Homeಅಂಕಣಗಳುಥೂತ್ತೇರಿ | ಯಾಹೂರೇಣುಕಾಚಾರಿಗೆ ಹೊನ್ನಾಳಿ ಹೊಡೆತ ಗೊತ್ತಿಲ್ಲವಂತಲ್ಲಾ.....ಯಾಹೂ

ರೇಣುಕಾಚಾರಿಗೆ ಹೊನ್ನಾಳಿ ಹೊಡೆತ ಗೊತ್ತಿಲ್ಲವಂತಲ್ಲಾ…..ಯಾಹೂ

- Advertisement -
- Advertisement -

ನೋಡಿದ ಕೂಡಲೇ ಆರೆಸ್ಸೆಸ್‍ನ ಸಕ್ರಿಯ ಕಾರ್ಯಕರ್ತನಂತೆ ಕಾಣುವ ಆದಿತ್ಯರಾವ್ ಮೀಡಿಯಾ ಜನಿವಾರಿಗಳ ನಿಜಬಣ್ಣ ಬಯಲು ಮಾಡಿದ ಯುಗಪುರುಷನಂತೆ ಗೋಚರಿಸುತ್ತಿದ್ದಾನಲ್ಲಾ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬು ಮಡಗಿ ಆತ ಮಾಯವಾದ ನಂತರ ಬೆಳಗ್ಗೆ ಚಡ್ಡಿ ಪತ್ರಿಕೆಗಳನ್ನ ತೆಗೆದು ನೋಡಿದರೆ, ದೇಶವೇ ಬೆಚ್ಚಿಬೀಳುವಂತಹ ಸುದ್ದಿ ಮಾಡಿದ್ದರಲ್ಲಾ. ಅದರಲ್ಲೂ ನಿದ್ರೆಯಲ್ಲೂ ಬುದೂರನೆದ್ದು ನೀರು ಕುಡಿದು ಬೆವರು ಒರೆಸಿಕೊಳ್ಳುತ್ತ ಬುಲೆಟ್‍ನಿಂದ ಬಚಾವಾದವನಂತೆ ತೊದಲುವ ವಿಜಯಸಂಕೇಶ್ವರ ಎಂಬ ಹಳೆ ಲಾರಿ ಇಂಜಿನ್ ತನ್ನ ವಿಶದವಾಣಿ ಎಂಬ ಪತ್ರಿಕೆಯಲ್ಲಿ ಗಣರಾಜ್ಯೋತ್ಸವದ ಟೈಮಿಗೆ ದುಷ್ಕೃತ್ಯವೆಸಗಿ ದೇಶವನ್ನೇ ಗಂಡಾಂತರಕ್ಕೆ ದೂಡುವ ಕೃತ್ಯವಿದು ಎಂದು ತನ್ನ ಮನಸ್ಸಿನಾಳದಲ್ಲಿದ್ದ ಮುಸ್ಲಿಂ ದ್ವೇಷವನ್ನ ಕಾರಿಕೊಂಡಿದ್ದನಲ್ಲಾ. ಆದರೇನು ಮರುದಿನವೇ ಸಿಕ್ಕ ಆದಿತ್ಯರಾವ್ ಬಗ್ಗೆ ಕನಿಕರ ಉಕ್ಕಿ ಹರಿದ ಪರಿಣಾಮ ಈತ ಮಾನಸಿಕ ಅಸ್ವಸ್ಥನಾದ. ಈ ಮನೋರೋಗಿ ಅಂತಿಂಥವನಲ್ಲ ಡಿಗ್ರಿ ಪಡೆದವನು. ಬಾಂಬು ತಯಾರಿಸುವ ತಂತ್ರಜ್ಞಾನ ಹೊಂದಿದ್ದವನು. ಆನ್‍ಲೈನ್ ಮುಖಾಂತರ ಬಾಂಬು ಸಾಮಗ್ರಿ ಖರೀದಿಸಿದವನು. ಆದರೂ ಬುದ್ಧಿಮಾಂದ್ಯನೆಂದು ಬಿಂಬಿತನಾಗಿರುವ ಈತನೇನಾದರೂ ಸಿಕ್ಕಿ ಬೀಳದಿದ್ದರೆ, ವಿಜಯ ಸಂಕೇಶ್ವರ ಸಾಬರ ಭಯೋತ್ಪಾದನೆ ಬಗ್ಗೆ ವಿಶೇಷ ಪುರವಣಿಯನ್ನೇ ತರುತ್ತಿದ್ದನಂತಲ್ಲಾ. ತನ್ನ ತಮ್ಮನ ಪರ ವಕಾಲತ್ತು ವಹಿಸಿದವನಂತೆ ಇನ್ನೂ ಒದರುತ್ತಲೇ ಇದ್ದಾನೆ. ಈ ನಡುವೆ ಸಂಕೇಶ್ವರನಿಗೆ ಪದ್ಮಶ್ರೀ ಬೇರೆ ಬಂದಿದೆ. ಪತ್ರಿಕೆಯನ್ನೂ ಚಡ್ಡಿಗಳ ಕರಪತ್ರ ಮಾಡಿರೋದು ಮತ್ತು ಅತಿಹೆಚ್ಚು ಲಾರಿಗಳನ್ನು ಮಡಗಿರೋದೆ ಪ್ರಶಸ್ತಿಗೆ ಆತನನ್ನು ಆಯ್ಕೆ ಮಾಡಿರೋದಕ್ಕೆ ಮಾನದಂಡವಂತಲ್ಲ. ಅಂದಹಾಗೆ, ಪ್ರಶಸ್ತಿ ಪಟ್ಟಿಯಲ್ಲಿ ಕೊನೇ ಘಳಿಗೆಯಲ್ಲಿ ಸಂಕೇಶ್ವರ ಹೆಸರು ಮಿಸ್ ಆಗುವ ಸಂಭವ ಇತ್ತಂತೆ, ಹಾಗಾಗಿ ಎರಡು ದಿನ ಮೋದಿ ಸರ್ಕಾರದ ವಿರುದ್ಧ ಮುಖಪುಟ ಸುದ್ದಿ ಪ್ರಕಟಿಸಿ, ಬ್ಲ್ಯಾಕ್‍ಮೇಲ್ ಮಾಡಿ ಪ್ರಶಸ್ತಿ ಗಿಟ್ಟಿಸಿಕೊಂಡಿದ್ದಾನೆ ಅಂತ ಜನ ಮಾತಾಡುತ್ತಿದ್ದಾರಲ್ಲಾ, ಥೂತ್ತೇರಿ….

ಹಾದಿಬೀದಿಯಲ್ಲಿ ಸಿಗುವ ಸಾಬರೆಲ್ಲಾ ವಿಧ್ವಂಸಕರೆಂದು ಸದಾ ಚಿಂತಿಸುತ್ತ ನನ್ನ ಲಾರಿಗಳ ಕತೆಯೇನೆಂದು ಯೋಚಿಸುವ ಸಂಕೇಶ್ವರನಿಗೆ ತಿಳಿಯದ ಇನ್ನೊಂದೆರಡು ವಿಷಯಗಳೇನೆಂದರೆ ಬಾಬಾ ಬುಡನ್‍ಗಿರಿ ವಿಷಯವನ್ನ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಹಬ್ಬಿಸುವ ಹವಣಿಕೆಯಿಂದ ಚಿಕ್ಕಮಗಳೂರು ದೇವಸ್ಥಾನದ ಮೇಲಕ್ಕೆ ಮೆಟ್ಟು ತಂದು ಕಟ್ಟಿದ್ದವರು ಪರಮಭಕ್ತರಾದ ಭಜರಂಗಿಗಳು! ಹಾಗೇ ಮಾನ್ವಿಯಲ್ಲಿ ಮಧ್ಯರಾತ್ರಿ ವೇಳೆ ಬಸ್ಟ್ಯಾಂಡಿಗೆ ಬಂದು ಪಾಕಿಸ್ತಾನದ ಧ್ವಜ ಹಾರಿಸಿಹೋದವರು ಸನಾತನ ಸಂಘದವರು. ಈತ ಮುಂದೆ ಗೌರಿ ಕೊಲೆಯಲ್ಲಿ ಆರೋಪಿಯಾದ. ಹಾಗೆಯೇ ಹೊನ್ನಾಳಿ ತಾಲ್ಲೂಕಿನಲ್ಲಿ ಪಾಕಿಸ್ತಾನದ ಬಾವುಟ ಹಾರಿಸಿಹೋದವನು ಶಾಸಕ ರೇಣುಕಾಚಾರಿ ಎಂಬುದು ಈಚೆಗೆ ಬಹಿರಂಗಗೊಂಡಿದೆಯಲ್ಲಾ. ಹೇಗೆಂದರೆ ನನಗೆ ಮುಸ್ಲಿಮರು ಓಟು ಮಾಡಿಲ್ಲ, ಜೊತೆಗೆ ಸದಾ ಮಸೀದಿಯಲ್ಲಿ ಬಾಂಬು ತಯಾರಿಸುತ್ತ ಚೂರಿ ಮಸೆಯುತ್ತ ಪಾಕಿಸ್ತಾನದ ಪರವಿರುವ ಹೊನ್ನಾಳಿ ಸಾಬರಿಗೆ ನಾನು ಯಾವ ಸರಕಾರಿ ಸವಲತ್ತನ್ನು ಕೊಡುವುದಿಲ್ಲವೆಂದು ಹೇಳಿರುವ ವಿಲಾಸಿಜೀವನದ ರೇಣುಕಾಚಾರಿಯ ಮನಸ್ಸಿನಾಳದಲ್ಲಿ ಸಾಬರ ಗಲ್ಲಿಯ ಚರಂಡಿ ನೀರೇ ಹರಿಯುತ್ತಿರುವುದರಿಂದ ಅವನಿನ್ನೇನು ಹೇಳಲು ಸಾಧ್ಯ ಎಂಬುದು ಹೊನ್ನಾಳಿ ಕುರುಬರ ಅಭಿಪ್ರಾಯವಾಗಿದೆಯಂತಲ್ಲಾ, ಥೂತ್ತೇರಿ.

ಭೂಗತಲೋಕದ ದೊರೆಯಾಗಿ ಮೆರೆದಿದ್ದ ಮುತ್ತಪ್ಪ ರೈ ಐದಾರು ಗುಂಡುಗಳಿಂದ ಬಚಾವಾಗಿ ಉಳಿದಿದ್ದರಂತೆ. ಆದರೇನು ಕ್ಯಾನ್ಸರ್ ಗುಂಡಿನಿಂದ ತಪ್ಪಿಸಿಕೊಳ್ಳಲಾಗಿಲ್ಲ. ಕಡೆಗೂ ಬಂದ ಸಾವನ್ನು ಸಂಭ್ರಮಿಸುತ್ತಿರುವ ಆತನನ್ನು ಮಾಧ್ಯಮದ ಮಂದಮತಿಗಳು ಇನ್ನಿಲ್ಲದ ಉಪಮೆಗಳೊಂದಿಗೆ ಹೊಗಳಿ ಹೊಗಳಿ ಸುಸ್ತಾಗುತ್ತಿವೆ. ಮುತ್ತಪ್ಪ ರೈ ದಕ್ಷಿಣ ಕನ್ನಡದ ಬುದ್ಧಿವಂತಿಕೆಯನ್ನ ಭೂಗತಲೋಕಕ್ಕೆ ಪರಿಚಯಿಸಿ ಮಚ್ಚು, ಲಾಂಗು, ಚಾಕುವಿನ ಬದಲು ಜೀವಹತ್ಯೆಗೆ ಪಿಸ್ತೂಲು ಬಳಸಿದ ವ್ಯಕ್ತಿ. ಆತನನ್ನ ಪೊಲೀಸರು ಕೂಡ ಪಿಸ್ತೂಲಿನಿಂದಲೇ ಮುಗಿಸಲು ಯತ್ನಿಸಿದಾಗ, ಲಂಕೇಶರ ಬಳಿಯಿದ್ದ ಕೂಗುಮಾರಿಯೊಬ್ಬಳು ಪೊಲೀಸರನ್ನೇ ವಿಲನ್‍ಗಳನ್ನಾಗಿ ಮಾಡಿ ಮುತ್ತಪ್ಪರೈಯನ್ನ ಹೀರೋ ಮಾಡಿ ಬರೆಸಿದ್ದಳು. ಅಲ್ಲದೆ ಆಗಿನ ಪೊಲೀಸ್ ಅಧಿಕಾರಿ ಕೆಂಪಯ್ಯನನ್ನೇ ಟಾರ್ಗೆಟ್ ಮಾಡಿದ ಕೂಗುಮಾರಿ ಕಡೆಗೂ ಮುತ್ತಪ್ಪರೈ ಬಚಾವಾಗುವಂತೆ ಮಾಡಿದ್ದಳು. ಆದರೆ ಲಂಕೇಶರು ಆಕೆಯ ನಡವಳಿಕೆ ಬಗ್ಗೆ ಗುಮಾನಿಪಟ್ಟು ಕೆಲಸದಿಂದ ತೆಗೆದಿದ್ದರು. ಪೊಲೀಸರಿಂದ ಬಚಾವಾಗಲು ದೇಶವನ್ನೇ ಬಿಟ್ಟಿದ್ದ ಮುತ್ತಪ್ಪ ರೈ ಕನ್ನಡಿಗರ ಸಂಘಟನೆ ನೆವದಲ್ಲಿ ಸೈನ್ಯ ಕಟ್ಟಿ ಮೆರವಣಿಗೆ ಮಾಡಿಸುತ್ತಿದ್ದರು. ಈಗ ಅನಾಥರಾಗುವವರೆಂದರೆ ಆತನಿಂದ ಹಣ ಪಡೆದು ಕಾರ್ಯಕ್ರಮ ಮಾಡುತ್ತಿದ್ದ ಅಬ್ಬೇಪಾರಿಗಳಂತಲ್ಲಾ, ಥೂತ್ತೇರಿ.

ಮೈಸೂರಿನಲ್ಲಿ ಯುವತಿಯೊಬ್ಬಳು ಫ್ರೀ ಕಾಶ್ಮೀರ ಎಂಬ ಫಲಕ ಪ್ರದರ್ಶಿಸಿದ್ದಕ್ಕೆ ನಮ್ಮ ಪೊಲೀಸರು ದೇಶದ್ರೋಹದ ಕೇಸುಮಾಡಿ ಕೋರ್ಟಿಗೆ ಎಳೆದಿರುವುದರಿಂದ, ದೇಶಭಕ್ತ ವಕೀಲರೆಲ್ಲಾ ಸೇರಿ ಆಕೆಯ ಪರ ಯಾರೂ ವಕಾಲತ್ತು ವಹಿಸಬಾರದೆಂಬ ತೀರ್ಮಾನ ತೆಗೆದುಕೊಂಡಿದ್ದಾರಲ್ಲಾ. ಈ ಬಗ್ಗೆ ವಕೀಲರ ನಡೆಯನ್ನ ಸಿದ್ದರಾಮಯ್ಯ ಟೀಕಿಸಿದಾಗ ನೀವೆ ಬಂದು ವಾದಿಸಿ ಎಂದು ರಾಘವೇಂದ್ರ ಎಂಬ ವಕೀಲ ಸವಾಲು ಹಾಕಿದ್ದಾನಲ್ಲಾ. ಈ ವಕೀಲರು ತಾವೇ ಕೋರ್ಟೆಂದು ಭಾವಿಸಿರುವಂತಿದೆ. ವಕೀಲರ ಸಂಘದ ತೀರ್ಮಾನದಂತೆ ಕೋರ್ಟು ನಡೆಯುವುದಿಲ್ಲ. ಆರೋಪಿ ಮೇಲಿನ ಆರೋಪ ತೀರ್ಮಾನವಾಗುವುದು ನ್ಯಾಯಾಲಯದಲ್ಲೇ ಹೊರತು ವಕೀಲರ ಗುಂಪಿನಲ್ಲಲ್ಲ ಎಂಬುದನ್ನು ವಕೀಲರು ಮನಗಾಣಬೇಕು. ಇದೆಲ್ಲಾ ಸರ್ವಾಧಿಕಾರಿಗಳ ಆಡಳಿತದ ಸಂದರ್ಭದಲ್ಲಿ ಹುಟ್ಟುವ ಘೋಷಣೆಗಳು. ವಕೀಲರು ಸಂವಿಧಾನಾತ್ಮಕವಾಗಿ ದತ್ತವಾಗಿರುವ ಹಕ್ಕುಗಳ ಬಗ್ಗೆ ಗಾಢವಾಗಿ ಯೋಚಿಸಿದರೆ ಹೀಗಾಗುವುದಿಲ್ಲವಂತಲ್ಲಾ ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Un Constitutional opinions in Mysore Bar decession is wrong. Speeking truth is not a crime. Where as the loyers protect the Constitution. All world is observing the desession of Mysore Bar Associations attitude.This kind of actions are not good for society.

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...