Homeಮುಖಪುಟರಾಹುಲ್ ಹತ್ಯಗೆ ಸಂಚು? ಅಮೇಥಿಯಲ್ಲಿ ನಡೆದದ್ದೇನು?

ರಾಹುಲ್ ಹತ್ಯಗೆ ಸಂಚು? ಅಮೇಥಿಯಲ್ಲಿ ನಡೆದದ್ದೇನು?

- Advertisement -
- Advertisement -

ಅಮೇಥಿಯಲ್ಲಿ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪತ್ರಕರ್ತರೊಡನೆ ಮಾತನಾಡುತ್ತಿರಬೇಕಾದರೆ, ಅವರ ತಲೆ, ಕಿವಿಯ ಮೇಲಿನ ಭಾಗಗಳಲ್ಲಿ ಲೇಸರ್ ಲೈಟ್‍ನಿಂದ ಹೊರಡುವ ರೀತಿಯ ಬೆಳಕು ಬಿದ್ದಿದೆ. ಅತೀ ಸಣ್ಣ ಅವಧಿಯಲ್ಲೇ 7 ಬಾರಿ ಈ ರೀತಿಯ ಬೆಳಕು ಓಡಾಡಿದೆ. ಆ ಸಂದರ್ಭದಲ್ಲಿ ಅವರ ಹೇಳಿಕೆಯನ್ನು ಪಡೆಯುತ್ತಿದ್ದ ಕ್ಯಾಮೆರಾಗಳಲ್ಲಿ ಇದು ಸ್ಪಷ್ಟವಾಗಿ ಕಂಡಿದೆ. ಇದು ಸ್ನೈಪರ್ ಗನ್‍ನಿಂದ ಶೂಟ್ ಮಾಡಲು ಪ್ರಯತ್ನಿಸುತ್ತಿದ್ದಾಗ ಆ ರೀತಿಯ ಬೆಳಕು ಬರುತ್ತದೆ ಎಂದು ರಕ್ಷಣಾ ಕೆಲಸದಲ್ಲಿರುವ ಕೆಲವರೂ ಹೇಳಿದ್ದಾರೆಂದು ಉಲ್ಲೇಖಿಸಿ, ಕಾಂಗ್ರೆಸ್ ನಾಯಕರಾದ ಅಹ್ಮದ್ ಪಟೇಲ್, ಸುರ್ಜೇವಾಲಾ ಮತ್ತು ಜೈರಾಂ ರಮೇಶ್ ಅವರು ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ. ಇದು ರಾಹುಲ್ ಗಾಂಧಿಯವರನ್ನು ಹತ್ಯೆಗೈಯ್ಯುವ ಸಂಚು ಆಗಿರಬಹುದು. ಹಾಗಾಗಿ ಅದರ ಕುರಿತು ಉನ್ನತ ಮಟ್ಟದ ತನಿಖೆ ನಡೆದು ಅಂತಹ ಅಪಾಯ ಇಲ್ಲದಂತೆ ಮಾಡಬೇಕು ಎಂದು ಈ ಪತ್ರ ಕೇಳಿದೆ.

ಇದೇ ಸಂದರ್ಭದಲ್ಲಿ ಕೇಂದ್ರ ಗೃಹ ಇಲಾಖೆಯು, ಎಸ್‍ಪಿಜಿ ಮುಖ್ಯಸ್ಥರ ಜೊತೆ ಈ ಕುರಿತು ಚರ್ಚೆ ನಡೆದಿದೆಯೆಂತಲೂ, ಅದು ಯಾರದ್ದೋ ಮೊಬೈಲ್ ಫೋನ್‍ನಿಂದ ಹೊರಟಿರುವ ಬೆಳಕು ಅಷ್ಟೇ ಆಗಿದೆಯೆಂಬ ಅಭಿಪ್ರಾಯವಿದೆ ಎಂದು ಹೇಳಿದೆಯೆಂದು ಎನ್‍ಡಿಟಿವಿ ವರದಿ ಮಾಡಿದೆ. ಆದರೆ, ಉತ್ತರ ಪ್ರದೇಶ ಸರ್ಕಾರವು ಭದ್ರತೆಯಲ್ಲಿ ತೋರಿಸುತ್ತಿರುವ ಲೋಪದ ಕಾರಣಕ್ಕೇ ಹೀಗೆ ಆಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕರ್ನಾಟಕಕ್ಕೆ ಪ್ರಚಾರಕ್ಕೆ ಆಗಮಿಸಿದ್ದ ರಾಹುಲ್‍ಗಾಂಧಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿಯುವಾಗಲೂ ಅವಘಡ ಸಂಭವಿಸಿತ್ತು. ವಿಮಾನವು ಸರಿಯಾಗಿ ಲ್ಯಾಂಡ್ ಆಗದೇ, ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೂ ಸಹಾ ಹತ್ಯೆಯ ಪ್ರಯತ್ನ ಇರಬಹುದೇ ಎಂಬ ಸಂದೇಹವನ್ನು ಹಲವರು ವ್ಯಕ್ತಪಡಿಸಿದ್ದರು. ನಂತರ ನಾಗರಿಕ ವಿಮಾನಯಾನ ನಿಯಂತ್ರಣ ಪ್ರಾಧಿಕಾರ ಡಿಜಿಸಿಎ, ಅದನ್ನು ಅಲ್ಲಗಳೆದಿತ್ತು. ಆಟೋ ಪೈಲಟ್ ಮೋಡ್‍ಗೆ ವಿಮಾನವನ್ನು ಹಾಕಲಾಗಿತ್ತೆಂದೂ, ನಂತರ ಚಾಲಕ ಅದನ್ನು ಮ್ಯಾನ್ಯುಯೆಲ್ ಮೋಡ್‍ಗೆ ಹಾಕಿ ನಿಭಾಯಿಸಿದರೆಂದೂ, ಇದು ಮಾಮೂಲಿಯೆಂತಲೂ ಅದು ಹೇಳಿತ್ತು.

ವಿಡಿಯೋ ನೋಡಿ

ರಾಹುಲ್‍ಗಾಂಧಿಯವರ ತಂದೆ ರಾಜೀವ್‍ಗಾಂಧಿ ಮತ್ತು ಅವರ ಅಜ್ಜಿ ಇಂದಿರಾಗಾಂಧಿಯವರೂ ಅವರ ಮೇಲೆ ನಡೆದ ಹತ್ಯಾಪ್ರಯತ್ನಗಳಿಂದಲೇ ಜೀವ ಕಳೆದುಕೊಂಡಿದ್ದರು ಎಂಬುದನ್ನಿಲ್ಲಿ ಸ್ಮರಿಸಬಹುದು.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆತಂಕ ವ್ಯಕ್ತವಾಗಿದ್ದು, ಅವರು ರಾಜಕಾರಣದಿಂದಲೇ ಹೊರಗುಳಿದರೂ ಪರವಾಗಿಲ್ಲ, ವಿದೇಶಕ್ಕೆ ಹೋದರೂ ಪರವಾಗಿಲ್ಲ, ಅವರ ಸುರಕ್ಷತೆ ಮುಖ್ಯ. ಆ ಕುಟುಂಬದಲ್ಲಿ ಮತ್ತೊಂದು ದುರಂತ ನಡೆಯದಿರಲಿ ಎಂಬ ಚರ್ಚೆಯನ್ನು ಹಲವರು ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಬಿಜೆಪಿ ಶಾಸಕ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...