Homeಮುಖಪುಟರೆಡ್ಡಿ ಹಣಿಯುವ ಶಾ ತಂತ್ರಕ್ಕೆ ರಾಮುಲು ಆದರೇ ಬದಾಮಿಯ ಹರಕೆಯ ಕುರಿ?

ರೆಡ್ಡಿ ಹಣಿಯುವ ಶಾ ತಂತ್ರಕ್ಕೆ ರಾಮುಲು ಆದರೇ ಬದಾಮಿಯ ಹರಕೆಯ ಕುರಿ?

- Advertisement -
- Advertisement -

– ಗಿರೀಶ್ ತಾಳಿಕಟ್ಟೆ /

ಈ ಸಲದ ಎಲೆಕ್ಷನ್‍ನ ಹೈವೋಲ್ಟೇಜ್ ಕ್ಷೇತ್ರ ಅಂತ್ಯಾವುದಾದರು ಇದ್ದರೆ ಅದು ಬದಾಮಿ ಅನ್ನೋದ್ರಲ್ಲಿ ಯಾವ ಡೌಟೂ ಇಲ್ಲ. ಸಿಎಂ ಸಿದ್ರಾಮಯ್ಯ ಅಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಗಾಳಿ ಸುದ್ದಿ ತೇಲಾಡಿದಾಗಲೇ ಬದಾಮಿ ಹೈಲೈಟಿಗೆ ಬಂದಿತ್ತು. ಆದರೆ ಯಾವಾಗ ಬಿಜೆಪಿ, ಶ್ರೀರಾಮುಲು ಎಂಬ ರೆಡ್ಡಿ ಬೆಟಾಲಿಯನ್ ಬಂಟನನ್ನು ತಂದು ಸಿದ್ರಾಮಯ್ಯನ ಎದುರು ನಿಲ್ಲಿಸಿತೋ ಆಗಿನಿಂದ ಅದು ಸಿಕ್ಕಾಪಟ್ಟೆ ಸೆನ್ಸೇಷನಲ್ ಕ್ಷೇತ್ರವಾಗಿದೆ. ಚಾಮುಂಡೇಶ್ವರಿಯಲ್ಲಿ ಗೆಲುವು ಕಷ್ಟ ಅಂತಾ, ಕುರುಬರ ಸಾಲಿಡ್ ಮತಗಳಿರುವ ಬದಾಮಿಗೂ ಸಿದ್ರಾಮಯ್ಯ ತನ್ನ ಸ್ಪರ್ಧೆ ವಿಸ್ತರಿಸಿದರೆ ಬಿಜೆಪಿ ಅಲ್ಲಿಯೂ ಶ್ರೀರಾಮುಲು ಎಂಬ ರೊಕ್ಕಸ್ಥ ಆಸಾಮಿಯನ್ನು ಕಣಕ್ಕಿಳಿಸಿ ಬೆವರಿಳಿಸುವಂತೆ ಮಾಡುತ್ತಿದೆ ಎಂಬ ವೆರಿ ಸೂಪರ್‍ಫಿಶಿಯಲ್ ಅಭಿಪ್ರಾಯ ಜನರ ನಡುವೆ ಹರಿದಾಡುತ್ತಿದೆ, ಅಥವಾ ಹರಿದಾಡಿಸಲಾಗುತ್ತಿದೆ.
ಕಾಂಗ್ರೆಸ್ ಪಾಲಿಗೆ ದಿಲ್ಲಿ ಕೂಸು ರಾಹುಲ್‍ಗಿಂತಲೂ ಸ್ಟಾರ್ ಕ್ಯಾಂಪೇನರ್ ಅಂತಂದರೆ ಅದು ಸಿಎಂ ಸಿದ್ರಾಮಯ್ಯ. ಈಗಾಗಲೇ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳು ಜನರನ್ನು ಕೈ ಪಾರ್ಟಿಯತ್ತ ಸೆಳೆದಿವೆ. ಇನ್ನು ಸಿದ್ರಾಮಯ್ಯನಂತ ಮಾಸ್ ಲೀಡರ್ರು ಪ್ರಚಾರ ಮಾಡಿಬಿಟ್ರೆ ಕಾಂಗ್ರೆಸ್ ಮತ್ತೆ ಅಧಿಕಾರ ಹಿಡಿಯೋದ್ರಲ್ಲಿ ಸಂಶಯವಿಲ್ಲ. ಬಹುತೇಕ ಸಮೀಕ್ಷೆಗಳು ಇದನ್ನೇ ಹೇಳುತ್ತಿವೆ. ಹಾಗಾಗಿ ಸಿಎಂ ಸಿದ್ರಾಮಯ್ಯರನ್ನು ತಮ್ಮ ಕ್ಷೇತ್ರಕ್ಕಷ್ಟೇ ಸೀಮಿತವಾಗಿಸಬೇಕು ಅನ್ನೊ ಪ್ಲ್ಯಾನು ಹಾಕಿಕೊಂಡೇ ಬಿಜೆಪಿ ಬದಾಮಿಯಲ್ಲಿ ಶ್ರೀರಾಮುಲುರನ್ನು ಫೀಲ್ಡಿಗಿಳಿಸಿದೆ. ಇದು ರಾಮುಲು ಸ್ಪರ್ಧೆಯ ನೇರಾನೇರ ವಾಸ್ತವ. ಆದ್ರೆ ಪಾಲಿಟಿಕ್ಸ್ ಅನ್ನೋದು ಇಷ್ಟು ಸರಳವಾದ ಸಂಗತಿ ಅಲ್ಲ. ಒಂದೊಂದು ತಿರುವಿನೊಳಗೂ ಹತ್ತಾರು ಒಳಹುಗಳು ಮಲಗಿರುತ್ತವೆ. ರಾಮುಲು ಸ್ಪರ್ಧೆಯ ಹಿಂದೆಯೂ ಇಂತದ್ದೇ ಒಂದು ಹಿಡನ್ ಕಾರ್ಯತಂತ್ರವಿದೆ. ಅದು ಸ್ವತಃ ಬಿಜೆಪಿಯೇ ಅಳೆದು-ತೂಗಿ ಮಡಗಿದ ಮಹೂರ್ತ! ಒಂದೇ ಕಲ್ಲಿಗೆ ಎರಡು ಹಣ್ಣು ಉದುರಿಸೋ ಅಮಿತ್ ಶಾ ಸ್ಕೆಚ್ಚು!!

ಸೋಲಿನ ಪಾಕ

ಎತ್ತಿಂದೆತ್ತ ಲೆಕ್ಕ ಹಾಕಿದರೂ, ಏನೆಲ್ಲಾ ಪರ್ಮುಟೇಷನ್-ಕಾಂಬಿನೇಷನ್ ಗುಣಿಸಿ ಗುಡ್ಡೆ ಹಾಕಿದರೂ ಬದಾಮಿಯಲ್ಲಿ ಸಿದ್ರಾಮಯ್ಯನ ಎದುರು ಬಿಜೆಪಿ ಗೆಲ್ಲೋದಕ್ಕೆ ಸಾಧ್ಯವೇ ಇಲ್ಲ. ಜಾತಿ ಕೆಮಿಸ್ಟ್ರಿಯನ್ನೇ ಅಪ್ಲೈ ಮಾಡಿ ನೋಡೋಣ. ಅಜಮಾಸು ಎರಡು ಕಾಲು ಲಕ್ಷದಷ್ಟು ಮತದಾರರಿರುವ ಬದಾಮಿಯಲ್ಲಿ ಕುರುಬರದ್ದೇ ಮೇಲುಗೈ. ಏನಿಲ್ಲವೆಂದರು 46 ಸಾವಿರ ಓಟುಗಳಿವೆ. 36 ಸಾವಿರ ಮತಗಳೊಂದಿಗೆ ಎರಡನೇ ಸ್ಥಾನದಲ್ಲಿರುವ ಲಿಂಗಾಯತರು ಪಂಚಮಸಾಲಿ ಮತ್ತು ಬಣಜಿಗ ಎಂಬ ಎರಡು ಪಂಗಡಗಳಾಗಿ ಇಬ್ಬಾಗವಾಗಿವೆ. ಇನ್ನು ಗಾಣಿಗರ 26 ಸಾವಿರ, ನೇಕಾರರ 17 ಸಾವಿರ, ದಲಿತರ 25 ಸಾವಿರ, ನಾಯಕರ 13 ಸಾವಿರ, ಅಲ್ಪಸಂಖ್ಯಾತರ 12 ಸಾವಿರ ಮತಗಳಿವೆ. ಕುರುಬರ, ದಲಿತರ, ಅಲ್ಪಸಂಖ್ಯಾತರ ಮತಗಳು ಒಗ್ಗೂಡಿದರೆ ಸಾಕು ಸಿದ್ರಾಮಯ್ಯ ಗೆಲುವನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಆದಾಗ್ಯೂ ಇನ್ನುಳಿದ ಜಾತಿಗಳ ಮೇಲೂ ಆರ್.ಬಿ.ತಿಮ್ಮಾಪೂರ, ಬಿ.ಬಿ.ಚಿಮ್ಮನಕಟ್ಟಿ, ಸತೀಶ್ ಜಾರಕಿಹೊಳಿಯಂತಹ ಲೋಕಲ್ ಲೀಡರುಗಳ ಪವರ್‍ಫುಲ್ ಪ್ರಭಾವವಿದೆ. ಇನ್ನು ಲಿಂಗಾಯತ ಮತಗಳನ್ನು ಸೆಳೆಯಲು ಎಂ.ಬಿ.ಪಾಟೀಲ್ ನೇತೃತ್ವದಲ್ಲಿ ಲಿಂಗಾಯತ ಲೀಡರುಗಳ ದಂಡೇ ಕಾರ್ಯಪ್ರವೃತ್ತವಾಗಿದೆ. ಪರಿಸ್ಥಿತಿ ಹೇಗಿದೆಯೆಂದರೆ ಬಿಜೆಪಿಯ ರಾಮುಲುಗೆ ತನ್ನದೇ ಜಾತಿಯ ನಾಯಕರ ಮತಗಳು ಬೀಳೋದೂ ಡೌಟು. ಯಾಕೆಂದ್ರೆ ಅವು ಅದೇ ಸಮುದಾಯದ ಸತೀಶ್ ಜಾರಕಿಹೊಳಿಯ ಸ್ಥಳೀಯ ಪ್ರಭಾವಳಿಯಲ್ಲಿವೆ.
ಇಲ್ಲಿ ಬಿಜೆಪಿಗೆ ನಿಜಕ್ಕೂ ಸಿದ್ರಾಮಯ್ಯನ ನಿದ್ದೆಗೆಡಿಸುವುದೇ ಏಕಮೇವ ಇರಾದೆಯಾಗಿದ್ದಿದ್ದರೆ ಯಾರಾದರು ಪವರ್‍ಫುಲ್ ಲಿಂಗಾಯತ ಲೀಡರನ್ನು ಚುನಾವಣೆಗೆ ಇಳಿಸಬೇಕಿತ್ತು. ಕೇವಲ ಇದೊಂದು ಕ್ಷೇತ್ರದ ಲಿಂಗಾಯತರ ಮತಗಾತ್ರವನ್ನು ಕಬ್ಜಾ ಮಾಡಿಕೊಳ್ಳುವುದಲ್ಲದೇ ಇಡೀ ಉತ್ತರ ಕರ್ನಾಟಕದಲ್ಲಿ ಈಗಲೂ ಲಿಂಗಾಯತರ ಜೊತೆ ನಾವೇ ಹೆಜ್ಜೆ ಹಾಕುತ್ತಿದ್ದೇವೆ ಎಂಬ ಸಂದೇಶ ಹೊರಬೀಳುವಂತೆ ಮಾಡುವಲ್ಲೂ ಅದು ಪ್ರಮುಖ ಪಾತ್ರ ವಹಿಸುತ್ತಿತ್ತು. ಆದರೆ ಹಾಗೆ ಮಾಡದೆ ಜಾತಿ ಲೆಕ್ಕಾಚಾರದಲ್ಲೂ ಹಿಂದೆ ಬಿದ್ದಿರುವ, ಕ್ಷೇತ್ರ ಒಡನಾಟದಲ್ಲೂ ತಾಳೆಯಾಗದ ರೆಡ್ಡಿ ಪಾಳೆಯದ ಶ್ರೀರಾಮುಲುವನ್ನು ಬಿಜೆಪಿ ಕಣಕ್ಕಿಳಿಸಿರೋದು ಯಾಕೆ?

ಬಿಸಿ ತುಪ್ಪಕ್ಕೆ ದ್ವಂದ್ವ ಸೂತ್ರ
ಗಣಿ ಮಾಫಿಯಾದ ಕಾರಣಕ್ಕೆ ಜೈಲುಪಾಲಾಗಿ, ಇತ್ತೀಚೆಗಷ್ಟೇ ಬೇಲ್ ಮೇಲೆ ಹೊರಬಂದರೂ ಬಳ್ಳಾರಿ ಜಿಲ್ಲೆಯೊಳಗೆ ಕಾಲಿಡದಂತೆ ನಿರ್ಬಂಧ ಹೇರಿಸಿಕೊಂಡಿರುವ ಜನಾರ್ಧನ ರೆಡ್ಡಿ ಮತ್ತವರ ಟೀಮು ಬಿಜೆಪಿ ಪಾಲಿಗೆ ಬಿಸಿ ತುಪ್ಪದಂತಾಗಿದ್ದಾರೆ. ಅತ್ತ ನುಂಗುವಂತೆಯೂ ಇಲ್ಲ, ಇತ್ತ ಉಗುಳುವಂತೆಯೂ ಇಲ್ಲ. ರೆಡ್ಡಿಗಳ ಕಾಸು, ವರ್ಚಸ್ಸು ಬೇಕು ಆದರೆ ಪಕ್ಷದೊಳಗೆ ಅವರು ಪ್ರಭಾವಿಗಳಾಗೋದು ಬೇಡ. ಇದು ಬಿಜೆಪಿಯ ಆಂತರಿಕ ಇಂಗಿತ. ಚುನಾವಣೆ ಗೆಲ್ಲೋದಕ್ಕೆ, ಅಗತ್ಯ ಬಿದ್ದರೆ ಆಪರೇಷನ್ ಕಮಲಕ್ಕೆ ರೆಡ್ಡಿಗಳೇ ಫೈನಾನ್ಸ್ ಮಾಡಬೇಕಾಗಿರೋದ್ರಿಂದ ಅವರನ್ನು ಅಷ್ಟು ಸುಲಭಕ್ಕೆ ಸೈಡ್‍ಲೈನ್ ಮಾಡಲಾಗದು. ಹಾಗಂತ ಈ ಹಿಂದೆ ಅವರೇ ಪಕ್ಷವನ್ನು ಹೈಜಾಕ್ ಮಾಡುವಷ್ಟರ ಮಟ್ಟಕ್ಕೆ ಬೆಳೆಯಲೂ ಬಿಡುವಂತಿಲ್ಲ. ಇಂಥಾ ಇಕ್ಕಟ್ಟನ್ನು ನಿಭಾಯಿಸಿಕೊಳ್ಳಲೇ ಅಮಿತ್ ಷಾ, ಸಂಘ ಪರಿವಾರದ ಜೊತೆಗೆ ಸಮಾಲೋಚನೆ ನಡೆಸಿ ಶ್ರೀರಾಮುಲುವನ್ನು ಸಿದ್ರಾಮಯ್ಯ ವಿರುದ್ಧ ಕಣಕ್ಕಿಳಿಸಿದ್ದಾರೆ ಎನ್ನಲಾಗುತ್ತಿದೆ.
ಹೀಗೆ ಮಾಡೋದ್ರಿಂದ ಷಾ ಮತ್ತು ಸಂಘ, ಒಂದೇ ಕಲ್ಲಿಗೆ ಎರಡು ಹಕ್ಕಿಯ ಕಾಲು ಮುರಿಯಲು ಹೊರಟಿದ್ದಾರೆ. ಏನೇ ತಿಪ್ಪರಲಾಗ ಹಾಕಿದರೂ ಬದಾಮಿಯಲ್ಲಿ ತಮ್ಮ ಪಕ್ಷದ ಕ್ಯಾಂಡಿಡೇಟು ಸಿದ್ರಾಮಯ್ಯನ ವಿರುದ್ಧ ಗೆಲ್ಲೊಲ್ಲ ಅನ್ನೋದು ಅಮಿತ್ ಷಾಗೂ ಗೊತ್ತಿತ್ತು. ಆದರೆ ಆ ಸೋಲಿನಿಂದಲೂ ಒಂದು ಲಾಭ ಮಾಡಿಕೊಳ್ಳುವ ತಂತ್ರ ಹೆಣೆದೇ ರಾಮುಲುವನ್ನು ಕಣಕ್ಕಿಳಿಸುವಂತೆ ಜನಾರ್ಧನ ರೆಡ್ಡಿಯ ಮುಂದೆ ಅಮಿತ್ ಶಾ ಆಫರ್ ಇಟ್ಟಿದ್ದಾರೆ. ಅದು ಪಕ್ಷದೊಳಗೆ ರೆಡ್ಡಿಗಳನ್ನು ಅಡ್ಡಡ್ಡ ಮಲಗಿಸುವ ನಾಜೂಕಯ್ಯನ ತಂತ್ರ. ಹೇಗೂ ರೆಡ್ಡಿ ಬ್ರಿಗೇಡು ಪೊಲಿಟಿಕಲ್ ಪುನರ್ಜನ್ಮಕ್ಕಾಗಿ ಹಾತೊರೆಯುತ್ತಾ ಇರೋದ್ರಿಂದ ಪಕ್ಷ ಇಟ್ಟ ಈ ಆಫರ್ರನ್ನು ಜನಾರ್ಧನ್ ರೆಡ್ಡಿ ತಿರಸ್ಕರಿಸಲು ಬರುವುದಿಲ್ಲ. ಒಂದೊಮ್ಮೆ ಆತ ಅಲ್ಲಿ ಸೋಲುವ ಸುಳಿವಿಡಿದು ತನ್ನ ಭಂಟನ ಸ್ಪರ್ಧೆಗೆ ಅಡ್ಡಡ್ಡ ತಲೆಯಾಡಿಸಿದರೆ ಪಕ್ಷದೊಳಗೆ ರೆಡ್ಡಿ ತಾನಾಗೇ ಆತ್ಮಹತ್ಯೆ ಮಾಡಿಕೊಂಡಂತಾಗುತ್ತಿತ್ತು. ಧೈರ್ಯ ಮಾಡಿ ಸ್ಪರ್ಧೆಗೆ ಸೈ ಅಂದರೂ, ಶ್ರೀರಾಮುಲುಗೆ ಅಲ್ಲಿ ಸೋಲು ಕಟ್ಟಿಟ್ಟ ಬುತ್ತಿ. ಆ ಸೋಲು ಸಹಾ ರೆಡ್ಡಿ ಬೆಟಾಲಿಯನನ್ನು ಪಕ್ಷದೊಳಗೆ ಕೆಡವಿ ಬಿಡುತ್ತೆ! ಅಲ್ಲಿಗೆ ಯಾವ ದುಶ್ಮನಿ, ಮನಸ್ತಾಪವನ್ನೂ ಕಟ್ಟಿಕೊಳ್ಳದೆ ರೆಡ್ಡಿಗಳನ್ನು ಮಟ್ಟ ಹಾಕಿದಂತೆ ಆಯ್ತಲ್ಲವೇ!! ಅಪ್ಪಿತಪ್ಪಿ, ಶ್ರೀರಾಮುಲು ಗೆದ್ದೇ ಬಿಟ್ಟರು ಅಂತಿಟ್ಟುಕೊಳ್ಳಿ ಆಗಲೂ ಲಾಭ ಬಿಜೆಪಿಗೇ ತಾನೇ.

ಒಂದು ಕಡೆ ಸಿದ್ರಾಮಯ್ಯರನ್ನು ವಿಚಲಿತ ಮಾಡಿದಂತಾಗುತ್ತೆ. ಮತ್ತೊಂದೆಡೆ ರೆಡ್ಡಿಗಳನ್ನು ಎರಡು ತುದಿಯ ಖಡ್ಗದಿಂದ ಇರಿದಂತಾಗುತ್ತೆ! ಇದು ಅಮಿತ್ ಷಾ ಲೆಕ್ಕಾಚಾರ. ಒಟ್ಟಿನಲ್ಲಿ ರೆಡ್ಡಿಗಳನ್ನು ಕಟ್ಟಿಹಾಕಲು ರಾಮುಲು ಎಂಬ ಹರಕೆಯ ಕುರಿಯನ್ನು ಷಾ ಬಳಸಿಕೊಳ್ಳುತ್ತಿರೋದು ಸ್ಪಷ್ಟ. ಕಾಕತಾಳೀಯ ಅಂದ್ರೆ, ಹಿಂದೆ ಸೋನಿಯಾ ಗಾಂಧಿ ಬಳ್ಳಾರಿಯಲ್ಲಿ ಸ್ಪರ್ಧಿಸಿದ್ದಾಗ ಬಿಜೆಪಿಯ ಮಿನುಗು`ತಾರೆ’ ಸುಷ್ಮಾ ಸ್ವರಾಜ್ ಪರ ರಿಸ್ಕನ್ನು ಕೈಗೆತ್ತಿಕೊಂಡು ಬಿಜೆಪಿಯೊಳಗೆ ಬಲಾಢ್ಯರಾಗಿ ಬೆಳೆದಿದ್ದ ರೆಡ್ಡಿಗಳನ್ನು ಮಟ್ಟ ಹಾಕಲು ಇದೀಗ ಅಂತದ್ದೇ ಚಾಲೆಂಜಿಂಗ್ ಚುನಾವಣೆ ಬಳಕೆಯಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...