Homeಚಳವಳಿ'ರೈತ ರಾಜಕೀಯಕ್ಕೆ ಮಣ್ಣಿನ ಮಗನ ಬೆಂಬಲವಿರಲಿ' - ದೇವನೂರು ಮಹಾದೇವ

‘ರೈತ ರಾಜಕೀಯಕ್ಕೆ ಮಣ್ಣಿನ ಮಗನ ಬೆಂಬಲವಿರಲಿ’ – ದೇವನೂರು ಮಹಾದೇವ

- Advertisement -
(ಚುನಾವಣಾ ಪ್ರಚಾರ ಭಾಷಣ ಅಂದರೇನೆ ರೇಜಿಗೆ ಹುಟ್ಟಿಸುತ್ತೆ. ಆರೋಪ – ಪ್ರತ್ಯಾರೋಪ, ಹಾರಾಟ- ಚೀರಾಟ ಮಾಮೂಲು. ಚುನಾವಣಾ ಪ್ರಚಾರದಲ್ಲಿ ಪ್ರಬುದ್ಧ – ಸಮತೋಲಿತ ಭಾಷೆ, ಭಾವ ಹೇಗೆ ಸಾಧ್ಯ ಎಂದು ವಕಾಲತ್ತು ವಹಿಸುವವರೇ ಹೆಚ್ಚು. ಸ್ವರಾಜ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷೀಯ ಮಂಡಳಿ ಸದಸ್ಯರಾಗಿರುವ ದೇವನೂರು ಮಹಾದೇವ ಅವರು ತಮ್ಮ ಪಕ್ಷದ ಮೇಲುಕೋಟೆ ಕ್ಷೇತ್ರದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರ ಪರವಾಗಿ ಮಾಡಿದ ಚುಟುಕಾದ ಚುನಾವಣಾ ಭಾಷಣ ಇಲ್ಲಿದೆ. ಎದುರಾಳಿ ಪಕ್ಷದವರಿಗೂ ವಿನಂತಿ ಮಾಡಬಲ್ಲಂತಹ ನೈತಿಕತೆ ಬಹುಶಃ ದೇವನೂರು ಅಂಥವರಿಗೆ ಮಾತ್ರ ಸಾಧ್ಯ.)
ಈಗ ಒಂದು ಸುದ್ದಿ ಹರಿದಾಡುತ್ತಿದೆ- ದರ್ಶನ್ ಅಮೆರಿಕಕ್ಕೆ ಹೋಗಿ ಬಿಡುತ್ತಾರೆ ಎಂಬುದೇ ಆ ಸುದ್ದಿ. ಇಂಥ ಸುದ್ದಿ ಕಳೆದ ಚುನಾವಣೆಯಲ್ಲಿ ಪುಟ್ಟಣ್ಣಯ್ಯನವರ ಬಗೆಗೂ ಇತ್ತು. ಪುಟ್ಟಣ್ಣಯ್ಯನವರ ಜೀವದ ತುಡಿತ ಗೊತ್ತಿರುವವರು ಇಂಥ ಮಾತಾಡಲಾರರು. ಪುಟ್ಟಣ್ಣಯ್ಯ ಜತೆ ಪ್ರವಾಸ ಮಾಡಿದ್ದೇನೆ. ಪುಟ್ಟಣ್ಣಯ್ಯ ಎಲ್ಲಿಗೆ ಹೋಗಲಿ, ಅವರು ನೆನಪಿಸಿಕೊಳ್ಳುತ್ತಿದ್ದುದು ಏನು ಗೊತ್ತೆ? ಪಾಂಡವಪುರದ ಬೋಂಡ, ಪಕೋಡ ಹಾಗೂ ಮದ್ದೂರು ಜೋಪಡಿ ಹೋಟೆಲ್ ದೋಸೆ. ಪಾಂಡವಪುರದ ಥರದ ಬೋಂಡವನ್ನು ಎಲ್ಲೂ ಮಾಡಲ್ಲ ಬಿಡಿ ಅಂತಿದ್ದರು. ಆಮೇಲೆ ನಮ್ಮ ರಾಣಿ ಮಾಡೋ ಇಡ್ಲಿ ಕೈಮ ಅಮೆರಿಕದಲ್ಲೂ ಮಾಡಲ್ಲ ಅಂತಿದ್ದರು. ಇಡ್ಲೀನ ಅಮೆರಿಕದಲ್ಲಿ ಮಾಡ್ತಾರ? ಅಷ್ಟೊಂದು ಮುಗ್ಧ ಕೂಡ ಅವರು. ಅವರು ಅಮೆರಿಕದಲ್ಲಿ ಮೂರು ತಿಂಗಳು ಇರಬೇಕಾಗಿ ಬಂದಾಗ ಅವರ ಮನಸ್ಸಲ್ಲಿ ಇದ್ದುದು ಒಂದೇ- ಕುಡಿಯುವ ನೀರಿನ ಸಮಸ್ಯೆ. ಅಮೆರಿಕದಲ್ಲಿ ಸಾವಿರಾರು ಕಿಲೋಮೀಟರ್ ನಾಲೆ ಮಾಡಿ ಕುಡಿಯುವ ನೀರು ತಂದು ಕೊಡುವುದಾದರೆ ನಮ್ಮಲ್ಲಿ ಏನಾಗಿದೆ? ಇದು ಅವರ ಚಿಂತೆಯಾಗಿತ್ತು. ದುದ್ದ ಹೋಬಳಿಗೆ ನೀರು ತರುವುದು ಹೇಗೆ? ಅದಕ್ಕಾಗಿ ಪುಟ್ಟಣ್ಣಯ್ಯ ತಪಸ್ಸು ಮಾಡುತ್ತಿದ್ದರು. ನನ್ನಿಂದಲೂ ಕೆಲವರಿಗೆ ಹೇಳಿಸಿದ್ದರು. ಇಂಥ ಮನಸ್ಥಿತಿಯ ಪುಟ್ಟಣ್ಣಯ್ಯನವರ ಮಗ ದರ್ಶನ್ ಅಮೆರಿಕ ಬಿಟ್ಟುಬಂದು, ಅಪ್ಪನ ಹೆಸರನ್ನು ಉಳಿಸಲು, ಅಪ್ಪನ ಕೆಲಸ ಕಾರ್ಯಗಳನ್ನು ಮುಂದುವರಿಸಲು ಪಣ ತೊಟ್ಟಿದ್ದಾರೆ. ದರ್ಶನ್ ನಿರ್ಧಾರದ ಗಟ್ಟಿತನ ನೋಡಿಯೆ ಸ್ವರಾಜ್ ಇಂಡಿಯಾ ಪಕ್ಷವು ಅವರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದೆ. ದರ್ಶನ್‍ಗೆ ತಮ್ಮ ಆಶೀರ್ವಾದ ಬೇಕು.
ಈಗ ಕಾಂಗ್ರೆಸ್ ದರ್ಶನ್‍ಗೆ ಬೆಂಬಲಿಸಿದೆ, ಜೆಡಿಎಸ್ ನೇರ ಪ್ರತಿಸ್ಪರ್ಧಿಯಾಗಿದೆ. ಆದರೂ ನಮಗೆ ಸನ್ಮಾನ್ಯ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರ ನೈತಿಕ ಬೆಂಬಲವೂ ಬೇಕು. ಯಾಕೆಂದರೆ ದೇವೇಗೌಡರು ರಾಜಕಾರಣದಲ್ಲಿ ಭೀಷ್ಮ ಇದ್ದಂತೆ. ಅವರು ಎದುರು ಪಾರ್ಟಿಯಲ್ಲಿ ಇರಬಹುದು. ರಾಜಕಾರಣದಲ್ಲಿ ಭಿನ್ನಾಭಿಪ್ರಾಯಗಳೂ ಇರಬಹುದು. ಪ್ರಧಾನಿಯಾಗಿದ್ದ ಆ ಕಾಲಾವಧಿಯಲ್ಲಿ ನಾನು ಅವರ ಬಹಿರಂಗ ಬೆಂಬಲಿಗನಾಗಿದ್ದೆ. ಅದು ಅವರಿಗೂ ಗೊತ್ತು. ಹಾಗೇ ಕಾವೇರಿ ನದಿ ನೀರಿನ ವಿವಾದದಲ್ಲಿ ಅವರ ಪಕ್ಷಾತೀತ ನಡೆಯನ್ನು ಮೆಚ್ಚಿ ಬರೆದಿದ್ದೆ. ಭಿನ್ನಾಭಿಪ್ರಾಯಗಳ ನಡುವೆ ಇಂಥವೂ ಇರುತ್ತದೆ. ರಾಜಕಾರಣದ ಭೀಷ್ಮರಾದ ಹೆಚ್.ಡಿ.ದೇವೇಗೌಡರ ಆಶೀರ್ವಾದ ಈ ಬಾಲಕ ದರ್ಶನ್ ಮೇಲೂ ಇರಲಿ ಎಂದು ವಿನಂತಿಸುವೆ.
ಇಂದು ದೇಶದ ರಾಜಕಾರಣ ಕೆಟ್ಟಿದೆ. ಎಷ್ಟು ಕೆಟ್ಟಿದೆ ಅಂದರೆ ಕೆ.ಆರ್.ಎಸ್ ಡ್ಯಾಂಗೆ ಡೈನಮೆಟ್ ಇಟ್ಟರೂ ಸರಿಯೇ- ಎಲ್ಲರೂ ಕೊಚ್ಚಿಕೊಂಡು ಹೋದರೂ ಸರಿಯೇ- ನಾನು ನನ್ನ ಬಂಧುಬಳಗ ಬದುಕಬೇಕು, ಈ ರೀತಿ ಇದೆ ಇಂದಿನ ರಾಜಕಾರಣ. ಸಾರ್ವಜನಿಕ ಸಂಪತ್ತು ಸಮುದಾಯಕ್ಕೆ ಸೇರಬೇಕು. ಆದರೆ ಅದರ ಲೂಟಿ ಮಾಡಲು ದರೋಡೆಕೋರರು ರಾಜಕಾರಣದಲ್ಲಿ ಹೆಚ್ಚಾಗಿ ಪ್ರವೇಶಿಸುತ್ತಿದ್ದಾರೆ. ಇದು ಎಲ್ಲೆಲ್ಲು ಇದೆ. ಈ ದರೋಡೆ ರಾಜಕಾರಣವನ್ನು ಮತದಾರ ತಡೆಗಟ್ಟಬೇಕು. ತಡೆಗಟ್ಟದಿದ್ದರೆ ಉಳಿಗಾಲವಿಲ್ಲ.
ಈಗ ಜನಬಲ ಮತ್ತು ಹಣಬಲದ ನಡುವೆ ಸ್ಪರ್ಧೆ ನಡೆಯುತ್ತಿದೆ. ಹಣವು ಮದದಿಂದ ಜನರನ್ನು ಜಾನುವಾರುಗಳು ಎಂಬಂತೆ ಭಾವಿಸಿ ಕೊಂಡುಕೊಳ್ಳಬಹುದು ಅಂದುಕೊಂಡಿದೆ. ಹಣದ ಮದ ಮುರಿಯಬೇಕು. ಹಣದ ಗರ್ವಭಂಗವಾಗಬೇಕು. ಇದಾದಾಗಲೇ ಜನಸಾಮಾನ್ಯರು ಉಸಿರಾಡಲು ಸಾಧ್ಯ. ಅದಕ್ಕಾಗಿ ಮತದಾರರು ದರ್ಶನ್‍ರನ್ನು ಗೆಲ್ಲಿಸಬೇಕು, ಕೈ ಹಿಡಿದು ನಡೆಸಬೇಕು. ಇದು ನನ್ನ ಪ್ರಾರ್ಥನೆ.
ಕೊನೆಯದಾಗಿ ಇನ್ನೊಂದು ಮನವಿ: ದರ್ಶನ್‍ಗೆ ಪ್ರಚಾರವನ್ನು ಹೇಗೆ, ಎಲ್ಲಿಂದ ಮಾಡಬೇಕು? ನೆನಪಿಡಿ- ಸುಳ್ಳು ಹಬ್ಬಿಸುತ್ತಾರೆ. ನೆನಪಿಡಿ- ಒಡಕು ಉಂಟುಮಾಡುತ್ತಾರೆ. ಇಂಥಲ್ಲಿ ಹೇಗೆ ಪ್ರಚಾರ? ಎಲ್ಲಿದ್ದೀರೊ ಅಲ್ಲೆ ಪ್ರಚಾರ ಮಾಡಬೇಕು. ನಂನಮ್ಮ ಮನೆಯಿಂದಲೇ ಆರಂಭಿಸಬೇಕು. ನಂನಮ್ಮ ಬೀದಿಯಲ್ಲೇ ಪ್ರಚಾರ ಆಗಬೇಕು. ಎಲ್ಲಿದ್ದೀವೋ ಅಲ್ಲೇ ಪ್ರಚಾರ. ಈ ರೀತಿ ಪ್ರಚಾರವನ್ನು ಮೇಲುಕೋಟೆ ಕ್ಷೇತ್ರದ ಯುವಕರು ಕೈಗೊಂಡರೆ ಇದೇ ರಾಜ್ಯದ ಚುನಾವಣಾ ರೀತಿರಿವಾಜಿಗೆ ಒಂದು ಮಾದರಿಯಾಗಿ ನಾಡಿಗೆ ಕೊಡುಗೆ ಕೊಟ್ಟಂತಾಗುತ್ತದೆ. ದರ್ಶನ್ ಗೆಲುವಿನ ಜೊತೆಗೆ ಈ ಮಾದರಿಯನ್ನೂ ಹುಟ್ಟುಹಾಕಿ ಎಂದು ಮೇಲುಕೋಟೆ ಕ್ಷೇತ್ರದ ನಮ್ಮ ಯುವಕರಲ್ಲಿ ವಿನಂತಿಸುವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...