Homeಕರ್ನಾಟಕರಾಷ್ಟ್ರಪತಿ ಆಡಳಿತದ ಕಡೆಗೆ ಕರ್ನಾಟಕ?

ರಾಷ್ಟ್ರಪತಿ ಆಡಳಿತದ ಕಡೆಗೆ ಕರ್ನಾಟಕ?

ರಾಜ್ಯಪಾಲರು, ಸುಪ್ರೀಂಕೋರ್ಟಿನ ಮಧ್ಯಪ್ರವೇಶದಿಂದ ಬಿಕ್ಕಟ್ಟು ಹೆಚ್ಚಾಗುವ ಸಾಧ್ಯತೆಯೂ ಇದೆ.

- Advertisement -
- Advertisement -

ರಾಜ್ಯ ಸರ್ಕಾರದ ಸುತ್ತ ನಡೆಯುತ್ತಿರುವ ಘಟನಾವಳಿಗಳು ರಾಷ್ಟ್ರಪತಿ ಆಡಳಿತದ ಕಡೆಗೆ ನಡೆಯುತ್ತಿರುವ ಹಾಗೆ ಕಾಣುತ್ತಿದೆ. ಕುಮಾರಸ್ವಾಮಿಯವರು ವಿಶ್ವಾಸಮತ ಯಾಚನೆಗೆ ಎಷ್ಟು ಸಮಯ ತೆಗೆದುಕೊಂಡರೂ ಪರವಾಗಿಲ್ಲ, ಆ ನಂತರ ಬಿದ್ದು ಹೋಗುವ ಸಾಧ್ಯತೆಯೇ ಹೆಚ್ಚಿದೆ. ಆದರೆ, ಬಿಜೆಪಿಯವರು ಅಷ್ಟು ಹೊತ್ತು ಕಾಯಲು ಸಿದ್ಧವಿಲ್ಲ. ಹಾಗೆ ಆದರೆ, ಮುಂಬೈನಲ್ಲಿ ಇರುವ ಶಾಸಕರು ಮರಳಿ ತಮ್ಮ ಪಕ್ಷಗಳಿಗೆ ಹೋಗಿಬಿಡಬಹುದೆಂಬ ಆತಂಕ ಬಿಜೆಪಿಯದ್ದು. ಹಾಗಾಗಿ ರಾಜ್ಯಪಾಲರಿಗೆ ಪದೇ ಪದೇ ಮನವಿ ಕೊಟ್ಟು ಅವರಿಂದ ಸ್ಪೀಕರ್‍ಗೆ ಸಂದೇಶ ಬರುವಂತೆ ನೋಡಿಕೊಂಡರು. ಆದರೆ, ಸ್ಪೀಕರ್‍ಗೆ ಸದನವನ್ನು ಯಾವ ರೀತಿ ನಡೆಸಬೇಕೆಂಬ ನಿರ್ದೇಶನ ಕೊಡುವ ಅಧಿಕಾರ ರಾಜ್ಯಪಾಲರಿಗಿಲ್ಲವಾದ್ದರಿಂದ ಅದಕ್ಕೆ ಸ್ಪೀಕರ್ ಕವಡೆ ಕಾಸಿನ ಕಿಮ್ಮತ್ತು ನೀಡಲಿಲ್ಲ.

ಆ ನಂತರ ಸಭಾನಾಯಕ ಕುಮಾರಸ್ವಾಮಿಯವರಿಗೇ ರಾಜ್ಯಪಾಲರಿಂದ ಸಮಯ ನಿಗದಿ ಮಾಡಿಸಿದರು. ತಾಂತ್ರಿಕವಾಗಿ ಇದು ಸರಿಯಿತ್ತು. ಹಾಗಾಗಿ ಅದನ್ನು ಕುಮಾರಸ್ವಾಮಿಯವರು ಒಪ್ಪಲೇಬೇಕಾಗುತ್ತದೆ ಎಂಬ ನಿರೀಕ್ಷೆ ಎಲ್ಲರದ್ದಾಗಿತ್ತು. ಅದರ ಕುರಿತು ಮತ್ತೆ ರಾಜ್ಯಪಾಲರಿಗೆ ಪತ್ರ ಬರೆದರು. ಮಧ್ಯಾಹ್ನ 1.30ರ ಡೆಡ್‍ಲೈನ್‍ಗೆ ಡೋಂಟ್‍ಕೇರ್ ಎಂಬಂತೆ ಸದನದ ಕಲಾಪ ನಡೆಯಿತು. ಅಷ್ಟೇ ಅಲ್ಲದೇ ರಾಜ್ಯಪಾಲರು ಇಂತಹ ಡೆಡ್‍ಲೈನ್ ತಾಂತ್ರಿಕವಾಗಿಯೂ ತಪ್ಪಿರಬಹುದೇ ಎಂಬ ಅನುಮಾನ ಮೂಡುವ ರೀತಿಯಲ್ಲಿ ಹಲವು ಕೋರ್ಟ್ ಆದೇಶಗಳನ್ನು ಉಲ್ಲೇಖಿಸಲಾಯಿತು.

ಇಷ್ಟು ಹೊತ್ತಿಗೆ ರಾಜ್ಯಪಾಲರಿಂದ ಇನ್ನೊಂದು ಗಡುವು, ಸಂಜೆ 6 ಗಂಟೆ ನಿಗದಿಯಾಯಿತು. ಅದನ್ನು ಉಲ್ಲೇಖಿಸಿದ ಕುಮಾರಸ್ವಾಮಿಯವರು ರಾಜ್ಯಪಾಲರು ಈ ಅವಧಿಯಲ್ಲಿ ನಡೆದುಕೊಂಡ ಪಕ್ಷಪಾತದ ರೀತಿಯನ್ನು ಸದನದಲ್ಲಿ ಪ್ರಸ್ತಾಪಿಸಿದರು. ಅಂದರೆ, ರಾಜ್ಯಪಾಲರ ಈ ನಡೆಗೆ ನಮ್ಮ ಮಾನ್ಯತೆ ಇಲ್ಲ ಎನ್ನುವುದನ್ನು ಸೂಚಿಸಿದರು. ತನ್ನ ಪತ್ರದಲ್ಲಿ ಕುದುರೆ ವ್ಯಾಪಾರ ಎಂಬ ಪದವನ್ನು ಬಳಸಿರುವ ರಾಜ್ಯಪಾಲರು, ಕುದುರೆ ವ್ಯಾಪಾರ ಯಾರು ಮಾಡುತ್ತಿದ್ದಾರೆ ಎಂಬುದನ್ನು ಗಮನಿಸಲ್ಲವಾ ಎಂದು ಹರಿಹಾಯ್ದರು.

ಮುಂದುವರೆದು, ಯಡಿಯೂರಪ್ಪನವರನ್ನುದ್ದೇಶಿಸಿ ‘ಬಹಳ ಆತುರದಲ್ಲಿದ್ದೀರಿ. ಅದು ಅಷ್ಟು ಒಳ್ಳೆಯದಲ್ಲ. ನೋಡೋಣ, ಏನಾಗುತ್ತೆ ಅಂತ. ರಾಷ್ಟ್ರಪತಿ ಆಡಳಿತ ಬರುತ್ತದೋ ಅಥವಾ ನೀವು ಮುಖ್ಯಮಂತ್ರಿಯಾಗ್ತೀರೋ ಎನ್ನೋದನ್ನು ನೋಡೋಣ’ ಎಂದೂ ಹೇಳಿದರು.

ಇದರ ಅರ್ಥ ಇಷ್ಟೇ. ರಾಜ್ಯಪಾಲರ (ಸರ್ಕಾರದ ಪ್ರಕಾರ) ಅನೈತಿಕ ನಡೆಗೆ ಸರ್ಕಾರವು ಬದ್ಧವಾಗುವುದಿಲ್ಲ. ಅದರ ಬದಲಿಗೆ ಸುಪ್ರೀಂಕೋರ್ಟಿಗೆ ಹೋಗುತ್ತದೆ. ಸುಪ್ರೀಂಕೋರ್ಟು ತೀರ್ಮಾನ ಘೋಷಿಸುವುದೇ ತಡವಾಗುವ ಸಾಧ್ಯತೆಯೂ ಇದೆ. ಏಕೆಂದರೆ, ಇದರಲ್ಲಿ ಹಲವು ಸಾಂವಿಧಾನಿಕ ಅಂಶಗಳಿವೆ. ಅಸಾಂವಿಧಾನಿಕವಾದ ತೀರ್ಪು ಬಂದರೆ, ಶಾಸಕಾಂಗದ ಸ್ವಾಯತ್ತತೆಗೆ ಧಕ್ಕೆ ತಂದರೆ ಒಪ್ಪಲ್ಲ ಎನ್ನುವ ಸರ್ಕಾರ ಇದೆ. ಹಾಗಾಗಿ ಕೋರ್ಟೂ ಎಚ್ಚರಿಕೆಯಿಂದ ಹೆಜ್ಜೆಗಳನ್ನಿಡಬೇಕಾಗುತ್ತದೆ. ಆ ಮಧ್ಯೆ ಸದನದಲ್ಲಿ ವಿಶ್ವಾಸಮತ ಯಾಚನೆ ಮುಗಿಯದೇ ಹೋದರೆ ರಾಜ್ಯಪಾಲರು ಏನು ಮಾಡುತ್ತಾರೆ?

ಇದನ್ನೂ ಓದಿ: ಪಕ್ಷಾಂತರ ನಿಷೇಧ ಕಾಯ್ದೆ: ಸ್ಪೀಕರ್ v/s ಸುಪ್ರೀಂ ಕೋರ್ಟ್

ಸರ್ಕಾರವನ್ನು ಮತ್ತು ಸದನವನ್ನು ಅಮಾನತ್ತಿನಲ್ಲಿಡುವ ಸಂಭವವಿದೆ. ಆಗ ಅನಿವಾರ್ಯವಾಗಿ ರಾಷ್ಟ್ರಪತಿ ಆಡಳಿತ ಬರುತ್ತದೆ. ಅದೇ ಹೊತ್ತಿನಲ್ಲಿ ಸುಪ್ರೀಂಕೋರ್ಟಿನಲ್ಲಿ ಉಳಿದ ವಿಚಾರಗಳು ಬಗೆಹರಿದಿರುವುದಿಲ್ಲ. ಹಾಗಿರುವಾಗ ಬಿಜೆಪಿಯನ್ನು ಆಡಳಿತದಲ್ಲಿ ಕೂರಿಸುವ ಕೆಲಸವನ್ನು ರಾಜ್ಯಪಾಲರು ಮಾಡುತ್ತಾರಾ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಇವೆಲ್ಲದರ ಕಾರಣದಿಂದ ರಾಷ್ಟ್ರಪತಿ ಆಡಳಿತದ ಪ್ರಶ್ನೆ ಉದ್ಭವಿಸಿದೆ. ಆ ನಂತರ ಈ ಬಿಕ್ಕಟ್ಟು ಹೇಗೆ ಮತ್ತು ಯಾವಾಗ ಬಗೆಹರಿಯುತ್ತದೆಂಬುದರ ಮೇಲೆ ಮುಂದಿನ ಬೆಳವಣಿಗೆಗಳು ಇರುತ್ತವೆ. ಶಾಸಕರು ಅನರ್ಹಗೊಂಡರೂ ಬಿಜೆಪಿಗೆ ಹೆಚ್ಚಿನ ಸೀಟುಗಳು ಇರುವುದರಿಂದ ಅವರದ್ದೇ ಸರ್ಕಾರ ಬರುವ ಸಾಧ್ಯತೆಗಳು ಹೆಚ್ಚು. ಅನರ್ಹಗೊಂಡ ನಂತರ ಮತ್ತೆ ಆ ಶಾಸಕರು ಬಿಜೆಪಿ ಟಿಕೆಟ್‍ನಿಂದ ಸ್ಪರ್ಧಿಸಿ ಗೆಲ್ಲಬೇಕು. ಕೆಲವರು ಸೋಲಲೂಬಹುದು. ಒಟ್ಟಿನಲ್ಲಿ ಅತಂತ್ರ ಸ್ಥಿತಿ ಸಾಕಷ್ಟು ಕಾಲ ಮುಂದುವರೆಯುವುದಂತೂ ಖಂಡಿತ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...