Homeಚಳವಳಿ'ರೈತ ರಾಜಕೀಯಕ್ಕೆ ಮಣ್ಣಿನ ಮಗನ ಬೆಂಬಲವಿರಲಿ' - ದೇವನೂರು ಮಹಾದೇವ

‘ರೈತ ರಾಜಕೀಯಕ್ಕೆ ಮಣ್ಣಿನ ಮಗನ ಬೆಂಬಲವಿರಲಿ’ – ದೇವನೂರು ಮಹಾದೇವ

- Advertisement -
(ಚುನಾವಣಾ ಪ್ರಚಾರ ಭಾಷಣ ಅಂದರೇನೆ ರೇಜಿಗೆ ಹುಟ್ಟಿಸುತ್ತೆ. ಆರೋಪ – ಪ್ರತ್ಯಾರೋಪ, ಹಾರಾಟ- ಚೀರಾಟ ಮಾಮೂಲು. ಚುನಾವಣಾ ಪ್ರಚಾರದಲ್ಲಿ ಪ್ರಬುದ್ಧ – ಸಮತೋಲಿತ ಭಾಷೆ, ಭಾವ ಹೇಗೆ ಸಾಧ್ಯ ಎಂದು ವಕಾಲತ್ತು ವಹಿಸುವವರೇ ಹೆಚ್ಚು. ಸ್ವರಾಜ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷೀಯ ಮಂಡಳಿ ಸದಸ್ಯರಾಗಿರುವ ದೇವನೂರು ಮಹಾದೇವ ಅವರು ತಮ್ಮ ಪಕ್ಷದ ಮೇಲುಕೋಟೆ ಕ್ಷೇತ್ರದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರ ಪರವಾಗಿ ಮಾಡಿದ ಚುಟುಕಾದ ಚುನಾವಣಾ ಭಾಷಣ ಇಲ್ಲಿದೆ. ಎದುರಾಳಿ ಪಕ್ಷದವರಿಗೂ ವಿನಂತಿ ಮಾಡಬಲ್ಲಂತಹ ನೈತಿಕತೆ ಬಹುಶಃ ದೇವನೂರು ಅಂಥವರಿಗೆ ಮಾತ್ರ ಸಾಧ್ಯ.)
ಈಗ ಒಂದು ಸುದ್ದಿ ಹರಿದಾಡುತ್ತಿದೆ- ದರ್ಶನ್ ಅಮೆರಿಕಕ್ಕೆ ಹೋಗಿ ಬಿಡುತ್ತಾರೆ ಎಂಬುದೇ ಆ ಸುದ್ದಿ. ಇಂಥ ಸುದ್ದಿ ಕಳೆದ ಚುನಾವಣೆಯಲ್ಲಿ ಪುಟ್ಟಣ್ಣಯ್ಯನವರ ಬಗೆಗೂ ಇತ್ತು. ಪುಟ್ಟಣ್ಣಯ್ಯನವರ ಜೀವದ ತುಡಿತ ಗೊತ್ತಿರುವವರು ಇಂಥ ಮಾತಾಡಲಾರರು. ಪುಟ್ಟಣ್ಣಯ್ಯ ಜತೆ ಪ್ರವಾಸ ಮಾಡಿದ್ದೇನೆ. ಪುಟ್ಟಣ್ಣಯ್ಯ ಎಲ್ಲಿಗೆ ಹೋಗಲಿ, ಅವರು ನೆನಪಿಸಿಕೊಳ್ಳುತ್ತಿದ್ದುದು ಏನು ಗೊತ್ತೆ? ಪಾಂಡವಪುರದ ಬೋಂಡ, ಪಕೋಡ ಹಾಗೂ ಮದ್ದೂರು ಜೋಪಡಿ ಹೋಟೆಲ್ ದೋಸೆ. ಪಾಂಡವಪುರದ ಥರದ ಬೋಂಡವನ್ನು ಎಲ್ಲೂ ಮಾಡಲ್ಲ ಬಿಡಿ ಅಂತಿದ್ದರು. ಆಮೇಲೆ ನಮ್ಮ ರಾಣಿ ಮಾಡೋ ಇಡ್ಲಿ ಕೈಮ ಅಮೆರಿಕದಲ್ಲೂ ಮಾಡಲ್ಲ ಅಂತಿದ್ದರು. ಇಡ್ಲೀನ ಅಮೆರಿಕದಲ್ಲಿ ಮಾಡ್ತಾರ? ಅಷ್ಟೊಂದು ಮುಗ್ಧ ಕೂಡ ಅವರು. ಅವರು ಅಮೆರಿಕದಲ್ಲಿ ಮೂರು ತಿಂಗಳು ಇರಬೇಕಾಗಿ ಬಂದಾಗ ಅವರ ಮನಸ್ಸಲ್ಲಿ ಇದ್ದುದು ಒಂದೇ- ಕುಡಿಯುವ ನೀರಿನ ಸಮಸ್ಯೆ. ಅಮೆರಿಕದಲ್ಲಿ ಸಾವಿರಾರು ಕಿಲೋಮೀಟರ್ ನಾಲೆ ಮಾಡಿ ಕುಡಿಯುವ ನೀರು ತಂದು ಕೊಡುವುದಾದರೆ ನಮ್ಮಲ್ಲಿ ಏನಾಗಿದೆ? ಇದು ಅವರ ಚಿಂತೆಯಾಗಿತ್ತು. ದುದ್ದ ಹೋಬಳಿಗೆ ನೀರು ತರುವುದು ಹೇಗೆ? ಅದಕ್ಕಾಗಿ ಪುಟ್ಟಣ್ಣಯ್ಯ ತಪಸ್ಸು ಮಾಡುತ್ತಿದ್ದರು. ನನ್ನಿಂದಲೂ ಕೆಲವರಿಗೆ ಹೇಳಿಸಿದ್ದರು. ಇಂಥ ಮನಸ್ಥಿತಿಯ ಪುಟ್ಟಣ್ಣಯ್ಯನವರ ಮಗ ದರ್ಶನ್ ಅಮೆರಿಕ ಬಿಟ್ಟುಬಂದು, ಅಪ್ಪನ ಹೆಸರನ್ನು ಉಳಿಸಲು, ಅಪ್ಪನ ಕೆಲಸ ಕಾರ್ಯಗಳನ್ನು ಮುಂದುವರಿಸಲು ಪಣ ತೊಟ್ಟಿದ್ದಾರೆ. ದರ್ಶನ್ ನಿರ್ಧಾರದ ಗಟ್ಟಿತನ ನೋಡಿಯೆ ಸ್ವರಾಜ್ ಇಂಡಿಯಾ ಪಕ್ಷವು ಅವರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದೆ. ದರ್ಶನ್‍ಗೆ ತಮ್ಮ ಆಶೀರ್ವಾದ ಬೇಕು.
ಈಗ ಕಾಂಗ್ರೆಸ್ ದರ್ಶನ್‍ಗೆ ಬೆಂಬಲಿಸಿದೆ, ಜೆಡಿಎಸ್ ನೇರ ಪ್ರತಿಸ್ಪರ್ಧಿಯಾಗಿದೆ. ಆದರೂ ನಮಗೆ ಸನ್ಮಾನ್ಯ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರ ನೈತಿಕ ಬೆಂಬಲವೂ ಬೇಕು. ಯಾಕೆಂದರೆ ದೇವೇಗೌಡರು ರಾಜಕಾರಣದಲ್ಲಿ ಭೀಷ್ಮ ಇದ್ದಂತೆ. ಅವರು ಎದುರು ಪಾರ್ಟಿಯಲ್ಲಿ ಇರಬಹುದು. ರಾಜಕಾರಣದಲ್ಲಿ ಭಿನ್ನಾಭಿಪ್ರಾಯಗಳೂ ಇರಬಹುದು. ಪ್ರಧಾನಿಯಾಗಿದ್ದ ಆ ಕಾಲಾವಧಿಯಲ್ಲಿ ನಾನು ಅವರ ಬಹಿರಂಗ ಬೆಂಬಲಿಗನಾಗಿದ್ದೆ. ಅದು ಅವರಿಗೂ ಗೊತ್ತು. ಹಾಗೇ ಕಾವೇರಿ ನದಿ ನೀರಿನ ವಿವಾದದಲ್ಲಿ ಅವರ ಪಕ್ಷಾತೀತ ನಡೆಯನ್ನು ಮೆಚ್ಚಿ ಬರೆದಿದ್ದೆ. ಭಿನ್ನಾಭಿಪ್ರಾಯಗಳ ನಡುವೆ ಇಂಥವೂ ಇರುತ್ತದೆ. ರಾಜಕಾರಣದ ಭೀಷ್ಮರಾದ ಹೆಚ್.ಡಿ.ದೇವೇಗೌಡರ ಆಶೀರ್ವಾದ ಈ ಬಾಲಕ ದರ್ಶನ್ ಮೇಲೂ ಇರಲಿ ಎಂದು ವಿನಂತಿಸುವೆ.
ಇಂದು ದೇಶದ ರಾಜಕಾರಣ ಕೆಟ್ಟಿದೆ. ಎಷ್ಟು ಕೆಟ್ಟಿದೆ ಅಂದರೆ ಕೆ.ಆರ್.ಎಸ್ ಡ್ಯಾಂಗೆ ಡೈನಮೆಟ್ ಇಟ್ಟರೂ ಸರಿಯೇ- ಎಲ್ಲರೂ ಕೊಚ್ಚಿಕೊಂಡು ಹೋದರೂ ಸರಿಯೇ- ನಾನು ನನ್ನ ಬಂಧುಬಳಗ ಬದುಕಬೇಕು, ಈ ರೀತಿ ಇದೆ ಇಂದಿನ ರಾಜಕಾರಣ. ಸಾರ್ವಜನಿಕ ಸಂಪತ್ತು ಸಮುದಾಯಕ್ಕೆ ಸೇರಬೇಕು. ಆದರೆ ಅದರ ಲೂಟಿ ಮಾಡಲು ದರೋಡೆಕೋರರು ರಾಜಕಾರಣದಲ್ಲಿ ಹೆಚ್ಚಾಗಿ ಪ್ರವೇಶಿಸುತ್ತಿದ್ದಾರೆ. ಇದು ಎಲ್ಲೆಲ್ಲು ಇದೆ. ಈ ದರೋಡೆ ರಾಜಕಾರಣವನ್ನು ಮತದಾರ ತಡೆಗಟ್ಟಬೇಕು. ತಡೆಗಟ್ಟದಿದ್ದರೆ ಉಳಿಗಾಲವಿಲ್ಲ.
ಈಗ ಜನಬಲ ಮತ್ತು ಹಣಬಲದ ನಡುವೆ ಸ್ಪರ್ಧೆ ನಡೆಯುತ್ತಿದೆ. ಹಣವು ಮದದಿಂದ ಜನರನ್ನು ಜಾನುವಾರುಗಳು ಎಂಬಂತೆ ಭಾವಿಸಿ ಕೊಂಡುಕೊಳ್ಳಬಹುದು ಅಂದುಕೊಂಡಿದೆ. ಹಣದ ಮದ ಮುರಿಯಬೇಕು. ಹಣದ ಗರ್ವಭಂಗವಾಗಬೇಕು. ಇದಾದಾಗಲೇ ಜನಸಾಮಾನ್ಯರು ಉಸಿರಾಡಲು ಸಾಧ್ಯ. ಅದಕ್ಕಾಗಿ ಮತದಾರರು ದರ್ಶನ್‍ರನ್ನು ಗೆಲ್ಲಿಸಬೇಕು, ಕೈ ಹಿಡಿದು ನಡೆಸಬೇಕು. ಇದು ನನ್ನ ಪ್ರಾರ್ಥನೆ.
ಕೊನೆಯದಾಗಿ ಇನ್ನೊಂದು ಮನವಿ: ದರ್ಶನ್‍ಗೆ ಪ್ರಚಾರವನ್ನು ಹೇಗೆ, ಎಲ್ಲಿಂದ ಮಾಡಬೇಕು? ನೆನಪಿಡಿ- ಸುಳ್ಳು ಹಬ್ಬಿಸುತ್ತಾರೆ. ನೆನಪಿಡಿ- ಒಡಕು ಉಂಟುಮಾಡುತ್ತಾರೆ. ಇಂಥಲ್ಲಿ ಹೇಗೆ ಪ್ರಚಾರ? ಎಲ್ಲಿದ್ದೀರೊ ಅಲ್ಲೆ ಪ್ರಚಾರ ಮಾಡಬೇಕು. ನಂನಮ್ಮ ಮನೆಯಿಂದಲೇ ಆರಂಭಿಸಬೇಕು. ನಂನಮ್ಮ ಬೀದಿಯಲ್ಲೇ ಪ್ರಚಾರ ಆಗಬೇಕು. ಎಲ್ಲಿದ್ದೀವೋ ಅಲ್ಲೇ ಪ್ರಚಾರ. ಈ ರೀತಿ ಪ್ರಚಾರವನ್ನು ಮೇಲುಕೋಟೆ ಕ್ಷೇತ್ರದ ಯುವಕರು ಕೈಗೊಂಡರೆ ಇದೇ ರಾಜ್ಯದ ಚುನಾವಣಾ ರೀತಿರಿವಾಜಿಗೆ ಒಂದು ಮಾದರಿಯಾಗಿ ನಾಡಿಗೆ ಕೊಡುಗೆ ಕೊಟ್ಟಂತಾಗುತ್ತದೆ. ದರ್ಶನ್ ಗೆಲುವಿನ ಜೊತೆಗೆ ಈ ಮಾದರಿಯನ್ನೂ ಹುಟ್ಟುಹಾಕಿ ಎಂದು ಮೇಲುಕೋಟೆ ಕ್ಷೇತ್ರದ ನಮ್ಮ ಯುವಕರಲ್ಲಿ ವಿನಂತಿಸುವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...