Homeಅಂಕಣಗಳುರಾಮ, ಅಯ್ಯಪ್ಪನ ಹೆಸರಲ್ಲಿ ಬಿಜೆಪಿಯ ಕುತಂತ್ರಗಳು

ರಾಮ, ಅಯ್ಯಪ್ಪನ ಹೆಸರಲ್ಲಿ ಬಿಜೆಪಿಯ ಕುತಂತ್ರಗಳು

- Advertisement -
- Advertisement -

ಎಚ್.ಎಸ್.ದೊರೆಸ್ವಾಮಿ |

ಬಿಜೆಪಿಯ ಬತ್ತಳಿಕೆಯಲ್ಲಿದ್ದ ಎಲ್ಲಾ ಆಯುಧಗಳು ಠುಸ್ಸೆಂದಿವೆ. ಅದರಿಂದ ಮಧ್ಯಪ್ರದೇಶ, ರಾಜಸ್ಥಾನ ಶಾಸನಸಭೆ ಚುನಾವಣೆಗಳನ್ನು ಎದುರಿಸಲು ಬಿಜೆಪಿಗೆ ನಡುಕ ಹುಟ್ಟಿದೆ. ರಫೇಲ್ ಡೀಲ್, ನೋಟುಗಳ ಅಮಾನ್ಯೀಕರಣ, ಸ್ವಚ್ಛ ಭಾರತ, ಜನರ ಖಾತೆಗೆ ಹದಿನೈದು ಲಕ್ಷ ರೂಪಾಯಿ ಹಾಕುವುದು ಮುಂತಾದ ಮೋದಿಯ ಎಲ್ಲಾ ತಂತ್ರಗಾರಿಕೆಯೂ ವಿಫಲಗೊಂಡು ಮೋದಿ, ಷಾಗಳು ತತ್ತರಿಸ ಹತ್ತಿದ್ದಾರೆ. ಸೀಮಾಂದ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯುಡು ಎಲ್ಲ ವಿರೋಧ ಪಕ್ಷಗಳನ್ನು ಒಂದುಗೂಡಿಸಿ ಲೋಕಸಭೆಯ ಚುನಾವಣೆಯನ್ನು ಎದುರಿಸಲು ಭಾರಿ ಪ್ರಯತ್ನ ಮಾಡುತ್ತಿರುವುದೂ ಬಿಜೆಪಿಗೆ ಭಾರಿ ತಲೆನೋವಾಗಿದೆ. ಆದ್ದರಿಂದ ಮೋದಿ, ಷಾಗಳು ಚುನಾವಣೆ ಎದುರಿಸಲು ಹೊಸತಂತ್ರ ರೂಪಿಸಲು ಹೆಣಗುತ್ತಿದ್ದಾರೆ.

ಅವರಿಗೆ ರಾಮಚಂದ್ರ ಭೂಮಿಯ ನೆನಪಾಗಿ ಅಯೋಧ್ಯೆಯಲ್ಲಿ ರಾಮಮಂದಿರವನ್ನು ಕೂಡಲೇ ಕಟ್ಟುವ ಮಾತನ್ನಾರಂಭಿಸಿದ್ದಾರೆ. ವಿಶ್ವಹಿಂದೂ ಪರಿಷತ್ ಮುಂತಾದ ಹಿಂದೂ ಮತಾಂಧ ಸಂಸ್ಥೆಗಳ ನೆರವಂತೂ ಬಿಜೆಪಿಗೆ ಇದ್ದೇ ಇದೆ. ಆರೆಸ್ಸೆಸ್ ಏರ್ಪಡಿಸಿದ್ದ ಬೈಠಕ್‍ಗೆ ಬಿಜೆಪಿ ಅಧ್ಯಕ್ಷ ಷಾ ಹೋಗಿ ಅಯೋಧ್ಯೆಯಲ್ಲಿ ಒಂದು ಗದ್ದಲ ಎಬ್ಬಿಸುವ ಯೋಜನೆಗೆ ಚಾಲನೆ ನೀಡಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಲೇಬೇಕೆಂಬ ಉದ್ದೇಶ ಬಿಜೆಪಿಗಂತೂ ಇಲ್ಲ. ರಾಮಮಂದಿರ ನಿರ್ಮಾಣದ ಪ್ರಶ್ನೆಯನ್ನು ಜೀವಂತ ಇಟ್ಟು ಮತ ಕೀಳುವ ತಂತ್ರಗಾರಿಕೆ ಬಿಜೆಪಿಯದ್ದು. ಒಂದೊಮ್ಮೆ ರಾಮಚಂದ್ರನ ದೇವಾಲಯವನ್ನು ಕಟ್ಟಿಬಿಟ್ಟರೆ ಚುನಾವಣೆ ಎದುರಾದಾಗ ಅಯೋಧ್ಯೆ ಟ್ರಂಪ್‍ಕಾರ್ಡ್ ಬಳಸಲು ಎಲ್ಲಿ ಸಾಧ್ಯವಾದೀತು? ರಾಮ ಮಂದಿರದ ನೆಪದಲ್ಲಿ ಹಿಂದೂಗಳ ಮತಗಳನ್ನು ಕೀಳುತ್ತಾ ಹೋಗುವುದು ಬಿಜೆಪಿಯ ಹುನ್ನಾರ. ಇದಕ್ಕಾಗಿ ಅಯೋಧ್ಯೆಯಲ್ಲಿ ಒಂದು ಲಕ್ಷ ಹಿಂದೂಗಳ ಸಮಾವೇಶವನ್ನು ನಡೆಸಿದ್ದಾರೆ. ಮೋದಿಗೆ ಸಾಥ್ ಕೊಡಲು ಉತ್ತರ ಪ್ರದೇಶದ ಸನ್ಯಾಸದ ಛದ್ಮ ವೇಷಧಾರಿ ಮುಖ್ಯಮಂತ್ರಿ ಆದಿತ್ಯನಾಥ್ ಇದ್ದೇ ಇದ್ದಾನೆ. ಉತ್ತರಪ್ರದೇಶ ಸರ್ಕಾರ ಈ ಮಾರೀಚನ ಕೈಯಲ್ಲಿರುವುದರಿಂದ ಬಿಜೆಪಿ ರಕ್ಷಣೆಗೆ ಬೇಕಾದ ಎಲ್ಲ ಕ್ರಮಗಳೂ ಸುಲಭ. ಅಯೋಧ್ಯೆಯಲ್ಲಿ ತಲೆತಲಾಂತರದಿಂದ ನೆಲೆಸಿರುವ ಮುಸ್ಲಿಂ ಜನಾಂಗಕ್ಕೆ ತಮಗೇನು ಕೇಡು ಕಾದಿದೆಯೋ ಎಂಬ ಆತಂಕ ಉಂಟಾಗಿದೆ. ಈ ಹಿಂದೂ ಮತಾಂಧರ ಸಮಾವೇಶದಲ್ಲಿ ಎಷ್ಟು ಹೆಣಗಳು ಬೀಳುವುದೋ ಎಂಬ ಆತಂಕ ಅಲ್ಲಿಯ ಮಹಮದೀಯರದಾಗಿದೆ. ಆದರೂ ಸಾಮೂಹಿಕವಾಗಿ ಸಮಾವೇಶ ನಡೆಯುವ ಕಾಲದಲ್ಲಿ ಅಯೋಧ್ಯೆ ಬಿಟ್ಟುಹೋಗುವುದಾಗಿ ಘೋಷಿಸಿದ್ದಾರೆ.

ಅಯೋಧ್ಯೆಯಲ್ಲಿ ಅನೇಕ ಕಾಲದಿಂದ ಹಿಂದೂ ಮುಸ್ಲಿಮರು ಅನ್ಯೋನ್ಯವಾಗಿ ಬಾಳುತ್ತಿದ್ದಾರೆ. ಅಯೋಧ್ಯೆಯ ಬಾಬ್ರಿ ಮಸೀದಿಯನ್ನು ಅಡ್ವಾಣಿಯವರ ನೇತೃತ್ವದಲ್ಲಿ ಕರಸೇವಕರು ಕೆಡಿಸಿದ ಸಂದರ್ಭ ಹೊರತುಪಡಿಸಿ, ಅದಕ್ಕೆ ಹಿಂದಿನ ದಿನಗಳಲ್ಲಾಗಲಿ, ಅನಂತರದ ದಿನಗಳಲ್ಲಾಗಲಿ ಅಯೋಧ್ಯೆಯಲ್ಲಿ ಕೋಮುಗಲಭೆ ಆಗಿಲ್ಲ. ಲೋಕಸಭೆ ಚುನಾವಣೆಯ ನಿಮಿತ್ತ ಈಗ ಮತ್ತೆ ಅಯೋಧ್ಯೆಯಲ್ಲಿ ಗದ್ದಲ ಎಬ್ಬಿಸಿ ಗೊಂದಲ ಉಂಟುಮಾಡಿ ಚುನಾವಣೆಯಲ್ಲಿ ಗೆದ್ದು ಬರುವ ಸಂಚನ್ನು ರೂಪಿಸಲಾಗಿದೆ.

ಎರಡನೆಯದಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿಯ ದೇವಾಲಯದ ಸಮಸ್ಯೆಯೊಂದನ್ನು ಬಿಜೆಪಿ ಹುಟ್ಟುಹಾಕಿ ಅದರ ದುರ್ಲಾಭ ಪಡೆಯುವ ಹುನ್ನಾರವೂ ರೂಪುಗೊಳ್ಳುತ್ತಿದೆ. ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಸ್ತ್ರೀಯರಿಗೂ ಪ್ರವೇಶ ಮಾಡುವ ಹಕ್ಕಿದೆಯೆಂದು ಸರ್ವೋಚ್ಛ ನ್ಯಾಯಾಲಯ ತೀರ್ಪಿತ್ತಿದೆ. ದೇವಸ್ಥಾನದ ಮುಖ್ಯ ಅರ್ಚಕರು, ಆಡಳಿತ ಮಂಡಳಿಯವರು ಸರ್ವೋಚ್ಛ ನ್ಯಾಯಾಲಯದ ಈ ತೀರ್ಪನ್ನು ಪರಿಶೀಲಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿವೆ. ಕೇರಳ ಸರ್ಕಾರಕ್ಕೆ ಈಗಂತೂ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಅನುಷ್ಠಾನಗೊಳಿಸದೆ ಬೇರೆದಾರಿ ಇಲ್ಲವಾಗಿದೆ. ಭಾರತೀಯ ಜನತಾ ಪಕ್ಷಕ್ಕೆ ಈಗ ಮೋದಿಯೇ ಆದರ ಸರ್ವಾಧಿಕಾರಿ. ‘any stick is good to beat’ ಇದು ಮೋದಿಯ ನಿಲುವು. ಹೀಗಾಗಿ ಬೇಜವಾಬ್ದಾರಿಯ ಪ್ರಧಾನಮಂತ್ರಿ ಮೋದಿ ಚುನಾವಣೆ ದೃಷ್ಟಿಯಿಂದ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಧಿಕ್ಕರಿಸಿ ನಡೆದುಕೊಳ್ಳಲು ಹೊರಟಿದ್ದಾರೆ. ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತಂದು ಕೇರಳೀಯ ಹಿಂದೂಗಳ ಮತಗಳನ್ನೆಲ್ಲ ತನ್ನದಾಗಿಸಿಕೊಳ್ಳುವ ಏಕೈಕ ಉದ್ದೇಶದಿಂದ ಅಯ್ಯಪ್ಪ ಭಕ್ತರನ್ನು ಕೇರಳ ಸರ್ಕಾರದ ವಿರುದ್ಧ ಎತ್ತಿ ಕಟ್ಟಲು ಸಂಚು ಮಾಡಲಾಗಿದೆ. ಮಹಿಳೆಯರಿಗೂ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ದೊರೆಯಬೇಕು ಎಂಬುದು ಹಿಂದೂಗಳೆಲ್ಲರ ಅಭಿಮತವಾಗಿದೆ. ಹಿಂದೂ ಮತಾಂಧರು ಇದನ್ನು ಅರ್ಥಮಾಡಿಕೊಳ್ಳಬೇಕು. ಚುನಾವಣೆ ಗೆಲ್ಲುವುದಕ್ಕೆ ಇದು ಸಾಧನ ಎಂದು ಸರ್ವಾಧಿಕಾರಿ ಮೋದಿ ನಂಬಿದ್ದರೆ, ಬಿಜೆಪಿಯೇತರ ಹಿಂದೂಗಳು ದೇವಾಲಯ ಪ್ರವೇಶದ ವಿಚಾರದಲ್ಲಿ ಸ್ತ್ರೀ-ಪುರುಷರ ಭೇದ ಮಾಡಬಾರದೆಂದು ಘೋಷಣೆ ಮಾಡುತ್ತಾರೆ.

ಮೋದಿ ಅಮಿತ್ ಷಾಗಳಿಗೆ ಅಂತಿಮ ತೀರ್ಪು ಬರುವವರೆಗೂ ಕಾಯುವ ವ್ಯವಧಾನ ಇಲ್ಲ. ಮತದಾರರ ಮನಸ್ಸುಗಳನ್ನು ಕೆಡಿಸಿ, ಮತ ಕಸಿಯುವ ಏಕೈಕ ಗುರಿಯನ್ನೇ ಹೊಂದಿರುವ ಅವರು ಕಿವಿಗೆ ಕಣಜ ಹೊಕ್ಕವರಂತೆ ನಡೆದುಕೊಳ್ಳುತ್ತಿದ್ದಾರೆ. ಶಬರಿಮಲೆಗೆ ಹರಕೆ ಹೊತ್ತು ಹೋಗುವ ಜನ ದಕ್ಷಿಣ ರಾಜ್ಯಗಳಲ್ಲಂತೂ ತುಂಬ ಇದ್ದಾರೆ. ಇವರಿರುವ ಸ್ಥಳಗಳಲ್ಲಿ ಅಯ್ಯಪ್ಪನ ದೇವಾಲಯಗಳನ್ನೂ ಕಟ್ಟಲಾಗಿದೆ. ಅದರ ಮೇಲ್ವಿಚಾರಣೆಗೆ ಇರುವವರನ್ನೆಲ್ಲಾ ಕರೆದು ಸಭೆ ಮಾಡಿ ಅಯ್ಯಪ್ಪ ಭಕ್ತರ ಎಲ್ಲ ಓಟನ್ನೂ ನಮಗೆ ಹಾಕಿಸಿ ಎಂದು ಕೇಳುವ ಪ್ರಸ್ತಾಪವನ್ನು ಮೋದಿ, ಷಾ ಜೋಡಿ ಈಗಾಗಲೇ ಮಾಡಿದೆ. ಈ ಮುಗ್ಧ ಭಕ್ತರ ಧಾರ್ಮಿಕ ಭಾವನೆಯನ್ನು ಕೆರಳಿಸಿ ಅವರಲ್ಲಿ ವಿಷ ತುಂಬಿ ಅವರ ಮತಗಳನ್ನೆಲ್ಲ ಕಸಿಯುವ ತಂತ್ರಗಾರಿಕೆಗೆ ಈಗಾಗಲೇ ಕೈಹಾಕಿದ್ದಾರೆ.

ತಮ್ಮದೇ ಪಕ್ಷ ಇಡೀ ದೇಶದಲ್ಲಿ ಮತ್ತು ಅಯೋಧ್ಯೆ ವಿವಾದವಿರುವ ಉತ್ತರಪ್ರದೇಶದಲ್ಲಿ ಅಧಿಕಾರದಲ್ಲಿದ್ದರು ಇಷ್ಟು ದಿನ ತೆಪ್ಪಗಿದ್ದು ಚುನಾವಣೆಯ ಹೊಸ್ತಿಲಲ್ಲಿ ಅಯೋಧ್ಯೆ, ಅಯ್ಯಪ್ಪರನ್ನು ಭಜಿಸುತ್ತಿರುವ ಬಿಜೆಪಿಯವರ ಈ ಎರಡೂ ಹುನ್ನಾರಗಳನ್ನು ಜನರು ಅರ್ಥಮಾಡಿಕೊಳ್ಳಬೇಕಿದೆ. ಮೋದಿ-ಷಾ-ಆರೆಸ್ಸೆಸ್, ಹೇಗೆ ತಮ್ಮ ಬೇಳೆ ಬೇಯಿಸಿಕೊಳ್ಳಲು ಹೇಗೆ ಈ ಮುಗ್ಧ ಜನರನ್ನು ದುರುಪಯೋಗಪಡಿಸಿಕೊಳ್ಳಲು ಹೊರಟಿದ್ದಾರೆ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡುವುದು ನಮ್ಮೆಲ್ಲರ ಮೇಲಿರುವ ಹೊಣೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...