HomeUncategorizedಕುಸಿಯುತ್ತಿರುವ ಆರ್ಥಿಕತೆ ತಡೆಯಲು `ಕಾಂಗ್ರೆಸ್ ಸೂತ್ರ' ಅನುಸರಿಸಿ: ಬಿಜೆಪಿಗೆ ಸಲಹೆಕೊಟ್ಟ ವಿತ್ತ ಸಚಿವೆಯ ಪತಿ!

ಕುಸಿಯುತ್ತಿರುವ ಆರ್ಥಿಕತೆ ತಡೆಯಲು `ಕಾಂಗ್ರೆಸ್ ಸೂತ್ರ’ ಅನುಸರಿಸಿ: ಬಿಜೆಪಿಗೆ ಸಲಹೆಕೊಟ್ಟ ವಿತ್ತ ಸಚಿವೆಯ ಪತಿ!

- Advertisement -
- Advertisement -

ಕುಸಿಯುತ್ತಿರುವ ಆರ್ಥಿಕತೆ, ನಿರುದ್ಯೋಗ ಸೇರಿ ಹಲವು ಸಮಸ್ಯೆಗಳು ಅಭಿವೃದ್ಧಿಗೆ ಮಾರಕವಾಗಿವೆ. ಜಿಡಿಪಿ ಕುಸಿದಿದ್ದು, ಹಲವು ಕ್ಷೇತ್ರಗಳು ಲಾಭವಿಲ್ಲದೇ ನೆಲಕಚ್ಚುತ್ತಿವೆ. ವ್ಯಾಪಾರ, ಉದ್ಯಮ, ಮಾರುಕಟ್ಟೆ ಸ್ಥಿತಿಗತಿ ಮಂದಗತಿಯಲ್ಲಿ ಸಾಗಿದೆ. ಕಾರ್ಪೊರೇಟ್ ವಲಯ ಚೇತರಿಕೆ ಕಾಣುತ್ತಿಲ್ಲ. ಹೀಗಿರುವಾಗ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಮಾತ್ರ ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿದೆ. ಕಾಂಗ್ರೆಸ್ ಆಡಳಿತವಿದ್ದಾಗಲೂ ಆರ್ಥಿಕತೆ ಕುಸಿತವುಂಟಾಗಿತ್ತು. ಆದರೆ ಹಲವು ಸುಧಾರಿತ ಕ್ರಮಗಳ ಜಾರಿಯ ನಂತರ ಎಲ್ಲವೂ ಸರಿಹೋಗಿ, ಜನತೆಯ ಜೀವನ ಕ್ರಮ ಉತ್ತಮವಾಗಿತ್ತು. ಆದರೆ ಬಿಜೆಪಿ ಆಡಳಿತದಲ್ಲಿ ಹಾಗೇ ಆಗುತ್ತಿಲ್ಲ. ಬಿಜೆಪಿ ಸರ್ಕಾರ ಇತರೆ ಆರ್ಥಿಕ ತಜ್ಞರ ಸಲಹೆ ಪಡೆಯದೇ ತನ್ನ ಸೊಂಡಿಲಿನಿಂದ ತಾನೇ ನೀರು ಕುಡಿಯಲು ಹೊರಟಿರುವ ವಿಷಯ  ಗೌಪ್ಯವಾಗಿ ಉಳಿದಿಲ್ಲ. ಈಗ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪತಿ ಪರಕಲಾ ಪ್ರಭಾಕರ್, ದಿ ಹಿಂದೂ ದಿನಪತ್ರಿಕೆಯ ಅಭಿಪ್ರಾಯ ಸಂಗತಿಗೆ ಬರೆದ ಲೇಖನ ಜಗಜ್ಜಾಹೀರುಗೊಳಿಸಿದೆ.

ಹೌದು… ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪತಿ ಪರಕಲಾ ಪ್ರಭಾಕರ್ ಸುದೀರ್ಘ ಲೇಖನವೊಂದನ್ನು ಬರೆದಿದ್ದಾರೆ. ಅದರಲ್ಲಿ ಬಿಜೆಪಿ ಸರ್ಕಾರ, ಕಾಂಗ್ರೆಸ್ ಆಡಳಿತದಲ್ಲಿ ಅನುಸರಿಸಲಾಗಿದ್ದ ಆರ್ಥಿಕತೆ ಅಭಿವೃದ್ಧಿ ನಿಯಮಾವಳಿಗಳನ್ನು ಅನುಸರಿಸಬೇಕಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಸರ್ದಾರ್ ವಲ್ಲಭಬಾಯಿ ಪಟೇಲ್ ಅವರನ್ನು ಬಿಜೆಪಿಯ ರಾಜಕೀಯ ಯೋಜನೆಗಳ ಐಕಾನ್ ಆಗಿ ಆಯ್ಕೆ ಮಾಡುತ್ತದೆ. ಹಾಗೆಯೇ ಆರ್ಥಿಕತೆಯ ವಾಸ್ತುಶಿಲ್ಪದ ಆಧಾರವಾಗಿ ನರಸಿಂಹರಾವ್ ಅವರ ದೃಢ ಯೋಜನೆಗಳನ್ನು ಆಯ್ಕೆ ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ.

60 ವರ್ಷದ ಪರಕಲಾ ಪ್ರಭಾಕರ್ ಅವರು, ಆಂಧ್ರಪ್ರದೇಶ ಸರ್ಕಾರದ ಮಾಜಿ ಸಂವಹನ ಸಲಹೆಗಾರರಾಗಿದ್ದರು. ನೆಹರು ಕಾಲದ ಆರ್ಥಿಕತೆಯ ವ್ಯವಸ್ಥೆ ಹಾಗೂ ಚೌಕಟ್ಟಿನ ಬಗ್ಗೆ ಬಿಜೆಪಿ ಸರ್ಕಾರ ಮಾಡುತ್ತಿರುವ ಟೀಕೆ, ವಿಮರ್ಶೆ, ವ್ಯಂಗ್ಯದ ವಿರುದ್ಧವೂ ಪ್ರಭಾಕರ್ ಮಾತನಾಡಿದ್ದಾರೆ. ಥಿಂಕ್-ತ್ಯಾಂಕ್, ತಪ್ಪನ್ನು ತಿದ್ದಿಕೊಂಡು, ಅರಿತು ನಡೆಯುವಲ್ಲಿ ಬಿಜೆಪಿ ವಿಫಲವಾಗಿದೆ. ಆಧುನಿಕ ಮಾರುಕಟ್ಟೆ, ಜಾಗತೀಕರಣದ ಜಗತ್ತಲ್ಲಿ ಆಂತರಿಕವಾಗಿ ಸಮಗ್ರ ಮಾನವತಾವಾದದ ರಚನೆಯ ಮೇಲೆ ಪ್ರಾಯೋಗಿಕ ಉಪಕ್ರಮಗಳನ್ನು ರೂಪಿಸಲು ಸಾಧ್ಯವಿಲ್ಲ. ನರಸಿಂಹ ರಾವ್ ಮತ್ತು ಮನಮೋಹನ್ ಸಿಂಗ್ ಅವರ ಆರ್ಥಿಕ ವಾಸ್ತುಶಿಲ್ಪ ಮತ್ತು ಅಭಿವೃದ್ಧಿ ಅಜೆಂಡಾವನ್ನು ಸ್ವೀಕರಿಸಿ ಅದನ್ನು ಅನುಸರಿಸುವ ಮೂಲಕ ಬಿಜೆಪಿ ಸೀಮಿತ ಕಾರ್ಯಸೂಚಿಯಿಂದ ಬಿಡುಗಡೆ ಹೊಂದಬಹುದು ಎಂದು ಹೇಳಿದ್ದಾರೆ.

ಬಿಜೆಪಿ ಆಡಳಿತದ ಪ್ರಸ್ತುತ ಬೃಹತ್ ಸಮಸ್ಯೆ ಆರ್ಥಿಕತೆ ಕುಸಿತದಿಂದ ಹೊರಬರಲು ಬಿಜೆಪಿ ತನ್ನಲ್ಲಿರುವ ಕೆಲವು ಚಿಂತನೆಗಳಲ್ಲಿನ ದೌರ್ಬಲ್ಯತೆಯನ್ನು ಸರಿಪಡಿಸಿಕೊಳ್ಳಬೇಕಿದೆ. ಸರ್ಕಾರ ಇನ್ನೂ ನಿರಾಕರಣೆ ಕ್ರಮವನ್ನೇ ಅನುಸರಿಸುತ್ತಿದೆ. ಸಾರ್ವಜನಿಕ ವಲಯಕ್ಕೆ ಹರಿಯುವ ದತ್ತಾಂಶವು ನಂತರದ ದಿನಗಳಲ್ಲಿ ಎದುರಾಗಬಹುದಾದ ಗಂಭೀರ ಸವಾಲು ದುಃಸ್ಥಿತಿಯನ್ನು ಎತ್ತಿ ತೋರಿಸುತ್ತಿದೆ ಎಂದು ಬರೆದಿದ್ದಾರೆ.

ಇತ್ತ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪತಿಯ ಲೇಖನದ ಬಗ್ಗೆ ಪ್ರತಿಕ್ರಿಯಿಸಿ, 2014 ರಿಂದ 2019 ರವರೆಗೆ ಬಿಜೆಪಿ ಸರ್ಕಾರ ಮೂಲಭೂತ ಸುಧಾರಣೆಗಳನ್ನು ಮಾಡಿದೆ. ಸರಕು ಮತ್ತು ಸೇವಾ ತೆರಿಗೆ, ಆಧಾರ್ ಮತ್ತು ಅಡುಗೆ ಅನಿಲ ವಿತರಣೆಯಂತಹ ಕ್ರಮಗಳ ಬಗ್ಗೆ ಪಟ್ಟಿ ಮಾಡಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...