Homeಅಂಕಣಗಳುನಿಮ್ಮ ಖಾತೆಗಳನ್ನ ಬುಟ್ಟುಕೊಟ್ರೆ ಸರಕಾರ ಉಳಿತದಂತೆ ಸಾ...

ನಿಮ್ಮ ಖಾತೆಗಳನ್ನ ಬುಟ್ಟುಕೊಟ್ರೆ ಸರಕಾರ ಉಳಿತದಂತೆ ಸಾ…

- Advertisement -
- Advertisement -

| ಯಾಹೂ |

ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲವುಂಟಾದರೂ ಕೊಲ್ಲೂರು ಪ್ರಾಂತ್ಯದ ಮೂಕಾಂಬಿಕೆ ಸನ್ನಿಧಿಯಲ್ಲಿ ವಿಹರಿಸುತ್ತಿರುವ ರೇವಣ್ಣನವರನ್ನು ಮಾತನಾಡಿಸಿ, ಮನಸ್ಸನ್ನು ಹಗುರ ಮಾಡಿಕೊಳ್ಳಬೇಕೆನಿಸಿತಲ್ಲಾ, ಆ ಕೂಡಲೇ ಪೋನ್ ಮಾಡಲಾಗಿ ರಿಂಗಾಯ್ತು.

ರಿಂಗ್‍ಟೋನ್: “ಕೊಲ್ಲೂರು ಸಿರಿದೇವಿ ಮೂಕಾಂಬಿಕೇ, ನಿನ್ನ ದರುಶನಕೆ ಬಂದಿಹೆನು ಕಾಪಾಡಮ್ಮ.”
“ಹಲೋ ಯಾರ್ರಿ.”
“ನಾನು ಸರ್ ಯಾಹೂ.”
“ಏನ್ರಿ”
“ಎಲ್ಲಿದ್ದಿರಿ ಸಾರ್.”
“ನಾನೆಲ್ಲಿದ್ರೆ ನಿಮಗೇನ್ರಿ.”
“ಅಲ್ಲ ಸಾರ್. ರೇವಣ್ಣ ಪುಣ್ಯಕ್ಷೇತ್ರಗಳಿಗೆ ಭೇಟಿ ಕೊಡ್ತಾ ಅವುರೆ ಅಂದ್ರು, ಅದಕೆ ಫೋನ್ ಮಾಡಿದೆ ಸಾರ್.”
“ಕೊಲ್ಲೂರು ಮೂಕಾಂಬಿಕೆ, ಆನೆಗುಡ್ಡದ ಆಂಜನೇಯ, ಕಟೀಲು, ಧರ್ಮಸ್ಥಳ, ಇಲ್ಯಲ್ಲ ಹೋಗಿ ಬಂದೆ ಕಂಡ್ರಿ.”
“ದೇವರು ಸರಕಾರ ಉಳುಸ್ತವ ಸಾರ್.”
“ಉಳುಸ್ತವೆ ಕಂಡ್ರಿ.”
“ಹ್ಯಂಗೆ ಸಾರ್.”
“ಯಾರ್ಯಾರಿಗೆ ಮನಿಯಾಳು ಬುದ್ದಿ ಇರತದೊ ಅವುರಿಗ್ಯಲ್ಲ ವಳ್ಳೆ ಬುದ್ದಿ ಕೊಡು ಅಂತ ನಾವು ದೇವರ ಕೇಳಿಕೊಂಡು ಪೂಜೆ ಮಾಡುಸ್ತಿವಿ, ಹೋಮ ಮಾಡುಸ್ತಿವಿ.”
“ಆಗ ದೇವುರು ಅವುರಿಗ್ಯಲ್ಲ ವಳ್ಳೆ ಬುದ್ದಿ ಕೊಡ್ತದ ಸಾರ್.”
“ಕೊಡ್ತದೊ ಬುಡ್ತದೊ ನಾವು ಮಾಡೊ ಕ್ಯಲಸ ಮಾಡಬೇಕಲ್ವೇನ್ರಿ”
“ನಿಜ ಸಾರ್.”
“ಅದ್ಕೆ ನಾನು ಮದ್ಲು ಹೋಗಿ ಕೇಳಿಕಂಡಿದ್ದು ಮೈಸೂರು ಚಾಮುಂಡೇಶ್ವರಿಯ. ಅವುಳು ಮೈಸೂರು ಮಾರಾಜನ್ನ ಕಾಪಾಡಿದಂಗೆ ನಮ್ಮ ಕುಮಾರನ ಸರಕಾರನೂ ಉಳುಸ್ತಾಳೆ.”
“ಹೆಣ್ಣು ದೇವರಿಗೆ ಇಷ್ಟು ಗೌರವ ಕೊಡೋ ನೀವು ಆ ಸುಮಲತನ್ನ ಬೈದರಲ್ಲ ಸಾರ್.”
“ನಾನೆಲ್ಲಿ ಬೋದೆ. ವಟ್ಟಿಗೇನು ತಿಂತೀರಿ ನೀವು ನಿಮ್ಮಂಥೊರಿಂದ್ಲೆ ಹಿಂಗಾಗಿರದು.”
“ಸಾರಿ ಸರ್ ಬೈಲಿಲ್ಲ ಟೀಕೆ ಮಾಡಿದ್ರಿ.”
“ಟೀಕೆ ಎಲ್ಲಿ ಮಾಡಿದೇರೀ? ಪಾಪ ಗಂಡ ಸತ್ತು ತಿಂಗಳಾಗಿಲ್ಲ ಯಲಕ್ಷನ್ನಿಗೆ ಬಂದವುಳೆ ಅಂದೆ ಇದು ತೆಪ್ಪ.”
“ತೆಪ್ಪಲ್ಲ ಸಾರ್, ಅಕಸ್ಮಾತ್ ನೀವು ಅಂಬರೀಶನಂಗಾಗಿ…..”
“ಥೂ ಬುಡ್ತು ಅನ್ರಿ.”
“ಸಾರಿ ಸ, ನಿಮ್ಮ ನಂತ್ರ ಭವಾನಕ್ಕನಿಗೆ ಟಿಕೆಟ್ ಕೊಟ್ರೆ ನೀವು ಅಂಗನ್ನಕ್ಕಾಯ್ತದ.”
“ಭವಾನಿ ನಾನಿಲ್ದಾಗ ರಾಜಕಾರಣ ಮಾಡದಕ್ಕಿಂತ ಈಗ್ಲೆ ಅವುಳು ರಾಜಕಾರಣಿ ಕಂಡ್ರಿ, ಅವುಳ ಕ್ಯಲಸ ನಿಮಗೇನು ಗೊತ್ತು.”
“ಗೊತ್ತಾಗಲಿಲ್ಲ ಸಾರ್.”
“ಹಾಸನ ಜಿಲ್ಲೆ ಇಸಗೂಲುಡುಗ್ರ್ಯಲ್ಲ ಪಾಸಾಗ್ಯವೆ ಅಂಗೆ ಮಾಡಿದ್ಲು.”
“ರಿಯಲ್ಲಿ ಗ್ರೇಟ್ ಸಾ, ಅಂಗಿದ್ರೆ ಅವುರ ಎಮ್ಮೆಲ್ಸಿ ಮಾಡಿ ಶಿಕ್ಷಣ ಸಚಿವರನ್ನಾಗಿ ಮಾಡಿದ್ರೆ, ಇಡೀ ಕರ್ನಾಟಕದ ಸ್ಕೂಲು ಮಕ್ಕಳ್ಯಲ್ಲ ಪಾಸಾಯ್ತವಲ್ಲವ ಸಾ.”
“ಆಯ್ತವೆ ಸರಿ, ಆದ್ರೆ ಅವುಳ ಎಮ್ಮೆಲ್ಸಿ ಮಾಡಕ್ಕೆ ಬುಡ್ತಾರೇನ್ರಿ. ಈಗ್ಲೆ, ದ್ಯಾವೇಗೌಡ್ರು ಮಕ್ಕಳದೆ ಸರಕಾರ ಅಂತ ವಟ್ಟೆಕಿಚ್ಚು ಮಾಡೋರು ಆಗ ಬುಡ್ತಾರಾ.”
“ವಟ್ಟೆಕಿಚ್ಚು, ರಾಜಕಾರಣಿಗಳ ಹುಟ್ಟುಗುಣ ಸಾ. ವಟ್ಟೆಕಿಚ್ಚು, ಕರುಬುತನ, ಕಿಜ್ಜರತನ, ಸಣ್ಣತನ ಇವ್ಯಲ್ಲ ನಿಮ್ಮಂತವರ ಹುಟ್ಟುಗುಣ.”
“ನಮ್ಮಂತವುರು ಅಂತ ಯಾಕಂತೀರಿ ಹಲ್ಲಿಡುದು ಮಾತಾಡಿ.”
“ನೀವು ದೇವೇಗೌಡ್ರ ಮಕ್ಕಳಲ್ಲವ ಸಾರ್.”
“ಅದ್ಕೆ ಅಂಗಂದುಬುಡದಾ. ನಮ್ಮ ತಂದೆ ಈ ವಯಸ್ಸಿನಲ್ಲಿ ಎಷ್ಟು ಕಷ್ಟಪಡ್ತರೆ ಅಂತ ನಿಮಗೇನ್ರಿ ಗೊತ್ತು”
“ನಿಜ ಸಾ, ಗೌಡ್ರು ಅನ್ನ ನಿದ್ದೆ ಬುಟ್ಟು ಬರೀ ಮುದ್ದೆ ತಿನ್ನಕಂಡು ನೋವಿನ ಕಣ್ಣಲ್ಲಿ ಕುಂತಿರದ ನೋಡಿದ್ರೆ ವಟ್ಟೆ ಉರಿತದೆ. ಈ ಹಾಳು ಎಮ್ಮೆಲ್ಲೆಗಳು ಅದ ತಿಳಕಳ್ಳಿಲ್ಲ.”
“ತಿಳಕಳಕ್ಕೆ ಯಂಗಾಯ್ತದ್ರಿ, ಆ ಬಿಜೆಪಿಗಳು ಕೋಟಿ ಕೋಟಿ ಕೊಡ್ತೀವಿ ಅಂತ ಆಸೆ ತೋರಿಸಿಬುಟ್ಟವುರೆ, ಅದ್ಕೆ ಅಂಗಾಡದು.”
“ನೀವು ತೋರಬೇಕಾಗಿತ್ತು.”
“ಎಲ್ಲಿಂದ ತರದ್ರಿ ಅಷ್ಟೊಂದು ದುಡ್ಡ.”
“ಸರಕಾರದ ಖಜಾನೇನೆ ನಿಮ್ಮದಲವಾ ಸಾ.”
“ಸರಕಾರದ ಖಜಾನೆ ನಮ್ಮದು ಅಂತ ಈ ಮುಂಡೆ ಮಕ್ಕಳಿಗ್ಯಲ್ಲ ಕೇಳಿ ಕೇಳಿದಂಗೆ ಕೊಡಕ್ಕಾಯ್ತದೇನ್ರಿ.”
“ಅದ್ಕೆ ಅಲವ ಸಾ, ಬಂಡಾಯ.”
“ಬಂಡಾಯ ಏಳ್ಳಿಬುಡಿ, ಕುಮಾರನ ಸರಕಾರವ ಏನು ಮಾಡಕ್ಕಾಗದಿಲ್ಲ. ನಾನೀಗಾಗ್ಲೆ ಯಲ್ಲಾ ದೇವರನೂ ನೋಡಿ ಪೂಜೆ ಮಾಡಿ ಬಂದಿದ್ದಿನಿ. ನಮ್ಮ ಕಡೆ ದೇವುರಿದಾನೆ.”
“ಒಂದು ಡವುಟು ಸಾರ್.”
“ಏನ್ರಿ ಅದು.”
“ನೀವು ಈಗಾಗ್ಲೆ ಒಂದು ಡಜನ್ ದೇವುರಿಗೆ ನಿಮ್ಮ ಕಷ್ಟ ಹೇಳಕಂಡಿದ್ದಿರಿ, ಇದರಲ್ಲಿ ಯಾವ ದೇವರು ನಿಮ್ಮ ಕೈ ಹಿಡಿತವೆ.”
“ಯಲ್ಲಾ ದೇವರೂ ಹಿಡಿತವೆ.”
“ಹಿಡಿಲಿಲ್ಲ ಅಂದ್ರೆ.”
“ಹಿಡಿದೇ ಹಿಡಿತವೆ ಕಂಡ್ರಿ. ನಮ್ಮ ತಂದೆ ಕನಕಪುರ, ಹೊಳೆನರಸೀಪುರದಲ್ಲಿ ಸೋತು, ಮನಿಗೆ ಬಂದಾಗ ಸುಮ್ಮನೆ ಕೂತಗಳಿಲ್ಲ. ದೇವರ ಪೂಜೆ ಮಾಡಿದ್ರು. ಜಗದ್ಗುರುಗಳ ಕಾಲಿಗೆ ಬಿದ್ರು. ಮುಂದೇನಾಯ್ತು? ಪ್ರಧಾನಿಯಾದ್ರು! ಇದ ನಂಬಕ್ಕಾಯ್ತದೇನ್ರಿ, ಅದ್ಕೆ ನಾವು ಯಾವತ್ತೂ ದೇವರ ಪೂಜೆ, ಪುನಸ್ಕಾರ ಬುಡದಿಲ್ಲ. ಕುಮಾರನ್ನ ಚಾಮುಂಡೇಶ್ವರಿ ಕೈ ಹಿಡಿದೇ ಹಿಡಿತಳೆ.”
“ನಮಗಿರೋ ಮಾಹಿತಿ ಪ್ರಕಾರ ಈ ಒಂದು ವರ್ಷ ನಿಮ್ಮ ಕುಟುಂಬ ಇಡೀ ಸರಕಾರನ ತಿಂದು ಕುಂತದಂತೆ? ಯಾವ ಯಮ್ಮೆಲ್ಲೆಗೂ ಅನುದಾನ ಇಲವಂತೆ.”
“ಅದ್ಯಾವನ್ರಿ ಅಂಗಂದೋನು? ಧರ್ಮಸ್ಥಳಕ್ಕೆ ಬಂದು ಸತ್ಯ ಮಾಡ್ಳಿ, ಕರಕೊಂಡು ಬನ್ರಿ ಅವುರ.”
“ಸರಕಾರ ಉಳಿಬೇಕಾದ್ರೆ ಒಂದು ಸಿಂಪಲ್ ತೀರ್ಮಾನ ಇದ್ದತ್ತಂತೆ ಸಾರ್.”
“ಅದ್ಯಾವುದ್ರಿ ಸಿಂಪಲ್ಲು ತೀರ್ಮಾನ? ಅಂತದು ಇದ್ದತೆ?.”
“ನಿಮ್ಮ ಕೈಲಿ ಅದೆ ಸಾರ್.”
“ನನ್ನ ಕೈಲಿ ನಿಂಬೆಹಣ್ಣವೆ ಕಂಡ್ರಿ.”
“ಆ ಐದು ನಿಂಬೆ ಹಣ್ಣ ನಿಮ್ಮ ಸರಕಾರಕ್ಕೆ ಸಪೋಲ್ಟು ಮಾಡಿರೋ ಸಮರ್ಥರಾದ ಐದು ಜನ ಎಂಎಲ್‍ಎಗಳ ಕೈಗೆ ಕೊಟ್ಟು, ನಿಮ್ಮ ಖಾತೆ, ಕುಮಾರಣ್ಣನತ್ರ ಇರೋ ಖಾತೆ ಹಂಚಿದ್ರೆ, ಸರಕಾರ ಇನ್ನ ನಾಕೊರ್ಸ ಇರತದೆ ಸಾ.”
“ಇದು ಸಿಂಪಲ್ಲು ತೀರ್ಮಾನ ಏನ್ರಿ. ಯಾವನ್ರಿ ನಿಮಗೆ ಇಂಥಾ ಮನಿಯಾಳ ಬುದ್ದಿ ಹೇಳಿಕೊಟ್ಟೋನು. ಸರಕಾರ ಬಿದ್ದೋಗಿ ನಾವು ವಿರೋಧ ಪಕ್ಷದಲ್ಲಿ ಕುತಗಂಡ್ರೂ ಇಂತ ಕ್ಯಲಸ ಮಾಡಕ್ಕಾಯ್ತದೇನ್ರಿ.”
“ಅಂಗಾದ್ರೆ ಸರಕಾರನ ನಿಮ್ಮ ಯಾವ ದೇವರೂ ಉಳಿಸಕ್ಕಾಗಿದಲ್ಲ ಸಾ.”
“ಹೋಗ್ಲಿ ಬುಡ್ರಿ.”
“ಮುಂದಿನ ಚುನಾವಣೆಗೆ ದುಡ್ಡಾಯ್ತಲ್ಲ ಬುಡ್ರಿ.”
“ಏನಂದ್ರಿ.”

“ಥೂತ್ತೇರಿ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...