Homeಅಂಕಣಗಳುಲೋಕಪಾಲ್‌ರನ್ನು ನೇಮಕ ಮಾಡದಿರುವುದು ಹೇಗೆ ?

ಲೋಕಪಾಲ್‌ರನ್ನು ನೇಮಕ ಮಾಡದಿರುವುದು ಹೇಗೆ ?

- Advertisement -
- Advertisement -

| ಕೆ.ಎನ್ ದಿನೇಶ್ |

ತನ್ನನ್ನು ತಾನು ಚೌಕಿದಾರ್ ಎಂದು ಕರೆದುಕೊಳ್ಳುವ ಮೋದಿಯ ಆಡಳಿತಾವಧಿಯಲ್ಲಿ ಅಲ್ಪಾವಧಿಯ ರಾಜಕೀಯ ಲಾಭಕ್ಕಾಗಿ ಸ್ವತಂತ್ರ ಮತ್ತು ವಿಶ್ವಾಸಾರ್ಹ ಲೋಕಪಾಲರನ್ನು ಬಲಿಕೊಡಲಾಗಿದೆ.

2014 ರ ಜನವರಿ 1 ರಲ್ಲಿಯೇ ಲೋಕಪಾಲ ಮತ್ತು ಲೋಕಾಯುಕ್ತ ಕಾಯ್ದೆಯು ಸಂಸತ್ತಿನಲ್ಲಿ ಪಾಸ್ ಆಗಿ ರಾಷ್ಟ್ರಪತಿಗಳ ಅಂಕಿತ ಪಡೆದುಕೊಂಡಿತು. ಸ್ವತಂತ್ರ ಅಧಿಕಾರವನ್ನು ಹೊಂದಿರುವ ಮತ್ತು ಶಕ್ತಿಯುತವಾದ ಭ್ರಷ್ಟಾಚಾರ ವಿರೋಧಿ ಆಂಬುಡ್ಸ್ಮನ್ ಸ್ಥಾಪನೆಗೆ ಒತ್ತಾಯಿಸಿ ಸಾರ್ವಜನಿಕರ ಬಲವಾದ ಒತ್ತಡದ ಪರಿಣಾಮವಾಗಿ ಈ ಕಾನೂನು ಜಾರಿಗೆ ತರಲಾಯಿತು. ಯಾವುದೇ ಭಯ ಮತ್ತು ಪಕ್ಷಪಾತವಿಲ್ಲದೇ ಉನ್ನತ ಮಟ್ಟದ ಸರ್ಕಾರಿ ಅಧಿಕಾರಿಗಳು ಭಾಗಿಯಾಗಿದ್ದ ದೊಡ್ಡ ಭ್ರಷ್ಟಾಚಾರ ಪ್ರಕರಣಗಳನ್ನು ತನಿಖೆಗೊಳಪಡಿಸುವ ಅಧಿಕಾರ ಇದಕ್ಕಿತ್ತು.

ಕೇಂದ್ರೀಯ ತನಿಖಾ ಸಂಸ್ಥೆಯು (ಸಿಬಿಐ) ನಂತಹ ಆಗಿನ ತನಿಖಾ ಸಂಸ್ಥೆಗಳು ಪಂಜರದ ಗಿಳಿಯಂತಾಗಿ, ಆಳುವ ಸರ್ಕಾರದ ಕೈ ಗೊಂಬೆಯಾಗಿ ಬಳಕೆಯಾಗುತ್ತಿದೆ ಎಂದು ಸಾರ್ವಜನಿಕರು ಅವುಗಳ ಮೇಲೆ ಸಂಪೂರ್ಣವಾಗಿ ನಂಬಿಕೆ ಕಳೆದುಕೊಂಡಿದ್ದು ಲೋಕಪಾಲ್ನ ಜಾರಿಗೆಯ ಬೇಡಿಕೆಗೆ ಕಾರಣವಾಗಿತ್ತು.  2014ರ ಸಾರ್ವತ್ರಿಕ ಚುನಾವಣೆಯಲ್ಲಿ ಭ್ರಷ್ಟಾಚಾರ-ವಿರೋಧಿ ಅಜೆಂಡಾದ ಮೂಲಕ ಅಧಿಕಾರಕ್ಕೆ ಏರಿದ ನಂತರ ಮೋದಿಯವರು, ಲೋಕಪಾಲ್‌ರನ್ನು ನೇಮಕ ಮಾಡುವ ಮೂಲಕ ಲೋಕ್‌ಪಾಲ್ ಸಂಸ್ಥೆಯ ವಿಶ್ವಾಸವನ್ನು ಉಳಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಾರೆ ಎಂದು ನಿರೀಕ್ಷಿಸಲಾಗಿತ್ತು

ಅದರೆ ಆಗಿದ್ದೇ ಬೇರೆ. ಮೋದಿ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಒಂದು ಶಕ್ತಿಶಾಲಿ ಭ್ರಷ್ಟಾಚಾರ ನಿಗ್ರಹ ಸಂಸ್ಥೆಯನ್ನು ರಚಿಸುವಲ್ಲಿ ಬರೀ ನಿರಾಸಕ್ತಿಯೇ ಕಂಡುಬಂದಿದೆ. ಅಧಿಕಾರಕ್ಕೆ ಬಂದು ಸುಮಾರು ಐದು ವರ್ಷಗಳ ತನಕ ಲೋಕಪಾಲ ನೇಮಕ ಮಾಡಲೇ ಇಲ್ಲ.   ಕೊನೆಗೆ 2019ರ ಸಾರ್ವತ್ರಿಕ ಚುನಾವಣೆಗಳಿಗೆ ಮೂರು ವಾರಗಳ ಮುಂಚೆ,  ಲೋಕಪಾಲ್‌ನ ಛೇರ್‌ಪರ್ಸನ್ ಮತ್ತು ಇತರೆ ಸದಸ್ಯರು ನೇಮಕವಾದರೂ ಸಹ ನೇಮಕಾತಿ ಪ್ರಕ್ರಿಯೆಯ ಎಲ್ಲಾ ವಿಧಾನಗಳು ಸಂಪೂರ್ಣ ರಾಜಿಕೋರತನದಿಂದ ಕೂಡಿದ್ದು ಸ್ಪಷ್ಟವಾಗಿ ಕಂಡುಬರುತ್ತಿದೆ.

ಮೊದಲನೇಯದಾಗಿ, ಲೋಕ್ ಪಾಲ್ ನ ಅಧ್ಯಕ್ಷ ಮತ್ತು ಸದಸ್ಯರ ಪದಕ್ಕಾಗಿ ಹೆಸರನ್ನು ಸೂಚಿಸುವ ಒಂದು ಆಯ್ಕೆ ಸಮಿತಿಯಲ್ಲಿ ಸರಕಾರದ ಪ್ರತಿನಿಧಿಗಳು ಮತ್ತು ಸರಕಾರ ನೇಮಿಸಿರುವವರೇ ಹೆಚ್ಚಿನ ಸಂಖ್ಯೆ ಮತ್ತು ಪ್ರಾಬಲ್ಯ ಹೊಂದಿದ್ದು.

ಈ ಆಯ್ಕೆ ಸಮಿತಿಯಲ್ಲಿ ಆಡಳಿತ ಪಕ್ಷದ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲದಂತೆ ನೋಡಿಕೊಳ್ಳುವುದು ಆ ಸಂಸ್ಥೆಯ ಸ್ವಾತಂತ್ರö್ಯ ಮತ್ತು ಸ್ವಾಯುತ್ತತೆಯನ್ನು ಖಾತರಿಪಡಿಸುವ ಪ್ರಮುಖ ತತ್ವವಾಗಿರುತ್ತದೆ.

ಹಾಗಾಗಿ ಲೋಕಪಾಲ್ ಆಕ್ಟ್, ಪ್ರಕಾರ ಪ್ರಧಾನಮಂತ್ರಿ,ಲೋಕಸಭೆಯ ಸ್ಪೀಕರ್, ಲೋಕಸಭೆಯ ವಿರೋಧ ಪಕ್ಷದನಾಯಕ, ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಅಥವಾ ಸಿಜೆಐನಿಂದ ನಾಮನಿರ್ದೇಶನಗೊಂಡ ಸವೋಚ್ಚ ನ್ಯಾಯಾಲಯದ ನ್ಯಾಯವಾದಿ ಮತ್ತು ಈ ನಾಲ್ಕು ಜನರೂಒಪ್ಪುವ ಒಬ್ಬ ನ್ಯಾಯಾಧೀಶರನ್ನು ಒಳಗೊಂಡ ಸಮತೋಲಿತ ಆಯ್ಕೆ ಸಮಿತಿ ಇರಬೇಕು.

2014ರ ಸಾರ್ವತ್ರಿಕ ಚುನಾವಣೆಯ ನಂತರ, ವಿರೋಧ ಪಕ್ಷದ ನಾಯಕರು ಎಂದು ಯಾರೂ ಇಲ್ಲ ಎನ್ನುವ ಕಾರಣಕ್ಕಾಗಿ ಆಯ್ಕೆ ಸಮಿತಿಯನ್ನು ಪೂರ್ಣಗೊಳಿಸಲಾಗಲಿಲ್ಲ. ಆದರೆ ಸಿಬಿಐ ನಿರ್ದೇಶಕರ ನೇಮಕಾತಿ ವಿಚಾರದಲ್ಲಿ ಇಂತಹ ಸಮಸ್ಯೆ ಎದುರಾದಾಗ ಮಾತ್ರ ನೇಮಕಾತಿ ವಿಧಾನಕ್ಕೆ ಸಂಸತ್ತಿನಲ್ಲಿ ತಿದ್ದುಪಡಿ ಮಾಡಿ ಆಯ್ಕೆ ಸಮಿತಿಯಲ್ಲಿ ವಿರೋಧ ಪಕ್ಷದ ನಾಯಕ ಇಲ್ಲದಿದ್ದ ಸಂದರ್ಭದಲ್ಲಿ ಆಡಳಿತ ಪಕ್ಷದ ನಂತರ ಹೆಚ್ಚಿನ ಸ್ಥಾನಗಳನ್ನು ಪಡೆದ ಪ್ರತಿಪಕ್ಷದ ನಾಯಕನ್ನು ಸೇರಿಸಿಕೂಳ್ಳಲಾಯಿತು. ಇದೇ ವಿಧಾನವನ್ನು ಲೋಕಪಾಲ್‌ಗೆ ಅನ್ವಯಿಸದೇ ಹೆಚ್ಚು ಕಾಲ ಏಕೆ ಬಿಟ್ಟರು ಎನ್ನುವುದು ಮೋದಿಗೆ ಆಸಕ್ತಿ ಇರಲಿಲ್ಲ ಎಂಬುದನಷ್ಟೇ ತೋರಿಸುತ್ತದೆ.

ಲೋಕಪಾಲ್ ನೇಮಕಾತಿಯ ಆಯ್ಕೆ ಸಮಿತಿಯ ಸಂಯೋಜನೆಯನ್ನು ತಿದ್ದುಪಡಿ ಮಾಡುವ ಬದಲು ಮೋದಿ ಸರಕಾರವು 10 ಪುಟಗಳ ತಿದ್ದುಪಡಿ ಮಸೂದೆಯನ್ನು ಮುಂದಿಟ್ಟು, ಲೋಕಪಾಲ ಕಾಯಿದೆ ಮೂಲಭುತವಾಗಿ ದುರ್ಬಲವಾಗುವಂತೆ ಮಾಡಿತು; ಇದರಿಂದ ಲೋಕಪಾಲ ಅನುಷ್ಠಾನಗೊಳಿಸುವಲ್ಲಿ ಸರಕರಕ್ಕಿಂದ್ದ ನಿರಾಸಕ್ತಿ ಇನ್ನೊಂದು ಸಲ ಸಾಬೀತಾಯಿತು. ಆದರೆ ಸರಕಾರ ಮುಂದಿಟ್ಟ ತಿದ್ದುಪಡಿಗಳ ಸ್ವರೂಪವೇ ವಿವಾದಾತ್ಮಕವಾಗಿದ್ದರಿಂದ  ಈ ಮಸೂದೆಯನ್ನು ಸಂಸದೀಯ ಸ್ಥಾಯೀ ಸಮಿತಿಗೆ ಕಳುಹಿಸಲಾಯಿತು. ಹಾಗೂ ಅಂದಿನಿಂದ ಅಲ್ಲಿಯೇ ಬಿದ್ದುಕೊಂಡಿತು.

ಲೋಕಪಾಲ್ ನೇಮಕಾತಿಗಾಗಿ ಸುಪ್ರೀಂ ಕೋಟನಲ್ಲಿ ಭ್ರಷ್ಟಾಚಾರ ವಿರೋಧಿ ಕಾರ್ಯಕರ್ತರಿಂದ ದಾವೆ ಹೊಡಲಾಯಿತು. ವಿರೋಧ ಪಕ್ಷದ ನಾಯಕ ಇಲ್ಲದಿರುವ ಒಂದು ಸಮಿತಿಯೇ ಲೋಕಪಾಲರನ್ನು ನೇಮಕ ಮಾಡಬಹುದು ಎಂದು ಎಪ್ರಿಲ್ 2017 ರಂದು ಸುಪ್ರಿಂ ಕೋರ್ಟ್ ತೀರ್ಪು ನೀಡಿತು ಅದರೂ ಲೋಕಪಾಲರನ್ನು ನೇಮಕ ಮಾಡಲಿಲ್ಲ. ಹಾಗೂ ನ್ಯಾಯಾಂಗ ನಿಂದನೆಯ ಪ್ರಕರಣವನ್ನು ದಾಖಲಿಸಿದ ನಂತರವೇ, ಅಧಿಕಾರಕ್ಕೆ ಬಂದು 45 ತಿಂಗಳ ನಂತರ ಆಯ್ಕೆ ಸಮಿತಿ ಪ್ರಧಾನಮಂತ್ರಿಯ ನೇತೃತ್ವದಲ್ಲಿ ಮೊದಲ ಬಾರಿ ಸಭೆ ಸೇರಿತು.

ಪ್ರಧಾನಮಂತ್ರಿ ಮತ್ತು ಲೋಕಸಭೆಯ ಸ್ಪೀಕರ್ರೊಂದಿಗೆ ಸಿಜೆಐಯಿಂದ ನೇಮಿಸಲಾದ  ಮೊಕುಲ್ ರೊಹಟ್ಗಿಯರವನ್ನು ಆಯ್ಕೆ ಸಮಿತಿಗೆ ಸೇರಿಸಿಕೊಳ್ಳಲಾಯಿತು. ಈ ಮುಕುಲ್ ರೋಹಟ್ಗಿ ಅವರು ಮೋದಿ ಆಡಳಿತದ ಮೊದಲ ಮೂರು ವರ್ಷಗಳಲ್ಲಿ ಅಟಾರ್ನಿ ಜನರಲ್ ಆಗಿ ಸೇವೆಸಲ್ಲಿಸಿದ್ದರು.

ನಂತರ ಲೋಕಸಭೆಯ ಪ್ರತಿ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರನ್ನು ಕೇವಲ ನಾಮಕಾವಸ್ಥೆಗೆ ಆಯ್ಕೆ ಸಮಿತಿಯ ಸಭೆಗಳಿಗೆ ಆಹ್ವಾನಿಸಲಾಯಿತಾದರೂ, ಅವರಿಗೆ ಯಾವುದೇ ನಿರ್ಣಯ ಮಾಡುವ ಅಧಿಕಾರ   ನೀಡಿದ್ದಿಲ್ಲ. ಎಲ್ಲರೂನಿರೀಕ್ಷಿಸಿದಂತೆ ಅವರು ಹಾಜರಾಗಲು ನಿರಾಕರಿಸಿದರು.

ಇದರ ಪರಿಣಾಮವಾಗಿ, ಆಡಳಿತ ಪಕ್ಷಕ್ಕೆ ನಿಷ್ಠೆಯನ್ನು ತೋರಿಸುವವರು ಮಾತ್ರ ಲೋಕಪಾಲದ ಆಯ್ಕೆ ಸಮಿತಿಯ ಸದಸ್ಯರಾಗಿರುವುದು ಹಾಗಾಗಿ, ಸರಕಾರ ಬಯಸುವ ಅಭ್ಯರ್ಥಿಗಳನ್ನೇ ಲೋಕಪಾಲ್ ಅಧ್ಯಕ್ಷ ಮತ್ತು ಸದಸ್ಯರ ಹುದ್ದೆಗೆ ನೇಮಕ ಮಾಡುವಂತಹ ಪಕ್ಷಪಾತ ಮೂಲದಲ್ಲೇ ಕಾಣಿಸಿಕೊಂಡಿದೆ. ಇದು ಈ ಕಾನೂನಿನ ಮೂಲ ಉದ್ದೇಶವನ್ನೇ ಸೋಲಿಸುತ್ತದೆ.

ಎರಡನೆಯಾದಾಗಿ ಲೋಕಪಾಲ್ ಆಯ್ಕೆ ಸಮಿತಿಯ ಕಾರ್ಯಗಳನ್ನು ಗೌಪ್ಯವಾಗಿ ಮಾಡಲಾಗುತ್ತಿದೆ. ಅದರೆ ಈ ಎಲ್ಲ ಪ್ರಕ್ರಿಯೆಗಳ ಸರಿಯಾಗಿ ಆಗುವಂತೆ ಸಾರ್ವಜನಿಕರ ಪರಿಶೀಲನೆಗೆ ಅವಕಾಶ ಮಾಡಿಕೊಡಬೇಕು ಹಾಗೂ ಎಲ್ಲಾ ಪ್ರಕ್ರಿಯೆಗಳು ಪಾರದರ್ಶಿಕವಾಗಿರಬೇಕು ಎಂದು ಲೋಕಪಾಲ್ ಕಾಯ್ದೆ 4(4)  ಹೇಳುತ್ತದೆ. “ಆಯ್ಕೆ ಸಮಿತಿಯು ಲೋಕಪಾಲದ ಅಧ್ಯಕ್ಷ ಮತ್ತು ಸದಸ್ಯರನ್ನು ಆಯ್ಕೆ ಮಾಡುವಾಗ ತನ್ನ ಪ್ರಕ್ರಿಯೆಯನ್ನು ಪಾರದರ್ಶಕವಾಗಿರುವಂತೆ ನಿಯಂತ್ರಿಸಬೇಕು”

ಆದರೆ ಈ ನಿಯಮದ ಸಂಪೂರ್ಣ ಉಲ್ಲಂಘನೆ ಮಾಡುತ್ತ, ಲೋಕಪಾಲ ಆಯ್ಕೆಯ ಪ್ರಕ್ರಿಯೆಯಲ್ಲಿ ಪಾರದರ್ಶಿಕತೆಯನ್ನು ತರಲೂ ಯಾವುದೇ ಕ್ರಮ ಕೈಗೊಂಡಿಲ್ಲ. ಸಂಭ್ಯಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಾರ್ವಜನಿಕಗೊಳಿಸಿಲ್ಲ. ಇನ್ನೊಂದು ಹೆಜ್ಜೆ ಮುಂದೆ ಹೋಗಿ, ಮಾಹಿತಿ ಹಕ್ಕು ಕಾಯಿದೆ ಅಡಿಯಲ್ಲಿ ಸಲ್ಲಿಸಿದ ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ, ಆಯ್ಕೆ ಸಮಿತಿ ಸಭೆಯ ನಡಾವಳಿಗಳನ್ನು  ರಹಸ್ಯ ಮಾಹಿತಿಯೆಂದು ಹೇಳಿಸಾರ್ವಜನಿಕರಿಗೆ ಬಹಿರಂಗಪಡಿಸಲು ನಿರಾಕರಿಸಲಾಯಿತು!ಪ್ರತಿಪಕ್ಷದ ನಾಯಕರನ್ನು ಒಳಗೊಳ್ಳದೇ ಇರುವಂತಹ ಸಂದರ್ಭದಲ್ಲಿ ಆಯ್ಕೆ ಸಮಿತಿಯು ಪಾರದರ್ಶಕತೆಯನ್ನು ತೋರದೇ ಇರುವುದು ಇನ್ನಷ್ಟು ಸಮಸ್ಯಾತ್ಮಕವಾಗಿದೆ.

ಹೊಸ ಲೋಕಪಾಲ್: ಪಿ.ಸಿ ಘೋಷ್

ದುರದೃಷ್ಟವಶಾತ್, ಆಯ್ಕೆ ಪ್ರಕ್ರಿಯೆಯನ್ನು ರಾಜಿ ಮಾಡಿಕೊಳ್ಳುವುದರ ಮೂಲಕ, ಲೋಕಪಾಲ್ ಸಂಸ್ಥೆಯು ಕಾರ್ಯಾಚರಣೆಯನ್ನು ಪ್ರಾರಂಭಿಸುವ ಮುಂಚೆಯೇ ಮೋದಿ ಸರಕಾರ ಅದನ್ನು ದುರ್ಬಲಗೊಳಿಸಿದೆ. ಈ ರೀತಿಯಲ್ಲಿ, ಭ್ರಷ್ಟಾಚಾರವನ್ನು ನಿಗ್ರಹಿಸುವ ಇತರೆ ಸಂಸ್ಥೆಗಳಿಗೆ ಅಂಟಿಕೊಂಡಿರುವ ರೋಗ ಈ ಸಂಸ್ಥೆಗೂ ಹುಟ್ಟಿನಿಂದಲೇ ಅಂಟಿಕೊಂಡಿದೆ. ಸ್ವಘೋಷಿತ ಚೌಕಿದಾರ್ ಅವರ ನೇತೃತ್ವದಲ್ಲಿ ಸ್ವತಂತ್ರ ಮತ್ತು ವಿಶ್ವಾಸಾರ್ಹ ಲೋಕಪಾಲನ್ನು ಅಲ್ಪಾವಧಿಯ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವುದು ದೊಡ್ಡ ದುರಂತವಾಗಿದೆ.

 ಕೃಪೆ: ದಿವೈರ್.ಇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...