Homeಅಂಕಣಗಳುನಿಮ್ಮ ಖಾತೆಗಳನ್ನ ಬುಟ್ಟುಕೊಟ್ರೆ ಸರಕಾರ ಉಳಿತದಂತೆ ಸಾ...

ನಿಮ್ಮ ಖಾತೆಗಳನ್ನ ಬುಟ್ಟುಕೊಟ್ರೆ ಸರಕಾರ ಉಳಿತದಂತೆ ಸಾ…

- Advertisement -
- Advertisement -

| ಯಾಹೂ |

ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲವುಂಟಾದರೂ ಕೊಲ್ಲೂರು ಪ್ರಾಂತ್ಯದ ಮೂಕಾಂಬಿಕೆ ಸನ್ನಿಧಿಯಲ್ಲಿ ವಿಹರಿಸುತ್ತಿರುವ ರೇವಣ್ಣನವರನ್ನು ಮಾತನಾಡಿಸಿ, ಮನಸ್ಸನ್ನು ಹಗುರ ಮಾಡಿಕೊಳ್ಳಬೇಕೆನಿಸಿತಲ್ಲಾ, ಆ ಕೂಡಲೇ ಪೋನ್ ಮಾಡಲಾಗಿ ರಿಂಗಾಯ್ತು.

ರಿಂಗ್‍ಟೋನ್: “ಕೊಲ್ಲೂರು ಸಿರಿದೇವಿ ಮೂಕಾಂಬಿಕೇ, ನಿನ್ನ ದರುಶನಕೆ ಬಂದಿಹೆನು ಕಾಪಾಡಮ್ಮ.”
“ಹಲೋ ಯಾರ್ರಿ.”
“ನಾನು ಸರ್ ಯಾಹೂ.”
“ಏನ್ರಿ”
“ಎಲ್ಲಿದ್ದಿರಿ ಸಾರ್.”
“ನಾನೆಲ್ಲಿದ್ರೆ ನಿಮಗೇನ್ರಿ.”
“ಅಲ್ಲ ಸಾರ್. ರೇವಣ್ಣ ಪುಣ್ಯಕ್ಷೇತ್ರಗಳಿಗೆ ಭೇಟಿ ಕೊಡ್ತಾ ಅವುರೆ ಅಂದ್ರು, ಅದಕೆ ಫೋನ್ ಮಾಡಿದೆ ಸಾರ್.”
“ಕೊಲ್ಲೂರು ಮೂಕಾಂಬಿಕೆ, ಆನೆಗುಡ್ಡದ ಆಂಜನೇಯ, ಕಟೀಲು, ಧರ್ಮಸ್ಥಳ, ಇಲ್ಯಲ್ಲ ಹೋಗಿ ಬಂದೆ ಕಂಡ್ರಿ.”
“ದೇವರು ಸರಕಾರ ಉಳುಸ್ತವ ಸಾರ್.”
“ಉಳುಸ್ತವೆ ಕಂಡ್ರಿ.”
“ಹ್ಯಂಗೆ ಸಾರ್.”
“ಯಾರ್ಯಾರಿಗೆ ಮನಿಯಾಳು ಬುದ್ದಿ ಇರತದೊ ಅವುರಿಗ್ಯಲ್ಲ ವಳ್ಳೆ ಬುದ್ದಿ ಕೊಡು ಅಂತ ನಾವು ದೇವರ ಕೇಳಿಕೊಂಡು ಪೂಜೆ ಮಾಡುಸ್ತಿವಿ, ಹೋಮ ಮಾಡುಸ್ತಿವಿ.”
“ಆಗ ದೇವುರು ಅವುರಿಗ್ಯಲ್ಲ ವಳ್ಳೆ ಬುದ್ದಿ ಕೊಡ್ತದ ಸಾರ್.”
“ಕೊಡ್ತದೊ ಬುಡ್ತದೊ ನಾವು ಮಾಡೊ ಕ್ಯಲಸ ಮಾಡಬೇಕಲ್ವೇನ್ರಿ”
“ನಿಜ ಸಾರ್.”
“ಅದ್ಕೆ ನಾನು ಮದ್ಲು ಹೋಗಿ ಕೇಳಿಕಂಡಿದ್ದು ಮೈಸೂರು ಚಾಮುಂಡೇಶ್ವರಿಯ. ಅವುಳು ಮೈಸೂರು ಮಾರಾಜನ್ನ ಕಾಪಾಡಿದಂಗೆ ನಮ್ಮ ಕುಮಾರನ ಸರಕಾರನೂ ಉಳುಸ್ತಾಳೆ.”
“ಹೆಣ್ಣು ದೇವರಿಗೆ ಇಷ್ಟು ಗೌರವ ಕೊಡೋ ನೀವು ಆ ಸುಮಲತನ್ನ ಬೈದರಲ್ಲ ಸಾರ್.”
“ನಾನೆಲ್ಲಿ ಬೋದೆ. ವಟ್ಟಿಗೇನು ತಿಂತೀರಿ ನೀವು ನಿಮ್ಮಂಥೊರಿಂದ್ಲೆ ಹಿಂಗಾಗಿರದು.”
“ಸಾರಿ ಸರ್ ಬೈಲಿಲ್ಲ ಟೀಕೆ ಮಾಡಿದ್ರಿ.”
“ಟೀಕೆ ಎಲ್ಲಿ ಮಾಡಿದೇರೀ? ಪಾಪ ಗಂಡ ಸತ್ತು ತಿಂಗಳಾಗಿಲ್ಲ ಯಲಕ್ಷನ್ನಿಗೆ ಬಂದವುಳೆ ಅಂದೆ ಇದು ತೆಪ್ಪ.”
“ತೆಪ್ಪಲ್ಲ ಸಾರ್, ಅಕಸ್ಮಾತ್ ನೀವು ಅಂಬರೀಶನಂಗಾಗಿ…..”
“ಥೂ ಬುಡ್ತು ಅನ್ರಿ.”
“ಸಾರಿ ಸ, ನಿಮ್ಮ ನಂತ್ರ ಭವಾನಕ್ಕನಿಗೆ ಟಿಕೆಟ್ ಕೊಟ್ರೆ ನೀವು ಅಂಗನ್ನಕ್ಕಾಯ್ತದ.”
“ಭವಾನಿ ನಾನಿಲ್ದಾಗ ರಾಜಕಾರಣ ಮಾಡದಕ್ಕಿಂತ ಈಗ್ಲೆ ಅವುಳು ರಾಜಕಾರಣಿ ಕಂಡ್ರಿ, ಅವುಳ ಕ್ಯಲಸ ನಿಮಗೇನು ಗೊತ್ತು.”
“ಗೊತ್ತಾಗಲಿಲ್ಲ ಸಾರ್.”
“ಹಾಸನ ಜಿಲ್ಲೆ ಇಸಗೂಲುಡುಗ್ರ್ಯಲ್ಲ ಪಾಸಾಗ್ಯವೆ ಅಂಗೆ ಮಾಡಿದ್ಲು.”
“ರಿಯಲ್ಲಿ ಗ್ರೇಟ್ ಸಾ, ಅಂಗಿದ್ರೆ ಅವುರ ಎಮ್ಮೆಲ್ಸಿ ಮಾಡಿ ಶಿಕ್ಷಣ ಸಚಿವರನ್ನಾಗಿ ಮಾಡಿದ್ರೆ, ಇಡೀ ಕರ್ನಾಟಕದ ಸ್ಕೂಲು ಮಕ್ಕಳ್ಯಲ್ಲ ಪಾಸಾಯ್ತವಲ್ಲವ ಸಾ.”
“ಆಯ್ತವೆ ಸರಿ, ಆದ್ರೆ ಅವುಳ ಎಮ್ಮೆಲ್ಸಿ ಮಾಡಕ್ಕೆ ಬುಡ್ತಾರೇನ್ರಿ. ಈಗ್ಲೆ, ದ್ಯಾವೇಗೌಡ್ರು ಮಕ್ಕಳದೆ ಸರಕಾರ ಅಂತ ವಟ್ಟೆಕಿಚ್ಚು ಮಾಡೋರು ಆಗ ಬುಡ್ತಾರಾ.”
“ವಟ್ಟೆಕಿಚ್ಚು, ರಾಜಕಾರಣಿಗಳ ಹುಟ್ಟುಗುಣ ಸಾ. ವಟ್ಟೆಕಿಚ್ಚು, ಕರುಬುತನ, ಕಿಜ್ಜರತನ, ಸಣ್ಣತನ ಇವ್ಯಲ್ಲ ನಿಮ್ಮಂತವರ ಹುಟ್ಟುಗುಣ.”
“ನಮ್ಮಂತವುರು ಅಂತ ಯಾಕಂತೀರಿ ಹಲ್ಲಿಡುದು ಮಾತಾಡಿ.”
“ನೀವು ದೇವೇಗೌಡ್ರ ಮಕ್ಕಳಲ್ಲವ ಸಾರ್.”
“ಅದ್ಕೆ ಅಂಗಂದುಬುಡದಾ. ನಮ್ಮ ತಂದೆ ಈ ವಯಸ್ಸಿನಲ್ಲಿ ಎಷ್ಟು ಕಷ್ಟಪಡ್ತರೆ ಅಂತ ನಿಮಗೇನ್ರಿ ಗೊತ್ತು”
“ನಿಜ ಸಾ, ಗೌಡ್ರು ಅನ್ನ ನಿದ್ದೆ ಬುಟ್ಟು ಬರೀ ಮುದ್ದೆ ತಿನ್ನಕಂಡು ನೋವಿನ ಕಣ್ಣಲ್ಲಿ ಕುಂತಿರದ ನೋಡಿದ್ರೆ ವಟ್ಟೆ ಉರಿತದೆ. ಈ ಹಾಳು ಎಮ್ಮೆಲ್ಲೆಗಳು ಅದ ತಿಳಕಳ್ಳಿಲ್ಲ.”
“ತಿಳಕಳಕ್ಕೆ ಯಂಗಾಯ್ತದ್ರಿ, ಆ ಬಿಜೆಪಿಗಳು ಕೋಟಿ ಕೋಟಿ ಕೊಡ್ತೀವಿ ಅಂತ ಆಸೆ ತೋರಿಸಿಬುಟ್ಟವುರೆ, ಅದ್ಕೆ ಅಂಗಾಡದು.”
“ನೀವು ತೋರಬೇಕಾಗಿತ್ತು.”
“ಎಲ್ಲಿಂದ ತರದ್ರಿ ಅಷ್ಟೊಂದು ದುಡ್ಡ.”
“ಸರಕಾರದ ಖಜಾನೇನೆ ನಿಮ್ಮದಲವಾ ಸಾ.”
“ಸರಕಾರದ ಖಜಾನೆ ನಮ್ಮದು ಅಂತ ಈ ಮುಂಡೆ ಮಕ್ಕಳಿಗ್ಯಲ್ಲ ಕೇಳಿ ಕೇಳಿದಂಗೆ ಕೊಡಕ್ಕಾಯ್ತದೇನ್ರಿ.”
“ಅದ್ಕೆ ಅಲವ ಸಾ, ಬಂಡಾಯ.”
“ಬಂಡಾಯ ಏಳ್ಳಿಬುಡಿ, ಕುಮಾರನ ಸರಕಾರವ ಏನು ಮಾಡಕ್ಕಾಗದಿಲ್ಲ. ನಾನೀಗಾಗ್ಲೆ ಯಲ್ಲಾ ದೇವರನೂ ನೋಡಿ ಪೂಜೆ ಮಾಡಿ ಬಂದಿದ್ದಿನಿ. ನಮ್ಮ ಕಡೆ ದೇವುರಿದಾನೆ.”
“ಒಂದು ಡವುಟು ಸಾರ್.”
“ಏನ್ರಿ ಅದು.”
“ನೀವು ಈಗಾಗ್ಲೆ ಒಂದು ಡಜನ್ ದೇವುರಿಗೆ ನಿಮ್ಮ ಕಷ್ಟ ಹೇಳಕಂಡಿದ್ದಿರಿ, ಇದರಲ್ಲಿ ಯಾವ ದೇವರು ನಿಮ್ಮ ಕೈ ಹಿಡಿತವೆ.”
“ಯಲ್ಲಾ ದೇವರೂ ಹಿಡಿತವೆ.”
“ಹಿಡಿಲಿಲ್ಲ ಅಂದ್ರೆ.”
“ಹಿಡಿದೇ ಹಿಡಿತವೆ ಕಂಡ್ರಿ. ನಮ್ಮ ತಂದೆ ಕನಕಪುರ, ಹೊಳೆನರಸೀಪುರದಲ್ಲಿ ಸೋತು, ಮನಿಗೆ ಬಂದಾಗ ಸುಮ್ಮನೆ ಕೂತಗಳಿಲ್ಲ. ದೇವರ ಪೂಜೆ ಮಾಡಿದ್ರು. ಜಗದ್ಗುರುಗಳ ಕಾಲಿಗೆ ಬಿದ್ರು. ಮುಂದೇನಾಯ್ತು? ಪ್ರಧಾನಿಯಾದ್ರು! ಇದ ನಂಬಕ್ಕಾಯ್ತದೇನ್ರಿ, ಅದ್ಕೆ ನಾವು ಯಾವತ್ತೂ ದೇವರ ಪೂಜೆ, ಪುನಸ್ಕಾರ ಬುಡದಿಲ್ಲ. ಕುಮಾರನ್ನ ಚಾಮುಂಡೇಶ್ವರಿ ಕೈ ಹಿಡಿದೇ ಹಿಡಿತಳೆ.”
“ನಮಗಿರೋ ಮಾಹಿತಿ ಪ್ರಕಾರ ಈ ಒಂದು ವರ್ಷ ನಿಮ್ಮ ಕುಟುಂಬ ಇಡೀ ಸರಕಾರನ ತಿಂದು ಕುಂತದಂತೆ? ಯಾವ ಯಮ್ಮೆಲ್ಲೆಗೂ ಅನುದಾನ ಇಲವಂತೆ.”
“ಅದ್ಯಾವನ್ರಿ ಅಂಗಂದೋನು? ಧರ್ಮಸ್ಥಳಕ್ಕೆ ಬಂದು ಸತ್ಯ ಮಾಡ್ಳಿ, ಕರಕೊಂಡು ಬನ್ರಿ ಅವುರ.”
“ಸರಕಾರ ಉಳಿಬೇಕಾದ್ರೆ ಒಂದು ಸಿಂಪಲ್ ತೀರ್ಮಾನ ಇದ್ದತ್ತಂತೆ ಸಾರ್.”
“ಅದ್ಯಾವುದ್ರಿ ಸಿಂಪಲ್ಲು ತೀರ್ಮಾನ? ಅಂತದು ಇದ್ದತೆ?.”
“ನಿಮ್ಮ ಕೈಲಿ ಅದೆ ಸಾರ್.”
“ನನ್ನ ಕೈಲಿ ನಿಂಬೆಹಣ್ಣವೆ ಕಂಡ್ರಿ.”
“ಆ ಐದು ನಿಂಬೆ ಹಣ್ಣ ನಿಮ್ಮ ಸರಕಾರಕ್ಕೆ ಸಪೋಲ್ಟು ಮಾಡಿರೋ ಸಮರ್ಥರಾದ ಐದು ಜನ ಎಂಎಲ್‍ಎಗಳ ಕೈಗೆ ಕೊಟ್ಟು, ನಿಮ್ಮ ಖಾತೆ, ಕುಮಾರಣ್ಣನತ್ರ ಇರೋ ಖಾತೆ ಹಂಚಿದ್ರೆ, ಸರಕಾರ ಇನ್ನ ನಾಕೊರ್ಸ ಇರತದೆ ಸಾ.”
“ಇದು ಸಿಂಪಲ್ಲು ತೀರ್ಮಾನ ಏನ್ರಿ. ಯಾವನ್ರಿ ನಿಮಗೆ ಇಂಥಾ ಮನಿಯಾಳ ಬುದ್ದಿ ಹೇಳಿಕೊಟ್ಟೋನು. ಸರಕಾರ ಬಿದ್ದೋಗಿ ನಾವು ವಿರೋಧ ಪಕ್ಷದಲ್ಲಿ ಕುತಗಂಡ್ರೂ ಇಂತ ಕ್ಯಲಸ ಮಾಡಕ್ಕಾಯ್ತದೇನ್ರಿ.”
“ಅಂಗಾದ್ರೆ ಸರಕಾರನ ನಿಮ್ಮ ಯಾವ ದೇವರೂ ಉಳಿಸಕ್ಕಾಗಿದಲ್ಲ ಸಾ.”
“ಹೋಗ್ಲಿ ಬುಡ್ರಿ.”
“ಮುಂದಿನ ಚುನಾವಣೆಗೆ ದುಡ್ಡಾಯ್ತಲ್ಲ ಬುಡ್ರಿ.”
“ಏನಂದ್ರಿ.”

“ಥೂತ್ತೇರಿ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...