Homeಅಂಕಣಗಳುರಾಮ, ಅಯ್ಯಪ್ಪನ ಹೆಸರಲ್ಲಿ ಬಿಜೆಪಿಯ ಕುತಂತ್ರಗಳು

ರಾಮ, ಅಯ್ಯಪ್ಪನ ಹೆಸರಲ್ಲಿ ಬಿಜೆಪಿಯ ಕುತಂತ್ರಗಳು

- Advertisement -
- Advertisement -

ಎಚ್.ಎಸ್.ದೊರೆಸ್ವಾಮಿ |

ಬಿಜೆಪಿಯ ಬತ್ತಳಿಕೆಯಲ್ಲಿದ್ದ ಎಲ್ಲಾ ಆಯುಧಗಳು ಠುಸ್ಸೆಂದಿವೆ. ಅದರಿಂದ ಮಧ್ಯಪ್ರದೇಶ, ರಾಜಸ್ಥಾನ ಶಾಸನಸಭೆ ಚುನಾವಣೆಗಳನ್ನು ಎದುರಿಸಲು ಬಿಜೆಪಿಗೆ ನಡುಕ ಹುಟ್ಟಿದೆ. ರಫೇಲ್ ಡೀಲ್, ನೋಟುಗಳ ಅಮಾನ್ಯೀಕರಣ, ಸ್ವಚ್ಛ ಭಾರತ, ಜನರ ಖಾತೆಗೆ ಹದಿನೈದು ಲಕ್ಷ ರೂಪಾಯಿ ಹಾಕುವುದು ಮುಂತಾದ ಮೋದಿಯ ಎಲ್ಲಾ ತಂತ್ರಗಾರಿಕೆಯೂ ವಿಫಲಗೊಂಡು ಮೋದಿ, ಷಾಗಳು ತತ್ತರಿಸ ಹತ್ತಿದ್ದಾರೆ. ಸೀಮಾಂದ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯುಡು ಎಲ್ಲ ವಿರೋಧ ಪಕ್ಷಗಳನ್ನು ಒಂದುಗೂಡಿಸಿ ಲೋಕಸಭೆಯ ಚುನಾವಣೆಯನ್ನು ಎದುರಿಸಲು ಭಾರಿ ಪ್ರಯತ್ನ ಮಾಡುತ್ತಿರುವುದೂ ಬಿಜೆಪಿಗೆ ಭಾರಿ ತಲೆನೋವಾಗಿದೆ. ಆದ್ದರಿಂದ ಮೋದಿ, ಷಾಗಳು ಚುನಾವಣೆ ಎದುರಿಸಲು ಹೊಸತಂತ್ರ ರೂಪಿಸಲು ಹೆಣಗುತ್ತಿದ್ದಾರೆ.

ಅವರಿಗೆ ರಾಮಚಂದ್ರ ಭೂಮಿಯ ನೆನಪಾಗಿ ಅಯೋಧ್ಯೆಯಲ್ಲಿ ರಾಮಮಂದಿರವನ್ನು ಕೂಡಲೇ ಕಟ್ಟುವ ಮಾತನ್ನಾರಂಭಿಸಿದ್ದಾರೆ. ವಿಶ್ವಹಿಂದೂ ಪರಿಷತ್ ಮುಂತಾದ ಹಿಂದೂ ಮತಾಂಧ ಸಂಸ್ಥೆಗಳ ನೆರವಂತೂ ಬಿಜೆಪಿಗೆ ಇದ್ದೇ ಇದೆ. ಆರೆಸ್ಸೆಸ್ ಏರ್ಪಡಿಸಿದ್ದ ಬೈಠಕ್‍ಗೆ ಬಿಜೆಪಿ ಅಧ್ಯಕ್ಷ ಷಾ ಹೋಗಿ ಅಯೋಧ್ಯೆಯಲ್ಲಿ ಒಂದು ಗದ್ದಲ ಎಬ್ಬಿಸುವ ಯೋಜನೆಗೆ ಚಾಲನೆ ನೀಡಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಲೇಬೇಕೆಂಬ ಉದ್ದೇಶ ಬಿಜೆಪಿಗಂತೂ ಇಲ್ಲ. ರಾಮಮಂದಿರ ನಿರ್ಮಾಣದ ಪ್ರಶ್ನೆಯನ್ನು ಜೀವಂತ ಇಟ್ಟು ಮತ ಕೀಳುವ ತಂತ್ರಗಾರಿಕೆ ಬಿಜೆಪಿಯದ್ದು. ಒಂದೊಮ್ಮೆ ರಾಮಚಂದ್ರನ ದೇವಾಲಯವನ್ನು ಕಟ್ಟಿಬಿಟ್ಟರೆ ಚುನಾವಣೆ ಎದುರಾದಾಗ ಅಯೋಧ್ಯೆ ಟ್ರಂಪ್‍ಕಾರ್ಡ್ ಬಳಸಲು ಎಲ್ಲಿ ಸಾಧ್ಯವಾದೀತು? ರಾಮ ಮಂದಿರದ ನೆಪದಲ್ಲಿ ಹಿಂದೂಗಳ ಮತಗಳನ್ನು ಕೀಳುತ್ತಾ ಹೋಗುವುದು ಬಿಜೆಪಿಯ ಹುನ್ನಾರ. ಇದಕ್ಕಾಗಿ ಅಯೋಧ್ಯೆಯಲ್ಲಿ ಒಂದು ಲಕ್ಷ ಹಿಂದೂಗಳ ಸಮಾವೇಶವನ್ನು ನಡೆಸಿದ್ದಾರೆ. ಮೋದಿಗೆ ಸಾಥ್ ಕೊಡಲು ಉತ್ತರ ಪ್ರದೇಶದ ಸನ್ಯಾಸದ ಛದ್ಮ ವೇಷಧಾರಿ ಮುಖ್ಯಮಂತ್ರಿ ಆದಿತ್ಯನಾಥ್ ಇದ್ದೇ ಇದ್ದಾನೆ. ಉತ್ತರಪ್ರದೇಶ ಸರ್ಕಾರ ಈ ಮಾರೀಚನ ಕೈಯಲ್ಲಿರುವುದರಿಂದ ಬಿಜೆಪಿ ರಕ್ಷಣೆಗೆ ಬೇಕಾದ ಎಲ್ಲ ಕ್ರಮಗಳೂ ಸುಲಭ. ಅಯೋಧ್ಯೆಯಲ್ಲಿ ತಲೆತಲಾಂತರದಿಂದ ನೆಲೆಸಿರುವ ಮುಸ್ಲಿಂ ಜನಾಂಗಕ್ಕೆ ತಮಗೇನು ಕೇಡು ಕಾದಿದೆಯೋ ಎಂಬ ಆತಂಕ ಉಂಟಾಗಿದೆ. ಈ ಹಿಂದೂ ಮತಾಂಧರ ಸಮಾವೇಶದಲ್ಲಿ ಎಷ್ಟು ಹೆಣಗಳು ಬೀಳುವುದೋ ಎಂಬ ಆತಂಕ ಅಲ್ಲಿಯ ಮಹಮದೀಯರದಾಗಿದೆ. ಆದರೂ ಸಾಮೂಹಿಕವಾಗಿ ಸಮಾವೇಶ ನಡೆಯುವ ಕಾಲದಲ್ಲಿ ಅಯೋಧ್ಯೆ ಬಿಟ್ಟುಹೋಗುವುದಾಗಿ ಘೋಷಿಸಿದ್ದಾರೆ.

ಅಯೋಧ್ಯೆಯಲ್ಲಿ ಅನೇಕ ಕಾಲದಿಂದ ಹಿಂದೂ ಮುಸ್ಲಿಮರು ಅನ್ಯೋನ್ಯವಾಗಿ ಬಾಳುತ್ತಿದ್ದಾರೆ. ಅಯೋಧ್ಯೆಯ ಬಾಬ್ರಿ ಮಸೀದಿಯನ್ನು ಅಡ್ವಾಣಿಯವರ ನೇತೃತ್ವದಲ್ಲಿ ಕರಸೇವಕರು ಕೆಡಿಸಿದ ಸಂದರ್ಭ ಹೊರತುಪಡಿಸಿ, ಅದಕ್ಕೆ ಹಿಂದಿನ ದಿನಗಳಲ್ಲಾಗಲಿ, ಅನಂತರದ ದಿನಗಳಲ್ಲಾಗಲಿ ಅಯೋಧ್ಯೆಯಲ್ಲಿ ಕೋಮುಗಲಭೆ ಆಗಿಲ್ಲ. ಲೋಕಸಭೆ ಚುನಾವಣೆಯ ನಿಮಿತ್ತ ಈಗ ಮತ್ತೆ ಅಯೋಧ್ಯೆಯಲ್ಲಿ ಗದ್ದಲ ಎಬ್ಬಿಸಿ ಗೊಂದಲ ಉಂಟುಮಾಡಿ ಚುನಾವಣೆಯಲ್ಲಿ ಗೆದ್ದು ಬರುವ ಸಂಚನ್ನು ರೂಪಿಸಲಾಗಿದೆ.

ಎರಡನೆಯದಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿಯ ದೇವಾಲಯದ ಸಮಸ್ಯೆಯೊಂದನ್ನು ಬಿಜೆಪಿ ಹುಟ್ಟುಹಾಕಿ ಅದರ ದುರ್ಲಾಭ ಪಡೆಯುವ ಹುನ್ನಾರವೂ ರೂಪುಗೊಳ್ಳುತ್ತಿದೆ. ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಸ್ತ್ರೀಯರಿಗೂ ಪ್ರವೇಶ ಮಾಡುವ ಹಕ್ಕಿದೆಯೆಂದು ಸರ್ವೋಚ್ಛ ನ್ಯಾಯಾಲಯ ತೀರ್ಪಿತ್ತಿದೆ. ದೇವಸ್ಥಾನದ ಮುಖ್ಯ ಅರ್ಚಕರು, ಆಡಳಿತ ಮಂಡಳಿಯವರು ಸರ್ವೋಚ್ಛ ನ್ಯಾಯಾಲಯದ ಈ ತೀರ್ಪನ್ನು ಪರಿಶೀಲಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿವೆ. ಕೇರಳ ಸರ್ಕಾರಕ್ಕೆ ಈಗಂತೂ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಅನುಷ್ಠಾನಗೊಳಿಸದೆ ಬೇರೆದಾರಿ ಇಲ್ಲವಾಗಿದೆ. ಭಾರತೀಯ ಜನತಾ ಪಕ್ಷಕ್ಕೆ ಈಗ ಮೋದಿಯೇ ಆದರ ಸರ್ವಾಧಿಕಾರಿ. ‘any stick is good to beat’ ಇದು ಮೋದಿಯ ನಿಲುವು. ಹೀಗಾಗಿ ಬೇಜವಾಬ್ದಾರಿಯ ಪ್ರಧಾನಮಂತ್ರಿ ಮೋದಿ ಚುನಾವಣೆ ದೃಷ್ಟಿಯಿಂದ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಧಿಕ್ಕರಿಸಿ ನಡೆದುಕೊಳ್ಳಲು ಹೊರಟಿದ್ದಾರೆ. ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತಂದು ಕೇರಳೀಯ ಹಿಂದೂಗಳ ಮತಗಳನ್ನೆಲ್ಲ ತನ್ನದಾಗಿಸಿಕೊಳ್ಳುವ ಏಕೈಕ ಉದ್ದೇಶದಿಂದ ಅಯ್ಯಪ್ಪ ಭಕ್ತರನ್ನು ಕೇರಳ ಸರ್ಕಾರದ ವಿರುದ್ಧ ಎತ್ತಿ ಕಟ್ಟಲು ಸಂಚು ಮಾಡಲಾಗಿದೆ. ಮಹಿಳೆಯರಿಗೂ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ದೊರೆಯಬೇಕು ಎಂಬುದು ಹಿಂದೂಗಳೆಲ್ಲರ ಅಭಿಮತವಾಗಿದೆ. ಹಿಂದೂ ಮತಾಂಧರು ಇದನ್ನು ಅರ್ಥಮಾಡಿಕೊಳ್ಳಬೇಕು. ಚುನಾವಣೆ ಗೆಲ್ಲುವುದಕ್ಕೆ ಇದು ಸಾಧನ ಎಂದು ಸರ್ವಾಧಿಕಾರಿ ಮೋದಿ ನಂಬಿದ್ದರೆ, ಬಿಜೆಪಿಯೇತರ ಹಿಂದೂಗಳು ದೇವಾಲಯ ಪ್ರವೇಶದ ವಿಚಾರದಲ್ಲಿ ಸ್ತ್ರೀ-ಪುರುಷರ ಭೇದ ಮಾಡಬಾರದೆಂದು ಘೋಷಣೆ ಮಾಡುತ್ತಾರೆ.

ಮೋದಿ ಅಮಿತ್ ಷಾಗಳಿಗೆ ಅಂತಿಮ ತೀರ್ಪು ಬರುವವರೆಗೂ ಕಾಯುವ ವ್ಯವಧಾನ ಇಲ್ಲ. ಮತದಾರರ ಮನಸ್ಸುಗಳನ್ನು ಕೆಡಿಸಿ, ಮತ ಕಸಿಯುವ ಏಕೈಕ ಗುರಿಯನ್ನೇ ಹೊಂದಿರುವ ಅವರು ಕಿವಿಗೆ ಕಣಜ ಹೊಕ್ಕವರಂತೆ ನಡೆದುಕೊಳ್ಳುತ್ತಿದ್ದಾರೆ. ಶಬರಿಮಲೆಗೆ ಹರಕೆ ಹೊತ್ತು ಹೋಗುವ ಜನ ದಕ್ಷಿಣ ರಾಜ್ಯಗಳಲ್ಲಂತೂ ತುಂಬ ಇದ್ದಾರೆ. ಇವರಿರುವ ಸ್ಥಳಗಳಲ್ಲಿ ಅಯ್ಯಪ್ಪನ ದೇವಾಲಯಗಳನ್ನೂ ಕಟ್ಟಲಾಗಿದೆ. ಅದರ ಮೇಲ್ವಿಚಾರಣೆಗೆ ಇರುವವರನ್ನೆಲ್ಲಾ ಕರೆದು ಸಭೆ ಮಾಡಿ ಅಯ್ಯಪ್ಪ ಭಕ್ತರ ಎಲ್ಲ ಓಟನ್ನೂ ನಮಗೆ ಹಾಕಿಸಿ ಎಂದು ಕೇಳುವ ಪ್ರಸ್ತಾಪವನ್ನು ಮೋದಿ, ಷಾ ಜೋಡಿ ಈಗಾಗಲೇ ಮಾಡಿದೆ. ಈ ಮುಗ್ಧ ಭಕ್ತರ ಧಾರ್ಮಿಕ ಭಾವನೆಯನ್ನು ಕೆರಳಿಸಿ ಅವರಲ್ಲಿ ವಿಷ ತುಂಬಿ ಅವರ ಮತಗಳನ್ನೆಲ್ಲ ಕಸಿಯುವ ತಂತ್ರಗಾರಿಕೆಗೆ ಈಗಾಗಲೇ ಕೈಹಾಕಿದ್ದಾರೆ.

ತಮ್ಮದೇ ಪಕ್ಷ ಇಡೀ ದೇಶದಲ್ಲಿ ಮತ್ತು ಅಯೋಧ್ಯೆ ವಿವಾದವಿರುವ ಉತ್ತರಪ್ರದೇಶದಲ್ಲಿ ಅಧಿಕಾರದಲ್ಲಿದ್ದರು ಇಷ್ಟು ದಿನ ತೆಪ್ಪಗಿದ್ದು ಚುನಾವಣೆಯ ಹೊಸ್ತಿಲಲ್ಲಿ ಅಯೋಧ್ಯೆ, ಅಯ್ಯಪ್ಪರನ್ನು ಭಜಿಸುತ್ತಿರುವ ಬಿಜೆಪಿಯವರ ಈ ಎರಡೂ ಹುನ್ನಾರಗಳನ್ನು ಜನರು ಅರ್ಥಮಾಡಿಕೊಳ್ಳಬೇಕಿದೆ. ಮೋದಿ-ಷಾ-ಆರೆಸ್ಸೆಸ್, ಹೇಗೆ ತಮ್ಮ ಬೇಳೆ ಬೇಯಿಸಿಕೊಳ್ಳಲು ಹೇಗೆ ಈ ಮುಗ್ಧ ಜನರನ್ನು ದುರುಪಯೋಗಪಡಿಸಿಕೊಳ್ಳಲು ಹೊರಟಿದ್ದಾರೆ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡುವುದು ನಮ್ಮೆಲ್ಲರ ಮೇಲಿರುವ ಹೊಣೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...