೊಂಡು, ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ಗಾಂಧಿಯವರು ಇಂದು ಪತ್ರಿಕಾಗೋಷ್ಠಿ ನಡೆಸಿ ಇದೆಲ್ಲವನ್ನೂ ವಿವರಿಸಿದ್ದಾರೆ. (ಪತ್ರಿಕಾಗೋಷ್ಠಿಯ ವಿಡಿಯೋ ಇದರೊಂದಿಗಿದೆ, ನೋಡಬಹುದು)

ಹಾಗೆಯೇ ಸುಪ್ರೀಂಕೋರ್ಟಿನ ಅತ್ಯಂತ ಘನತೆವೆತ್ತ ನ್ಯಾಯವಾದಿಗಳಲ್ಲೊಬ್ಬರಾದ ಪ್ರಶಾಂತ್ ಭೂಷಣ್ ಏನು ಹೇಳಿದ್ದಾರೆಂಬುದರ ಕುರಿತೂ ಸದ್ಯದಲ್ಲೇ ವಿವರಗಳನ್ನು ನಿಮ್ಮ ಮುಂದಿಡಲಾಗುವುದು. ಎಲ್ಲಾ ವಿವರಗಳೂ ಈ ಸುದ್ದಿಯೊಂದಿಗೆ ಅಪ್‌ಡೇಟ್ ಆಗುತ್ತಿರುತ್ತದೆ, ಸರ್ಕಾರವು ಮತ್ತು ಸುಪ್ರೀಂಕೋರ್ಟು ನಂತರ ಏನೇನು ಹೇಳುತ್ತದೆ ಎಂಬ ವಿವರಗಳು ಇದರ ಜೊತೆಗೆ ಇರುತ್ತವೆ. ಆಗಿಂದಾಗ್ಗೆ ಈ ಪುಟವನ್ನು ನೀವು ನೋಡುತ್ತಿರಬಹುದು.

ಅದೇನೇ ಇರಲಿ, ಸುಪ್ರೀಂಕೋರ್ಟಿನ ತೀರ್ಪು ಬಂದು ಕ್ಲೀನ್‌ಚಿಟ್ ಸಿಕ್ಕಿತು ಎಂದು ಎಲ್ಲರೂ ಭಾವಿಸುತ್ತಿರುವಾಗ, ಅದು ಕ್ಲೀನ್‌ಚಿಟ್ ಅಲ್ಲ; ಪಾರ್ಲಿಮೆಂಟ್ ಸಮಿತಿಗೇ ವರದಿ ಕೊಟ್ಟಿದ್ದೇವೆಂದು ಸುಪ್ರೀಂಕೋರ್ಟಿಗೇ ಸ್ವತಃ ಕೇಂದ್ರ ಸರ್ಕಾರವೇ ಸುಳ್ಳು ಹೇಳಿದ ಪ್ರಕರಣ ಎಂದು ಬಿಚ್ಚಿಕೊಳ್ಳುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ.

ಈ ವಿಚಾರದಲ್ಲಿ ಹೊರಬರುವ, ಈ ವಾದಕ್ಕೆ ಪ್ರತಿಯಾಗಿ ಬರುವ ವಾದಗಳನ್ನೂ ನಿಮ್ಮ ಮುಂದಿಡುವ ಕೆಲಸವನ್ನು ಈ ಪುಟದಲ್ಲಿ ಮಾಡಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....