Homeಮುಖಪುಟರಿಯಲ್ ಎಸ್ಟೇಟ್ ಹಗರಣದ ಕೇಸಿನಿಂದ ಬಚಾವಾಗಲು ಬಿಜೆಪಿ ಸೇರಿದರಾ ಗೌತಮ್ ಗಂಭೀರ್

ರಿಯಲ್ ಎಸ್ಟೇಟ್ ಹಗರಣದ ಕೇಸಿನಿಂದ ಬಚಾವಾಗಲು ಬಿಜೆಪಿ ಸೇರಿದರಾ ಗೌತಮ್ ಗಂಭೀರ್

- Advertisement -
- Advertisement -

ನಿಮಗಿದು ಗೊತ್ತೇ? ಮೊನ್ನೆಯಷ್ಟೇ ಬಿಜೆಪಿ ಸೇರಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ರಿಯಲ್ ಎಸ್ಟೇಟ್ ವಂಚನೆಯಲ್ಲಿ ಭಾಗಿಯಾಗಿದ್ದಾರೆ. ಈ ಕುರಿತು ನ್ಯಾಯಾಲಯಕ್ಕೆ ಹಾಜರಾಗುವಂತೆ ಕಳೆದ ಡಿಸೆಂಬರ್ ನಲ್ಲಿ ಕೋರ್ಟ್ ವಾರೆಂಟ್ ಹೊರಡಿಸಿತ್ತು.

ರುದ್ರಾ ಬಿಲ್ಡ್ವೆಲ್ ಕಂಪನಿಯ ಪ್ರಾಜೆಕ್ಟ್ ಒಂದರಲ್ಲಿ ನಡೆದ ಮೋಸ ಮತ್ತು ಪಿತೂರಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ನಲ್ಲಿ ನಡೆದ ವಿಚಾರಣೆಗೆ ಈ ಕಂಪನಿಯ ನಿರ್ದೇಶಕ ಮತ್ತು ಬ್ರಾಂಡ್ ಅಂಬಾಸಿಡರ್ ಆಗಿದ್ದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಸತತ ಗೈರು ಹಾಜರಾಗಿದ್ದರು. ನಂತರ ಜನವರಿ 24, 2019ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ದೆಹಲಿ ಹೈಕೋರ್ಟ್ ಖಡಕ್ ವಾರ್ನಿಂಗ್ ನೀಡಿತ್ತು. ಆದರೆ ಗಂಭೀರ್ ತಮ್ಮ ಮೇಲಿನ ಪ್ರಕರಣ ಕೈ ಬಿಡುವಂತೆ ಮೇಲ್ಮನವಿ ಸಲ್ಲಿಸಿದ್ದರು. ದೆಹಲಿಯ ಸಾಕೇತ್ ಕೋರ್ಟ್ ಅರ್ಜಿಯನ್ನು ವಜಾ ಮಾಡಿತ್ತು.

ದೆಹಲಿಯ ಗಾಜಿಯಾಬಾದ್ ನ ಇಂದಿರಾಪುರಂನಲ್ಲಿ ಶುರುವಾಗಬೇಕಿದ್ದ ಈ ಅಪಾರ್ಟ್ ಮೆಂಟ್ ನಲ್ಲಿ ಪ್ಲ್ಯಾಟ್ ಖರೀದಿಸಲು ಅನೇಕರು ಕೋಟ್ಯಾಂತರ ರೂಪಾಯಿ ಹೂಡಿಕೆ ಮಾಡಿದ್ದರು. ಆದರೆ ಕಟ್ಟಡ ನಿರ್ಮಾಣ ಕೆಲಸ ಇನ್ನೂ ಪ್ರಾರಂಭವಾಗಿಲ್ಲ ಎಂದು ಹೂಡಿಕೆದಾರರು 2016ರಲ್ಲಿ ದೂರು ಸಲ್ಲಿಸಿದ್ದರು. ಹೂಡಿಕೆದಾರರನ್ನು ವಂಚಿಸುವ ಸಲುವಾಗಿಯೇ ಈ ಪ್ರಾಜೆಕ್ಟನ್ನು ಆರಂಭಿಸಲಾಗಿತ್ತು ಎಂದು ಈ ದೂರಿನಲ್ಲಿ ಹೇಳಲಾಗಿದ್ದು ಪ್ರಕರಣ ವಿಚಾರಣೆಯ ಹಂತದಲ್ಲಿದೆ.

ಈ ಎಲ್ಲಾ ಕೇಸುಗಳಿಂದ ಬೇಸತ್ತಿರುವ ಗಂಭೀರ್ ಈ ಕಾರಣಕ್ಕಾಗಿಯೇ ಖುಸೆಗೊಳ್ಳಲು ಬಿಜೆಪಿ ಸೇರಿದ್ದಾರೆ ಎಂದು ಕೆಲವರು ಆರೋಪಿಸಿದ್ದಾರೆ. ಈ ಹಿಂದೆಯೂ ಹಲವಾರು ಜನ ತಮ್ಮ ಮೇಲಿನ ಕೇಸುಗಳಿಂದ ತಪ್ಪಿಸಿಕೊಳ್ಳಲು ಬಿಜೆಪಿ ಸೇರಿದ್ದರು ನಂತರ ಅವರ ಕೇಸುಗಳು ಖುಲಾಸೆಗೊಂಡ ಸಾಕಷ್ಟು ಉದಾಹರಣೆಗಳು ಸಹ ಇವೆ.

ಶಾರದಾ ಚಿಟ್ ಫಂಡ್ ಹಗರಣದಲ್ಲಿ ಹೆಸರು ಕೇಳಿ ಬಂದಿದ್ದ ಮುಕುಲ್ ರಾಯ್ ಬಿಜೆಪಿ ಸೇರ್ಪಡೆ

ಈ ಹಿಂದೆಯೂ ಮುಕುಲ್ ರಾಯ್ ಶ್ರದ್ಧಾ ಚಿಟ್ ಫಂಡ್ ಸ್ಕ್ಯಾಮ್ ನಲ್ಲಿ ಸಿಕ್ಕಿಹಾಕಿಕೊಂಡಿದ್ದರು. ನಂತರ ಅವರು ಬಿಜೆಪಿ ಸೇರಿದ ಕೂಡಲೇ ಹಗರಣ ಮುಕ್ತರಾದರು. ಹಿಮಾಚಲ ಪ್ರದೇಶದ ಅನಿಲ್ ಶರ್ಮಾ ಟಿಲಿಕಾಂ ಹಗರಣದಲ್ಲಿ ಸಿಲುಕಿಕೊಂಡು ಬಿಜೆಪಿ ಸೇರಿ ಬಗೆಹರಿಸಿಕೊಂಡರು. ಇಂತಹ ಹತ್ತಾರು ಉದಾಹರಣೆಗಳ ಸಾಲಿಗೆ ಹೊಸ ಸೇರ್ಪಡೆ ಗೌತಮ್ ಗಂಭೀರತೆ ಆಗಿದ್ದಾರೆ.

ಒಂದು ರಾಜಕೀಯ ಪಕ್ಷಕ್ಕೆ ಆರೋಗ್ಯಕರವೆನಿಸದ `ಕಾಂಗ್ರೆಸ್ ಮುಕ್ತ ಭಾರತ ಮಾಡುವೆ’ ಎಂದು ಹೊರಟ ಬಿಜೆಪಿ ಅದಕ್ಕೋಸ್ಕರ ಆಯ್ದುಕೊಂಡಿದ್ದು ಜನರಿಗೆ ಹತ್ತಿರವಾಗುವ ಜನಪರ ಹಾದಿಯನ್ನಲ್ಲ, ಬದಲಿಗೆ ಕಾಂಗ್ರೆಸಿನ ಹಗರಣವೀರರನ್ನು ತನ್ನತ್ತ ಸೆಳೆದುಕೊಂಡು ಕಾಂಗ್ರೆಸ್ ಅನ್ನು ಶುದ್ಧಗೊಳಿಸಿದ್ದು! ಈ ವಿಚಾರದಲ್ಲಿ ಬಿಜೆಪಿ ಎರಡು ರೀತಿಯಲ್ಲಿ ವ್ಯವಹರಿಸುತ್ತಾ ಬಂದಿದೆ. ಒಂದು, ಹಗರಣದಲ್ಲಿ ಸಿಕ್ಕಿಹಾಕಿಕೊಂಡವರಿಗೆ ತಮ್ಮ ಪಕ್ಷಕ್ಕೆ ಆಹ್ವಾನಿಸಿ ಅವರಿಗೆ ತಮ್ಮ ಪ್ರಭಾವ ಮತ್ತು ಅಧಿಕಾರ ದುರಪಯೋಗ ಬಳಸಿ ಕ್ಲಿನ್ ಚಿಟ್ ನೀಡಲಾಗುತ್ತದೆ. ಒಂದುವೇಳೆ ಅವರು ಪಕ್ಷಕ್ಕೆ ಬರದಿದ್ದರೆ ಅಂಥವರ ಮೇಲೆ ಐ.ಟಿ ದಾಳಿ, ಇ.ಡಿ ದಾಳಿ ರೀತಿಯಲ್ಲಿ ಬೆದರಿಕೆ ಒಡ್ಡಿ, ಸಿಬಿಐ ತನಿಖೆಯ ಗುಮ್ಮನನ್ನು ತೋರಿಸಿ ತಮ್ಮ ಪಕ್ಷಕ್ಕೆ ಸೆಳೆದುಕೊಳ್ಳುವ ಅಪ್ರಜಾತಾಂತ್ರಿಕ ನಡೆ ಎರಡನೆಯದ್ದು.

ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆ

ಕರ್ನಾಟಕದ ಎಸ್.ಎಂ ಕೃಷ್ಣರವರು ಸಹ ತೆರಿಗೆ ವಂಚನೆಯ ಬಲೆಯಲ್ಲಿ ಬಂಧಿಯಾಗಿದ್ದ ತಮ್ಮ ಅಳಿಯ ಸಿದ್ಧಾರ್ಥ ಹೆಗ್ಡೆಯನ್ನು ಬಚಾವು ಮಾಡಿಕೊಳ್ಳುವುದಕ್ಕಾಗಿ ಇಳಿ ವಯಸ್ಸಿನಲ್ಲಿ ಬಿಜೆಪಿ ಸೇರಿ ಮೂಲೆಗುಂಪಾದರು ಎಂಬ ಮಾತುಗಳಿವೆ. ಕೊಡಗು ಚಿಕ್ಕಮಗಳೂರು ಬೇನಾಮಿ ಕಾಫಿ ಎಸ್ಟೇಟ್ ಕುರಿತು ಸಿದ್ದಾರ್ಥ ವಿರುದ್ಧ ದೂರುಗಳಿದ್ದವು. ತನಿಖೆ ಭಯಕ್ಕಾಗಿಯೇ ಬಿಜೆಪಿ ಸೇರಿದ್ದರು ಎಂಬ ಮಾತುಗಳು ಚಾಲ್ತಿಯಲ್ಲಿವೆ. ಇನ್ನು ದೇಶ ಬಿಟ್ಟು ಓಡಿಹೋದ ಕಳ್ಳ ಉದ್ಯಮಿಗಳಿಗೆಲ್ಲಾ ನೇರ ಬಿಜೆಪಿಯೇ ಸಹಕರಿಸಿದ್ದಲ್ಲದೇ ಅವರಿಂದ ಹೇರಳವಾಗಿ ಪಾರ್ಟಿ ಫಂಡ್ ಪಡೆಯಿತ್ತಿರುವುದರ ಬಗ್ಗೆ ಬಿಜೆಪಿಯ ಮಿತ್ರ ಶಿವಸೇನೆಯೇ ಆರೋಪ ಮಾಡಿದೆ.

ಅವಕಾಶ ಸಿಕ್ಕಾಗಲೆಲ್ಲಾ ದೆಹಲಿಯಲ್ಲಿ ಸಾಕಷ್ಟು ಒಳ್ಳೆಯ ಕೆಲಸ ಮಾಡಿರುವ ಆಪ್ ಸರ್ಕಾರವನ್ನು ಗಂಭೀರ್ ಟೀಕಿಸಿದ್ದರು. ಕಳೆದ ವರ್ಷ ಗಂಭೀರ್ ರಾಜಕೀಯಕ್ಕೆ ಬರುತ್ತಾರೆ ಎಂಬ ಮಾತುಗಳು ಕೇಳಿಬಂದ ಸಂದರ್ಭದಲ್ಲಿ ಅದನ್ನು ಸ್ವತಃ ತಳ್ಳಿಹಾಕಿದ್ದರು. ಆದರೆ ಈಗ ಯಾವುದೇ ಮಾತುಕತೆಗಳಿಲ್ಲದೆ ಇದ್ದಕ್ಕಿದ್ದಂತೆ ಬಿಜೆಪಿ ಸೇರಿ ಕೂತುಹಲಕ್ಕೆ ತೆರೆ ಎಳೆದಿದ್ದಾರೆ.

ಇನ್ನೂ ಅನುಮಾನಗಳಿಗೆ ಎಡೆಮಾಡಿಕೊಡುವ ಕಾರಣವೆಂದರೆ ಗಂಭೀರ್ ಅವರು ತರಾತುರಿಯಲ್ಲಿ ಬಿಜೆಪಿ ಸೇರಿದ್ದರು ಕೂಡ ಈ ಲೋಕಸಭೆಯಲ್ಲಿ ಸ್ಪರ್ಧಿಸುವ ಕುರಿತು ಯಾವುದೇ ಸ್ಪಷ್ಟನೆಯನ್ನು ನೀಡುತ್ತಿಲ್ಲ. ಈ ಕುರಿತು ಪಕ್ಷ ತೀರ್ಮಾನಿಸುತ್ತದೆ ಎಂದು ಬಿಜೆಪಿ ಮುಖಂಡರು ಅಧಿಕಾರಯುತ ಧ್ವನಿಯಲ್ಲಿ ಹೇಳುತ್ತಿರುವುದು ಊಹಾಪೋಹಗಳಿಗೆ ಕಾರಣವಾಗಿದೆ. ಬಿಜೆಪಿಯಲ್ಲಿ ಗಂಭೀರ್ ಭವಿಷ್ಯ ಏನಾಗಲಿದೆ ಎನ್ನುವುದಕ್ಕಿಂತ ಇಂಥಾ ಅಪ್ರಜಾತಾಂತ್ರಿಕ ನಡೆಗಳಿಂದ ಸ್ವತಃ ಬಿಜೆಪಿಯೇ ತನ್ನ ಭವಿಷ್ಯ ಹಾಳುಮಾಡಿಕೊಂಡಿರುವುದರಿಂದ ಜನ ಗೌತಮ್ ಗಂಭೀರ್ ಬಗ್ಗೆ ಅಷ್ಟು ಗಮನವನ್ನು ಕೊಡುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...