Homeಕರ್ನಾಟಕವಕ್ರಬುದ್ಧಿಯ ಚಕ್ರತೀರ್ಥ ಪರಿಷ್ಕರಿಸಿರುವ ಪಠ್ಯವನ್ನು ಸರ್ಕಾರ ಹಿಂಪಡೆಯುವವರೆಗೂ ಹೋರಾಟ: ಹೊಳಲಕೆರೆ ತಿಪ್ಪೆರುದ್ರ ಸ್ವಾಮಿಜಿ

ವಕ್ರಬುದ್ಧಿಯ ಚಕ್ರತೀರ್ಥ ಪರಿಷ್ಕರಿಸಿರುವ ಪಠ್ಯವನ್ನು ಸರ್ಕಾರ ಹಿಂಪಡೆಯುವವರೆಗೂ ಹೋರಾಟ: ಹೊಳಲಕೆರೆ ತಿಪ್ಪೆರುದ್ರ ಸ್ವಾಮಿಜಿ

ಪಠ್ಯಪುಸ್ತಕ ಹಗರಣ ವಿರೋಧಿಸಿ ಚಿಕ್ಕಮಗಳೂರಿನಲ್ಲಿ ಪ್ರತಿಭಟನಾ ಪಾದಯಾತ್ರೆ

- Advertisement -
- Advertisement -

ಬಿಜೆಪಿಯ ಪಠ್ಯ ಪುಸ್ತಕ ಹಗರಣ ವಿರೋಧಿಸಿ ಚಿಕ್ಕಮಗಳೂರಿನ ದೇವನೂರುನಿಂದ ಪ್ರಾರಂಭವಾದ ಜನ ಜಾಗೃತಿ ಪಾದಯಾತ್ರೆ ನಿಡಘಟ್ಟ ಗ್ರಾಮದ ಗಾಂಧಿ ಗುಡಿಯಲ್ಲಿ ಶುಕ್ರವಾರ ಸಮಾರೋಪಗೊಂಡಿತು. ವಿವಿಧ ಸಂಘಟನೆಗಳು ಆಯೋಜಿಸಿದ್ದ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಹೊಳಲಕೆರೆ ತಿಪ್ಪೆರುದ್ರ ಸ್ವಾಮಿಜಿ, “ಶಿಕ್ಷಣ ಜ್ಞಾನೆವೇ ಇಲ್ಲದವನಿಗೆ ಪಠ್ಯ ಪುಸ್ತಕ ಪರಿಷ್ಕರಣೆ ಜವಾಬ್ದಾರಿ ನೀಡಿರುವುದು ದೊಡ್ಡ ದುರಂತ. ವಕ್ರಬುದ್ಧಿಯ ರೋಹಿತ್ ಚಕ್ರತೀರ್ಥ ಪರಿಷ್ಕರಿಸಿರುವ ಪಠ್ಯವನ್ನು ಸರ್ಕಾರ ಹಿಂಪಡೆಯುವವರೆಗೂ ಹೋರಾಟ ಮುಂದುವರೆಸಬೇಕು” ಎಂದು ಕರೆ ನೀಡಿದ್ದಾರೆ.

“ಬಡತನ, ಅಸೂಯೆ ನಿವಾರಣೆಗೆ ಹೋರಾಡಿದಂತಹ ಬಸವಣ್ಣ, ಬುದ್ಧ, ಅಂಬೇಡ್ಕರ್‌ ಅಂತಹ ಮಹನೀಯರ ಸಾಧನೆಯನ್ನು ಪಠ್ಯದಿಂದ ತೆಗೆದು ಅವರಿಗೆ ಅವಮಾನ ಮಾಡುವಂತಹ ಕೆಲಸ ಪ್ರಸ್ತುತ ನಡೆಯುತ್ತಿದೆ. ಇದರ ವಿರುದ್ಧ ಸಮಾಜದ ಎಲ್ಲಾ ನಾಗರೀಕರು ಒಗ್ಗಟ್ಟಾಗಿ ಹೋರಾಟ ನಡೆಬೇಕು. ಅಂಹತ ಮಹನೀಯರಿಂದಲೇ ಪ್ರಸ್ತುತ ಹಿಂದೂ ಧರ್ಮ ಉಳಿದಿರುವುದಕ್ಕೆ ಸಾಕ್ಷಿ. ಇಲ್ಲದಿದ್ದರೆ ನಮ್ಮನ್ನು ಗರ್‌ ವಾಪಸ್ಸಿ ಎಂದು ಕರೆದುಕೊಂಡು ಬರಬೇಕಿತ್ತು. ಇದನ್ನು ಅರಿಯದ ಸರ್ಕಾರ, ಶಿಕ್ಷಣ ಜ್ಞಾನೆವೇ ಇಲ್ಲದವನಿಗೆ ಪಠ್ಯ ಪುಸ್ತಕ ಪರಿಷ್ಕರಣೆ ಜವಾಬ್ದಾರಿ ನೀಡಿದರುವುದು ದೊಡ್ಡ ದುರಂತ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸರ್ಕಾರ ಮಕ್ಕಳ ಪಠ್ಯದಲ್ಲಿ ಹಸಿ ಸಳ್ಳನ್ನು ಸೇರಿಸುವ ಕೆಲಸ ಮಾಡುತ್ತಿದೆ. ಇದರಿಂದ ನಾಡಿನ ಮಹಾನೀಯರ ಇತಿಹಾಸಗಳು ಕಣ್ಮರೆಯಾಗುವ ಸಂಭವವಿರುವುದರಿಂದ ಅದನ್ನು ಪ್ರತಿಯೊಬ್ಬರು ವಿರೋಧಿಸುವ ಮೂಲಕ ಹೋರಾಟಗಳಲ್ಲಿ ಭಾಗವಹಿಸಬೇಕು. ವಕ್ರಬುದ್ಧಿಯ ರೋಹಿತ್ ಚಕ್ರತೀರ್ಥ ಪರಿಷ್ಕರಿಸುವ ಪಠ್ಯವನ್ನು ಸರ್ಕಾರ ಹಿಂಪಡೆಯುವವರೆಗೂ ಹೋರಾಟ ಮುಂದುವರೆಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯ ಪುಸ್ತಕ ಹಗರಣ – ಸಚಿವ ಬಿಸಿ ನಾಗೇಶ್‌ ‘ಮೂರ್ಖ’: ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ

ಹಿರಿಯ ಲೇಖಕ ಎಸ್‌.ಜಿ. ಸಿದ್ದರಾಮಯ್ಯ ಅವರು ಮಾತನಾಡಿ,“ಯಾವುದೇ ಶಿಕ್ಷಣ ಹಿನ್ನೆಲೆ ಹೊಂದಿರದೇ ಟ್ಯುಟೋರಿಯಲ್ ನಡೆಸಿಕೊಂಡು ಜೀವನ ಮಾಡುತ್ತಿದ್ದ ರೋಹಿತ್ ಚಕ್ರತೀರ್ಥನಿಗೆ ರಾಜ್ಯದ ಪಠ್ಯಪುಸ್ತಕ ಪರಿಷ್ಕರಣೆಯ ದೊಡ್ಡ ಜವಾಬ್ದಾರಿ ನೀಡಿರುವುದು ವಿಪರ್ಯಾಸ. ಮುಂದಿನ ಮಕ್ಕಳ ಭವಿಷ್ಯದ ದೃಷ್ಟಿಯಲ್ಲಿ ಅವರ ಕಲಿಕೆಯ ಜೀವನ ಎಂದಿಗೂ ವ್ಯರ್ಥವಾಗಬಾರದೆಂಬುದರಿಂದ ಈ ಪರಿಷ್ಕರಣೆ ವಿರುದ್ಧ ನಾವೆಲ್ಲರೂ ಹೋರಾಡಬೇಕಿದೆ” ಎಂದು ಹೇಳಿದ್ದಾರೆ.

“ರಾಜ್ಯದ ಯಾವ ಪಕ್ಷವು ಮಕ್ಕಳ ಪಠ್ಯ ವಿಷಯದಲ್ಲಿ ಈ ರೀತಿಯ ದ್ವಂದ್ವ ನಿಲುವುಗಳನ್ನು ಮಾಡಿರಲಿಲ್ಲ. ಪ್ರಜಾಪ್ರಭುತ್ವವಾಗಿ ಪಠ್ಯ ರಚನೆ ಮಾಡಿದ್ದರು. ಅದರೆ ಇಂದಿನ ಸರ್ಕಾರ ಬಂದಾಗಿನಿಂದ ಹಿಂದುತ್ವದ ಹೆಸರನ್ನು ಹೇಳಿಕೊಂಡು ಮಕ್ಕಳ ಪಠ್ಯದಲ್ಲೂ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿರುವುದು ದುರ್ದೈವ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಕಡೂರು ತಾಲೂಕಿನ ಎಸ್. ಕೊಪ್ಪಲಿನಲ್ಲಿ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಸ್ವಾಮೀಜಿ, “ಮನುಷ್ಯರ ನಡುವೆ ಬೇಲಿ ಕಟ್ಟಲಾಗುತ್ತಿದೆ. ಸಮಾಜದಲ್ಲಿ ವಿಷಬೀಜ ಬಿತ್ತುವವರ ಎದುರು ಜಾಗೃತಿ ಅವಶ್ಯಕವಾಗಿದೆ. ಪಠ್ಯ ಪುಸ್ತಕದಲ್ಲಿ ಸಾಕಷ್ಟು ಗೊಂದಲ ನಿರ್ಮಾಣವಾಗಿದೆ”

“ನಾಡಿನ ಅನೇಕ ಪ್ರಜ್ಞಾವಂತರು ಧ್ವನಿ ಎತ್ತಿದ ಬಳಿಕ ಮತ್ತೆ ಪರಿಷ್ಕರಣೆ ಮಾಡುತ್ತೇವೆ ಎಂದಿದ್ದರೂ, ಇನ್ನೂ ಅನೇಕ ಅವಾಂತಾರಗಳಿವೆ. ಮಕ್ಕಳಿಗೆ ಸರಿಯಾದ ಇತಿಹಾಸ, ಚಾರಿತ್ಯ್ರ ಕೊಡದಿದ್ದರೆ ಅವರ ಭವಿಷ್ಯವೇನು ಎಂಬುವುದರ ಬಗ್ಗೆ ಶಿಕ್ಷಣ ತಜ್ಞರು, ರಾಜಕೀಯ ನೇತಾರರು ಗಂಭೀರವಾಗಿ ಯೋಚಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯ ಪುಸ್ತಕ ಹಗರಣ ವಿರೋಧಿಸಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಕ್ಷೇತ್ರ ತಿಪಟೂರಿನಲ್ಲಿ ಪಾದಯಾತ್ರೆ

ಬೆಂಗಳೂರಿನ ಶ್ರೀ ಬಸವಕುಮಾರ ಸ್ವಾಮೀಜಿ, ಕ್ಯಾತನಬೀಡು ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ರವೀಶ್ ಕ್ಯಾತನಬೀಡು, ನಟರಾಜ್ ಎಸ್. ಕೊಪ್ಪಲು, ಸಾಹಿತಿ ಶ್ರೀಪಾದ ಭಟ್, ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ, ನಿವೃತ್ತ ಅಧಿಕಾರಿ ರುದ್ರಪ್ಪ, ಸಾಹಿತಿ ಬಿ. ಚಂದ್ರೇಗೌಡ, ರೇಣುಕಾ ಆರಾಧ್ಯ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...