Homeಮುಖಪುಟರೆಡ್ಡಿ ಹಣಿಯುವ ಶಾ ತಂತ್ರಕ್ಕೆ ರಾಮುಲು ಆದರೇ ಬದಾಮಿಯ ಹರಕೆಯ ಕುರಿ?

ರೆಡ್ಡಿ ಹಣಿಯುವ ಶಾ ತಂತ್ರಕ್ಕೆ ರಾಮುಲು ಆದರೇ ಬದಾಮಿಯ ಹರಕೆಯ ಕುರಿ?

- Advertisement -
- Advertisement -

– ಗಿರೀಶ್ ತಾಳಿಕಟ್ಟೆ /

ಈ ಸಲದ ಎಲೆಕ್ಷನ್‍ನ ಹೈವೋಲ್ಟೇಜ್ ಕ್ಷೇತ್ರ ಅಂತ್ಯಾವುದಾದರು ಇದ್ದರೆ ಅದು ಬದಾಮಿ ಅನ್ನೋದ್ರಲ್ಲಿ ಯಾವ ಡೌಟೂ ಇಲ್ಲ. ಸಿಎಂ ಸಿದ್ರಾಮಯ್ಯ ಅಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಗಾಳಿ ಸುದ್ದಿ ತೇಲಾಡಿದಾಗಲೇ ಬದಾಮಿ ಹೈಲೈಟಿಗೆ ಬಂದಿತ್ತು. ಆದರೆ ಯಾವಾಗ ಬಿಜೆಪಿ, ಶ್ರೀರಾಮುಲು ಎಂಬ ರೆಡ್ಡಿ ಬೆಟಾಲಿಯನ್ ಬಂಟನನ್ನು ತಂದು ಸಿದ್ರಾಮಯ್ಯನ ಎದುರು ನಿಲ್ಲಿಸಿತೋ ಆಗಿನಿಂದ ಅದು ಸಿಕ್ಕಾಪಟ್ಟೆ ಸೆನ್ಸೇಷನಲ್ ಕ್ಷೇತ್ರವಾಗಿದೆ. ಚಾಮುಂಡೇಶ್ವರಿಯಲ್ಲಿ ಗೆಲುವು ಕಷ್ಟ ಅಂತಾ, ಕುರುಬರ ಸಾಲಿಡ್ ಮತಗಳಿರುವ ಬದಾಮಿಗೂ ಸಿದ್ರಾಮಯ್ಯ ತನ್ನ ಸ್ಪರ್ಧೆ ವಿಸ್ತರಿಸಿದರೆ ಬಿಜೆಪಿ ಅಲ್ಲಿಯೂ ಶ್ರೀರಾಮುಲು ಎಂಬ ರೊಕ್ಕಸ್ಥ ಆಸಾಮಿಯನ್ನು ಕಣಕ್ಕಿಳಿಸಿ ಬೆವರಿಳಿಸುವಂತೆ ಮಾಡುತ್ತಿದೆ ಎಂಬ ವೆರಿ ಸೂಪರ್‍ಫಿಶಿಯಲ್ ಅಭಿಪ್ರಾಯ ಜನರ ನಡುವೆ ಹರಿದಾಡುತ್ತಿದೆ, ಅಥವಾ ಹರಿದಾಡಿಸಲಾಗುತ್ತಿದೆ.
ಕಾಂಗ್ರೆಸ್ ಪಾಲಿಗೆ ದಿಲ್ಲಿ ಕೂಸು ರಾಹುಲ್‍ಗಿಂತಲೂ ಸ್ಟಾರ್ ಕ್ಯಾಂಪೇನರ್ ಅಂತಂದರೆ ಅದು ಸಿಎಂ ಸಿದ್ರಾಮಯ್ಯ. ಈಗಾಗಲೇ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳು ಜನರನ್ನು ಕೈ ಪಾರ್ಟಿಯತ್ತ ಸೆಳೆದಿವೆ. ಇನ್ನು ಸಿದ್ರಾಮಯ್ಯನಂತ ಮಾಸ್ ಲೀಡರ್ರು ಪ್ರಚಾರ ಮಾಡಿಬಿಟ್ರೆ ಕಾಂಗ್ರೆಸ್ ಮತ್ತೆ ಅಧಿಕಾರ ಹಿಡಿಯೋದ್ರಲ್ಲಿ ಸಂಶಯವಿಲ್ಲ. ಬಹುತೇಕ ಸಮೀಕ್ಷೆಗಳು ಇದನ್ನೇ ಹೇಳುತ್ತಿವೆ. ಹಾಗಾಗಿ ಸಿಎಂ ಸಿದ್ರಾಮಯ್ಯರನ್ನು ತಮ್ಮ ಕ್ಷೇತ್ರಕ್ಕಷ್ಟೇ ಸೀಮಿತವಾಗಿಸಬೇಕು ಅನ್ನೊ ಪ್ಲ್ಯಾನು ಹಾಕಿಕೊಂಡೇ ಬಿಜೆಪಿ ಬದಾಮಿಯಲ್ಲಿ ಶ್ರೀರಾಮುಲುರನ್ನು ಫೀಲ್ಡಿಗಿಳಿಸಿದೆ. ಇದು ರಾಮುಲು ಸ್ಪರ್ಧೆಯ ನೇರಾನೇರ ವಾಸ್ತವ. ಆದ್ರೆ ಪಾಲಿಟಿಕ್ಸ್ ಅನ್ನೋದು ಇಷ್ಟು ಸರಳವಾದ ಸಂಗತಿ ಅಲ್ಲ. ಒಂದೊಂದು ತಿರುವಿನೊಳಗೂ ಹತ್ತಾರು ಒಳಹುಗಳು ಮಲಗಿರುತ್ತವೆ. ರಾಮುಲು ಸ್ಪರ್ಧೆಯ ಹಿಂದೆಯೂ ಇಂತದ್ದೇ ಒಂದು ಹಿಡನ್ ಕಾರ್ಯತಂತ್ರವಿದೆ. ಅದು ಸ್ವತಃ ಬಿಜೆಪಿಯೇ ಅಳೆದು-ತೂಗಿ ಮಡಗಿದ ಮಹೂರ್ತ! ಒಂದೇ ಕಲ್ಲಿಗೆ ಎರಡು ಹಣ್ಣು ಉದುರಿಸೋ ಅಮಿತ್ ಶಾ ಸ್ಕೆಚ್ಚು!!

ಸೋಲಿನ ಪಾಕ

ಎತ್ತಿಂದೆತ್ತ ಲೆಕ್ಕ ಹಾಕಿದರೂ, ಏನೆಲ್ಲಾ ಪರ್ಮುಟೇಷನ್-ಕಾಂಬಿನೇಷನ್ ಗುಣಿಸಿ ಗುಡ್ಡೆ ಹಾಕಿದರೂ ಬದಾಮಿಯಲ್ಲಿ ಸಿದ್ರಾಮಯ್ಯನ ಎದುರು ಬಿಜೆಪಿ ಗೆಲ್ಲೋದಕ್ಕೆ ಸಾಧ್ಯವೇ ಇಲ್ಲ. ಜಾತಿ ಕೆಮಿಸ್ಟ್ರಿಯನ್ನೇ ಅಪ್ಲೈ ಮಾಡಿ ನೋಡೋಣ. ಅಜಮಾಸು ಎರಡು ಕಾಲು ಲಕ್ಷದಷ್ಟು ಮತದಾರರಿರುವ ಬದಾಮಿಯಲ್ಲಿ ಕುರುಬರದ್ದೇ ಮೇಲುಗೈ. ಏನಿಲ್ಲವೆಂದರು 46 ಸಾವಿರ ಓಟುಗಳಿವೆ. 36 ಸಾವಿರ ಮತಗಳೊಂದಿಗೆ ಎರಡನೇ ಸ್ಥಾನದಲ್ಲಿರುವ ಲಿಂಗಾಯತರು ಪಂಚಮಸಾಲಿ ಮತ್ತು ಬಣಜಿಗ ಎಂಬ ಎರಡು ಪಂಗಡಗಳಾಗಿ ಇಬ್ಬಾಗವಾಗಿವೆ. ಇನ್ನು ಗಾಣಿಗರ 26 ಸಾವಿರ, ನೇಕಾರರ 17 ಸಾವಿರ, ದಲಿತರ 25 ಸಾವಿರ, ನಾಯಕರ 13 ಸಾವಿರ, ಅಲ್ಪಸಂಖ್ಯಾತರ 12 ಸಾವಿರ ಮತಗಳಿವೆ. ಕುರುಬರ, ದಲಿತರ, ಅಲ್ಪಸಂಖ್ಯಾತರ ಮತಗಳು ಒಗ್ಗೂಡಿದರೆ ಸಾಕು ಸಿದ್ರಾಮಯ್ಯ ಗೆಲುವನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಆದಾಗ್ಯೂ ಇನ್ನುಳಿದ ಜಾತಿಗಳ ಮೇಲೂ ಆರ್.ಬಿ.ತಿಮ್ಮಾಪೂರ, ಬಿ.ಬಿ.ಚಿಮ್ಮನಕಟ್ಟಿ, ಸತೀಶ್ ಜಾರಕಿಹೊಳಿಯಂತಹ ಲೋಕಲ್ ಲೀಡರುಗಳ ಪವರ್‍ಫುಲ್ ಪ್ರಭಾವವಿದೆ. ಇನ್ನು ಲಿಂಗಾಯತ ಮತಗಳನ್ನು ಸೆಳೆಯಲು ಎಂ.ಬಿ.ಪಾಟೀಲ್ ನೇತೃತ್ವದಲ್ಲಿ ಲಿಂಗಾಯತ ಲೀಡರುಗಳ ದಂಡೇ ಕಾರ್ಯಪ್ರವೃತ್ತವಾಗಿದೆ. ಪರಿಸ್ಥಿತಿ ಹೇಗಿದೆಯೆಂದರೆ ಬಿಜೆಪಿಯ ರಾಮುಲುಗೆ ತನ್ನದೇ ಜಾತಿಯ ನಾಯಕರ ಮತಗಳು ಬೀಳೋದೂ ಡೌಟು. ಯಾಕೆಂದ್ರೆ ಅವು ಅದೇ ಸಮುದಾಯದ ಸತೀಶ್ ಜಾರಕಿಹೊಳಿಯ ಸ್ಥಳೀಯ ಪ್ರಭಾವಳಿಯಲ್ಲಿವೆ.
ಇಲ್ಲಿ ಬಿಜೆಪಿಗೆ ನಿಜಕ್ಕೂ ಸಿದ್ರಾಮಯ್ಯನ ನಿದ್ದೆಗೆಡಿಸುವುದೇ ಏಕಮೇವ ಇರಾದೆಯಾಗಿದ್ದಿದ್ದರೆ ಯಾರಾದರು ಪವರ್‍ಫುಲ್ ಲಿಂಗಾಯತ ಲೀಡರನ್ನು ಚುನಾವಣೆಗೆ ಇಳಿಸಬೇಕಿತ್ತು. ಕೇವಲ ಇದೊಂದು ಕ್ಷೇತ್ರದ ಲಿಂಗಾಯತರ ಮತಗಾತ್ರವನ್ನು ಕಬ್ಜಾ ಮಾಡಿಕೊಳ್ಳುವುದಲ್ಲದೇ ಇಡೀ ಉತ್ತರ ಕರ್ನಾಟಕದಲ್ಲಿ ಈಗಲೂ ಲಿಂಗಾಯತರ ಜೊತೆ ನಾವೇ ಹೆಜ್ಜೆ ಹಾಕುತ್ತಿದ್ದೇವೆ ಎಂಬ ಸಂದೇಶ ಹೊರಬೀಳುವಂತೆ ಮಾಡುವಲ್ಲೂ ಅದು ಪ್ರಮುಖ ಪಾತ್ರ ವಹಿಸುತ್ತಿತ್ತು. ಆದರೆ ಹಾಗೆ ಮಾಡದೆ ಜಾತಿ ಲೆಕ್ಕಾಚಾರದಲ್ಲೂ ಹಿಂದೆ ಬಿದ್ದಿರುವ, ಕ್ಷೇತ್ರ ಒಡನಾಟದಲ್ಲೂ ತಾಳೆಯಾಗದ ರೆಡ್ಡಿ ಪಾಳೆಯದ ಶ್ರೀರಾಮುಲುವನ್ನು ಬಿಜೆಪಿ ಕಣಕ್ಕಿಳಿಸಿರೋದು ಯಾಕೆ?

ಬಿಸಿ ತುಪ್ಪಕ್ಕೆ ದ್ವಂದ್ವ ಸೂತ್ರ
ಗಣಿ ಮಾಫಿಯಾದ ಕಾರಣಕ್ಕೆ ಜೈಲುಪಾಲಾಗಿ, ಇತ್ತೀಚೆಗಷ್ಟೇ ಬೇಲ್ ಮೇಲೆ ಹೊರಬಂದರೂ ಬಳ್ಳಾರಿ ಜಿಲ್ಲೆಯೊಳಗೆ ಕಾಲಿಡದಂತೆ ನಿರ್ಬಂಧ ಹೇರಿಸಿಕೊಂಡಿರುವ ಜನಾರ್ಧನ ರೆಡ್ಡಿ ಮತ್ತವರ ಟೀಮು ಬಿಜೆಪಿ ಪಾಲಿಗೆ ಬಿಸಿ ತುಪ್ಪದಂತಾಗಿದ್ದಾರೆ. ಅತ್ತ ನುಂಗುವಂತೆಯೂ ಇಲ್ಲ, ಇತ್ತ ಉಗುಳುವಂತೆಯೂ ಇಲ್ಲ. ರೆಡ್ಡಿಗಳ ಕಾಸು, ವರ್ಚಸ್ಸು ಬೇಕು ಆದರೆ ಪಕ್ಷದೊಳಗೆ ಅವರು ಪ್ರಭಾವಿಗಳಾಗೋದು ಬೇಡ. ಇದು ಬಿಜೆಪಿಯ ಆಂತರಿಕ ಇಂಗಿತ. ಚುನಾವಣೆ ಗೆಲ್ಲೋದಕ್ಕೆ, ಅಗತ್ಯ ಬಿದ್ದರೆ ಆಪರೇಷನ್ ಕಮಲಕ್ಕೆ ರೆಡ್ಡಿಗಳೇ ಫೈನಾನ್ಸ್ ಮಾಡಬೇಕಾಗಿರೋದ್ರಿಂದ ಅವರನ್ನು ಅಷ್ಟು ಸುಲಭಕ್ಕೆ ಸೈಡ್‍ಲೈನ್ ಮಾಡಲಾಗದು. ಹಾಗಂತ ಈ ಹಿಂದೆ ಅವರೇ ಪಕ್ಷವನ್ನು ಹೈಜಾಕ್ ಮಾಡುವಷ್ಟರ ಮಟ್ಟಕ್ಕೆ ಬೆಳೆಯಲೂ ಬಿಡುವಂತಿಲ್ಲ. ಇಂಥಾ ಇಕ್ಕಟ್ಟನ್ನು ನಿಭಾಯಿಸಿಕೊಳ್ಳಲೇ ಅಮಿತ್ ಷಾ, ಸಂಘ ಪರಿವಾರದ ಜೊತೆಗೆ ಸಮಾಲೋಚನೆ ನಡೆಸಿ ಶ್ರೀರಾಮುಲುವನ್ನು ಸಿದ್ರಾಮಯ್ಯ ವಿರುದ್ಧ ಕಣಕ್ಕಿಳಿಸಿದ್ದಾರೆ ಎನ್ನಲಾಗುತ್ತಿದೆ.
ಹೀಗೆ ಮಾಡೋದ್ರಿಂದ ಷಾ ಮತ್ತು ಸಂಘ, ಒಂದೇ ಕಲ್ಲಿಗೆ ಎರಡು ಹಕ್ಕಿಯ ಕಾಲು ಮುರಿಯಲು ಹೊರಟಿದ್ದಾರೆ. ಏನೇ ತಿಪ್ಪರಲಾಗ ಹಾಕಿದರೂ ಬದಾಮಿಯಲ್ಲಿ ತಮ್ಮ ಪಕ್ಷದ ಕ್ಯಾಂಡಿಡೇಟು ಸಿದ್ರಾಮಯ್ಯನ ವಿರುದ್ಧ ಗೆಲ್ಲೊಲ್ಲ ಅನ್ನೋದು ಅಮಿತ್ ಷಾಗೂ ಗೊತ್ತಿತ್ತು. ಆದರೆ ಆ ಸೋಲಿನಿಂದಲೂ ಒಂದು ಲಾಭ ಮಾಡಿಕೊಳ್ಳುವ ತಂತ್ರ ಹೆಣೆದೇ ರಾಮುಲುವನ್ನು ಕಣಕ್ಕಿಳಿಸುವಂತೆ ಜನಾರ್ಧನ ರೆಡ್ಡಿಯ ಮುಂದೆ ಅಮಿತ್ ಶಾ ಆಫರ್ ಇಟ್ಟಿದ್ದಾರೆ. ಅದು ಪಕ್ಷದೊಳಗೆ ರೆಡ್ಡಿಗಳನ್ನು ಅಡ್ಡಡ್ಡ ಮಲಗಿಸುವ ನಾಜೂಕಯ್ಯನ ತಂತ್ರ. ಹೇಗೂ ರೆಡ್ಡಿ ಬ್ರಿಗೇಡು ಪೊಲಿಟಿಕಲ್ ಪುನರ್ಜನ್ಮಕ್ಕಾಗಿ ಹಾತೊರೆಯುತ್ತಾ ಇರೋದ್ರಿಂದ ಪಕ್ಷ ಇಟ್ಟ ಈ ಆಫರ್ರನ್ನು ಜನಾರ್ಧನ್ ರೆಡ್ಡಿ ತಿರಸ್ಕರಿಸಲು ಬರುವುದಿಲ್ಲ. ಒಂದೊಮ್ಮೆ ಆತ ಅಲ್ಲಿ ಸೋಲುವ ಸುಳಿವಿಡಿದು ತನ್ನ ಭಂಟನ ಸ್ಪರ್ಧೆಗೆ ಅಡ್ಡಡ್ಡ ತಲೆಯಾಡಿಸಿದರೆ ಪಕ್ಷದೊಳಗೆ ರೆಡ್ಡಿ ತಾನಾಗೇ ಆತ್ಮಹತ್ಯೆ ಮಾಡಿಕೊಂಡಂತಾಗುತ್ತಿತ್ತು. ಧೈರ್ಯ ಮಾಡಿ ಸ್ಪರ್ಧೆಗೆ ಸೈ ಅಂದರೂ, ಶ್ರೀರಾಮುಲುಗೆ ಅಲ್ಲಿ ಸೋಲು ಕಟ್ಟಿಟ್ಟ ಬುತ್ತಿ. ಆ ಸೋಲು ಸಹಾ ರೆಡ್ಡಿ ಬೆಟಾಲಿಯನನ್ನು ಪಕ್ಷದೊಳಗೆ ಕೆಡವಿ ಬಿಡುತ್ತೆ! ಅಲ್ಲಿಗೆ ಯಾವ ದುಶ್ಮನಿ, ಮನಸ್ತಾಪವನ್ನೂ ಕಟ್ಟಿಕೊಳ್ಳದೆ ರೆಡ್ಡಿಗಳನ್ನು ಮಟ್ಟ ಹಾಕಿದಂತೆ ಆಯ್ತಲ್ಲವೇ!! ಅಪ್ಪಿತಪ್ಪಿ, ಶ್ರೀರಾಮುಲು ಗೆದ್ದೇ ಬಿಟ್ಟರು ಅಂತಿಟ್ಟುಕೊಳ್ಳಿ ಆಗಲೂ ಲಾಭ ಬಿಜೆಪಿಗೇ ತಾನೇ.

ಒಂದು ಕಡೆ ಸಿದ್ರಾಮಯ್ಯರನ್ನು ವಿಚಲಿತ ಮಾಡಿದಂತಾಗುತ್ತೆ. ಮತ್ತೊಂದೆಡೆ ರೆಡ್ಡಿಗಳನ್ನು ಎರಡು ತುದಿಯ ಖಡ್ಗದಿಂದ ಇರಿದಂತಾಗುತ್ತೆ! ಇದು ಅಮಿತ್ ಷಾ ಲೆಕ್ಕಾಚಾರ. ಒಟ್ಟಿನಲ್ಲಿ ರೆಡ್ಡಿಗಳನ್ನು ಕಟ್ಟಿಹಾಕಲು ರಾಮುಲು ಎಂಬ ಹರಕೆಯ ಕುರಿಯನ್ನು ಷಾ ಬಳಸಿಕೊಳ್ಳುತ್ತಿರೋದು ಸ್ಪಷ್ಟ. ಕಾಕತಾಳೀಯ ಅಂದ್ರೆ, ಹಿಂದೆ ಸೋನಿಯಾ ಗಾಂಧಿ ಬಳ್ಳಾರಿಯಲ್ಲಿ ಸ್ಪರ್ಧಿಸಿದ್ದಾಗ ಬಿಜೆಪಿಯ ಮಿನುಗು`ತಾರೆ’ ಸುಷ್ಮಾ ಸ್ವರಾಜ್ ಪರ ರಿಸ್ಕನ್ನು ಕೈಗೆತ್ತಿಕೊಂಡು ಬಿಜೆಪಿಯೊಳಗೆ ಬಲಾಢ್ಯರಾಗಿ ಬೆಳೆದಿದ್ದ ರೆಡ್ಡಿಗಳನ್ನು ಮಟ್ಟ ಹಾಕಲು ಇದೀಗ ಅಂತದ್ದೇ ಚಾಲೆಂಜಿಂಗ್ ಚುನಾವಣೆ ಬಳಕೆಯಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...