Homeಅಂಕಣಗಳುರಾಮ, ಅಯ್ಯಪ್ಪನ ಹೆಸರಲ್ಲಿ ಬಿಜೆಪಿಯ ಕುತಂತ್ರಗಳು

ರಾಮ, ಅಯ್ಯಪ್ಪನ ಹೆಸರಲ್ಲಿ ಬಿಜೆಪಿಯ ಕುತಂತ್ರಗಳು

- Advertisement -
- Advertisement -

ಎಚ್.ಎಸ್.ದೊರೆಸ್ವಾಮಿ |

ಬಿಜೆಪಿಯ ಬತ್ತಳಿಕೆಯಲ್ಲಿದ್ದ ಎಲ್ಲಾ ಆಯುಧಗಳು ಠುಸ್ಸೆಂದಿವೆ. ಅದರಿಂದ ಮಧ್ಯಪ್ರದೇಶ, ರಾಜಸ್ಥಾನ ಶಾಸನಸಭೆ ಚುನಾವಣೆಗಳನ್ನು ಎದುರಿಸಲು ಬಿಜೆಪಿಗೆ ನಡುಕ ಹುಟ್ಟಿದೆ. ರಫೇಲ್ ಡೀಲ್, ನೋಟುಗಳ ಅಮಾನ್ಯೀಕರಣ, ಸ್ವಚ್ಛ ಭಾರತ, ಜನರ ಖಾತೆಗೆ ಹದಿನೈದು ಲಕ್ಷ ರೂಪಾಯಿ ಹಾಕುವುದು ಮುಂತಾದ ಮೋದಿಯ ಎಲ್ಲಾ ತಂತ್ರಗಾರಿಕೆಯೂ ವಿಫಲಗೊಂಡು ಮೋದಿ, ಷಾಗಳು ತತ್ತರಿಸ ಹತ್ತಿದ್ದಾರೆ. ಸೀಮಾಂದ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯುಡು ಎಲ್ಲ ವಿರೋಧ ಪಕ್ಷಗಳನ್ನು ಒಂದುಗೂಡಿಸಿ ಲೋಕಸಭೆಯ ಚುನಾವಣೆಯನ್ನು ಎದುರಿಸಲು ಭಾರಿ ಪ್ರಯತ್ನ ಮಾಡುತ್ತಿರುವುದೂ ಬಿಜೆಪಿಗೆ ಭಾರಿ ತಲೆನೋವಾಗಿದೆ. ಆದ್ದರಿಂದ ಮೋದಿ, ಷಾಗಳು ಚುನಾವಣೆ ಎದುರಿಸಲು ಹೊಸತಂತ್ರ ರೂಪಿಸಲು ಹೆಣಗುತ್ತಿದ್ದಾರೆ.

ಅವರಿಗೆ ರಾಮಚಂದ್ರ ಭೂಮಿಯ ನೆನಪಾಗಿ ಅಯೋಧ್ಯೆಯಲ್ಲಿ ರಾಮಮಂದಿರವನ್ನು ಕೂಡಲೇ ಕಟ್ಟುವ ಮಾತನ್ನಾರಂಭಿಸಿದ್ದಾರೆ. ವಿಶ್ವಹಿಂದೂ ಪರಿಷತ್ ಮುಂತಾದ ಹಿಂದೂ ಮತಾಂಧ ಸಂಸ್ಥೆಗಳ ನೆರವಂತೂ ಬಿಜೆಪಿಗೆ ಇದ್ದೇ ಇದೆ. ಆರೆಸ್ಸೆಸ್ ಏರ್ಪಡಿಸಿದ್ದ ಬೈಠಕ್‍ಗೆ ಬಿಜೆಪಿ ಅಧ್ಯಕ್ಷ ಷಾ ಹೋಗಿ ಅಯೋಧ್ಯೆಯಲ್ಲಿ ಒಂದು ಗದ್ದಲ ಎಬ್ಬಿಸುವ ಯೋಜನೆಗೆ ಚಾಲನೆ ನೀಡಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಲೇಬೇಕೆಂಬ ಉದ್ದೇಶ ಬಿಜೆಪಿಗಂತೂ ಇಲ್ಲ. ರಾಮಮಂದಿರ ನಿರ್ಮಾಣದ ಪ್ರಶ್ನೆಯನ್ನು ಜೀವಂತ ಇಟ್ಟು ಮತ ಕೀಳುವ ತಂತ್ರಗಾರಿಕೆ ಬಿಜೆಪಿಯದ್ದು. ಒಂದೊಮ್ಮೆ ರಾಮಚಂದ್ರನ ದೇವಾಲಯವನ್ನು ಕಟ್ಟಿಬಿಟ್ಟರೆ ಚುನಾವಣೆ ಎದುರಾದಾಗ ಅಯೋಧ್ಯೆ ಟ್ರಂಪ್‍ಕಾರ್ಡ್ ಬಳಸಲು ಎಲ್ಲಿ ಸಾಧ್ಯವಾದೀತು? ರಾಮ ಮಂದಿರದ ನೆಪದಲ್ಲಿ ಹಿಂದೂಗಳ ಮತಗಳನ್ನು ಕೀಳುತ್ತಾ ಹೋಗುವುದು ಬಿಜೆಪಿಯ ಹುನ್ನಾರ. ಇದಕ್ಕಾಗಿ ಅಯೋಧ್ಯೆಯಲ್ಲಿ ಒಂದು ಲಕ್ಷ ಹಿಂದೂಗಳ ಸಮಾವೇಶವನ್ನು ನಡೆಸಿದ್ದಾರೆ. ಮೋದಿಗೆ ಸಾಥ್ ಕೊಡಲು ಉತ್ತರ ಪ್ರದೇಶದ ಸನ್ಯಾಸದ ಛದ್ಮ ವೇಷಧಾರಿ ಮುಖ್ಯಮಂತ್ರಿ ಆದಿತ್ಯನಾಥ್ ಇದ್ದೇ ಇದ್ದಾನೆ. ಉತ್ತರಪ್ರದೇಶ ಸರ್ಕಾರ ಈ ಮಾರೀಚನ ಕೈಯಲ್ಲಿರುವುದರಿಂದ ಬಿಜೆಪಿ ರಕ್ಷಣೆಗೆ ಬೇಕಾದ ಎಲ್ಲ ಕ್ರಮಗಳೂ ಸುಲಭ. ಅಯೋಧ್ಯೆಯಲ್ಲಿ ತಲೆತಲಾಂತರದಿಂದ ನೆಲೆಸಿರುವ ಮುಸ್ಲಿಂ ಜನಾಂಗಕ್ಕೆ ತಮಗೇನು ಕೇಡು ಕಾದಿದೆಯೋ ಎಂಬ ಆತಂಕ ಉಂಟಾಗಿದೆ. ಈ ಹಿಂದೂ ಮತಾಂಧರ ಸಮಾವೇಶದಲ್ಲಿ ಎಷ್ಟು ಹೆಣಗಳು ಬೀಳುವುದೋ ಎಂಬ ಆತಂಕ ಅಲ್ಲಿಯ ಮಹಮದೀಯರದಾಗಿದೆ. ಆದರೂ ಸಾಮೂಹಿಕವಾಗಿ ಸಮಾವೇಶ ನಡೆಯುವ ಕಾಲದಲ್ಲಿ ಅಯೋಧ್ಯೆ ಬಿಟ್ಟುಹೋಗುವುದಾಗಿ ಘೋಷಿಸಿದ್ದಾರೆ.

ಅಯೋಧ್ಯೆಯಲ್ಲಿ ಅನೇಕ ಕಾಲದಿಂದ ಹಿಂದೂ ಮುಸ್ಲಿಮರು ಅನ್ಯೋನ್ಯವಾಗಿ ಬಾಳುತ್ತಿದ್ದಾರೆ. ಅಯೋಧ್ಯೆಯ ಬಾಬ್ರಿ ಮಸೀದಿಯನ್ನು ಅಡ್ವಾಣಿಯವರ ನೇತೃತ್ವದಲ್ಲಿ ಕರಸೇವಕರು ಕೆಡಿಸಿದ ಸಂದರ್ಭ ಹೊರತುಪಡಿಸಿ, ಅದಕ್ಕೆ ಹಿಂದಿನ ದಿನಗಳಲ್ಲಾಗಲಿ, ಅನಂತರದ ದಿನಗಳಲ್ಲಾಗಲಿ ಅಯೋಧ್ಯೆಯಲ್ಲಿ ಕೋಮುಗಲಭೆ ಆಗಿಲ್ಲ. ಲೋಕಸಭೆ ಚುನಾವಣೆಯ ನಿಮಿತ್ತ ಈಗ ಮತ್ತೆ ಅಯೋಧ್ಯೆಯಲ್ಲಿ ಗದ್ದಲ ಎಬ್ಬಿಸಿ ಗೊಂದಲ ಉಂಟುಮಾಡಿ ಚುನಾವಣೆಯಲ್ಲಿ ಗೆದ್ದು ಬರುವ ಸಂಚನ್ನು ರೂಪಿಸಲಾಗಿದೆ.

ಎರಡನೆಯದಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿಯ ದೇವಾಲಯದ ಸಮಸ್ಯೆಯೊಂದನ್ನು ಬಿಜೆಪಿ ಹುಟ್ಟುಹಾಕಿ ಅದರ ದುರ್ಲಾಭ ಪಡೆಯುವ ಹುನ್ನಾರವೂ ರೂಪುಗೊಳ್ಳುತ್ತಿದೆ. ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಸ್ತ್ರೀಯರಿಗೂ ಪ್ರವೇಶ ಮಾಡುವ ಹಕ್ಕಿದೆಯೆಂದು ಸರ್ವೋಚ್ಛ ನ್ಯಾಯಾಲಯ ತೀರ್ಪಿತ್ತಿದೆ. ದೇವಸ್ಥಾನದ ಮುಖ್ಯ ಅರ್ಚಕರು, ಆಡಳಿತ ಮಂಡಳಿಯವರು ಸರ್ವೋಚ್ಛ ನ್ಯಾಯಾಲಯದ ಈ ತೀರ್ಪನ್ನು ಪರಿಶೀಲಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿವೆ. ಕೇರಳ ಸರ್ಕಾರಕ್ಕೆ ಈಗಂತೂ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಅನುಷ್ಠಾನಗೊಳಿಸದೆ ಬೇರೆದಾರಿ ಇಲ್ಲವಾಗಿದೆ. ಭಾರತೀಯ ಜನತಾ ಪಕ್ಷಕ್ಕೆ ಈಗ ಮೋದಿಯೇ ಆದರ ಸರ್ವಾಧಿಕಾರಿ. ‘any stick is good to beat’ ಇದು ಮೋದಿಯ ನಿಲುವು. ಹೀಗಾಗಿ ಬೇಜವಾಬ್ದಾರಿಯ ಪ್ರಧಾನಮಂತ್ರಿ ಮೋದಿ ಚುನಾವಣೆ ದೃಷ್ಟಿಯಿಂದ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಧಿಕ್ಕರಿಸಿ ನಡೆದುಕೊಳ್ಳಲು ಹೊರಟಿದ್ದಾರೆ. ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತಂದು ಕೇರಳೀಯ ಹಿಂದೂಗಳ ಮತಗಳನ್ನೆಲ್ಲ ತನ್ನದಾಗಿಸಿಕೊಳ್ಳುವ ಏಕೈಕ ಉದ್ದೇಶದಿಂದ ಅಯ್ಯಪ್ಪ ಭಕ್ತರನ್ನು ಕೇರಳ ಸರ್ಕಾರದ ವಿರುದ್ಧ ಎತ್ತಿ ಕಟ್ಟಲು ಸಂಚು ಮಾಡಲಾಗಿದೆ. ಮಹಿಳೆಯರಿಗೂ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ದೊರೆಯಬೇಕು ಎಂಬುದು ಹಿಂದೂಗಳೆಲ್ಲರ ಅಭಿಮತವಾಗಿದೆ. ಹಿಂದೂ ಮತಾಂಧರು ಇದನ್ನು ಅರ್ಥಮಾಡಿಕೊಳ್ಳಬೇಕು. ಚುನಾವಣೆ ಗೆಲ್ಲುವುದಕ್ಕೆ ಇದು ಸಾಧನ ಎಂದು ಸರ್ವಾಧಿಕಾರಿ ಮೋದಿ ನಂಬಿದ್ದರೆ, ಬಿಜೆಪಿಯೇತರ ಹಿಂದೂಗಳು ದೇವಾಲಯ ಪ್ರವೇಶದ ವಿಚಾರದಲ್ಲಿ ಸ್ತ್ರೀ-ಪುರುಷರ ಭೇದ ಮಾಡಬಾರದೆಂದು ಘೋಷಣೆ ಮಾಡುತ್ತಾರೆ.

ಮೋದಿ ಅಮಿತ್ ಷಾಗಳಿಗೆ ಅಂತಿಮ ತೀರ್ಪು ಬರುವವರೆಗೂ ಕಾಯುವ ವ್ಯವಧಾನ ಇಲ್ಲ. ಮತದಾರರ ಮನಸ್ಸುಗಳನ್ನು ಕೆಡಿಸಿ, ಮತ ಕಸಿಯುವ ಏಕೈಕ ಗುರಿಯನ್ನೇ ಹೊಂದಿರುವ ಅವರು ಕಿವಿಗೆ ಕಣಜ ಹೊಕ್ಕವರಂತೆ ನಡೆದುಕೊಳ್ಳುತ್ತಿದ್ದಾರೆ. ಶಬರಿಮಲೆಗೆ ಹರಕೆ ಹೊತ್ತು ಹೋಗುವ ಜನ ದಕ್ಷಿಣ ರಾಜ್ಯಗಳಲ್ಲಂತೂ ತುಂಬ ಇದ್ದಾರೆ. ಇವರಿರುವ ಸ್ಥಳಗಳಲ್ಲಿ ಅಯ್ಯಪ್ಪನ ದೇವಾಲಯಗಳನ್ನೂ ಕಟ್ಟಲಾಗಿದೆ. ಅದರ ಮೇಲ್ವಿಚಾರಣೆಗೆ ಇರುವವರನ್ನೆಲ್ಲಾ ಕರೆದು ಸಭೆ ಮಾಡಿ ಅಯ್ಯಪ್ಪ ಭಕ್ತರ ಎಲ್ಲ ಓಟನ್ನೂ ನಮಗೆ ಹಾಕಿಸಿ ಎಂದು ಕೇಳುವ ಪ್ರಸ್ತಾಪವನ್ನು ಮೋದಿ, ಷಾ ಜೋಡಿ ಈಗಾಗಲೇ ಮಾಡಿದೆ. ಈ ಮುಗ್ಧ ಭಕ್ತರ ಧಾರ್ಮಿಕ ಭಾವನೆಯನ್ನು ಕೆರಳಿಸಿ ಅವರಲ್ಲಿ ವಿಷ ತುಂಬಿ ಅವರ ಮತಗಳನ್ನೆಲ್ಲ ಕಸಿಯುವ ತಂತ್ರಗಾರಿಕೆಗೆ ಈಗಾಗಲೇ ಕೈಹಾಕಿದ್ದಾರೆ.

ತಮ್ಮದೇ ಪಕ್ಷ ಇಡೀ ದೇಶದಲ್ಲಿ ಮತ್ತು ಅಯೋಧ್ಯೆ ವಿವಾದವಿರುವ ಉತ್ತರಪ್ರದೇಶದಲ್ಲಿ ಅಧಿಕಾರದಲ್ಲಿದ್ದರು ಇಷ್ಟು ದಿನ ತೆಪ್ಪಗಿದ್ದು ಚುನಾವಣೆಯ ಹೊಸ್ತಿಲಲ್ಲಿ ಅಯೋಧ್ಯೆ, ಅಯ್ಯಪ್ಪರನ್ನು ಭಜಿಸುತ್ತಿರುವ ಬಿಜೆಪಿಯವರ ಈ ಎರಡೂ ಹುನ್ನಾರಗಳನ್ನು ಜನರು ಅರ್ಥಮಾಡಿಕೊಳ್ಳಬೇಕಿದೆ. ಮೋದಿ-ಷಾ-ಆರೆಸ್ಸೆಸ್, ಹೇಗೆ ತಮ್ಮ ಬೇಳೆ ಬೇಯಿಸಿಕೊಳ್ಳಲು ಹೇಗೆ ಈ ಮುಗ್ಧ ಜನರನ್ನು ದುರುಪಯೋಗಪಡಿಸಿಕೊಳ್ಳಲು ಹೊರಟಿದ್ದಾರೆ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡುವುದು ನಮ್ಮೆಲ್ಲರ ಮೇಲಿರುವ ಹೊಣೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....