Homeಅಂಕಣಗಳುಬಂಡವಾಳವಾದ, ಇತಿಹಾಸ ಕುರಿತ  ಲೋಹಿಯಾ ಚಿಂತನೆಗಳು

ಬಂಡವಾಳವಾದ, ಇತಿಹಾಸ ಕುರಿತ  ಲೋಹಿಯಾ ಚಿಂತನೆಗಳು

- Advertisement -
ಅಧುನಿಕ ಭಾರತದ ಪುರೋಗಾಮಿ ಚಿಂತಕರಲ್ಲಿ ಲೋಹಿಯಾ ಅಗ್ರಗಣ್ಯರು. ಭಾರತದ ಆಧುನಿಕಪೂರ್ವ ಮತ್ತು ಆಧುನಿಕ ಸಾಮಾಜಿಕ ಚಿಂತನೆಯನ್ನು ಲೋಹಿಯಾರನ್ನು ಹೊರತಾಗಿಸಿ ನೋಡಲು ಸಾಧ್ಯವಿಲ್ಲ. ಮೊದಲನೆಯದಾಗಿ ಲೋಹಿಯಾ ಎಲ್ಲಾ ರೀತಿಯ ಅನ್ಯಾಯ ಅಸಮಾನತೆಗಳ ವಿರುದ್ಧ ಕಿಡಿಕಾರಿದ ಒಬ್ಬ ಮಾನವತಾವಾದಿ.  ಸಾಮಾನ್ಯವಾಗಿ ಎಲ್ಲಾ ಪ್ರಮುಖ  ಕ್ರಾಂತಿಕಾರಿಗಳೂ ಮಾನವತಾವಾದಿಗಳೇ, ಆದರೆ ಎಲ್ಲಾ ಮಾನವತಾವಾದಿಗಳೂ, ಲೋಕಹಿತೈಷಿಗಳೂ ಕ್ರಾಂತಿಕಾರಿಗಳಾಗಿರುವುದಿಲ್ಲ. ಅಂದರೆ ಅವರಿಂದ ಮೂಲಭೂತ ಬದಲಾವಣೆ ಸಾಧ್ಯವಾಗುವುದಿಲ್ಲ. ಇದು ಲೋಹಿಯಾರವರಿಗೂ, ಅನೇಕ ಸಂತರಿಗೂ ಅನ್ವಯವಾಗುವಂತಹದು.
ಲೋಹಿಯಾ ಚಿಂತನೆಗಳು ಮತ್ತು ಅವರ ಸಮಾಜವಾದಿ ಪಕ್ಷ ನಮ್ಮ ಜಾತ್ಯತೀತತೆಗೂ, ಹಿಂದುಳಿದ ಜಾತಿ ಜನಾಂಗಗಳ ಉನ್ನತಿಯ ವಿಚಾರಗಳಿಗೂ, ಜನಾಂಗೀಯ ಭೇದಭಾವದ ವಿರುದ್ಧವೂ, ಜಾತಿವ್ಯವಸ್ಥೆಯ ವಿನಾಶಕ್ಕೂ, ವಿಚಾರವಾದಕ್ಕೂ, ಪ್ರಜಾಸತ್ತಾತ್ಮಕತೆಗೂ, ರೈತರು ಮತ್ತು ಇತರೆ ದುಡಿಯುವ ವರ್ಗಗಳ ಸಂಘಟನೆ ಹೋರಾಟಗಳಿಗೂ ತಮ್ಮದೇ ಆದ ಕೊಡುಗೆಯನ್ನು ನೀಡಿವೆ. ಇವುಗಳ ವಿವರಣೆಯನ್ನು ಇಲ್ಲಿ ನಾನು ಮಾಡುವುದಿಲ್ಲ. ಜೊತೆಜೊತೆಗೆ ಸಲ್ಲದ ಸೈದ್ಧಾಂತಿಕ, ರಾಜಕೀಯ ರಾಜಿಗಳೂ, ಇದಲ್ಲದೆ ಅವರ ಸಿದ್ಧಾಂತಗಳ ಮೂಲಭೂತ ದೋಷಗಳೇನು ಎಂದು ತಿಳಿದುಕೊಳ್ಳುವುದು ಇನ್ನೂ ಅತಿ ಮುಖ್ಯವಾದುದು. ಈ ಸರಣಿ ಲೇಖನದಲ್ಲಿ ನಾನು ಈ ವಿಷಯದ ಬಗ್ಗೆ ಗಮನಹರಿಸಲು ಪ್ರಯತ್ನಿಸಿರುವೆ.
ಲೋಹಿಯಾ ಜಗತ್ತಿನ ರಾಜಕೀಯ ಸಿದ್ಧಾಂತಗಳನ್ನು ಅಧ್ಯಯನ ಮಾಡಿದವರು. ಆದರೆ ಅವರ ಓದು ಮತ್ತು ಗ್ರಹಿಕೆಗಳಲ್ಲಿ ಅಪಾರವಾದ ಗೊಂದಲಗಳಿರುವುದು ಅವರ ಬರಹಗಳಿಂದ ಕಂಡುಬರುತ್ತದೆ. ರಾಜಕೀಯ ಸಿದ್ಧಾಂತಗಳ ಕುರಿತ ಅವರ ಗ್ರಹಿಕೆ ತುಂಬಾ ಅವಸರದ್ದು, ಈ ಕಾರಣಕ್ಕಾಗಿ, ಅವರ ಬರಹಗಳು ತುಂಬಾ ಉಳುಚಿಕೊಳ್ಳುತ್ತಾ ಹೋಗುತ್ತವೆ. ಪ್ರಕೃತಿಗೆ ಹೇಗೆ ನಿಯಮಗಳಿವೆಯೋ ಹಾಗೆಯೇ ಸಮಾಜದ ಬೆಳವಣಿಗೆ, ಚಲನವಲನಗಳಿಗೂ ಅದರದ್ದೇ ಆದ ನಿಯಮಗಳಿವೆ ಎನ್ನುವುದನ್ನು ಸಾರಾಸಗಟಾಗಿ ತಿರಸ್ಕರಿಸಿ, ತಾವು ಯಾವುದು ಒಳ್ಳೆಯದು, ಉಚಿತವಾದದ್ದು, ಆದರ್ಶವಾದುದು ಎಂದು ಕಲ್ಪಿಸಿಕೊಳ್ಳುತ್ತಾರೋ ಅದನ್ನು ಸಂಕಲ್ಪಶಕ್ತಿಯಿಂದ ಸಾಧಿಸುವುದು ಎನ್ನುವ ದಾರಿಯನ್ನು ಹಿಡಿದುಕೊಂಡವರು.
ಲೋಹಿಯಾರ ಮಾನವ ಸಮಾಜದ ಇತಿಹಾಸದ ತಿಳಿವಳಿಕೆ ಬಹಳ ಗೊಂದಲಮಯವಾದದ್ದು. ಲೋಹಿಯಾರವರ ಪ್ರಕಾರ `ಇಲ್ಲಿಯವರೆಗಿನ ಎಲ್ಲಾ ಮಾನವ ಇತಿಹಾಸವು ಜಾತಿ ಮತ್ತು ವರ್ಗಗಳ ನಡುವಿನ ಆಂತರಿಕ ಓಲಾಟ ಹಾಗೂ ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಶಕ್ತಿ ಮತ್ತು ಸಮೃದ್ಧಿಗಳ  ಸ್ಥಳಾಂತರವಾದುದಾಗಿದೆ.’ `ವರ್ಗ ಎಂದರೆ ಚಲನ ಸಾಮಥ್ರ್ಯವುಳ್ಳ ಜಾತಿ.’ `ಜಾತಿ ಎಂದರೆ ಚಲನರಹಿತ ವರ್ಗ’. ಇದು ಒಂದು ತರಹ ಚಲನರಹಿತತೆ ಚಲನಶೀಲತೆಗಳ ನಡುವೆ ವ್ಯತ್ಯಾಸವೇ ಇಲ್ಲದ ಅಸಂಬದ್ಧ ತೀರ್ಮಾನದಂತಿದೆ. `ಒಮ್ಮೆ ರೋಮ್, ಒಮ್ಮೆ ಗ್ರೀಸ್, ಒಮ್ಮೆ ಚೈನಾ, ಒಮ್ಮೆ ಅರೇಬಿಯಾ, ಒಮ್ಮೆ ಮೆಕ್ಸಿಕೊ, ಒಮ್ಮೆ ಇಂಡಿಯಾ ಇತಿಹಾಸದ ಶಿಖರಾಗ್ರದಲ್ಲಿ ಆಸೀನವಾಗಿದ್ದವು’ ಎಂದು ಲೋಹಿಯಾ ಇದನ್ನು ಶಕ್ತಿ ಸಮೃದ್ಧಿಗಳ ಖಂಡಾಂತರ ಪಲ್ಲಟ ಎಂದು ಹೇಳುತ್ತಾರೆ. ಇದು ಇತಿಹಾಸದ ಬೇರೆಬೇರೆ ಕಾಲಘಟ್ಟದಲ್ಲಿ ಬೇರೆಬೇರೆ ಪ್ರದೇಶಗಳು ಹೆಚ್ಚು ಮುಂದುವರಿದಿದ್ದು ಆಗಿರುವುದೇ ಹೊರತು ಖಂಡಾಂತರ ಪಲ್ಲಟವೇನೂ ಆಗಿಲ್ಲ. ಮಕ್ಕಳಿಗೆ ಹೇಳಿಕೊಡುವ ಕಾಗೆ-ಗುಬ್ಬಚ್ಚಿಯ ಸುಂದರವಾದ ಕಥೆಯಂತಿರುವ ಲೋಹಿಯಾರವರ ಈ ವಿವರಣೆ ಇತಿಹಾಸದ ಚಲನೆಯ ಬಗೆಗೆ ಏನನ್ನೂ ತಿಳಿಸದು.
ಸಮಾಜಗಳ ಸ್ವರೂಪ ಮತ್ತು ಬದಲಾವಣೆಗಳು ಅವುಗಳ ಸತ್ವಗಳಲ್ಲಾಗಿರುವ ಬದಲಾವಣೆಯಿಂದಾಗಿವೆ. ಈ ಸತ್ವದ ಬದಲಾವಣೆಗಳನ್ನು ತಿರಸ್ಕರಿಸಿ ಮೇಲ್‍ಸ್ತರದ ಅಂಶಗಳಿಂದಷ್ಟೇ ಇತಿಹಾಸವನ್ನು ಅರ್ಥೈಸುವ ಲೋಹಿಯಾರವರು `ಹುಟ್ಟಿದ್ದು ಸಾಯಲೇಬೇಕೆಂಬ ಮಾತು ಸತ್ಯವಾದರೆ…… ಸತ್ತದ್ದು ಮತ್ತೆ ಹುಟ್ಟಲೇ ಬೇಕು’. `ಯುಗಗಳೂ ಪ್ರದೇಶಗಳೂ ಸದಾ ತಿರುಗುತ್ತಲೇ ಇರುತ್ತವೆ. ಸಮಾನತೆಯಿಂದ ವರ್ಗ, ವರ್ಗದಿಂದ ವಿಘಟನೆ, ಈ ಕ್ರಿಯೆಯಿಂದ ಅದರ ವಿರುದ್ಧ ಕ್ರಿಯೆಯಾದ ನ್ಯಾಯದಿಂದ ಜಾತಿ, ಜಾತಿಯಿಂದ ಜಡತ್ವ, ಮತ್ತೆ ಪನಃ ಸಮಾನತೆಯ ಕಡೆಗೆ- ಇದು ಮಾನವ ನಿಯತಿಯ ಪೂರ್ಣ ಚಕ್ರ’ `ನಾಗರಿಕತೆಗಳು ಈ ವಿಧಿಯ ಆಟದ ರಂಗಸ್ಥಳ’ ಎಂದು ‘ಬೊಂಬೆಯಾಟವಯ್ಯ’ ಎಂದು ಹಳೆಯ ಸಿನಿಮಾದಲ್ಲಿ ನಾರದ ಮುನಿಯ ಪಾತ್ರಧಾರಿ ಇಂಪಾಗಿ ಹಾಡುವಂತೆ, ಮಾನವ ಇತಿಹಾಸ ಒಂದು ವಿಧಿಯ ಆಟವಾಗಿದೆ ಎನ್ನುವ ವಿಧಿವಾದ  ಅಥವಾ ಹಣೆಯಬರಹವಾದವನ್ನೇ ಲೋಹಿಯಾ  ಮುಂದಿಡುತ್ತಾರೆ.
`ನಾಗರಿಕತೆಗಳ ಏಳುಬೀಳುಗಳನ್ನು ನೋಡುತ್ತಾ, ತನ್ನ ಮುಂದೆ ಇತಿಹಾಸದ ಅನಂತ ಮರುಭೂಮಿ ಹರಡಿರುವುದನ್ನು ನೋಡುತ್ತಾ, ವರ್ಗದ ಕೊಂಬೆಯಿಂದ ಜಾತಿಯ ಕೊಂಬೆಗೆ ಕೋತಿಯಂತೆ ಜಿಗಿಯುತ್ತಿರುವುದೇ ಮಾನವನ ಸದಾ ಕಾಲದ ಹಣೆಯಬರಹವೆ’. `ಶಕ್ತಿ ಮತ್ತು ಸಮೃದ್ಧಿ, ಬಡತನ ಮತ್ತು ಸುಪ್ತಾವಸ್ಥೆಗಳ ನಡುವೆ ಯುಗಗಳೂ ಪ್ರದೇಶಗಳೂ ಓಲಾಡುತ್ತಾ ಸದಾ ತಿರುಗುತ್ತಲೇ ಇರುತ್ತವೆ’ `ಮಾನವ ಕುಲಕ್ಕೆ ವರ್ಗರಹಿತ ಸಮಾಜ ಅಥವಾ ಏಕಜಗತ್ತಿನ ಸಾಧನೆಯ ಭರವಸೆ ತೀರಾ ಅತ್ಯಲ್ಪ’. `ಬಡತನ  ಮತ್ತು ಯುದ್ಧಗಳನ್ನು ಸಂಪೂರ್ಣವಾಗಿ ಕೊನೆಗೊಳಿಸಿರುವ, ಮನುಷ್ಯನು ಅಂತರಂಗದ ತೃಪ್ತಿಯನ್ನೂ, ಬಹಿರಂಗದ ಶಾಂತಿಯನ್ನೂ ಸಾಧಿಸುವ ಜೀವನಕ್ರಮವನ್ನು ಹೊಂದುವಂಥ ಸುವರ್ಣಯುಗ ಒಂದು  ಹಳೆಯ ಭ್ರಾಂತಿಯೆಂದು ತೋರುತ್ತದೆ’ ಎನ್ನುವ ಅಪರಿಮಿತವಾದ ನಿರಾಶಾವಾದವನ್ನು ಲೋಹಿಯಾ ಮಂಡಿಸುತ್ತಾರೆ.
ಲೋಹಿಯಾರವರ ಪ್ರಕಾರ ಇಲ್ಲಿಯವರೆಗೂ ಇತಿಹಾಸ ನಿರ್ಮಿಸಿರುವುದು ಮಾನವರಲ್ಲ, ಬದಲು `ಇತಿಹಾಸವೇ ಇತಿಹಾಸವನ್ನು ನಿರ್ಮಿಸಿದೆ’. ಅದು ವಿಧಿಯ ಆಟವಾಗಿದೆ. ಹೀಗಾಗಿ ಲೋಹಿಯಾ ಇತಿಹಾಸ ಚಲನೆಯ ಪ್ರೇರಕಶಕ್ತಿಯನ್ನೇ  ಕಾಣಲಿಲ್ಲ. `ಪುನರ್ಜನ್ಮ ಮತ್ತು ಕರ್ಮಸಿದ್ಧಾಂತ ವ್ಯಕ್ತಿಗೆ ಸಂಬಂಧಪಟ್ಟಂತೆ ಸಮಂಜಸವಿಲ್ಲದಿರಬಹುದೇನೋ. ಆದರೆ ರಾಷ್ಟ್ರ ಮತ್ತು ಗುಂಪುಗಳಿಗೆ ಸಂಬಂಧಪಟ್ಟಂತೆ ಅದು ಸಮಂಜಸವಾದುದೆಂದು ತೋರುತ್ತದೆ’ ಎನ್ನುವುದರ ಮೂಲಕ ಹಿಂದೂ ಧರ್ಮದ ಪುನರ್ಜನ್ಮ ಸಿದ್ಧಾಂತವನ್ನು ನಾಗರಿಕತೆಗಳ ಇತಿಹಾಸಕ್ಕೆ ಅಳವಡಿಸಿದ ದೃಷ್ಟಿಯೇ ಆಗಿದೆ ಎನ್ನುವುದು ಲೋಹಿಯಾರವರ ಆ ಮಾತುಗಳಿಂದ ಸ್ಪಷ್ಟವಾಗುತ್ತದೆ.
ಲೋಹಿಯಾ ‘ಮಾಕ್ರ್ಸ್ ನಂತರದ ಅರ್ಥಶಾಸ್ತ್ರ’ ಎನ್ನುವ ಶೀರ್ಷಿಕೆಯಲ್ಲಿ ದೀರ್ಘ ಲೇಖನವೊಂದನ್ನು ಬರೆದಿದ್ದಾರೆ. ಇದನ್ನು ಕೆಲವು ಲೋಹಿಯಾವಾದಿಗಳು ಅವರ ‘ಮ್ಯಾಗ್ನಮ್ ಓಪಸ್’ ಎಂದು ಬಣ್ಣಿಸಿರುವುದುಂಟು. ಅದು ಒಂದು ರೀತಿಯ ಭ್ರಮೆ ಹಾಗೂ ಪೊಳ್ಳುವಾದ. ಆ ಲೇಖನವು ಹೇಗೆ ಮಾಕ್ರ್ಸ್‍ವಾದದ ಬಗ್ಗೆ ಲೋಹಿಯಾರವರ ಅತ್ಯಂತ ಕಳಪೆ ತಿಳಿವಳಿಕೆಯೇ ಆಗಿದೆ. ಹೆಚ್ಚಿನ ಲೋಹಿಯಾವಾದಿಗಳು ಮಾಕ್ರ್ಸ್‍ವಾದವನ್ನು ಓದಿದವರಲ್ಲ. ಲೋಹಿಯಾ ಮಾಕ್ರ್ಸ್‍ವಾದದ ಬಗ್ಗೆ ಏನು ಹೇಳಿದರೋ ಅದು ಅದ್ಭುತ ಸತ್ಯ ಎಂದೇ ಭಾವಿಸಿಬಿಟ್ಟರು. ಲೋಹಿಯಾ ಟೀಕಿಸಿದ್ದು ಮಾಕ್ರ್ಸ್ ಏಂಗೆಲ್ಸ್ ರೂಪಿಸಿದ ಮಾಕ್ರ್ಸ್‍ವಾದವನ್ನಲ್ಲ, ಬದಲಿಗೆ ಲೋಹಿಯಾ ಟೀಕಿಸಿದ್ದು ತನ್ನ ಕಲ್ಪನೆಯ ಮಾಕ್ರ್ಸವಾದವನ್ನು.
ಅವರು ಹೇಳುವುದೇನೆಂದರೆ `ಮಾಕ್ರ್ಸ್‍ವಾದದ ಬಂಡವಾಳಶಾಹಿ ಚಿತ್ರಣ ಒಂದು ಪಶ್ಚಿಮ ಯೂರೋಪಿನ ಒಳಕ್ರಿಯೆ ಯಾಗಿದೆಯಷ್ಟೆ. ಬಂಡವಾಳಶಾಹಿಯ ಚಲತ್ವವನ್ನು  ಆಂತರಿಕ ರಚನೆಯಲ್ಲಿ; ಮೌಲ್ಯ-ಉಪಯೋಗಮೌಲ್ಯಗಳ ವೈರುಧ್ಯದಲ್ಲಿ; ಒಂದೇ ರಚನೆಯ ಕಾರ್ಮಿಕವರ್ಗ-ಬಂಡವಾಳಗಾರ ವರ್ಗಗಳ ವೈರುಧ್ಯದಲ್ಲಿ ಮಾತ್ರ ಕಾಣಲಾಗಿದೆ. ಮಾಕ್ರ್ಸ್‍ರವರ ಬಂಡವಾಳಶಾಹಿ ಚಿತ್ರಣ ಸ್ವಯಂಚಲನೆ ಹೊಂದಿದ ಪಶ್ಚಿಮ ಯೂರೋಪಿನ ಒಳ ವೃತ್ತವಾಗಿದೆ’ ‘ಮಾಕ್ರ್ಸ ವಸಾಹತುಶಾಹಿ ಶೋಷಣೆಯನ್ನು ಕಾಣಲಿಲ್ಲವೆಂದೂ, ವಸಾಹತುಗಳ ಶೋಷಣೆಯಿಂದಲೇ ಬಂಡವಾಳಶಾಹಿ ಬೆಳೆದುಬಂದುದನ್ನು ಕಾಣಲಿಲ್ಲವೆಂದೂ’ ಲೋಹಿಯಾ ಆರೋಪಿಸುತ್ತಾರೆ.
ಮಾಕ್ರ್ಸ್‍ವಾದ ನಿಜಕ್ಕೂ ಹೀಗಿದೆಯೇ? ಎಂದು ಪರಿಶೀಲಿಸೋಣ. 1847ರಲ್ಲಿ ಪ್ರಕಟವಾದ ಕಮ್ಯುನಿಸ್ಟ್ ಮ್ಯಾನಿಫೆಸ್ಟೋದಲ್ಲಿ ಮಾಕ್ರ್ಸ್ ಮತ್ತು ಏಂಗಲ್ಸ್ ನೀಡಿದ ಬಂಡವಾಳಶಾಹಿ ಚಿತ್ರಣ ಇದು. `ಮಧ್ಯಯುಗದ ಜೀತಗಾರರಿಂದ ಮೊದಲ ಪಟ್ಟಣಗಳ ಚಾರ್ಟರ್ಡ್ ಬರ್ಗರ್ಸ್ ಉದಯವಾದರು. ಈ  ಬರ್ಗರ್ಸ್‍ಗಳಿಂದ ಬಂಡವಾಳಶಾಹಿಯ ಮೊದಲ ಅಂಶಗಳು ಬೆಳೆದುಬಂದವು. ಅಮೆರಿಕವನ್ನು ಕಂಡುಹಿಡಿದುದು, ಗುಡ್‍ಹೋಪ್ ಭೂಶಿರವನ್ನು ಬಳಸಿ ಜಲಮಾರ್ಗಗಳ ಶೋಧನೆ ನಡೆಸಿದುದು, ಮೊಳಕೆಯೊಡೆಯುತ್ತಿದ್ದ ಬಂಡವಾಳಶಾಹಿಗೆ ಹೊಸ ನೆಲೆಗಳನ್ನು ತೆರೆಯಿತು. ಪೂರ್ವಭಾರತ ಮತ್ತು ಚೈನಾ ಮಾರುಕಟ್ಟೆಗಳು, ಅಮೆರಿಕದ ವಸಾಹತೀಕರಣ, ವಸಾಹತುಗಳೊಂದಿಗಿನ ವ್ಯಾಪಾರ, ಕ್ರಯವಸ್ತುಗಳಲ್ಲಿ ಹಾಗೂ ವಿನಿಮಯ ಸಾಧನಗಳಲ್ಲಿ ಆದ ಬೆಳವಣಿಗೆಗಳು ಸಾಮಾನ್ಯವಾಗಿ ವಾಣಿಜ್ಯ, ನೌಕಾಯಾನ, ಕೈಗಾರಿಕೆಗಳಿಗೆ ಹಿಂದೆಂದೂ ಇರದಷ್ಟು ಉತ್ತೇಜನ ನೀಡಿತು. ಇದು ತತ್ತರಿಸುತ್ತಿದ್ದ ಪಾಳೆಯಗಾರಿ ಸಮಾಜ ವ್ಯವಸ್ಥೆಯ ಗರ್ಭದೊಳಗಿದ್ದ ಕ್ರಾಂತಿಕಾರಿ ಅಂಶಕ್ಕೆ ತ್ವರಿತಗತಿಯ ಬೆಳವÀಣಿಗೆಯನ್ನು ಉಂಟುಮಾಡಿತು.
ಆಧುನಿಕ ಕೈಗಾರಿಕೆ ವಿಶ್ವಮಾರುಕಟ್ಟೆಯನ್ನು ಸ್ಥಾಪಿಸಿದೆ. ಇದಕ್ಕೆ ಅಮೆರಿಕದ ಶೋಧನೆ ನಾಂದಿಯಾಯಿತು. ಈ ವಿಶ್ವಮಾರುಕಟ್ಟೆಯು ವಾಣಿಜ್ಯ, ನೌಕಾಯಾನ, ಭೂಸಂಪರ್ಕ ವ್ಯವಸ್ಥೆಯ ತ್ವರಿತಗತಿಯ ಬೆಳವಣಿಗೆಗೆ ಪ್ರೇರಕವಾಯಿತು. ತಾನು ಉತ್ಪಾದಿಸಿದ ಮಾಲುಗಳಿಗೆ ಸತತವಾಗಿ ಮಾರುಕಟ್ಟೆಯು ವಿಸ್ತರಣೆಯಾಗಬೇಕಾದ ಅಗತ್ಯವು ಬಂಡವಾಳಶಾಹಿಯನ್ನು ಭೂಗೋಳದ ಮೇಲ್ಮೈಯಾದ್ಯಂತ ಓಡಿಸುತ್ತದೆ……… ವಿಶ್ವಮಾರುಕಟ್ಟೆಯ ಶೋಷಣೆಯಿಂದ ಬಂಡವಾಳಶಾಹಿಯು ಪ್ರತಿಯೊಂದು ದೇಶದ ಉತ್ಪಾದನೆ ಬಳಕೆಗಳಿಗೆ ಸಾರ್ವತ್ರಿಕವಾದ ಲಕ್ಷಣಗಳನ್ನು ನೀಡುತ್ತಿದೆ. ಸ್ಥಳೀಯ ಕಚ್ಚಾಪದಾರ್ಥಗಳಿಂದಲ್ಲದೆ ಯಾವುದೋ ಮೂಲೆಯ ವಲಯಗಳಿಂದ ತರುವ ಕಚ್ಚಾಪದಾರ್ಥಗಳ ಮೇಲೆಯೇ ನಡೆಯುವ; ಉತ್ಪನ್ನಗಳು ದೇಶದೊಳಗಡೆಯಷ್ಟೇ ಬಳಸಲ್ಪಡದೆ  ಭೂಮಿಯ ಪ್ರತಿಯೊಂದು ಮೂಲೆಗಳಲ್ಲೂ ಬಳಸಲ್ಪಡುವ ಕೈಗಾರಿಕೆಗಳು, ದೇಶದ ಉತ್ಪಾದನೆಯಿಂದಲೇ ನೀಗಿಸಲ್ಪಡುತ್ತಿದ್ದ ಬೇಡಿಕೆಗಳ ಬದಲು ದೂರದ, ಭಿನ್ನವಾದ ಭೂವಾತಾವರಣಗಳ ಉತ್ಪನ್ನಗಳೇ ಬೇಕಾಗುವ ಬೇಡಿಕೆಗಳು ಉಂಟಾಗುವುದು ನಾವು ಕಾಣುತ್ತೇವೆ. ಹಳೆಯ, ಸ್ಥಳೀಯ, ರಾಷ್ಟ್ರೀಯ ಪ್ರತ್ಯೇಕತೆ, ಸಂಕುಚಿತತೆ, ಸ್ವಂತಕ್ಕೆ ಸಾಕಾಗುವಷ್ಟು ಉತ್ಪಾದನೆ, ಇವುಗಳ ಬದಲು ಪ್ರತಿಯೊಂದು ದಿಕ್ಕಿನಲ್ಲೂ ಪರಸ್ಪರ ವ್ಯವಹಾರ, ವಿಶ್ವದಾದ್ಯಂತ ರಾಷ್ಟ್ರಗಳ ಪರಸ್ಪರಾವಲಂಬನೆಗಳು ಏರ್ಪಟ್ಟಿವೆ. ಬಂಡವಾಳಶಾಹಿಯು ಹಳ್ಳಿಗಳನ್ನು ನಗರಗಳ ಆಡಳಿತಕ್ಕೆ ಒಳಮಾಡಿದಂತೆ, ಅನಾಗರಿಕ ಅರೆನಾಗರಿಕ ದೇಶಗಳನ್ನು ನಾಗರಿಕ ದೇಶಗಳ ಮೇಲೆ, ರೈತರ ರಾಷ್ಟ್ರಗಳನ್ನು ಬಂಡವಾಳಶಾಹಿ ರಾಷ್ಟ್ರಗಳ ಮೇಲೆ ಬಲಾತ್ಕಾರದ ಪರಾವಲಂಬನೆಗೆ ಒಳಪಡಿಸಿದೆ’.  (ಕಮ್ಯುನಿಸ್ಟ್ ಮ್ಯಾನಿಫೆಸ್ಟೋ)
ಹೀಗೆ ಕಮ್ಯುನಿಸ್ಟ್ ಮ್ಯಾನಿಫೆಸ್ಟೋದ ಮೊದಲಿನ ಪುಟಗಳಲ್ಲೇ ಈ ರೀತಿಯಾಗಿ ಬಂಡವಾಳಶಾಹಿಯ ವಿಶ್ವವ್ಯಾಪಿ ಅಂಶಗಳನ್ನೂ, ಪರಿಣಾಮಗಳನ್ನೂ ವಿವರಿಸಿರುವಾಗ ‘ಮಾಕ್ರ್ಸ್‍ರವರ ಬಂಡವಾಳಶಾಹಿ ಚಿತ್ರಣ ಪಶ್ಚಿಮ ಯೂರೋಪಿನ ವೃತ್ತವಾಗಿದೆ ಅಥವಾ ಒಳಕ್ರಿಯೆಯಷ್ಟೇಯಾಗಿದೆ’ ಎಂದು ಹೇಳಲು ಸಾಧ್ಯವಿದೆಯೇ? ಮಾಕ್ರ್ಸ್‍ರವರ ಬಂಡವಾಳಶಾಹಿ ಚಿತ್ರ ವಾಸ್ತವವಾಗಿ ಜಾಗತಿಕ  ಯೂರೋಪಿನ ಬಂಡವಾಳಶಾಹಿ ಬೆಳವಣಿಗೆಗೆ ಬಂಡವಾಳದಪೂರ್ವ ಶೇಖರಣೆ  ಹೇಗಾಯಿತೆನ್ನುವುದನ್ನು ಅಲ್ಲಿ ವಸಾಹತುವಾದ ಏಕೆ ಅನಿವಾರ್ಯವಾಯಿತೆಂದೂ ಮಾಕ್ರ್ಸ್ ತಮ್ಮ ‘ಬಂಡವಾಳ’ ಗ್ರಂಥದಲ್ಲಿ ಹಾಗೂ ಇನ್ನಿತರ ಬರಹಗಳಲ್ಲಿ ವಿವರಿಸಿದ್ದಾರೆ.
ಲೋಹಿಯಾರವರ ಮೂಲ ಆರೋಪಕ್ಕೆ ಆಧಾರವೇ ಇಲ್ಲದಿರುವಾಗ, ಅದರಿಂದ ಹುಟ್ಟುವ ಇತರೆ ಆರೋಪಗಳೂ ತಾವಾಗಿಯೇ ಉದುರಿಹೋಗುತ್ತವೆ. ಹೆಚ್ಚಿನ ವಿವರಗಳಿಗೆ ನನ್ನ ‘ಲೋಹಿಯಾ ವಿಚಾರಗಳ ಒಂದು ವಿಮರ್ಶೆ’ ಪುಸ್ತಕವನ್ನು ನೋಡಬಹುದು.
(ಮುಂದುವರಿಯುವುದು)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....