Homeನ್ಯಾಯ ಪಥಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ : 2026ಕ್ಕೆ ದಕ್ಷಿಣ ಭಾರತ ರಾಜ್ಯಗಳಿಗೆ ಕಾದಿದೆಯಾ ಆಘಾತ?

ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ : 2026ಕ್ಕೆ ದಕ್ಷಿಣ ಭಾರತ ರಾಜ್ಯಗಳಿಗೆ ಕಾದಿದೆಯಾ ಆಘಾತ?

- Advertisement -
- Advertisement -

| ರಾಜಶೇಖರ್ ಅಕ್ಕಿ|

2026, ದಕ್ಷಿಣ ಭಾರತದ ರಾಜ್ಯಗಳ ಪಾಲಿಗೆ ಇದು ದೊಡ್ಡ ಆಘಾತ ತಂದೊಡ್ಡಲಿದೆಯಾ? ಲೋಕಸಭಾ ಕ್ಷೇತ್ರಗಳ ಪುನರ್‍ವಿಂಗಡಣೆಯ ರೀತಿರಿವಾಜುಗಳನ್ನು ಅಧ್ಯಯನ ಮಾಡಿದವರು 2026 ದಕ್ಷಿಣ ಭಾರತದ ರಾಜ್ಯಗಳಿಗೆ ತಂದೊಡ್ಡಲಿರುವ ಆಘಾತದ ಸುಳಿವು ನೀಡುತ್ತಿದ್ದಾರೆ.

ಹೌದು, 2026ಕ್ಕೆ ಲೋಕಸಭಾ ಕ್ಷೇತ್ರಗಳ ಪುನರ್‍ವಿಂಗಡಣೆ ನಡೆಯಲಿದೆ. ಹಾಗೇನಾದರು ಅದು ನಡೆದರೆ, ಜನಸಂಖ್ಯೆಯ ಆಧಾರದಲ್ಲಿ ದಕ್ಷಿಣ ರಾಜ್ಯಗಳು ಈಗಿರುವ ತಮ್ಮ ಸಂಸತ್ ಕ್ಷೇತ್ರಗಳ ಸ್ಥಾನಗಳಲ್ಲಿ ಕೆಲವನ್ನು ಕಳೆದುಕೊಂಡರೆ, ಉತ್ತರದ ರಾಜ್ಯಗಳು ಈಗಿರುವುದಕ್ಕಿಂತ ಹೆಚ್ಚು ಸ್ಥಾನಗಳನ್ನು ದಕ್ಕಿಸಿಕೊಳ್ಳಲಿವೆ. ಆಗ ಸಹಜವಾಗಿಯೇ ಸಂಸತ್ ಅಂಗಳದಲ್ಲಿ, ಅರ್ಥಾತ್ ರಾಷ್ಟ್ರ ರಾಜಕಾರಣದಲ್ಲಿ ದಕ್ಷಿಣ ರಾಜ್ಯಗಳ ದನಿ ಮತ್ತಷ್ಟು ಕ್ಷೀಣಿಸಲಿದೆ. ಈಗಲೇ ಹಿಂದಿ ಹಾರ್ಟ್‍ಲ್ಯಾಂಡ್ ರಾಜ್ಯಗಳೇ ದಿಲ್ಲಿ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿವೆ. ಅಂತದ್ದರಲ್ಲಿ ದಕ್ಷಿಣ ಭಾರತೀಯರ ಸಂಸದರ ಸಂಖ್ಯೆ ಮತ್ತಷ್ಟು ಕುಸಿದರೆ, ಮುಗಿದೇಹೋಯ್ತು! ಅಂದಹಾಗೆ, ಉತ್ತರ ಭಾರತದ ರಾಜ್ಯಗಳಿಗೆ ಹೋಲಿಸಿದರೆ ಜನಸಂಖ್ಯೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಿದ್ದಕ್ಕೆ, ಆ ಮೂಲಕ ಶಿಕ್ಷಣ, ಆರೋಗ್ಯ, ಉದ್ಯೋಗ, ಕೃಷಿ ಮೊದಲಾದ ಕ್ಷೇತ್ರಗಳಲ್ಲಿ ತುಲನಾತ್ಮಕವಾಗಿ ಅಭಿವೃದ್ಧಿ ಸಾಧಿಸಿರೋದಕ್ಕೆ ದಕ್ಷಿಣ ರಾಜ್ಯಗಳಿಗೆ ಸಿಗಲಿರುವ ಬಹುಮಾನ ಇದು!!

ಅದು ಹೇಗೆ? ಬನ್ನಿ ಈ ಕುರಿತು ತಿಳಿದುಕೊಳ್ಳೋಣ….

ಭಾರತ 1952ರಲ್ಲಿ ಮೊದಲ ಸಾರ್ವತ್ರಿಕ ಚುನಾವಣೆ ಎದುರಿಸಿದಾಗ 489 ಲೋಕಸಭೆ ಕ್ಷೇತ್ರಗಳಿದ್ದವು. ಪ್ರತಿ ಹತ್ತು ವರ್ಷಕ್ಕೊಮ್ಮೆ ಜನಗಣತಿ ಆಗುವುದು ಎಲ್ಲರಿಗೂ ಗೊತ್ತೇ ಇದೆ. ಅದೇ ಜನಗಣತಿಯ ಆಧಾರದ ಮೇಲೆ ಹತ್ತು ವರ್ಷಕ್ಕೊಮ್ಮೆ ಲೋಕಸಭೆ ಮತ್ತು ವಿಧಾನಸಭೆ ಕ್ಷೇತ್ರಗಳ ಮರುವಿಂಗಡಣೆ ಆಗುತ್ತಿತ್ತು. ಅದರನುಗುಣವಾಗಿ 1966ರಲ್ಲಿ (1961ರ ಜನಗಣತಿ ಪ್ರಕಾರ) 489ರಿಂದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 520ಕ್ಕೆ ಏರಿದ್ದವು. ನಂತರ 1971ರಲ್ಲಿ ಜನಗಣತಿಯ ತರುವಾಯ 1976ರಲ್ಲಿ ಅವು ಪ್ರಸ್ತುತ 543ಕ್ಕೆ ಏರಿದವು. ಆದರೆ ಆನಂತರ, ಅಂದರೆ 1976ರಲ್ಲೇ (ತುರ್ತು ಪರಿಸ್ಥಿತಿ ಜಾರಿಯಲ್ಲಿದ್ದಾಗ) ಕ್ಷೇತ್ರಗಳ ಪುನರ್‍ವಿಂಗಡನೆಗೆ ಮುಂದಿನ 25 ವರ್ಷಗಳವರೆಗೆ ಫ್ರೀಜ್ ಮಾಡಿ ಸಂವಿಧಾನಾತ್ಮಕ ಕಡಿವಾಣ ಹಾಕಲಾಯಿತು. ಆಗಲೇ ಜನಸಂಖ್ಯೆ ನಿಯಂತ್ರಣದ ಯೋಜನೆಗಳು ಆರಂಭವಾದವು. ಜನಗಣತಿಯ ಆಧಾರದ ಮೇಲೆ ಕ್ಷೇತ್ರವಿಂಗಡಣೆ ಮಾಡುತ್ತಾ ಹೋದಲ್ಲಿ ಜನಸಂಖ್ಯೆ ನಿಯಂತ್ರಣ ಸರಿಯಾಗಿ ಮಾಡದ (ಅಂದರೆ ಅಭಿವೃದ್ಧಿ ಆಗದೇ ಇರುವ) ರಾಜ್ಯಗಳಲ್ಲಿ ಲೋಕಸಭೆ ಕ್ಷೇತ್ರಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿ, ಜನಸಂಖ್ಯೆ ನಿಯಂತ್ರಿಸಿದ ರಾಜ್ಯಗಳಲ್ಲಿ ಕ್ಷೇತ್ರಗಳ ಸಂಖ್ಯೆ ಇಳಿಮುಖವಾಗುವ ಸಾಧ್ಯತೆ ಇತ್ತು. ಹಾಗಾಗಿ 1976ರಲ್ಲಿ ಮುಂದಿನ 25 ವರ್ಷಗಳ ತನಕ ಕ್ಷೇತ್ರ ಪುನರ್‍ವಿಂಗಡನೆ ಮಾಡಬಾರದು ಎಂದು ನಿರ್ಣಯಿಸಲಾಯಿತು.

ಆ 25 ವರ್ಷಗಳ ಅವಧಿ 2001ರಲ್ಲಿ ಮುಗಿದು, 2006ಕ್ಕೆ ಕ್ಷೇತ್ರಗಳ ಪುನರ್‍ವಿಂಗಡನೆಯಾಗಬೇಕಿತ್ತು. ಆದರೆ ಹಾಗಾಗಲಿಲ್ಲ. ಇಪ್ಪತೈದು ವರ್ಷಗಳ ಇನ್ನೊಂದು ಅವಧಿಯವರೆಗೆ ಪುನರ್‍ವಿಂಗಡನೆ ಮಾಡಬಾರದೆಂದು 2001ರಲ್ಲಿ ಮತ್ತೆ ನಿರ್ಣಯಿಸಲಾಯಿತು. ಹಾಗೆ ಮಾಡಿದ್ದಲ್ಲಿ ಉತ್ತರಭಾರತದ ರಾಜ್ಯಗಳಲ್ಲಿ ಲೋಕಸಭೆ ಕ್ಷೇತ್ರಗಳ ಸಂಖ್ಯೆಯಲ್ಲಿ ವೃದ್ಧಿಯಾಗಿ, ದಕ್ಷಿಣದ ರಾಜ್ಯಗಳ ಕ್ಷೇತ್ರಗಳಲ್ಲಿ ಗಣನೀಯ ಕಡಿತ ಕಾಣಿಸಿಕೊಳ್ಳಲಿತ್ತು.  2008ರಲ್ಲಿ ಮೀಸಲು ಕ್ಷೇತ್ರಗಳ ಪುನರ್‍ವಿಂಗಡನೆ ಮತ್ತು ರಾಜ್ಯದೊಳಗೆ ವಿಧಾನಸಭೆ ಕ್ಷೇತ್ರಗಳ ಪುನರ್‍ವಿಂಗಡನೆಯಾಯಿತು ಆದರೆ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸಲಿಲ್ಲ.

ಒಂದುವೇಳೆ, ಈಗ 2019ರಲ್ಲಿ ಜನಗಣತಿಯ (2011ರ) ಆಧಾರದ ಮೇಲೆ ಕ್ಷೇತ್ರವಿಂಗಡನೆಯಾದಲ್ಲಿ ಅತ್ಯಂತ ಹೆಚ್ಚು ಕ್ಷೇತ್ರಗಳನ್ನು ಕಳೆದುಕೊಳ್ಳುವ ರಾಜ್ಯ ತಮಿಳುನಾಡು; 39 ರಿಂದ 29ಕ್ಕೆ ಇಳಿಯುವುದು. ಕರ್ನಾಟಕ ಎರಡು ಕ್ಷೇತ್ರಗಳನ್ನು ಕಳೆದುಕೊಂಡರೆ, ಆಂಧ್ರ ಮತ್ತು ತೆಲಂಗಾಣ ಸೇರಿ 5, ಕೇರಳ ಸಹ 5, ಓರಿಸ್ಸಾ 3  ಕ್ಷೇತ್ರ ಕಳೆದುಕೊಳ್ಳುತ್ತಿದ್ದವು. ಇನ್ನು ಉತ್ತರ ಭಾರತದ ರಾಜ್ಯಗಳಲ್ಲಿ ಗುಜರಾತ್ 1 ಕ್ಷೇತ್ರ ಪಡೆದುಕೊಂಡರೆ, ಮಹಾರಾಷ್ಟ್ರ 3, ದೆಹಲಿ 2, ಹರಿಯಾಣ 2, ಮಧ್ಯಪ್ರದೇಶ 3, ರಾಜಸ್ಥಾನ 6, ಬಿಹಾರ 4 ಹಾಗೂ ಉತ್ತರಪ್ರದೇಶ ಅತ್ಯಂತ ಹೆಚ್ಚು 13 ಹೆಚ್ಚುವರಿ ಕ್ಷೇತ್ರಗಳನ್ನು ಪಡೆದುಕೊಳ್ಳಲಿದೆ. ಅಂದರೆ 80 ಇರುವ ಉತ್ತರ ಪ್ರದೇಶದ ಸೀಟುಗಳು 93ಕ್ಕೆ ಏರಿಕೆಯಾಗಲಿವೆ. ಸಹಜವಾಗಿಯೇ ಅದಕ್ಕೆ ರಾಜಕೀಯ ಬೇಡಿಕೆ, ಮನ್ನಣೆಗಳೂ ಹೆಚ್ಚಾಗಲಿವೆ.

ಆದರೆ ಈಗ ಎರಡನೇ 25 ವರ್ಷದ ಫ್ರೀಜ್ ಅವಧಿಯೂ ಮುಗಿಯುತ್ತ ಬಂದಿದೆ. 2021ರ ಜನಗಣತಿಯ ಆಧಾರದ ಮೇಲೆ 2026ರಲ್ಲಿ ಕ್ಷೇತ್ರಗಳ ಪುನರ್‍ವಿಂಗಡನೆಯಾಗಬೇಕಿದೆ. ಹಾಗೆ ಆದಲ್ಲಿ ದಕ್ಷಿಣದ ರಾಜ್ಯಗಳಿಗೆ ಆಘಾತ ಕಾದಿದೆ. ಹಾಗಾಗಿ ಜನಗಣತಿ ಆಧಾರದ ಮೇಲೆ ಕ್ಷೇತ್ರಗಳನ್ನು ವಿಂಗಡಿಸುವುದನ್ನು ಶಾಶ್ವತವಾಗಿ ಕೈಬಿಡಬೇಕು ಎನ್ನುವ ಬೇಡಿಕೆಯೂ ಇದೆ. ಅಮೇರಿಕದಲ್ಲಿ ಭಾರತಕ್ಕಿಂತ ಭಿನ್ನವಾಗಿ ಅಧ್ಯಕ್ಷೀಯ ಪದ್ಧತಿಯ ಚುನಾವಣೆ ಇದ್ದರೂ ಅಲ್ಲಿಯೂ ಈ ಸಮಸ್ಯೆ ಇದ್ದೇ ಇದೆ. ಕಳೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೋನಾಲ್ಡ್ ಟ್ರಂಪ್‍ಗಿಂತ ಹಿಲರಿ ಕ್ಲಿಂಟನ್ ಹೆಚ್ಚು ಮತಗಳನ್ನು ಪಡೆದರೂ ಡೊನಾಲ್ಡ್ ಟ್ರಂಪ್ ಅಮೇರಿಕದ ಅಧ್ಯಕ್ಷರಾಗಿ ಚುನಾಯಿತರಾಗಿದ್ದನ್ನು ಗಮನಿಸಬಹುದು.

ಇನ್ನು ಆಯಾ ಪ್ರದೇಶದ ಜನಸಂಖ್ಯೆ ನಿಯಂತ್ರಣವಾಗುವದು ಆಯಾ ರಾಜ್ಯಗಳು ಕೈಗೊಂಡ ಜನಸಂಖ್ಯಾ ನಿಯಂತ್ರಣ ಕ್ರಮಗಳಿಂದ ಮಾತ್ರವೇ ಅಲ್ಲ ಎನ್ನುವುದನ್ನು ನೆನಪಲ್ಲಿಡಬೇಕಿದೆ. ಒಂದು ಪ್ರದೇಶ ಅಭಿವೃದ್ಧಿ ಹೊಂದಿದಾಗ, ಅಲ್ಲಿ ಶಿಕ್ಷಣದ, ಉದ್ಯೋಗದ ಮತ್ತು ಜೀವನಸ್ತರದಲ್ಲಿ ಅಭಿವೃದ್ಧಿ ಕಂಡುಬಂದಾಗ ಜನಸಂಖ್ಯೆ ನಿಯಂತ್ರಣ ತಾನಾಗಿಯೇ ಆಗುತ್ತದೆ.  ಅಭಿವೃದ್ಧಿ ಪಡೆದುಕೊಂಡ ತಪ್ಪಿಗೆ ಲೋಕಸಭೆಯಲ್ಲಿ ಕ್ಷೇತ್ರಗಳನ್ನು ಕಳೆದುಕೊಳ್ಳುವ ಶಿಕ್ಷೆ ಅನುಭವಿಸಬೇಕಾಗುತ್ತೆ ಎನ್ನುವ ಕಾರಣಕ್ಕಾಗಿ ಈ ಕ್ಷೇತ್ರವಿಂಗಡನೆಯ ಯೋಜನೆಯನ್ನು ಶಾಶ್ವತವಾಗಿ ಕೈಬಿಡಬೇಕೆನ್ನುವುದು ಹಲವರ ವಾದ. ಇನ್ನೊಂದು ವಾದವೇನೆಂದರೆ, ಲಕ್ಷದ್ವೀಪ ಕ್ಷೇತ್ರದಲ್ಲಿ ಕೇವಲ 47 ಸಾವಿರ ಮತದಾರರಿದ್ದರೆ ಉತ್ತರ ಭಾರತದ ಕೆಲವು ಕ್ಷೇತ್ರಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ. ಅಂದರೆ ಪ್ರತಿ ಸಂಸದ ಪ್ರತಿನಿಧಿಸುವ ಜನರ ಸಂಖ್ಯೆಯಲ್ಲಿ ಏರಿಳಿತವಾಗುತ್ತದೆ. ಹಾಗಿರುವಾಗ ದೇಶದ ಅಧಿಕಾರದ ಚುಕ್ಕಾಣಿ ಯಾರು ಹಿಡಿಯುವರು ಎನ್ನುವ ನಿರ್ಧಾರದಲ್ಲಿ ಲಕ್ಷದ್ವೀಪದ ಒಬ್ಬ ಮತದಾರನ ತೂಕ ಉತ್ತರದ ಒಬ್ಬ ಮತದಾರನ ತೂಕಕ್ಕಿಂತ ಹೆಚ್ಚಾಗುತ್ತದೆ. ಹಾಗಾಗಿ ಕ್ಷೇತ್ರಗಳ ಪುನರ್‍ವಿಂಗಡನೆ ಆಗಲೇಬೇಕು ಎನ್ನುವುದು ಮತ್ತಿತರರ ವಾದ.

ಆದರೆ 2026 ಬಹಳ ದೂರವಿಲ್ಲ; ಈಗಿಂದಲೇ ಇದರ ಬಗ್ಗೆ ಚರ್ಚೆ ಪ್ರಾರಂಭವಾದರೆ ಮಾತ್ರ 2026 ತನಕ ಪರಿಹಾರ ಸಿಗಬಹುದು. ಅಥವಾ 2001ರಂತೆ ಇನ್ನೊಮ್ಮೆ ಕ್ಷೇತ್ರವಿಂಗಡನೆಯನ್ನು ಮುಂದೂಡಬಹುದು. ಆದರೆ ಸಾರ್ವಜನಿಕ ಚರ್ಚೆಯಾಗದೇ ಜನಗಣತಿಯ ಆಧಾರದ ಮೇಲೆ ಕ್ರಮ ತೆಗೆದುಕೊಂಡಲ್ಲಿ ದೇಶದಲ್ಲಿ ಬಿಕ್ಕಟ್ಟು ತಪ್ಪಿದ್ದಲ್ಲ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...

‘ಶಾಶ್ವತ ವಿಪತ್ತು ನಿಧಿಯನ್ನು ಏಕೆ ರಚಿಸಿಲ್ಲ’: ಸಿಎಂ ಸಿದ್ದರಾಮಯ್ಯ ಅವರಿಗೆ ಆರ್. ಅಶೋಕ್ ಪ್ರಶ್ನೆ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಾತನ್ನು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ ಮತ್ತು ರೈತರಿಗೆ 'ದ್ರೋಹ' ಮಾಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಆರ್. ಅಶೋಕ ಮಂಗಳವಾರ ಆರೋಪಿಸಿದ್ದಾರೆ. ಉತ್ತರ ಕರ್ನಾಟಕವನ್ನು ಕಾಡುತ್ತಿರುವ...

ಆಂಧ್ರ ಪ್ರದೇಶ| ದಲಿತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಾಧ್ಯಾಪಕರ ಬಂಧನ; ಭುಗಿಲೆದ್ದ ಪ್ರತಿಭಟನೆ

ಆಂಧ್ರಪ್ರದೇಶದ ತಿರುಪತಿಯಲ್ಲಿರುವ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಪ್ರಥಮ ವರ್ಷದ ಬಿ.ಇಡಿ ದಲಿತ ವಿದ್ಯಾರ್ಥಿನಿಯೊಬ್ಬಳು ಇಬ್ಬರು ಸಹಾಯಕ ಪ್ರಾಧ್ಯಾಪಕರಾದ ಲಕ್ಷ್ಮಣ್ ಕುಮಾರ್ ಮತ್ತು ಶೇಖರ್ ರೆಡ್ಡಿ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ...

ಝೀ ನ್ಯೂಸ್‌ನಿಂದ 18 ಕೋಟಿ ರೂ. ಪರಿಹಾರ ಕೇಳಿದ ಫೋಟೋಗ್ರಾಫರ್…ಕಾರಣ?

ಆಫ್ರಿಕಾದಿಂದ ಭಾರತಕ್ಕೆ ಚಿರತೆಗಳ ಸಾಗಣೆಯನ್ನು ದಾಖಲಿಸಿರುವ ತನ್ನ ಅತ್ಯಮೂಲ್ಯ ವಿಡಿಯೋವನ್ನು ಅನುಮತಿಯಿಲ್ಲದೆ ಬಳಸಿಕೊಂಡಿದ್ದಕ್ಕೆ ಝೀ ನ್ಯೂಸ್‌ ಚಾನೆಲ್‌ ವಿರುದ್ದ ಎಮ್ಮಿ ಪ್ರಶಸ್ತಿಗೆ ನಾಮನಿರ್ದೇಶಿತರಾದ ಚಲನಚಿತ್ರ ನಿರ್ಮಾಪಕ ಮತ್ತು ಛಾಯಾಗ್ರಾಹಕ ರೋನಿ ಸೇನ್ ಹಕ್ಕುಸ್ವಾಮ್ಯ...

ನ್ಯಾ. ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ಗೆ ಚಪ್ಪಲಿಯಿಂದ ಹಲ್ಲೆ

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್ ಕಿಶೋರ್ ಅವರಿಗೆ ಮಂಗಳವಾರ (ಡಿಸೆಂಬರ್ 9) ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದ ಸಂಕೀರ್ಣದೊಳಗೆ ಅಪರಿಚಿತ ವ್ಯಕ್ತಿಗಳು...

ಚುನಾವಣಾ ಆಯುಕ್ತರ ನೇಮಕ ಸಮಿತಿಯಿಂದ ಸಿಜೆಐ ಅವರನ್ನು ಹೊರಗಿಟ್ಟಿದ್ದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ 

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿಯನ್ನು ಶಿಫಾರಸು ಮಾಡುವ ಆಯ್ಕೆ...

ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು : ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದರು ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರಿಗೆ ದೆಹಲಿಯ ವಿಶೇಷ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

‘ಕಾನೂನುಗಳು ನಾಗರಿಕರ ಅನುಕೂಲಕ್ಕಾಗಿ ಇರಬೇಕು, ಕಿರುಕುಳ ನೀಡಬಾರದು’: ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರು ಶಾಸಕರು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ‘ದೇಶದ ಯಾವುದೇ ವ್ಯಕ್ತಿ ಕಾನೂನು ಅಥವಾ ನಿಯಮಗಳಿಂದಾಗಿ ಕಿರುಕುಳ, ಅನಾನುಕೂಲತೆಯನ್ನು ಎದುರಿಸಬಾರದು. ಅಂತಹ...