Homeಚಳವಳಿಅಮೃತಭೂಮಿಯಲ್ಲಿ ಬಿತ್ತಿದ ಬೀಜಗಳು  ನಾಡೆಲ್ಲಾ ಪಸರಿಸಲಿ....

ಅಮೃತಭೂಮಿಯಲ್ಲಿ ಬಿತ್ತಿದ ಬೀಜಗಳು  ನಾಡೆಲ್ಲಾ ಪಸರಿಸಲಿ….

- Advertisement -
ರೈತ ಚಳವಳಿಯ ಪುನಶ್ಚೇತನ ಆಗಬೇಕೆಂದರೆ ಯುವಜನರು ದೊಡ್ಡ ಪ್ರಮಾಣದಲ್ಲಿ ಸಂಘಟನೆಯೊಳಕ್ಕೂ ಬರಬೇಕು; ರೈತ ಚಳವಳಿಯೊಳಕ್ಕೂ ಬರಬೇಕು. ಆ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘವು ನಡೆಸಿದ ಆತ್ಮಾವಲೋಕನವು ಹೀಗಿತ್ತು. ರೈತ ಚಳವಳಿಗೆ ಬಂದ ಹೊಸಬರಿಗೆ ರೈತ ಸಂಘದ ಮೂಲ ಸಿದ್ಧಾಂತಗಳನ್ನು ಹೇಳಿಕೊಡುವ ಕೆಲಸ ನಡೆಯಲಿಲ್ಲ. ಹಾಗಾಗಿಯೇ ಎಂಬತ್ತರ ದಶಕದ ತಲೆಮಾರಿಗಿದ್ದ ಸೈದ್ಧಾಂತಿಕ ಸ್ಪಷ್ಟತೆ ನಂತರದ ದಶಕಗಳಲ್ಲಿ ಬಂದ ತಲೆಮಾರುಗಳಲ್ಲಿ ಕಾಣಲಿಲ್ಲ. ವಿಚಾರದ ಮೇಲೆ ಕಟ್ಟುವ ಹೊಸ ತಲೆಮಾರಿನ ರೈತ ಚಳವಳಿ ಕೇವಲ ಸಂಘರ್ಷದ ಜೊತೆಗೆ ರಚನಾತ್ಮಕ ಕೆಲಸಗಳಲ್ಲಿಯೂ ತೊಡಗಿಸಿಕೊಳ್ಳಬೇಕೆಂಬುದು ಈ ಹೊತ್ತಿನ ತುರ್ತಾಗಿದೆ.
ಆ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಅಮೃತಭೂಮಿಯಲ್ಲಿ “ಹೊಸ ತಲೆಮಾರಿನ ರೈತ ಚಳವಳಿ ಕಟ್ಟಲು” ಎಂಬ ಮೂರು ದಿನಗಳ ಯುವ ರೈತರ ಅಧ್ಯಯನ ಶಿಬಿರ ನಡೆಸಲಾಯಿತು. ಕೃಷಿಗೆ ಅಂಟಿಕೊಂಡಿರುವ ರೋಗಗಳಿಗೆ ಪರಿಹಾರದ ಹುಡುಕಾಟ ಶಿಬಿರದಲ್ಲಿ ನಡೆದಿತ್ತು. ಭಾಗವಹಿಸಿದ್ದ ಸಕ್ರಿಯ ರೈತ ಯುವ ಕಾರ್ಯಕರ್ತರಲ್ಲಿ ಕೃಷಿಯನ್ನು ಪುನರ್ ಸ್ಥಾಪಿಸಲೇಬೇಕೆಂಬ ಹೊಸ ಕನಸು ಎದ್ದು ಕಾಣುತ್ತಿತ್ತು. ಇದಾಗಬೇಕಾದರೆ ಇಂದಿನ ಯುವ ಸಮೂಹ ವೈಚಾರಿಕ ಸ್ಪಷ್ಟತೆಯೊಂದಿಗೆ ಚಳವಳಿ ರೂಪಿಸಿದಲ್ಲಿ ಮಾತ್ರ ಸಾಧ್ಯ ಎಂಬ ಎಚ್ಚರದೊಂದಿಗೆ ಈ ಮೂರೂ ದಿನಗಳು ಕಳೆದವು.
ಪ್ರೊ.ನಂಜುಂಡಸ್ವಾಮಿ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ, ಸಸಿನೆಡುವುದರ ಮುಖಾಂತರ ಶಿಬಿರಕ್ಕೆ ಅಧಿಕೃತವಾಗಿ ಕೆ.ಟಿ.ಗಂಗಾದರ್‍ರವರು ಚಾಲನೆ ನೀಡಿದರು. ಚುಕ್ಕಿ ನಂಜುಂಡಸ್ವಾಮಿರವರು ಶಿಬಿರಾರ್ಥಿಗಳನ್ನು ಉದ್ದೇಶಿಸಿ ಶಿಬಿರದ ಹಿಂದಿನ ಉದ್ದೇಶ ಮತ್ತು ಅಗತ್ಯತೆಯ ಕುರಿತು ಆಶಯ ನುಡಿಯನ್ನು ತಿಳಿಸಿದರು.
ಹಿರಿಯರಾದ ಕೆಸಿ ಬಸವರಾಜು, ಬಡಗಲಪುರ ನಾಗೇಂದ್ರ, ಚಾಮರಸ ಮಾಲೀ ಪಾಟೀಲ್ ರೈತ ಚಳವಳಿಯ ಇತಿಹಾಸದ ಕುರಿತು ಮಾತನಾಡಿದರು. ಅನಂತರ ಆಹಾರ ತಜ್ಞರಾದ  ಕೆ.ಸಿ ರಘುರವರು ಮಾತನಾಡಿ ಪ್ರಸ್ತುತ ಸರ್ಕಾರದ ನೀತಿಗಳು ದೇಶದ ಆರ್ಥಿಕ ನೀತಿಯನ್ನು ದಿವಾಳಿಯೆಡೆಗೆ ಕೊಂಡೊಯ್ಯುತ್ತಿವೆ. ಆದ್ದರಿಂದ ರೈತರು ವಲಯಾದಾರಿತ ಮತ್ತು ಪಾರಂಪರಿಕ ಕೃಷಿಯನ್ನು ಅನುಸರಿಸಿ, ಆಹಾರ ಸಾರ್ವಭೌಮತ್ವವನ್ನು ಹೇಗೆ ಹೊಂದಬಹುದೆಂದು ವಿವರಿಸಿದರು.
ಕೃಷಿಯಲ್ಲಿ ಮಹಿಳೆಯರು ಎನ್ನುವ ವಿಷಯದ ಕುರಿತು ಮಾತನಾಡುತ್ತಾ ಸಾಮಾಜಿಕ ಹೋರಾಟಗಾರ್ತಿ ಕವಿತ ಕುರಗಂಟಿ ಭಾರತದಲ್ಲಿ ಕೃಷಿ ಎಂದ ಕೂಡಲೆ ಮಹಿಳೆಯರು ಕೊಡುಗೆ ಪರಿಗಣನೆಗೆ ಬರುವುದೇ ಇಲ್ಲ. ರೈತನೆಂದರೆ ಪುರುಷ ಎಂಬ ಮನಸ್ಥಿತಿ ಬಹುತೇಕರದ್ದು ಭಾರತದ ಮಹಿಳೆ ಕೃಷಿಕರ ಬಗ್ಗೆಯೂ ಚರ್ಚೆಗಳು ನಡೆಯುವುದು ಅಗತ್ಯ ಮತ್ತು ಭಾರತ ಕೃಷಿ ನಿಂತಿರುವುದು ಮಹಿಳಾ ಕೃಷಿಕರ ಕೊಡುಗೆಯಿಂದ ಇನ್ನಾದರೂ ನಾವು ರೈತ ಮಹಿಳೆಯರ ಪಾತ್ರವನ್ನು  ಗುರುತಿಸಿ ಅವರಿಗೆ ಸಮಾನ ಹಕ್ಕುಗಳು ಹಾಗೂ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಮುನ್ನಡೆಯಬೇಕು ಎಂದರು.
ರಾಸಾಯನಿಕ ಕೃಷಿ ಸೃಷ್ಟಿಸಿರುವ ದುರಂತಗಳು ಕೃಷಿ ಕ್ಷೇತ್ರಕ್ಕಿರುವ ಸವಾಲುಗಳು ಮತ್ತು ಅವುಗಳನ್ನು ಹಿಮ್ಮೆಟ್ಟಿಸಿ ನಾವು ಹೇಗೆ ಕೃಷಿಯಲ್ಲಿ ಪರ್ಯಾಯಗಳನ್ನು ಸೃಷ್ಟಿಸಿ ಸ್ವಾವಲಂಬನೆ ಸಾಧಿಸಬಹುದು ಎನ್ನುವುದರ ಕುರಿತು ಸುರೇಶ್ ಕೆ.ಪಿ ಅವರು ರೈತ ಸಂಘದ ಯುವ ಕೃಷಿಕರೊಂದಿಗೆ ಚರ್ಚೆ ನಡೆಸಿದರು.
ಇಂದಿನ ಕಾಲಘಟ್ಟಕ್ಕೆ ಹೊಸ ಆಶಯ ವಿಷಯಗಳೊಂದಿಗೆ ರಚನಾತ್ಮಕವಾಗಿ ಹೊಸ ತಲೆಮಾರಿನ ರೈತ ಚಳವಳಿಯನ್ನು ಹೇಗೆ ಕಟ್ಟಿಕೊಂಡು ಮುನ್ನಡೆಯಬೇಕು ಎನ್ನುವುದರ ಬಗ್ಗೆ ಕುರಿತು ಮಲ್ಲಿಗೆ ಸಿರಿಮನೆಯವರು ಯುವ ಕೃಷಿಕರೊಂದಿಗೆ ಸಂವಾದ ನಡೆಸಿದರು. ದೇಶದಲ್ಲಿ ಉಲ್ಬಣಿಸುತ್ತಿರುವ ನಿರುದ್ಯೋಗ ಸಮಸ್ಯೆ ಕುರಿತು ಮಾತನಾಡುತ್ತಾಮುತ್ತುರಾಜ್ ಅವರು  ಗ್ರಾಮೀಣ ಪ್ರದೇಶದಲ್ಲೆ ಉದ್ಯೋಗ ಸೃಷ್ಟಿಸುವ ಸಾಧ್ಯತೆಗಳ ಬಗ್ಗೆ ಇಂದಿನ ಯುವಜನಾಂಗ  ಚಿಂತಿಸಬೇಕು ಎನ್ನುವ ಆಶಯ ವ್ಯಕ್ತಪಡಿಸಿದರು. ಜನಶಕ್ತಿಯ ಡಾ.ವಾಸು ಹೊಸ ತಲೆಮಾರಿನ ರೈತ ಚಳವಳಿ ಕಟ್ಟಲು ನಾವೇನು ಮಾಡಬೇಕು ಎನ್ನುವುದರ ಕುರಿತು ಸವಿವರವಾಗಿ ಮಾತನಾಡುತ್ತಾ ಮುಂದಿನ ರೋಪುರೇಷೆಗಳನ್ನು ತಯಾರಿಸುವ ಕುರಿತು ಚರ್ಚೆ ನಡೆಸಿದರು.
ರೈತ ಸಂಘ ಉದಯವಾದ ಸಮಯದಲ್ಲಿ ರೈತ ಸಂಘಟನೆಯೊಳಗೆ ಸಾಂಸ್ಕೃತಿಕ ವಿಭಾಗ ತುಂಬಾ ಸಕ್ರಿಯವಾಗಿತ್ತು. ಅಂದು ಯುವ ರೈತ ಹೋರಾಟಗಾರರು ರಚಿಸಿದ ಅನೇಕ ಹಾಡುಗಳು ರೈತಸಂಘದೊಳಗೆ ಕ್ರಾಂತಿಯ ಕಿಚ್ಚನ್ನು ಹೆಚ್ಚಿಸಿದ್ದವು. ಈ ಗೀತೆಗಳು ಅಂದಿನ ಸಮಯದಲ್ಲಿ ರೈತ ಸಂಘದ ಅವಿಭಾಜ್ಯ ಅಂಗವಾಗಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ಮರೆಯಾಗಿದ ಅವನ್ನು ಮತ್ತೆ ನಮಗೆ ತಲುಪಿಸಿಕೊಡುವ ಕೆಲಸವನ್ನು ಹಿರಿಯರಾದ ಹಿ.ಶಿ.ರಾಮಚಂದ್ರಗೌಡರು ಶಿಬಿರದಲ್ಲಿ ಹಾಡು ಹಾಡಿಸುವ ಮೂಲಕ ಮಾಡಿದರು. ಶಿಬಿರದಲ್ಲಿ ಕುವೆಂಪು ಅವರ ರೈತಗೀತೆ -ನೇಗಿಲಯೋಗಿ,  ಮೈಲಾರಪ್ಪ ಸಗರ ಅವರು ಬರೆದಿರುವ ‘ನಮ್ಮ ಹಸಿರು ಬಾವುಟ’ ಹಾಗೂ ‘ಹಾರಿಸೋಣ ಕರ್ನಾಟಕ ರಾಜ್ಯ ರೈತ ಬಾವುಟ’ ಮತ್ತು ಹಿ.ಶಿ.ರಾಮಚಂದ್ರಗೌಡರ ‘ಬಾ ತಂಗಿ ಬಾರವ್ವ’, ‘ಕೂತಂಡವರ ಮಾತು ಕೇಳಿ’, ‘ಏನು ಮಾಡಿ ಏನು ಬಂತಣ್ಣ’ ಗೀತೆಗಳನ್ನು ಶಿಬಿರಾರ್ಥಿಗಳು  ಅಬ್ಯಾಸಿಸಿ ಹಾಡಿದರು.
ಸಮಾರೋಪ ಕಾರ್ಯಕ್ರಮದಲ್ಲಿ ಕೈಗೊಂಡ ದೇಶ ನಿರ್ಮಾಣದ ನಿರ್ಣಯಗಳು:
– ರೈತ ಯುವ ವಿಭಾಗವನ್ನು ರಾಜ್ಯಾದ್ಯಂತ ಬಲವಾಗಿ ಮತ್ತು ಪರಿಣಾಮಕಾರಿಯಾಗಿ ಕಟ್ಟಲು ನಿರ್ಧರಿಸಲಾಗಿದೆ.
– ಆರು ತಿಂಗಳ ಕಾಲ ವ್ಯವಸ್ಥಿತ ತಯಾರಿ ನಡೆಸಿ ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ತಂಡಗಳನ್ನು ಹಾಗೂ ಎಲ್ಲಾ ಜಿಲ್ಲೆಗಳಲ್ಲಿ ಹಂಗಾಮಿ ಸಮಿತಿಗಳನ್ನು ರಚಿಸುವುದು.
– ಆ ತಯಾರಿಯ ನಂತರ 2019 ಫೆಬ್ರವರಿ 13ರ ಪ್ರೋ.ಎಂ.ಡಿ.ಎನ್ ಜನ್ಮದಿನದಂದೂ ರಾಜ್ಯ ರೈತ ಸಂಘದ ಅಡಿಯಲ್ಲಿ ಅದರ ಅಂಗ ಸಂಘಟನೆಯಾಗಿ ಉದ್ಘಾಟಿಸುವುದು.
– ಹಂಗಾಮಿ ರಾಜ್ಯಸಮಿತಿಯನ್ನು ಆಯ್ಕೆಮಾಡಲಾಯಿತು.
– ಮೊದಲ ಹಂತದಲ್ಲಿ ಎಲ್ಲಾ ವಿಭಾಗಮಟ್ಟದಲ್ಲಿ ರಾಜ್ಯ ಶಿಬಿರದ ಮಾದರಿಯಲ್ಲಿ ಶಿಬಿರಗಳನ್ನು ಆಯೋಜಿಸುವುದು.
– ರಾಜ್ಯದ ವಿವಿಧ ಗ್ರಾಮಗಳಲ್ಲಿ ಉದ್ಯೋಗ ಸೃಷ್ಠಿಯ ಸಾಧ್ಯತೆಗಳು ಮತ್ತು ರಚನಾತ್ಮಕ ಕಾರ್ಯಕ್ರಮಗಳ ಸಾಧ್ಯತೆಗಳನ್ನು ಗುರುತಿಸಿ ಅದನ್ನು ಜಾರಿಮಾಡಲು ಬೇಕಾದ ತಯಾರಿಯನ್ನು ನಡೆಸುವುದು.
– ಗ್ರಾಮೀಣ ಭಾಗದ ಯುವತಿಯರು ಹಾಗೂ ಯುವಕರನ್ನು ಸಂಘಟಿಸುವುದಲ್ಲದೆ ರಾಜ್ಯದ ನಗರಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಆಸಕ್ತರು ಪರಿಣಿತರು ಮತ್ತು ಸಂಘಟನೆಗಳನ್ನು ನಮ್ಮ ಬಳಗವಾಗಿ ಒಳಗೊಳ್ಳುವ ಪ್ರಯತ್ನ ಮಾಡಲಾಗುವುದು.
– ನವಾಜ್ ಮತ್ತು ಮಹೇಶ್ 
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ದೇಶದಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ಮೇಲೆ ಅತೀವ ಕೆಲಸದ ಹೊರೆಯನ್ನು ಹೇರಿ ಅವರ ಖಾಸಗಿ ಜೀವನವನ್ನು ಕಿತ್ತುಕೊಳ್ಳುವ ಮೂಲಕ ಮಾನಸಿಕ ಒತ್ತಡಕ್ಕೆ ತಳ್ಳುತ್ತಿರುವ ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ. ಅದಾಗ್ಯೂ ಕೆಲ ಕಾರ್ಪೋರೇಟ್‌...

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ...

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ...

ಒಳಮೀಸಲಾತಿ : ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?

ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇಕಡ 17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಶನಿವಾರ ಸಂಜೆ (ಡಿಸೆಂಬರ್ 6) ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಗೋವಾ ನೈಟ್ ಕ್ಲಬ್‌ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು

ಉತ್ತರ ಗೋವಾದ ನೈಟ್‌ ಕ್ಲಬ್‌ವೊಂದರಲ್ಲಿ ಶನಿವಾರ (ಡಿಸೆಂಬರ್ 6) ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಸಿಬ್ಬಂದಿಯಾಗಿದ್ದು,...

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ' ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು...

‘ನಕಲಿ ಬ್ಯಾಂಕ್ ಗ್ಯಾರಂಟಿ’ ಪ್ರಕರಣ : ರಿಲಯನ್ಸ್ ಪವರ್, ಇತರ ಸಂಸ್ಥೆಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ರಿಲಯನ್ಸ್ ಪವರ್ ಕಂಪನಿಯು ಭಾರತೀಯ ಸೌರಶಕ್ತಿ ನಿಗಮಕ್ಕೆ (ಎಸ್‌ಇಸಿಐ) ಟೆಂಡರ್ ಪಡೆಯಲು ಸಲ್ಲಿಸಿದ 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್‌ನ...

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ. ಈ ಕುರಿತು...

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...