Homeಚಳವಳಿ'ರೈತ ರಾಜಕೀಯಕ್ಕೆ ಮಣ್ಣಿನ ಮಗನ ಬೆಂಬಲವಿರಲಿ' - ದೇವನೂರು ಮಹಾದೇವ

‘ರೈತ ರಾಜಕೀಯಕ್ಕೆ ಮಣ್ಣಿನ ಮಗನ ಬೆಂಬಲವಿರಲಿ’ – ದೇವನೂರು ಮಹಾದೇವ

- Advertisement -
(ಚುನಾವಣಾ ಪ್ರಚಾರ ಭಾಷಣ ಅಂದರೇನೆ ರೇಜಿಗೆ ಹುಟ್ಟಿಸುತ್ತೆ. ಆರೋಪ – ಪ್ರತ್ಯಾರೋಪ, ಹಾರಾಟ- ಚೀರಾಟ ಮಾಮೂಲು. ಚುನಾವಣಾ ಪ್ರಚಾರದಲ್ಲಿ ಪ್ರಬುದ್ಧ – ಸಮತೋಲಿತ ಭಾಷೆ, ಭಾವ ಹೇಗೆ ಸಾಧ್ಯ ಎಂದು ವಕಾಲತ್ತು ವಹಿಸುವವರೇ ಹೆಚ್ಚು. ಸ್ವರಾಜ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷೀಯ ಮಂಡಳಿ ಸದಸ್ಯರಾಗಿರುವ ದೇವನೂರು ಮಹಾದೇವ ಅವರು ತಮ್ಮ ಪಕ್ಷದ ಮೇಲುಕೋಟೆ ಕ್ಷೇತ್ರದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರ ಪರವಾಗಿ ಮಾಡಿದ ಚುಟುಕಾದ ಚುನಾವಣಾ ಭಾಷಣ ಇಲ್ಲಿದೆ. ಎದುರಾಳಿ ಪಕ್ಷದವರಿಗೂ ವಿನಂತಿ ಮಾಡಬಲ್ಲಂತಹ ನೈತಿಕತೆ ಬಹುಶಃ ದೇವನೂರು ಅಂಥವರಿಗೆ ಮಾತ್ರ ಸಾಧ್ಯ.)
ಈಗ ಒಂದು ಸುದ್ದಿ ಹರಿದಾಡುತ್ತಿದೆ- ದರ್ಶನ್ ಅಮೆರಿಕಕ್ಕೆ ಹೋಗಿ ಬಿಡುತ್ತಾರೆ ಎಂಬುದೇ ಆ ಸುದ್ದಿ. ಇಂಥ ಸುದ್ದಿ ಕಳೆದ ಚುನಾವಣೆಯಲ್ಲಿ ಪುಟ್ಟಣ್ಣಯ್ಯನವರ ಬಗೆಗೂ ಇತ್ತು. ಪುಟ್ಟಣ್ಣಯ್ಯನವರ ಜೀವದ ತುಡಿತ ಗೊತ್ತಿರುವವರು ಇಂಥ ಮಾತಾಡಲಾರರು. ಪುಟ್ಟಣ್ಣಯ್ಯ ಜತೆ ಪ್ರವಾಸ ಮಾಡಿದ್ದೇನೆ. ಪುಟ್ಟಣ್ಣಯ್ಯ ಎಲ್ಲಿಗೆ ಹೋಗಲಿ, ಅವರು ನೆನಪಿಸಿಕೊಳ್ಳುತ್ತಿದ್ದುದು ಏನು ಗೊತ್ತೆ? ಪಾಂಡವಪುರದ ಬೋಂಡ, ಪಕೋಡ ಹಾಗೂ ಮದ್ದೂರು ಜೋಪಡಿ ಹೋಟೆಲ್ ದೋಸೆ. ಪಾಂಡವಪುರದ ಥರದ ಬೋಂಡವನ್ನು ಎಲ್ಲೂ ಮಾಡಲ್ಲ ಬಿಡಿ ಅಂತಿದ್ದರು. ಆಮೇಲೆ ನಮ್ಮ ರಾಣಿ ಮಾಡೋ ಇಡ್ಲಿ ಕೈಮ ಅಮೆರಿಕದಲ್ಲೂ ಮಾಡಲ್ಲ ಅಂತಿದ್ದರು. ಇಡ್ಲೀನ ಅಮೆರಿಕದಲ್ಲಿ ಮಾಡ್ತಾರ? ಅಷ್ಟೊಂದು ಮುಗ್ಧ ಕೂಡ ಅವರು. ಅವರು ಅಮೆರಿಕದಲ್ಲಿ ಮೂರು ತಿಂಗಳು ಇರಬೇಕಾಗಿ ಬಂದಾಗ ಅವರ ಮನಸ್ಸಲ್ಲಿ ಇದ್ದುದು ಒಂದೇ- ಕುಡಿಯುವ ನೀರಿನ ಸಮಸ್ಯೆ. ಅಮೆರಿಕದಲ್ಲಿ ಸಾವಿರಾರು ಕಿಲೋಮೀಟರ್ ನಾಲೆ ಮಾಡಿ ಕುಡಿಯುವ ನೀರು ತಂದು ಕೊಡುವುದಾದರೆ ನಮ್ಮಲ್ಲಿ ಏನಾಗಿದೆ? ಇದು ಅವರ ಚಿಂತೆಯಾಗಿತ್ತು. ದುದ್ದ ಹೋಬಳಿಗೆ ನೀರು ತರುವುದು ಹೇಗೆ? ಅದಕ್ಕಾಗಿ ಪುಟ್ಟಣ್ಣಯ್ಯ ತಪಸ್ಸು ಮಾಡುತ್ತಿದ್ದರು. ನನ್ನಿಂದಲೂ ಕೆಲವರಿಗೆ ಹೇಳಿಸಿದ್ದರು. ಇಂಥ ಮನಸ್ಥಿತಿಯ ಪುಟ್ಟಣ್ಣಯ್ಯನವರ ಮಗ ದರ್ಶನ್ ಅಮೆರಿಕ ಬಿಟ್ಟುಬಂದು, ಅಪ್ಪನ ಹೆಸರನ್ನು ಉಳಿಸಲು, ಅಪ್ಪನ ಕೆಲಸ ಕಾರ್ಯಗಳನ್ನು ಮುಂದುವರಿಸಲು ಪಣ ತೊಟ್ಟಿದ್ದಾರೆ. ದರ್ಶನ್ ನಿರ್ಧಾರದ ಗಟ್ಟಿತನ ನೋಡಿಯೆ ಸ್ವರಾಜ್ ಇಂಡಿಯಾ ಪಕ್ಷವು ಅವರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದೆ. ದರ್ಶನ್‍ಗೆ ತಮ್ಮ ಆಶೀರ್ವಾದ ಬೇಕು.
ಈಗ ಕಾಂಗ್ರೆಸ್ ದರ್ಶನ್‍ಗೆ ಬೆಂಬಲಿಸಿದೆ, ಜೆಡಿಎಸ್ ನೇರ ಪ್ರತಿಸ್ಪರ್ಧಿಯಾಗಿದೆ. ಆದರೂ ನಮಗೆ ಸನ್ಮಾನ್ಯ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರ ನೈತಿಕ ಬೆಂಬಲವೂ ಬೇಕು. ಯಾಕೆಂದರೆ ದೇವೇಗೌಡರು ರಾಜಕಾರಣದಲ್ಲಿ ಭೀಷ್ಮ ಇದ್ದಂತೆ. ಅವರು ಎದುರು ಪಾರ್ಟಿಯಲ್ಲಿ ಇರಬಹುದು. ರಾಜಕಾರಣದಲ್ಲಿ ಭಿನ್ನಾಭಿಪ್ರಾಯಗಳೂ ಇರಬಹುದು. ಪ್ರಧಾನಿಯಾಗಿದ್ದ ಆ ಕಾಲಾವಧಿಯಲ್ಲಿ ನಾನು ಅವರ ಬಹಿರಂಗ ಬೆಂಬಲಿಗನಾಗಿದ್ದೆ. ಅದು ಅವರಿಗೂ ಗೊತ್ತು. ಹಾಗೇ ಕಾವೇರಿ ನದಿ ನೀರಿನ ವಿವಾದದಲ್ಲಿ ಅವರ ಪಕ್ಷಾತೀತ ನಡೆಯನ್ನು ಮೆಚ್ಚಿ ಬರೆದಿದ್ದೆ. ಭಿನ್ನಾಭಿಪ್ರಾಯಗಳ ನಡುವೆ ಇಂಥವೂ ಇರುತ್ತದೆ. ರಾಜಕಾರಣದ ಭೀಷ್ಮರಾದ ಹೆಚ್.ಡಿ.ದೇವೇಗೌಡರ ಆಶೀರ್ವಾದ ಈ ಬಾಲಕ ದರ್ಶನ್ ಮೇಲೂ ಇರಲಿ ಎಂದು ವಿನಂತಿಸುವೆ.
ಇಂದು ದೇಶದ ರಾಜಕಾರಣ ಕೆಟ್ಟಿದೆ. ಎಷ್ಟು ಕೆಟ್ಟಿದೆ ಅಂದರೆ ಕೆ.ಆರ್.ಎಸ್ ಡ್ಯಾಂಗೆ ಡೈನಮೆಟ್ ಇಟ್ಟರೂ ಸರಿಯೇ- ಎಲ್ಲರೂ ಕೊಚ್ಚಿಕೊಂಡು ಹೋದರೂ ಸರಿಯೇ- ನಾನು ನನ್ನ ಬಂಧುಬಳಗ ಬದುಕಬೇಕು, ಈ ರೀತಿ ಇದೆ ಇಂದಿನ ರಾಜಕಾರಣ. ಸಾರ್ವಜನಿಕ ಸಂಪತ್ತು ಸಮುದಾಯಕ್ಕೆ ಸೇರಬೇಕು. ಆದರೆ ಅದರ ಲೂಟಿ ಮಾಡಲು ದರೋಡೆಕೋರರು ರಾಜಕಾರಣದಲ್ಲಿ ಹೆಚ್ಚಾಗಿ ಪ್ರವೇಶಿಸುತ್ತಿದ್ದಾರೆ. ಇದು ಎಲ್ಲೆಲ್ಲು ಇದೆ. ಈ ದರೋಡೆ ರಾಜಕಾರಣವನ್ನು ಮತದಾರ ತಡೆಗಟ್ಟಬೇಕು. ತಡೆಗಟ್ಟದಿದ್ದರೆ ಉಳಿಗಾಲವಿಲ್ಲ.
ಈಗ ಜನಬಲ ಮತ್ತು ಹಣಬಲದ ನಡುವೆ ಸ್ಪರ್ಧೆ ನಡೆಯುತ್ತಿದೆ. ಹಣವು ಮದದಿಂದ ಜನರನ್ನು ಜಾನುವಾರುಗಳು ಎಂಬಂತೆ ಭಾವಿಸಿ ಕೊಂಡುಕೊಳ್ಳಬಹುದು ಅಂದುಕೊಂಡಿದೆ. ಹಣದ ಮದ ಮುರಿಯಬೇಕು. ಹಣದ ಗರ್ವಭಂಗವಾಗಬೇಕು. ಇದಾದಾಗಲೇ ಜನಸಾಮಾನ್ಯರು ಉಸಿರಾಡಲು ಸಾಧ್ಯ. ಅದಕ್ಕಾಗಿ ಮತದಾರರು ದರ್ಶನ್‍ರನ್ನು ಗೆಲ್ಲಿಸಬೇಕು, ಕೈ ಹಿಡಿದು ನಡೆಸಬೇಕು. ಇದು ನನ್ನ ಪ್ರಾರ್ಥನೆ.
ಕೊನೆಯದಾಗಿ ಇನ್ನೊಂದು ಮನವಿ: ದರ್ಶನ್‍ಗೆ ಪ್ರಚಾರವನ್ನು ಹೇಗೆ, ಎಲ್ಲಿಂದ ಮಾಡಬೇಕು? ನೆನಪಿಡಿ- ಸುಳ್ಳು ಹಬ್ಬಿಸುತ್ತಾರೆ. ನೆನಪಿಡಿ- ಒಡಕು ಉಂಟುಮಾಡುತ್ತಾರೆ. ಇಂಥಲ್ಲಿ ಹೇಗೆ ಪ್ರಚಾರ? ಎಲ್ಲಿದ್ದೀರೊ ಅಲ್ಲೆ ಪ್ರಚಾರ ಮಾಡಬೇಕು. ನಂನಮ್ಮ ಮನೆಯಿಂದಲೇ ಆರಂಭಿಸಬೇಕು. ನಂನಮ್ಮ ಬೀದಿಯಲ್ಲೇ ಪ್ರಚಾರ ಆಗಬೇಕು. ಎಲ್ಲಿದ್ದೀವೋ ಅಲ್ಲೇ ಪ್ರಚಾರ. ಈ ರೀತಿ ಪ್ರಚಾರವನ್ನು ಮೇಲುಕೋಟೆ ಕ್ಷೇತ್ರದ ಯುವಕರು ಕೈಗೊಂಡರೆ ಇದೇ ರಾಜ್ಯದ ಚುನಾವಣಾ ರೀತಿರಿವಾಜಿಗೆ ಒಂದು ಮಾದರಿಯಾಗಿ ನಾಡಿಗೆ ಕೊಡುಗೆ ಕೊಟ್ಟಂತಾಗುತ್ತದೆ. ದರ್ಶನ್ ಗೆಲುವಿನ ಜೊತೆಗೆ ಈ ಮಾದರಿಯನ್ನೂ ಹುಟ್ಟುಹಾಕಿ ಎಂದು ಮೇಲುಕೋಟೆ ಕ್ಷೇತ್ರದ ನಮ್ಮ ಯುವಕರಲ್ಲಿ ವಿನಂತಿಸುವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...