Homeಚಳವಳಿ'ರೈತ ರಾಜಕೀಯಕ್ಕೆ ಮಣ್ಣಿನ ಮಗನ ಬೆಂಬಲವಿರಲಿ' - ದೇವನೂರು ಮಹಾದೇವ

‘ರೈತ ರಾಜಕೀಯಕ್ಕೆ ಮಣ್ಣಿನ ಮಗನ ಬೆಂಬಲವಿರಲಿ’ – ದೇವನೂರು ಮಹಾದೇವ

- Advertisement -
(ಚುನಾವಣಾ ಪ್ರಚಾರ ಭಾಷಣ ಅಂದರೇನೆ ರೇಜಿಗೆ ಹುಟ್ಟಿಸುತ್ತೆ. ಆರೋಪ – ಪ್ರತ್ಯಾರೋಪ, ಹಾರಾಟ- ಚೀರಾಟ ಮಾಮೂಲು. ಚುನಾವಣಾ ಪ್ರಚಾರದಲ್ಲಿ ಪ್ರಬುದ್ಧ – ಸಮತೋಲಿತ ಭಾಷೆ, ಭಾವ ಹೇಗೆ ಸಾಧ್ಯ ಎಂದು ವಕಾಲತ್ತು ವಹಿಸುವವರೇ ಹೆಚ್ಚು. ಸ್ವರಾಜ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷೀಯ ಮಂಡಳಿ ಸದಸ್ಯರಾಗಿರುವ ದೇವನೂರು ಮಹಾದೇವ ಅವರು ತಮ್ಮ ಪಕ್ಷದ ಮೇಲುಕೋಟೆ ಕ್ಷೇತ್ರದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರ ಪರವಾಗಿ ಮಾಡಿದ ಚುಟುಕಾದ ಚುನಾವಣಾ ಭಾಷಣ ಇಲ್ಲಿದೆ. ಎದುರಾಳಿ ಪಕ್ಷದವರಿಗೂ ವಿನಂತಿ ಮಾಡಬಲ್ಲಂತಹ ನೈತಿಕತೆ ಬಹುಶಃ ದೇವನೂರು ಅಂಥವರಿಗೆ ಮಾತ್ರ ಸಾಧ್ಯ.)
ಈಗ ಒಂದು ಸುದ್ದಿ ಹರಿದಾಡುತ್ತಿದೆ- ದರ್ಶನ್ ಅಮೆರಿಕಕ್ಕೆ ಹೋಗಿ ಬಿಡುತ್ತಾರೆ ಎಂಬುದೇ ಆ ಸುದ್ದಿ. ಇಂಥ ಸುದ್ದಿ ಕಳೆದ ಚುನಾವಣೆಯಲ್ಲಿ ಪುಟ್ಟಣ್ಣಯ್ಯನವರ ಬಗೆಗೂ ಇತ್ತು. ಪುಟ್ಟಣ್ಣಯ್ಯನವರ ಜೀವದ ತುಡಿತ ಗೊತ್ತಿರುವವರು ಇಂಥ ಮಾತಾಡಲಾರರು. ಪುಟ್ಟಣ್ಣಯ್ಯ ಜತೆ ಪ್ರವಾಸ ಮಾಡಿದ್ದೇನೆ. ಪುಟ್ಟಣ್ಣಯ್ಯ ಎಲ್ಲಿಗೆ ಹೋಗಲಿ, ಅವರು ನೆನಪಿಸಿಕೊಳ್ಳುತ್ತಿದ್ದುದು ಏನು ಗೊತ್ತೆ? ಪಾಂಡವಪುರದ ಬೋಂಡ, ಪಕೋಡ ಹಾಗೂ ಮದ್ದೂರು ಜೋಪಡಿ ಹೋಟೆಲ್ ದೋಸೆ. ಪಾಂಡವಪುರದ ಥರದ ಬೋಂಡವನ್ನು ಎಲ್ಲೂ ಮಾಡಲ್ಲ ಬಿಡಿ ಅಂತಿದ್ದರು. ಆಮೇಲೆ ನಮ್ಮ ರಾಣಿ ಮಾಡೋ ಇಡ್ಲಿ ಕೈಮ ಅಮೆರಿಕದಲ್ಲೂ ಮಾಡಲ್ಲ ಅಂತಿದ್ದರು. ಇಡ್ಲೀನ ಅಮೆರಿಕದಲ್ಲಿ ಮಾಡ್ತಾರ? ಅಷ್ಟೊಂದು ಮುಗ್ಧ ಕೂಡ ಅವರು. ಅವರು ಅಮೆರಿಕದಲ್ಲಿ ಮೂರು ತಿಂಗಳು ಇರಬೇಕಾಗಿ ಬಂದಾಗ ಅವರ ಮನಸ್ಸಲ್ಲಿ ಇದ್ದುದು ಒಂದೇ- ಕುಡಿಯುವ ನೀರಿನ ಸಮಸ್ಯೆ. ಅಮೆರಿಕದಲ್ಲಿ ಸಾವಿರಾರು ಕಿಲೋಮೀಟರ್ ನಾಲೆ ಮಾಡಿ ಕುಡಿಯುವ ನೀರು ತಂದು ಕೊಡುವುದಾದರೆ ನಮ್ಮಲ್ಲಿ ಏನಾಗಿದೆ? ಇದು ಅವರ ಚಿಂತೆಯಾಗಿತ್ತು. ದುದ್ದ ಹೋಬಳಿಗೆ ನೀರು ತರುವುದು ಹೇಗೆ? ಅದಕ್ಕಾಗಿ ಪುಟ್ಟಣ್ಣಯ್ಯ ತಪಸ್ಸು ಮಾಡುತ್ತಿದ್ದರು. ನನ್ನಿಂದಲೂ ಕೆಲವರಿಗೆ ಹೇಳಿಸಿದ್ದರು. ಇಂಥ ಮನಸ್ಥಿತಿಯ ಪುಟ್ಟಣ್ಣಯ್ಯನವರ ಮಗ ದರ್ಶನ್ ಅಮೆರಿಕ ಬಿಟ್ಟುಬಂದು, ಅಪ್ಪನ ಹೆಸರನ್ನು ಉಳಿಸಲು, ಅಪ್ಪನ ಕೆಲಸ ಕಾರ್ಯಗಳನ್ನು ಮುಂದುವರಿಸಲು ಪಣ ತೊಟ್ಟಿದ್ದಾರೆ. ದರ್ಶನ್ ನಿರ್ಧಾರದ ಗಟ್ಟಿತನ ನೋಡಿಯೆ ಸ್ವರಾಜ್ ಇಂಡಿಯಾ ಪಕ್ಷವು ಅವರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದೆ. ದರ್ಶನ್‍ಗೆ ತಮ್ಮ ಆಶೀರ್ವಾದ ಬೇಕು.
ಈಗ ಕಾಂಗ್ರೆಸ್ ದರ್ಶನ್‍ಗೆ ಬೆಂಬಲಿಸಿದೆ, ಜೆಡಿಎಸ್ ನೇರ ಪ್ರತಿಸ್ಪರ್ಧಿಯಾಗಿದೆ. ಆದರೂ ನಮಗೆ ಸನ್ಮಾನ್ಯ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರ ನೈತಿಕ ಬೆಂಬಲವೂ ಬೇಕು. ಯಾಕೆಂದರೆ ದೇವೇಗೌಡರು ರಾಜಕಾರಣದಲ್ಲಿ ಭೀಷ್ಮ ಇದ್ದಂತೆ. ಅವರು ಎದುರು ಪಾರ್ಟಿಯಲ್ಲಿ ಇರಬಹುದು. ರಾಜಕಾರಣದಲ್ಲಿ ಭಿನ್ನಾಭಿಪ್ರಾಯಗಳೂ ಇರಬಹುದು. ಪ್ರಧಾನಿಯಾಗಿದ್ದ ಆ ಕಾಲಾವಧಿಯಲ್ಲಿ ನಾನು ಅವರ ಬಹಿರಂಗ ಬೆಂಬಲಿಗನಾಗಿದ್ದೆ. ಅದು ಅವರಿಗೂ ಗೊತ್ತು. ಹಾಗೇ ಕಾವೇರಿ ನದಿ ನೀರಿನ ವಿವಾದದಲ್ಲಿ ಅವರ ಪಕ್ಷಾತೀತ ನಡೆಯನ್ನು ಮೆಚ್ಚಿ ಬರೆದಿದ್ದೆ. ಭಿನ್ನಾಭಿಪ್ರಾಯಗಳ ನಡುವೆ ಇಂಥವೂ ಇರುತ್ತದೆ. ರಾಜಕಾರಣದ ಭೀಷ್ಮರಾದ ಹೆಚ್.ಡಿ.ದೇವೇಗೌಡರ ಆಶೀರ್ವಾದ ಈ ಬಾಲಕ ದರ್ಶನ್ ಮೇಲೂ ಇರಲಿ ಎಂದು ವಿನಂತಿಸುವೆ.
ಇಂದು ದೇಶದ ರಾಜಕಾರಣ ಕೆಟ್ಟಿದೆ. ಎಷ್ಟು ಕೆಟ್ಟಿದೆ ಅಂದರೆ ಕೆ.ಆರ್.ಎಸ್ ಡ್ಯಾಂಗೆ ಡೈನಮೆಟ್ ಇಟ್ಟರೂ ಸರಿಯೇ- ಎಲ್ಲರೂ ಕೊಚ್ಚಿಕೊಂಡು ಹೋದರೂ ಸರಿಯೇ- ನಾನು ನನ್ನ ಬಂಧುಬಳಗ ಬದುಕಬೇಕು, ಈ ರೀತಿ ಇದೆ ಇಂದಿನ ರಾಜಕಾರಣ. ಸಾರ್ವಜನಿಕ ಸಂಪತ್ತು ಸಮುದಾಯಕ್ಕೆ ಸೇರಬೇಕು. ಆದರೆ ಅದರ ಲೂಟಿ ಮಾಡಲು ದರೋಡೆಕೋರರು ರಾಜಕಾರಣದಲ್ಲಿ ಹೆಚ್ಚಾಗಿ ಪ್ರವೇಶಿಸುತ್ತಿದ್ದಾರೆ. ಇದು ಎಲ್ಲೆಲ್ಲು ಇದೆ. ಈ ದರೋಡೆ ರಾಜಕಾರಣವನ್ನು ಮತದಾರ ತಡೆಗಟ್ಟಬೇಕು. ತಡೆಗಟ್ಟದಿದ್ದರೆ ಉಳಿಗಾಲವಿಲ್ಲ.
ಈಗ ಜನಬಲ ಮತ್ತು ಹಣಬಲದ ನಡುವೆ ಸ್ಪರ್ಧೆ ನಡೆಯುತ್ತಿದೆ. ಹಣವು ಮದದಿಂದ ಜನರನ್ನು ಜಾನುವಾರುಗಳು ಎಂಬಂತೆ ಭಾವಿಸಿ ಕೊಂಡುಕೊಳ್ಳಬಹುದು ಅಂದುಕೊಂಡಿದೆ. ಹಣದ ಮದ ಮುರಿಯಬೇಕು. ಹಣದ ಗರ್ವಭಂಗವಾಗಬೇಕು. ಇದಾದಾಗಲೇ ಜನಸಾಮಾನ್ಯರು ಉಸಿರಾಡಲು ಸಾಧ್ಯ. ಅದಕ್ಕಾಗಿ ಮತದಾರರು ದರ್ಶನ್‍ರನ್ನು ಗೆಲ್ಲಿಸಬೇಕು, ಕೈ ಹಿಡಿದು ನಡೆಸಬೇಕು. ಇದು ನನ್ನ ಪ್ರಾರ್ಥನೆ.
ಕೊನೆಯದಾಗಿ ಇನ್ನೊಂದು ಮನವಿ: ದರ್ಶನ್‍ಗೆ ಪ್ರಚಾರವನ್ನು ಹೇಗೆ, ಎಲ್ಲಿಂದ ಮಾಡಬೇಕು? ನೆನಪಿಡಿ- ಸುಳ್ಳು ಹಬ್ಬಿಸುತ್ತಾರೆ. ನೆನಪಿಡಿ- ಒಡಕು ಉಂಟುಮಾಡುತ್ತಾರೆ. ಇಂಥಲ್ಲಿ ಹೇಗೆ ಪ್ರಚಾರ? ಎಲ್ಲಿದ್ದೀರೊ ಅಲ್ಲೆ ಪ್ರಚಾರ ಮಾಡಬೇಕು. ನಂನಮ್ಮ ಮನೆಯಿಂದಲೇ ಆರಂಭಿಸಬೇಕು. ನಂನಮ್ಮ ಬೀದಿಯಲ್ಲೇ ಪ್ರಚಾರ ಆಗಬೇಕು. ಎಲ್ಲಿದ್ದೀವೋ ಅಲ್ಲೇ ಪ್ರಚಾರ. ಈ ರೀತಿ ಪ್ರಚಾರವನ್ನು ಮೇಲುಕೋಟೆ ಕ್ಷೇತ್ರದ ಯುವಕರು ಕೈಗೊಂಡರೆ ಇದೇ ರಾಜ್ಯದ ಚುನಾವಣಾ ರೀತಿರಿವಾಜಿಗೆ ಒಂದು ಮಾದರಿಯಾಗಿ ನಾಡಿಗೆ ಕೊಡುಗೆ ಕೊಟ್ಟಂತಾಗುತ್ತದೆ. ದರ್ಶನ್ ಗೆಲುವಿನ ಜೊತೆಗೆ ಈ ಮಾದರಿಯನ್ನೂ ಹುಟ್ಟುಹಾಕಿ ಎಂದು ಮೇಲುಕೋಟೆ ಕ್ಷೇತ್ರದ ನಮ್ಮ ಯುವಕರಲ್ಲಿ ವಿನಂತಿಸುವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...