Homeರಾಜಕೀಯರಾಫೇಲ್ ಡೀಲ್ ಸ್ಫೋಟಕ ಸತ್ಯ: ಸುಪ್ರೀಂ ಕೋರ್ಟ್ಗೇ ಹಸೀ ಸುಳ್ಳು ಹೇಳಿದ ಮೋದಿ ಸರ್ಕಾರ

ರಾಫೇಲ್ ಡೀಲ್ ಸ್ಫೋಟಕ ಸತ್ಯ: ಸುಪ್ರೀಂ ಕೋರ್ಟ್ಗೇ ಹಸೀ ಸುಳ್ಳು ಹೇಳಿದ ಮೋದಿ ಸರ್ಕಾರ

- Advertisement -
- Advertisement -

ಬಹುಶಃ ಇದಕ್ಕಿಂತ ದೊಡ್ಡ ಹಗರಣ ಇತ್ತೀಚಿನ ದಿನಗಳಲ್ಲಿ ನಡೆದಿರಲಾರದು. ರಾಫೇಲ್ ಡೀಲ್ ವಿಚಾರದಲ್ಲಿ ಸತ್ಯವನ್ನು ಮುಚ್ಚಿ ಹಾಕಲು ಮೋದಿ ಸರ್ಕಾರ ಪ್ರಯತ್ನಿಸಿದಂತೆಲ್ಲಾ, ಹೊಸ ಹೊಸ ಹಗರಣಗಳನ್ನೇ ಮಾಡುತ್ತಿದೆ. ಅದರಲ್ಲಿ ಅತ್ಯಂತ ಹೊಸ ಹಗರಣ ಹಿಂದೆಂದಿಗಿಂತಲೂ ಆಘಾತಕಾರಿಯಾದುದು. ಮೋದಿ ಸರ್ಕಾರವು ಹಸೀ ಹಸೀ ಸುಳ್ಳನ್ನು ಸುಪ್ರಿಂಕೋರ್ಟಿಗೇ ಹೇಳಲಾಗಿದೆ.

ಹೌದು, ಇಂದು ರಾಫೇಲ್ ವಿಚಾರದಲ್ಲಿ ಸುಪ್ರೀಂಕೋರ್ಟು ತೀರ್ಪು ಹೊರಬಿದ್ದ ನಂತರ ಚುನಾವಣಾ ಸೋಲಿನಿಂದ ಕಂಗೆಟ್ಟಿದ್ದ ಬಿಜೆಪಿ ನಾಯಕರು ಮತ್ತು ಗೋದಿ ಮೀಡಿಯಾಗೆ ಇದ್ದಕ್ಕಿದ್ದಂತೆ ಭಾರೀ ಹುಮ್ಮಸ್ಸು ಬಂದಿತು. ಆದರೆ ಜಡ್ಜ್ಮೆಂಟ್ ಪ್ರತಿ ಹೊರಬಿದ್ದು ಅದನ್ನು ಸಂಪೂರ್ಣವಾಗಿ ಪರಿಶೀಲಿಸಿದ ನಂತರ ಇನ್ನೊಂದು ಹಗರಣ ಹೊರಬಿದ್ದಿತು.

ಸುಪ್ರೀಂಕೋರ್ಟು ಹೇಳಿದ್ದು ಇಷ್ಟು. ಈ ವ್ಯವಹಾರದ ತಾಂತ್ರಿಕ ಅಂಶಗಳನ್ನು ನಿರ್ಧರಿಸುವುದು ನಮ್ಮ ಪರಿಣಿತಿಯ ವಿಚಾರ ಅಲ್ಲ; ಡಸಾಲ್ಟ್ & ರಿಲೆಯನ್ಸ್ ನಡುವೆ ಏನು ನಡೆದಿದೆ ಅದು ಎರಡು ಕಾರ್ಪೋರೇಟ್ ಕಂಪೆನಿಗಳ ನಡುವಿನ ವ್ಯವಹಾರ; ಇದರಲ್ಲಿ ಪ್ರತಿವಾದಿ (ನರೇಂದ್ರ ದಾಮೋದರದಾಸ್ ಮೋದಿ)ಯ ಪಾತ್ರದ ಬಗ್ಗೆ ಏನು ಹೇಳಲಾಗುತ್ತಿದೆ ಅದನ್ನು ಅವರು ನಿರಾಕರಿಸಿದ್ದಾರೆ. ಈ ವ್ಯವಹಾರವನ್ನು ಸೂಕ್ತ ಪ್ರಕ್ರಿಯೆಗಳನ್ನು ಅನುಸರಿಸಿಯೇ ಮಾಡಲಾಗಿದೆ. (ಈ ಕುರಿತು ತೀರ್ಪಿನ 21ನೇ ಪುಟದ 25ನೇ ಪಾಯಿಂಟ್‌ನಲ್ಲಿ ಹೇಳಲಾಗಿದೆ) ವ್ಯವಹಾರದ ದರಗಳ ಕುರಿತು ಕಂಟ್ರೋಲರ್ & ಆಡಿಟರ್ ಜನರಲ್ (ಸಿಎಜಿ) ಮುಂದೆ ಇಡಲಾಗಿದೆ ಮತ್ತು ಅದನ್ನು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ (ಪಿಎಸಿ) ಪರಿಶೀಲಿಸಿದೆ. ಇವೆಲ್ಲಾ ಕಾರಣಗಳಿಂದ ಇದರಲ್ಲಿ ಮಧ್ಯಪ್ರವೇಶಿಸುವುದು ಸರಿಯಲ್ಲ ಎಂದು ನ್ಯಾಯಾಲಯವು ಭಾವಿಸಿ ಈ ಪಿಟಿಷನ್‌ಅನ್ನು ವಜಾಗೊಳಿಸುತ್ತೇವೆ.

ಈ ಎಲ್ಲಾ ವ್ಯವಹಾರವು ಸೂಕ್ತ ಪ್ರಕ್ರಿಯೆಯನ್ನನುಸರಿಸಿಯೇ ನಡೆದಿದೆ ಎಂದು ಸುಪ್ರೀಂಕೋರ್ಟು ಭಾವಿಸಲು ಇದು ಮುಖ್ಯ ಕಾರಣಗಳಲ್ಲೊಂದಾಗಿದೆ.

(ತೀರ್ಪಿನ ಪ್ರತಿಯ ಈ ಭಾಗವನ್ನೂ ನೋಡಬಹುದು)

ಆದರೆ, ವಾಸ್ತವವೇನು?

ಕಾಕತಾಳೀಯವಾಗಿ, ಈ ತೀರ್ಪು ಬಂದ ದಿನವೇ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಸಭೆ ಮಧ್ಯಾಹ್ನ 3 ಗಂಟೆಗೆ ನಡೆದಿದೆ. ಅದರ ಅಧ್ಯಕ್ಷರು ಡೆಪ್ಯುಟಿ ಸಿಎಜಿಯನ್ನು ‘ನಮ್ಮ ಮುಂದಿಟ್ಟಿದ್ದ ಆ ವರದಿ ಯಾವುದು?’ ಎಂದು ಕೇಳಿದ್ದಾರೆ. ಅಂತಹ ಯಾವ ವರದಿಯೂ ಇಲ್ಲವೆಂದು ಅವರು ಉತ್ತರಿಸಿದ್ದಾರೆ. ಅಂದರೆ, ಸಿಎಜಿಯ ಮುಂದಾಗಲೀ ಪಿಎಸಿಯ ಮುಂದಾಗಲೀ ಅಂತಹ ಯಾವ ಮಾಹಿತಿಯನ್ನೂ ಕೊಟ್ಟೇ ಇಲ್ಲ. ಅಷ್ಟೂ ಸಾಲದೆಂಬಂತೆ ಅವೆಲ್ಲವನ್ನೂ ಮಾಡಿಯಾಗಿದೆಯೆಂದು ಸುಪ್ರೀಂಕೋರ್ಟಿಗೇ ಸುಳ್ಳು ಹೇಳಲಾಗಿದೆ.

ಖುದ್ದು ಪಿಎಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರನ್ನೂ ಪಕ್ಕದಲ್ಲೇ ಕೂರಿಸಿಕೊಂಡು, ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ಗಾಂಧಿಯವರು ಇಂದು ಪತ್ರಿಕಾಗೋಷ್ಠಿ ನಡೆಸಿ ಇದೆಲ್ಲವನ್ನೂ ವಿವರಿಸಿದ್ದಾರೆ. (ಪತ್ರಿಕಾಗೋಷ್ಠಿಯ ವಿಡಿಯೋ ಇದರೊಂದಿಗಿದೆ, ನೋಡಬಹುದು)

ಹಾಗೆಯೇ ಸುಪ್ರೀಂಕೋರ್ಟಿನ ಅತ್ಯಂತ ಘನತೆವೆತ್ತ ನ್ಯಾಯವಾದಿಗಳಲ್ಲೊಬ್ಬರಾದ ಪ್ರಶಾಂತ್ ಭೂಷಣ್ ಏನು ಹೇಳಿದ್ದಾರೆಂಬುದರ ಕುರಿತೂ ಸದ್ಯದಲ್ಲೇ ವಿವರಗಳನ್ನು ನಿಮ್ಮ ಮುಂದಿಡಲಾಗುವುದು. ಎಲ್ಲಾ ವಿವರಗಳೂ ಈ ಸುದ್ದಿಯೊಂದಿಗೆ ಅಪ್‌ಡೇಟ್ ಆಗುತ್ತಿರುತ್ತದೆ, ಸರ್ಕಾರವು ಮತ್ತು ಸುಪ್ರೀಂಕೋರ್ಟು ನಂತರ ಏನೇನು ಹೇಳುತ್ತದೆ ಎಂಬ ವಿವರಗಳು ಇದರ ಜೊತೆಗೆ ಇರುತ್ತವೆ. ಆಗಿಂದಾಗ್ಗೆ ಈ ಪುಟವನ್ನು ನೀವು ನೋಡುತ್ತಿರಬಹುದು.

ಅದೇನೇ ಇರಲಿ, ಸುಪ್ರೀಂಕೋರ್ಟಿನ ತೀರ್ಪು ಬಂದು ಕ್ಲೀನ್‌ಚಿಟ್ ಸಿಕ್ಕಿತು ಎಂದು ಎಲ್ಲರೂ ಭಾವಿಸುತ್ತಿರುವಾಗ, ಅದು ಕ್ಲೀನ್‌ಚಿಟ್ ಅಲ್ಲ; ಪಾರ್ಲಿಮೆಂಟ್ ಸಮಿತಿಗೇ ವರದಿ ಕೊಟ್ಟಿದ್ದೇವೆಂದು ಸುಪ್ರೀಂಕೋರ್ಟಿಗೇ ಸ್ವತಃ ಕೇಂದ್ರ ಸರ್ಕಾರವೇ ಸುಳ್ಳು ಹೇಳಿದ ಪ್ರಕರಣ ಎಂದು ಬಿಚ್ಚಿಕೊಳ್ಳುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ.

ಈ ವಿಚಾರದಲ್ಲಿ ಹೊರಬರುವ, ಈ ವಾದಕ್ಕೆ ಪ್ರತಿಯಾಗಿ ಬರುವ ವಾದಗಳನ್ನೂ ನಿಮ್ಮ ಮುಂದಿಡುವ ಕೆಲಸವನ್ನು ಈ ಪುಟದಲ್ಲಿ ಮಾಡಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...