Homeಚಳವಳಿ'ರೈತ ರಾಜಕೀಯಕ್ಕೆ ಮಣ್ಣಿನ ಮಗನ ಬೆಂಬಲವಿರಲಿ' - ದೇವನೂರು ಮಹಾದೇವ

‘ರೈತ ರಾಜಕೀಯಕ್ಕೆ ಮಣ್ಣಿನ ಮಗನ ಬೆಂಬಲವಿರಲಿ’ – ದೇವನೂರು ಮಹಾದೇವ

- Advertisement -
(ಚುನಾವಣಾ ಪ್ರಚಾರ ಭಾಷಣ ಅಂದರೇನೆ ರೇಜಿಗೆ ಹುಟ್ಟಿಸುತ್ತೆ. ಆರೋಪ – ಪ್ರತ್ಯಾರೋಪ, ಹಾರಾಟ- ಚೀರಾಟ ಮಾಮೂಲು. ಚುನಾವಣಾ ಪ್ರಚಾರದಲ್ಲಿ ಪ್ರಬುದ್ಧ – ಸಮತೋಲಿತ ಭಾಷೆ, ಭಾವ ಹೇಗೆ ಸಾಧ್ಯ ಎಂದು ವಕಾಲತ್ತು ವಹಿಸುವವರೇ ಹೆಚ್ಚು. ಸ್ವರಾಜ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷೀಯ ಮಂಡಳಿ ಸದಸ್ಯರಾಗಿರುವ ದೇವನೂರು ಮಹಾದೇವ ಅವರು ತಮ್ಮ ಪಕ್ಷದ ಮೇಲುಕೋಟೆ ಕ್ಷೇತ್ರದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರ ಪರವಾಗಿ ಮಾಡಿದ ಚುಟುಕಾದ ಚುನಾವಣಾ ಭಾಷಣ ಇಲ್ಲಿದೆ. ಎದುರಾಳಿ ಪಕ್ಷದವರಿಗೂ ವಿನಂತಿ ಮಾಡಬಲ್ಲಂತಹ ನೈತಿಕತೆ ಬಹುಶಃ ದೇವನೂರು ಅಂಥವರಿಗೆ ಮಾತ್ರ ಸಾಧ್ಯ.)
ಈಗ ಒಂದು ಸುದ್ದಿ ಹರಿದಾಡುತ್ತಿದೆ- ದರ್ಶನ್ ಅಮೆರಿಕಕ್ಕೆ ಹೋಗಿ ಬಿಡುತ್ತಾರೆ ಎಂಬುದೇ ಆ ಸುದ್ದಿ. ಇಂಥ ಸುದ್ದಿ ಕಳೆದ ಚುನಾವಣೆಯಲ್ಲಿ ಪುಟ್ಟಣ್ಣಯ್ಯನವರ ಬಗೆಗೂ ಇತ್ತು. ಪುಟ್ಟಣ್ಣಯ್ಯನವರ ಜೀವದ ತುಡಿತ ಗೊತ್ತಿರುವವರು ಇಂಥ ಮಾತಾಡಲಾರರು. ಪುಟ್ಟಣ್ಣಯ್ಯ ಜತೆ ಪ್ರವಾಸ ಮಾಡಿದ್ದೇನೆ. ಪುಟ್ಟಣ್ಣಯ್ಯ ಎಲ್ಲಿಗೆ ಹೋಗಲಿ, ಅವರು ನೆನಪಿಸಿಕೊಳ್ಳುತ್ತಿದ್ದುದು ಏನು ಗೊತ್ತೆ? ಪಾಂಡವಪುರದ ಬೋಂಡ, ಪಕೋಡ ಹಾಗೂ ಮದ್ದೂರು ಜೋಪಡಿ ಹೋಟೆಲ್ ದೋಸೆ. ಪಾಂಡವಪುರದ ಥರದ ಬೋಂಡವನ್ನು ಎಲ್ಲೂ ಮಾಡಲ್ಲ ಬಿಡಿ ಅಂತಿದ್ದರು. ಆಮೇಲೆ ನಮ್ಮ ರಾಣಿ ಮಾಡೋ ಇಡ್ಲಿ ಕೈಮ ಅಮೆರಿಕದಲ್ಲೂ ಮಾಡಲ್ಲ ಅಂತಿದ್ದರು. ಇಡ್ಲೀನ ಅಮೆರಿಕದಲ್ಲಿ ಮಾಡ್ತಾರ? ಅಷ್ಟೊಂದು ಮುಗ್ಧ ಕೂಡ ಅವರು. ಅವರು ಅಮೆರಿಕದಲ್ಲಿ ಮೂರು ತಿಂಗಳು ಇರಬೇಕಾಗಿ ಬಂದಾಗ ಅವರ ಮನಸ್ಸಲ್ಲಿ ಇದ್ದುದು ಒಂದೇ- ಕುಡಿಯುವ ನೀರಿನ ಸಮಸ್ಯೆ. ಅಮೆರಿಕದಲ್ಲಿ ಸಾವಿರಾರು ಕಿಲೋಮೀಟರ್ ನಾಲೆ ಮಾಡಿ ಕುಡಿಯುವ ನೀರು ತಂದು ಕೊಡುವುದಾದರೆ ನಮ್ಮಲ್ಲಿ ಏನಾಗಿದೆ? ಇದು ಅವರ ಚಿಂತೆಯಾಗಿತ್ತು. ದುದ್ದ ಹೋಬಳಿಗೆ ನೀರು ತರುವುದು ಹೇಗೆ? ಅದಕ್ಕಾಗಿ ಪುಟ್ಟಣ್ಣಯ್ಯ ತಪಸ್ಸು ಮಾಡುತ್ತಿದ್ದರು. ನನ್ನಿಂದಲೂ ಕೆಲವರಿಗೆ ಹೇಳಿಸಿದ್ದರು. ಇಂಥ ಮನಸ್ಥಿತಿಯ ಪುಟ್ಟಣ್ಣಯ್ಯನವರ ಮಗ ದರ್ಶನ್ ಅಮೆರಿಕ ಬಿಟ್ಟುಬಂದು, ಅಪ್ಪನ ಹೆಸರನ್ನು ಉಳಿಸಲು, ಅಪ್ಪನ ಕೆಲಸ ಕಾರ್ಯಗಳನ್ನು ಮುಂದುವರಿಸಲು ಪಣ ತೊಟ್ಟಿದ್ದಾರೆ. ದರ್ಶನ್ ನಿರ್ಧಾರದ ಗಟ್ಟಿತನ ನೋಡಿಯೆ ಸ್ವರಾಜ್ ಇಂಡಿಯಾ ಪಕ್ಷವು ಅವರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದೆ. ದರ್ಶನ್‍ಗೆ ತಮ್ಮ ಆಶೀರ್ವಾದ ಬೇಕು.
ಈಗ ಕಾಂಗ್ರೆಸ್ ದರ್ಶನ್‍ಗೆ ಬೆಂಬಲಿಸಿದೆ, ಜೆಡಿಎಸ್ ನೇರ ಪ್ರತಿಸ್ಪರ್ಧಿಯಾಗಿದೆ. ಆದರೂ ನಮಗೆ ಸನ್ಮಾನ್ಯ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರ ನೈತಿಕ ಬೆಂಬಲವೂ ಬೇಕು. ಯಾಕೆಂದರೆ ದೇವೇಗೌಡರು ರಾಜಕಾರಣದಲ್ಲಿ ಭೀಷ್ಮ ಇದ್ದಂತೆ. ಅವರು ಎದುರು ಪಾರ್ಟಿಯಲ್ಲಿ ಇರಬಹುದು. ರಾಜಕಾರಣದಲ್ಲಿ ಭಿನ್ನಾಭಿಪ್ರಾಯಗಳೂ ಇರಬಹುದು. ಪ್ರಧಾನಿಯಾಗಿದ್ದ ಆ ಕಾಲಾವಧಿಯಲ್ಲಿ ನಾನು ಅವರ ಬಹಿರಂಗ ಬೆಂಬಲಿಗನಾಗಿದ್ದೆ. ಅದು ಅವರಿಗೂ ಗೊತ್ತು. ಹಾಗೇ ಕಾವೇರಿ ನದಿ ನೀರಿನ ವಿವಾದದಲ್ಲಿ ಅವರ ಪಕ್ಷಾತೀತ ನಡೆಯನ್ನು ಮೆಚ್ಚಿ ಬರೆದಿದ್ದೆ. ಭಿನ್ನಾಭಿಪ್ರಾಯಗಳ ನಡುವೆ ಇಂಥವೂ ಇರುತ್ತದೆ. ರಾಜಕಾರಣದ ಭೀಷ್ಮರಾದ ಹೆಚ್.ಡಿ.ದೇವೇಗೌಡರ ಆಶೀರ್ವಾದ ಈ ಬಾಲಕ ದರ್ಶನ್ ಮೇಲೂ ಇರಲಿ ಎಂದು ವಿನಂತಿಸುವೆ.
ಇಂದು ದೇಶದ ರಾಜಕಾರಣ ಕೆಟ್ಟಿದೆ. ಎಷ್ಟು ಕೆಟ್ಟಿದೆ ಅಂದರೆ ಕೆ.ಆರ್.ಎಸ್ ಡ್ಯಾಂಗೆ ಡೈನಮೆಟ್ ಇಟ್ಟರೂ ಸರಿಯೇ- ಎಲ್ಲರೂ ಕೊಚ್ಚಿಕೊಂಡು ಹೋದರೂ ಸರಿಯೇ- ನಾನು ನನ್ನ ಬಂಧುಬಳಗ ಬದುಕಬೇಕು, ಈ ರೀತಿ ಇದೆ ಇಂದಿನ ರಾಜಕಾರಣ. ಸಾರ್ವಜನಿಕ ಸಂಪತ್ತು ಸಮುದಾಯಕ್ಕೆ ಸೇರಬೇಕು. ಆದರೆ ಅದರ ಲೂಟಿ ಮಾಡಲು ದರೋಡೆಕೋರರು ರಾಜಕಾರಣದಲ್ಲಿ ಹೆಚ್ಚಾಗಿ ಪ್ರವೇಶಿಸುತ್ತಿದ್ದಾರೆ. ಇದು ಎಲ್ಲೆಲ್ಲು ಇದೆ. ಈ ದರೋಡೆ ರಾಜಕಾರಣವನ್ನು ಮತದಾರ ತಡೆಗಟ್ಟಬೇಕು. ತಡೆಗಟ್ಟದಿದ್ದರೆ ಉಳಿಗಾಲವಿಲ್ಲ.
ಈಗ ಜನಬಲ ಮತ್ತು ಹಣಬಲದ ನಡುವೆ ಸ್ಪರ್ಧೆ ನಡೆಯುತ್ತಿದೆ. ಹಣವು ಮದದಿಂದ ಜನರನ್ನು ಜಾನುವಾರುಗಳು ಎಂಬಂತೆ ಭಾವಿಸಿ ಕೊಂಡುಕೊಳ್ಳಬಹುದು ಅಂದುಕೊಂಡಿದೆ. ಹಣದ ಮದ ಮುರಿಯಬೇಕು. ಹಣದ ಗರ್ವಭಂಗವಾಗಬೇಕು. ಇದಾದಾಗಲೇ ಜನಸಾಮಾನ್ಯರು ಉಸಿರಾಡಲು ಸಾಧ್ಯ. ಅದಕ್ಕಾಗಿ ಮತದಾರರು ದರ್ಶನ್‍ರನ್ನು ಗೆಲ್ಲಿಸಬೇಕು, ಕೈ ಹಿಡಿದು ನಡೆಸಬೇಕು. ಇದು ನನ್ನ ಪ್ರಾರ್ಥನೆ.
ಕೊನೆಯದಾಗಿ ಇನ್ನೊಂದು ಮನವಿ: ದರ್ಶನ್‍ಗೆ ಪ್ರಚಾರವನ್ನು ಹೇಗೆ, ಎಲ್ಲಿಂದ ಮಾಡಬೇಕು? ನೆನಪಿಡಿ- ಸುಳ್ಳು ಹಬ್ಬಿಸುತ್ತಾರೆ. ನೆನಪಿಡಿ- ಒಡಕು ಉಂಟುಮಾಡುತ್ತಾರೆ. ಇಂಥಲ್ಲಿ ಹೇಗೆ ಪ್ರಚಾರ? ಎಲ್ಲಿದ್ದೀರೊ ಅಲ್ಲೆ ಪ್ರಚಾರ ಮಾಡಬೇಕು. ನಂನಮ್ಮ ಮನೆಯಿಂದಲೇ ಆರಂಭಿಸಬೇಕು. ನಂನಮ್ಮ ಬೀದಿಯಲ್ಲೇ ಪ್ರಚಾರ ಆಗಬೇಕು. ಎಲ್ಲಿದ್ದೀವೋ ಅಲ್ಲೇ ಪ್ರಚಾರ. ಈ ರೀತಿ ಪ್ರಚಾರವನ್ನು ಮೇಲುಕೋಟೆ ಕ್ಷೇತ್ರದ ಯುವಕರು ಕೈಗೊಂಡರೆ ಇದೇ ರಾಜ್ಯದ ಚುನಾವಣಾ ರೀತಿರಿವಾಜಿಗೆ ಒಂದು ಮಾದರಿಯಾಗಿ ನಾಡಿಗೆ ಕೊಡುಗೆ ಕೊಟ್ಟಂತಾಗುತ್ತದೆ. ದರ್ಶನ್ ಗೆಲುವಿನ ಜೊತೆಗೆ ಈ ಮಾದರಿಯನ್ನೂ ಹುಟ್ಟುಹಾಕಿ ಎಂದು ಮೇಲುಕೋಟೆ ಕ್ಷೇತ್ರದ ನಮ್ಮ ಯುವಕರಲ್ಲಿ ವಿನಂತಿಸುವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...