Homeಅಂಕಣಗಳುಕ್ವಿಟ್ ಎನ್‍ಡಿಎ 2 0 1 9

ಕ್ವಿಟ್ ಎನ್‍ಡಿಎ 2 0 1 9

- Advertisement -
- Advertisement -

ಭಾರತೀಯ ಸಂವಿಧಾನ, ಪ್ರಜಾಸತ್ತೆ ಮತ್ತು ನಾಗರೀಕ ಸಮಾಜಗಳ ರಕ್ಷಣೆಗಾಗಿ ಸೆಪ್ಟೆಂಬರ್ 10ರಂದು ಜರುಗಿದ ಭಾರತ್ ಬಂದ್ ಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗಿದೆ. ಪ್ರಜಾಪ್ರಭುತ್ವವು ಜಗತ್ತಿನಲ್ಲಿ ಹೊಸ ಜೀವನ ವಿಧಾನವಾಗಿ ಪ್ರಜೆಗಳ ಸಾರ್ವಭೌಮತ್ವವನ್ನು ರಕ್ಷಿಸುವ ನಿಟ್ಟಿನಲ್ಲಿ ವಿಶ್ವದೆಲ್ಲೆಡೆ ಉಪಯುಕ್ತವಾಗಿದೆ. ಶ್ರೇಷ್ಠ ಇತಿಹಾಸಕಾರ ಅರ್ನಾಲ್ಡ್ ಟೋಯ್ನ್‍ಬಿ ‘ಬೆದರಿಕೆಯೆಂಬುದು ಮಾನವ ಇತಿಹಾಸದಲ್ಲಿ ಹೊಸದೇನಲ್ಲ. ಬೆದರಿಕೆಗಳನ್ನು ಸಮರ್ಥವಾಗಿ ಎದುರಿಸಿ ನಿಂತ ಸಮಾಜ ಮತ್ತು ಸಂಸ್ಕøತಿ ಅತಿಜಯಿಸಿದೆ. ಎದುರಿಸುವಲ್ಲಿ ವಿಫಲವಾದ ಸಮಾಜ ನಾಮಾವಶೇಷವಾಗಿದೆ. ಅಂತಹ ಬೆದರಿಕೆಗಳನ್ನು ಯಶಸ್ವಿಯಾಗಿ ಎದುರಿಸುವುದರ ಹಿಂದಿರುವುದು ಆ ಸಮಾಜದ ಸೃಜನಶೀಲರಾದ ಪ್ರಬುದ್ಧ ವ್ಯಕ್ತಿಗಳಾಗಿರುತ್ತಾರೆ. ಅವರು ತಮ್ಮ ಸಹಜೀವಿಗಳನ್ನು ಸುರಕ್ಷಿತವಾಗಿ ಪ್ರಗತಿಯತ್ತ ಮುನ್ನಡೆಸಿದ್ದಾರೆ’ ಎಂದು ಹೇಳಿರುವುದು ಭಾರತದಲ್ಲಿ ಇಂದು ಸಮಕಾಲೀನ ಮಹತ್ವ ಹೊಂದಿದೆ.
ಜಗತ್ತಿನ ಎಲ್ಲ ಧರ್ಮಗಳೂ ಒಳ್ಳೆಯದನ್ನೇ ಬಯಸು-ಒಳ್ಳೆಯದನ್ನೇ ಮಾಡು ಎಂದು ಬೋಧಿಸುತ್ತವೆ. ಯುದ್ಧ ಮತ್ತು ವಿನಾಶದೆಡೆಗೆ ಸಾಗುತ್ತಿರುವ ಜಗತ್ತನ್ನು ಪಾರು ಮಾಡುವಲ್ಲಿ ಇಂದು ಸಂಕಷ್ಟ ಅನುಭವಿಸುವವರ ವಿಮೋಚನೆಗಾಗಿ ಸಕ್ರಿಯರಾದ ಪ್ರಜ್ಞಾವಂತರು ಮತ್ತು ಮಾನವೀಯತೆಗೆ ಬದ್ಧರಾದ ಒಂದು ಪಡೆ ಕಾರ್ಯಶೀಲರಾಗಬೇಕೆಂಬುದು ಕುರ್‍ಆನ್‍ನ ಕರೆಯೂ ಆಗಿದೆ. ಬುದ್ಧ, ಬಸವ, ಸೂಫಿ ಸಂತರು ಮತ್ತು ಎಲ್ಲ ಮಾನವತಾವಾದಿಗಳು ‘ನಿಮ್ಮ ಸ್ವಾರ್ಥವನ್ನು ಕೊಂದು ಸಮಾಜವನ್ನು ಉಳಿಸಿ ಮತ್ತು ಬೆಳೆಸಿ’ ಎಂಬ ಸಂದೇಶವನ್ನು ನೀಡಿದ್ದಾರೆ. ಸತ್ತ ಮೇಲೆ ದೇವರು ಮತ್ತು ಪ್ರಕೃತಿಯ ಮಡಿಲಲ್ಲಿ ಒಂದಾಗುವ ಮನುಷ್ಯರು ಬದುಕಿರುವಾಗಲೂ ಕೂಡ ಕೂಡಿ ಬಾಳಿದರೆ ಶ್ರೇಷ್ಠ ಸಂಸ್ಕøತಿ ಮತ್ತು ನಾಗರೀಕತೆಗಳು ರೂಪುಗೊಳ್ಳುತ್ತವೆ. ಅಲ್ಲಮಪ್ರಭುವಿನ ‘ನಾನು ನಾನಲ್ಲ, ದೇವರು-ಪ್ರಕೃತಿಯೇ ಎಲ್ಲ’ ಎಂಬ ಮಾತುಗಳು ಇಂದು ನಮ್ಮನ್ನು ಆಳುತ್ತಿರುವವರಿಗೆ ಸರಿಯಾಗಿ ಅರ್ಥವಾದರೆ ಸ್ವಾರ್ಥಪರತೆ, ಮೂಲಭೂತವಾದ, ಭ್ರಷ್ಟಾಚಾರ, ಬೆದರಿಕೆ ಮೊದಲಾದ ಅನಿಷ್ಟಗಳನ್ನು ಮೀರಿ ಮಾನವೀಯತೆಯೆಡೆಗೆ ಜಗತ್ತನ್ನು ಮುನ್ನಡೆಸಲು ಸಾಧ್ಯವಾಗುತ್ತದೆ.
ಭಾರತೀಯ ಸಂಸ್ಕøತಿ ಹಲವಾರು ಸಂಕೀರ್ಣತೆಗಳು ಮತ್ತು ಸವಾಲುಗಳ ನಡುವೆಯೂ ತನ್ನ ನೈಜತೆ ಮತ್ತು ಶ್ರೇಷ್ಠತೆಗಳನ್ನು ಉಳಿಸಿಕೊಂಡು ಹೋಗಲು ಬುದ್ಧ, ಮಹಾವೀರ, ಬಸವ, ಫುಲೆ, ರಾಮಾನುಜ, ಕಬೀರ, ದಯಾನಂದ ಸರಸ್ವತಿ, ರಾಜಾರಾಮ ಮೋಹನ್ ರಾಯ್, ಈಶ್ವರ ಚಂದ್ರ ವಿದ್ಯಾಸಾಗರ್, ಲಾಲಾ ಲಜಪತರಾಯ್, ಬಿಪಿನ್ ಚಂದ್ರಪಾಲ್, ಬಾಲಗಂಗಾಧರ ತಿಲಕ್, ಮೋತಿಲಾಲ್ ನೆಹರು, ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧಿ, ಪಂಡಿತ್ ನೆಹರು, ಅಂಬೇಡ್ಕರ್, ಪೆರಿಯಾರ್, ಲೋಹಿಯಾ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್, ಶಿಕ್ಷಣ ಸಂತ ಕುವೆಂಪು ಮೊದಲಾದ ಮಹನೀಯರು ನಡೆಸಿದ ಸಾಮಾಜಿಕ ಸುಧಾರಣೆ ಕಾರ್ಯಗಳು ಪ್ರಮುಖ ಕಾರಣವಾಗಿವೆ. ಇಂತಹ ಮಹಾ ಸಂತರು ಮತ್ತು ಸಾಧಕರು ಕಟ್ಟಿ ಬೆಳೆಸಿರುವ ಭಾರತೀಯ ಸಂಸ್ಕøತಿಯನ್ನು ನಾಶಪಡಿಸಿ ಅರಾಜಕತೆ ಸೃಷ್ಟಿ ಮಾಡುವ ಕೆಲಸವನ್ನು ಜಾಗತಿಕವಾಗಿ ಮಾರುಕಟ್ಟೆ ಶಕ್ತಿಗಳು ಮತ್ತು ಸ್ಥಳೀಯವಾಗಿ ಹಿಂದುತ್ವವಾದಿಗಳು ನಡೆಸುತ್ತಿರುವುದನ್ನು ಪ್ರಜ್ಞಾವಂತರು ತಡೆಯಲೇ ಬೇಕಿದೆ. ಮೊನ್ನೆ ನಡೆದ ಭಾರತ್ ಬಂದ್ ಕೇವಲ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಲಷ್ಟೇ ಸೀಮಿತಗೊಂಡಿಲ್ಲ. ಇದು ರಾಷ್ಟ್ರೀಯ ಹಿತಾಸಕ್ತಿ ರಕ್ಷಣೆಗೆ ಬದ್ಧವಾದ ವಿಶಾಲ ಕಾರ್ಯಸೂಚಿಯನ್ನು ಆಧರಿಸಿದೆ.
ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ-2 ಸರ್ಕಾರ ಕಾಂಗ್ರೆಸ್ ಪಕ್ಷದೊಳಗಿನ ಕುಟುಂಬ ರಾಜಕಾರಣ ಮತ್ತು ಪಟ್ಟಭದ್ರ ಹಿತಾಸಕ್ತಿಗಳ ಸ್ವಾರ್ಥಪರತೆಯಿಂದಾಗಿ ಉತ್ತಮ ಆಡಳಿತ ಮತ್ತು ಅಭಿವೃದ್ಧಿ ನೀಡಲು ವಿಫಲವಾಯಿತು. ದೇಶದ ಜನರಿಗೆ ಬದಲಾವಣೆ ಅನಿವಾರ್ಯವಾಗಿತ್ತು. ಕುರುಡುಗಣ್ಣಿನವನಿಗಿಂತ ಮೆಳ್ಳಗಣ್ಣಿನವನು (ಸುಮಾರಾಗಿ ನೋಡುವವನು) ಎಷ್ಟೋ ವಾಸಿಯೆಂಬ ಅರಿವಿಗೆ ಜನರು ಶರಣಾಗಿದ್ದರು. ಇಂತಹ ಮೆಳ್ಳಗಣ್ಣಿನವರ ನಾಯಕನಾಗಿ ನರೇಂದ್ರ ಮೋದಿ 2014ರಲ್ಲಿ ಹಲವಾರು ಹುಸಿ ಭರವಸೆಗಳನ್ನು ಜನರಿಗೆ ನೀಡಿ ಅಧಿಕಾರ ಚುಕ್ಕಾಣಿಯನ್ನು ಹಿಡಿದರು.
ಅಂದು ಪಂಡಿತ್ ಜವಾಹರಲಾಲ್ ನೆಹರು ಸಾರ್ವಜನಿಕ ಸಂಸ್ಥೆಗಳನ್ನು ಅಭಿವೃದ್ಧಿಪಡಿಸುವ ಮೂಲಕ ಭೂಮಿ, ಬಂಡವಾಳ, ಉದ್ಯೋಗ, ಲಾಭ ಎಲ್ಲವೂ ದೇಶದ ಸ್ವತ್ತಾಗಿ ಉಳಿಯುವಂತೆ ನೋಡಿಕೊಂಡಿದ್ದರು. ಇಂದು ಮೋದಿಜಿ ಖಾಸಗೀಕರಣವನ್ನು ಉತ್ತೇಜಿಸಿ ಶ್ರೀಮಂತರು ಮಾತ್ರ ಪ್ರಕಾಶಿಸುವಂತೆ ನೋಡಿಕೊಂಡರು. ಕೋಟ್ಯಾಂತರ ವಿದ್ಯಾವಂತ ಯುವಜನರು ಆತ್ಮಹತ್ಯೆಯೆಡೆಗೆ ಮುಖ ಮಾಡುವಂತಹ ದುಸ್ಥಿತಿಯನ್ನು ಇವರು ಸೃಷ್ಟಿಸಿದರು. ನೆಹರೂರವರ ಮಗಳು ಇಂದಿರಾಜಿ ಬ್ಯಾಂಕುಗಳ ರಾಷ್ಟ್ರೀಕರಣ, ಭೂಸುಧಾರಣೆ, 20 ಅಂಶಗಳ ಕಾರ್ಯಕ್ರಮ, ಕನಿಷ್ಟ ಅಗತ್ಯಗಳ ಪೂರೈಕೆ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಮೊದಲಾದವುಗಳ ಮೂಲಕ ದೇಶದ ಜನರಿಗೆ ಒಳ್ಳೆಯದನ್ನು ಮಾಡಿ ‘ಗರೀಬಿ ಹಟಾವೋ’ (ಬಡತನ ನಿರ್ಮೂಲನೆ) ದಿಕ್ಕಿನಲ್ಲಿ ದಿಟ್ಟತನದಿಂದ ಸಾಗಿದರೆ ಮೋದಿಜಿ ಖಾಸಗೀಕರಣದ ಮೂಲಕ ಮೀಸಲಾತಿ ಮತ್ತು ಉದ್ಯೋಗ ಸೌಲಭ್ಯಗಳನ್ನು ಕಿತ್ತುಕೊಂಡು ‘ಗರೀಭೋಂಕೊ ಹಟಾವೋ’ (ಬಡವರ ನಿರ್ಮೂಲನೆ) ಮಾಡುತ್ತಿರುವುದು ಸರಿಯಲ್ಲ.
ಹೆಸರಾಂತ ಇತಿಹಾಸಕಾರರಾದ ರೊಮಿಲಾ ಥಾಪರ್ ‘ಒಂದು ದೇಶದ ಅಭಿವೃದ್ಧಿ ಪ್ರಧಾನಿಯಾದವರ ವಿಶಾಲ ಎದೆ ಅಳತೆಯನ್ನು ಅವಲಂಬಿಸಿಲ್ಲ, ವಿಶಾಲ ಹೃದಯ ಮತ್ತು ಸಮಷ್ಟಿ ಪ್ರಜ್ಞೆಗಳನ್ನು ಆಧರಿಸಿದ ದೇಶ ಸೇವೆಯನ್ನು ಅವಲಂಬಿಸಿದೆ’ ಎಂದು ಹೇಳಿರುವ ಮಾತುಗಳು ಮೋದಿಯವರಿಗೆ ಆತ್ಮಾವಲೋಕನಕ್ಕೆ ಎಡೆಮಾಡಿಕೊಡಬೇಕು.
ದೇಶದ ಜನರನ್ನು ಅವನತಿಯೆಡೆಗೆ ಕೊಂಡೊಯ್ಯುತ್ತಿರುವ ‘ರಾಷ್ಟ್ರೀಯ ವಿದ್ವಂಸಕರ ಕೂಟ’ ಮೋದಿ ನೇತೃತ್ವದಲ್ಲಿ ಇಂದು ವಿಜೃಂಭಿಸುತ್ತಿರುವುದು ಶೋಚನೀಯ ಸಂಗತಿಯಾಗಿದೆ. ಸಂವಿಧಾನದ ಹೆಸರಿನಲ್ಲಿ ಮಂತ್ರಿಯಾದ ಮತ್ತೊಬ್ಬ ಹುಂಬ ‘ಸಂವಿಧಾನವನ್ನು ಬದಲಿಸಲೆಂದೇ ನಾವು ಅಧಿಕಾರಕ್ಕೆ ಬಂದಿದ್ದೇವೆ’ ಎಂದು ಹೇಳಿ ಜನರಿಂದ ಉಗಿಸಿಕೊಂಡಿರುವ ಸಂಗತಿ ಇನ್ನೂ ನೆನಪಿನಲ್ಲಿದೆ. ಗೋಡ್ಸೆಗಿಂತ ಮೊದಲೇ ಹುಟ್ಟಿದ್ದರೆ ನಾನೇ ಗಾಂಧಿಯನ್ನು ಕೊಲ್ಲುತ್ತಿದ್ದೆ’ ಎಂದು ಇನ್ನೊಬ್ಬ ಹಿಂದುತ್ವವಾದಿ ಪುಂಡ ಹೆಂಗಸು ಹೇಳಿರುವುದನ್ನು ಖಂಡಿಸಿ ಜೈಲಿಗೆ ಹಾಕುವುದರ ಬದಲು ಮೋದಿ ಮತ್ತು ಬಳಗ ಮೌನವಾಗಿ ರಕ್ಷಿಸುತ್ತಿರುವುದು ದೇಶದ್ರೋಹಿಗಳ ಪಡೆ ಪ್ರಜಾಪ್ರಭುತ್ವದ ಹೆಸರಿನಲ್ಲಿ ನಮ್ಮನ್ನು ವಿನಾಶದೆಡೆಗೆ ಕೊಂಡೊಯ್ಯುತ್ತಿರುವ ಸಂಕೇತವಾಗಿದೆ.
ಮೊನ್ನೆ ನಡೆದ ಭಾರತ್ ಬಂದ್ ‘ಸರ್ಕಾರಿ ಪ್ರಾಯೋಜಿತ ಬಂದ್’ ಎಂದು ಹೇಳಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ನಿಯೋಗ ಪ್ರಧಾನಿ ಭೇಟಿ ಮಾಡಿ ಕೊಡಗಿನ ನೊಂದವರಿಗೆ ಆರ್ಥಿಕ ನೆರವು ಕೇಳಲು ಹೋದಾಗ ಬೇಕಂತಲೇ ತಪ್ಪಿಸಿಕೊಂಡ ಈ ಭಾಗದ ಸಂಸದನಿಗೆ ಹೃದಯವಂತಿಕೆಯೂ ಇಲ್ಲ, ಎದೆಗಾರಿಕೆ ಇಲ್ಲವೇ ಇಲ್ಲ ಎಂಬ ಸತ್ಯ ನಮಗೆ ಮನವರಿಕೆಯಾಗಿದೆ. ಈತನಿಗೆ ಮುಂದಿನ ಮಹಾಚುನಾವಣೆಯಲ್ಲಿ ಮತದಾರ ಬಂಧುಗಳು ಗೇಟ್ ಪಾಸ್ ನೀಡುವುದು ಅನಿವಾರ್ಯವಾಗಿದೆ. ‘ಕೋಮುವಾದಿ ಬಿಜೆಪಿಯಿಂದ ದೇಶವನ್ನು ರಕ್ಷಿಸಬೇಕೆಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಹೇಳಿರುವ ಮಾತುಗಳು ಇಂದು ಪ್ರಗತಿಪರರು ಮತ್ತು ಜಾತ್ಯಾತೀತರಿಗೆ ಅರ್ಥವಾಗಬೇಕಿದೆ. ತುರ್ತು ಪರಿಸ್ಥಿತಿ ಕಾಲದಲ್ಲಿ ಕಾಂಗ್ರೆಸ್ ಪಕ್ಷದ ರಾಜನೀತಿಯನ್ನು ಉಗ್ರವಾಗಿ ವಿರೋಧಿಸಿದ ಶೋಷಿತರ ಧ್ವನಿ ದೇವನೂರು ಮಹಾದೇವ ‘ನಮ್ಮ ಅಸ್ತಿತ್ವವನ್ನು ಉಳಿಸಿಕೊಂಡು ಕಾಂಗ್ರೆಸ್, ಪ್ರಾದೇಶಿಕ ಪಕ್ಷಗಳು, ಕಮ್ಯುನಿಷ್ಟ್‍ರು, ರೈತ ಸಂಘಟನೆಗಳು, ದಲಿತ ಸಂಘಟನೆಗಳು ಮೊದಲಾದ ಬಿಜೆಪಿಯೇತರ ಬಣಗಳನ್ನು ಬೆಂಬಲಿಸುವುದು ಬಹುಸಂಸ್ಕøತಿ ಮತ್ತು ಬಹುಜನರ ರಕ್ಷಣೆಗೆ ಅನಿವಾರ್ಯ’ ಎಂದು ಹೇಳಿರುವ ಮಾತುಗಳನ್ನು ನಾವು ಒಪ್ಪಲೇಬೇಕು.
ಇತ್ತೀಚೆಗೆ ಮೋದಿ ಬಳಗ ‘ನಯಿ ಭಾರತ್’ (ಹೊಸ ಭಾರತ) ನಿರ್ಮಿಸುವುದು ನಮ್ಮ ಗುರಿ ಎಂದು ಹೇಳುತ್ತಿದೆ. ಪ್ರಕೃತಿ ಮತ್ತು ಮಾನವೀಯತೆಗಳನ್ನು ನಿರ್ಲಕ್ಷಿಸಿದ ಫಲವಾಗಿ ಕೊಡಗು, ಕೇರಳ, ಉತ್ತರ ಭಾರತ, ಈಶಾನ್ಯ ಭಾರತ ಮೊದಲಾದೆಡೆ ಪ್ರವಾಹ ಉಂಟಾಗಿ ಭಾರತವೇ ಮುಳುಗುವ ಸ್ಥಿತಿ ನಿರ್ಮಾಣವಾಗಿದೆ. ಮೋದಿ ಬಳಗ ತನ್ನ ಸಂವಿಧಾನ ವಿರೋಧಿ, ಪ್ರಜಾಸತ್ತೆ ವಿರೋಧಿ, ಮಾನವ ವಿರೋಧಿ, ಪ್ರಕೃತಿ ವಿರೋಧಿ ಹಾಗೂ ಸಾಮಾಜಿಕ ನ್ಯಾಯ ವಿರೋಧಿ ಧೋರಣೆಗಳು ಮತ್ತು ನಡವಳಿಕೆಗಳಿಂದ ‘ನೋ ಭಾರತ್’ ದಿಕ್ಕಿನತ್ತ ದೇಶವನ್ನು ಕೊಂಡೊಯ್ಯುತ್ತಿದೆ. ಅಂದು ಗಾಂಧಿ ಬ್ರಿಟೀಷರನ್ನು ದೇಶದಿಂದ ತೊಲಗಿಸಲು ‘ಕ್ವಿಟ್ ಇಂಡಿಯಾ ಚಳುವಳಿ’ಯನ್ನು 1942ರಲ್ಲಿ ನಡೆಸಿದ ರೀತಿಯಲ್ಲೇ 2019ರಲ್ಲಿ ‘ಕ್ವಿಟ್ ಎನ್‍ಡಿಎ’ ಚಳುವಳಿಯನ್ನು ನಡೆಸಿ ಭಾರತ ಮುಳುಗುವುದನ್ನು ತಪ್ಪಿಸಬೇಕಾದ ಸಾಮಾಜಿಕ ಜವಾಬ್ದಾರಿಯನ್ನು ಪ್ರಗತಿಪರರು, ಜಾತ್ಯಾತೀತರು, ಮಾನವತಾವಾದಿಗಳು ಮತ್ತು ಪ್ರಜಾಪ್ರಭುತ್ವವಾದಿಗಳು ನಿರ್ವಹಿಸಲೇಬೇಕಿದೆ.

– ಡಾ.ಬಿ.ಪಿ.ಮಹೇಶ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...