Homeಕರ್ನಾಟಕವಕ್ರಬುದ್ಧಿಯ ಚಕ್ರತೀರ್ಥ ಪರಿಷ್ಕರಿಸಿರುವ ಪಠ್ಯವನ್ನು ಸರ್ಕಾರ ಹಿಂಪಡೆಯುವವರೆಗೂ ಹೋರಾಟ: ಹೊಳಲಕೆರೆ ತಿಪ್ಪೆರುದ್ರ ಸ್ವಾಮಿಜಿ

ವಕ್ರಬುದ್ಧಿಯ ಚಕ್ರತೀರ್ಥ ಪರಿಷ್ಕರಿಸಿರುವ ಪಠ್ಯವನ್ನು ಸರ್ಕಾರ ಹಿಂಪಡೆಯುವವರೆಗೂ ಹೋರಾಟ: ಹೊಳಲಕೆರೆ ತಿಪ್ಪೆರುದ್ರ ಸ್ವಾಮಿಜಿ

ಪಠ್ಯಪುಸ್ತಕ ಹಗರಣ ವಿರೋಧಿಸಿ ಚಿಕ್ಕಮಗಳೂರಿನಲ್ಲಿ ಪ್ರತಿಭಟನಾ ಪಾದಯಾತ್ರೆ

- Advertisement -
- Advertisement -

ಬಿಜೆಪಿಯ ಪಠ್ಯ ಪುಸ್ತಕ ಹಗರಣ ವಿರೋಧಿಸಿ ಚಿಕ್ಕಮಗಳೂರಿನ ದೇವನೂರುನಿಂದ ಪ್ರಾರಂಭವಾದ ಜನ ಜಾಗೃತಿ ಪಾದಯಾತ್ರೆ ನಿಡಘಟ್ಟ ಗ್ರಾಮದ ಗಾಂಧಿ ಗುಡಿಯಲ್ಲಿ ಶುಕ್ರವಾರ ಸಮಾರೋಪಗೊಂಡಿತು. ವಿವಿಧ ಸಂಘಟನೆಗಳು ಆಯೋಜಿಸಿದ್ದ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಹೊಳಲಕೆರೆ ತಿಪ್ಪೆರುದ್ರ ಸ್ವಾಮಿಜಿ, “ಶಿಕ್ಷಣ ಜ್ಞಾನೆವೇ ಇಲ್ಲದವನಿಗೆ ಪಠ್ಯ ಪುಸ್ತಕ ಪರಿಷ್ಕರಣೆ ಜವಾಬ್ದಾರಿ ನೀಡಿರುವುದು ದೊಡ್ಡ ದುರಂತ. ವಕ್ರಬುದ್ಧಿಯ ರೋಹಿತ್ ಚಕ್ರತೀರ್ಥ ಪರಿಷ್ಕರಿಸಿರುವ ಪಠ್ಯವನ್ನು ಸರ್ಕಾರ ಹಿಂಪಡೆಯುವವರೆಗೂ ಹೋರಾಟ ಮುಂದುವರೆಸಬೇಕು” ಎಂದು ಕರೆ ನೀಡಿದ್ದಾರೆ.

“ಬಡತನ, ಅಸೂಯೆ ನಿವಾರಣೆಗೆ ಹೋರಾಡಿದಂತಹ ಬಸವಣ್ಣ, ಬುದ್ಧ, ಅಂಬೇಡ್ಕರ್‌ ಅಂತಹ ಮಹನೀಯರ ಸಾಧನೆಯನ್ನು ಪಠ್ಯದಿಂದ ತೆಗೆದು ಅವರಿಗೆ ಅವಮಾನ ಮಾಡುವಂತಹ ಕೆಲಸ ಪ್ರಸ್ತುತ ನಡೆಯುತ್ತಿದೆ. ಇದರ ವಿರುದ್ಧ ಸಮಾಜದ ಎಲ್ಲಾ ನಾಗರೀಕರು ಒಗ್ಗಟ್ಟಾಗಿ ಹೋರಾಟ ನಡೆಬೇಕು. ಅಂಹತ ಮಹನೀಯರಿಂದಲೇ ಪ್ರಸ್ತುತ ಹಿಂದೂ ಧರ್ಮ ಉಳಿದಿರುವುದಕ್ಕೆ ಸಾಕ್ಷಿ. ಇಲ್ಲದಿದ್ದರೆ ನಮ್ಮನ್ನು ಗರ್‌ ವಾಪಸ್ಸಿ ಎಂದು ಕರೆದುಕೊಂಡು ಬರಬೇಕಿತ್ತು. ಇದನ್ನು ಅರಿಯದ ಸರ್ಕಾರ, ಶಿಕ್ಷಣ ಜ್ಞಾನೆವೇ ಇಲ್ಲದವನಿಗೆ ಪಠ್ಯ ಪುಸ್ತಕ ಪರಿಷ್ಕರಣೆ ಜವಾಬ್ದಾರಿ ನೀಡಿದರುವುದು ದೊಡ್ಡ ದುರಂತ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸರ್ಕಾರ ಮಕ್ಕಳ ಪಠ್ಯದಲ್ಲಿ ಹಸಿ ಸಳ್ಳನ್ನು ಸೇರಿಸುವ ಕೆಲಸ ಮಾಡುತ್ತಿದೆ. ಇದರಿಂದ ನಾಡಿನ ಮಹಾನೀಯರ ಇತಿಹಾಸಗಳು ಕಣ್ಮರೆಯಾಗುವ ಸಂಭವವಿರುವುದರಿಂದ ಅದನ್ನು ಪ್ರತಿಯೊಬ್ಬರು ವಿರೋಧಿಸುವ ಮೂಲಕ ಹೋರಾಟಗಳಲ್ಲಿ ಭಾಗವಹಿಸಬೇಕು. ವಕ್ರಬುದ್ಧಿಯ ರೋಹಿತ್ ಚಕ್ರತೀರ್ಥ ಪರಿಷ್ಕರಿಸುವ ಪಠ್ಯವನ್ನು ಸರ್ಕಾರ ಹಿಂಪಡೆಯುವವರೆಗೂ ಹೋರಾಟ ಮುಂದುವರೆಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯ ಪುಸ್ತಕ ಹಗರಣ – ಸಚಿವ ಬಿಸಿ ನಾಗೇಶ್‌ ‘ಮೂರ್ಖ’: ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ

ಹಿರಿಯ ಲೇಖಕ ಎಸ್‌.ಜಿ. ಸಿದ್ದರಾಮಯ್ಯ ಅವರು ಮಾತನಾಡಿ,“ಯಾವುದೇ ಶಿಕ್ಷಣ ಹಿನ್ನೆಲೆ ಹೊಂದಿರದೇ ಟ್ಯುಟೋರಿಯಲ್ ನಡೆಸಿಕೊಂಡು ಜೀವನ ಮಾಡುತ್ತಿದ್ದ ರೋಹಿತ್ ಚಕ್ರತೀರ್ಥನಿಗೆ ರಾಜ್ಯದ ಪಠ್ಯಪುಸ್ತಕ ಪರಿಷ್ಕರಣೆಯ ದೊಡ್ಡ ಜವಾಬ್ದಾರಿ ನೀಡಿರುವುದು ವಿಪರ್ಯಾಸ. ಮುಂದಿನ ಮಕ್ಕಳ ಭವಿಷ್ಯದ ದೃಷ್ಟಿಯಲ್ಲಿ ಅವರ ಕಲಿಕೆಯ ಜೀವನ ಎಂದಿಗೂ ವ್ಯರ್ಥವಾಗಬಾರದೆಂಬುದರಿಂದ ಈ ಪರಿಷ್ಕರಣೆ ವಿರುದ್ಧ ನಾವೆಲ್ಲರೂ ಹೋರಾಡಬೇಕಿದೆ” ಎಂದು ಹೇಳಿದ್ದಾರೆ.

“ರಾಜ್ಯದ ಯಾವ ಪಕ್ಷವು ಮಕ್ಕಳ ಪಠ್ಯ ವಿಷಯದಲ್ಲಿ ಈ ರೀತಿಯ ದ್ವಂದ್ವ ನಿಲುವುಗಳನ್ನು ಮಾಡಿರಲಿಲ್ಲ. ಪ್ರಜಾಪ್ರಭುತ್ವವಾಗಿ ಪಠ್ಯ ರಚನೆ ಮಾಡಿದ್ದರು. ಅದರೆ ಇಂದಿನ ಸರ್ಕಾರ ಬಂದಾಗಿನಿಂದ ಹಿಂದುತ್ವದ ಹೆಸರನ್ನು ಹೇಳಿಕೊಂಡು ಮಕ್ಕಳ ಪಠ್ಯದಲ್ಲೂ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿರುವುದು ದುರ್ದೈವ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಕಡೂರು ತಾಲೂಕಿನ ಎಸ್. ಕೊಪ್ಪಲಿನಲ್ಲಿ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಸ್ವಾಮೀಜಿ, “ಮನುಷ್ಯರ ನಡುವೆ ಬೇಲಿ ಕಟ್ಟಲಾಗುತ್ತಿದೆ. ಸಮಾಜದಲ್ಲಿ ವಿಷಬೀಜ ಬಿತ್ತುವವರ ಎದುರು ಜಾಗೃತಿ ಅವಶ್ಯಕವಾಗಿದೆ. ಪಠ್ಯ ಪುಸ್ತಕದಲ್ಲಿ ಸಾಕಷ್ಟು ಗೊಂದಲ ನಿರ್ಮಾಣವಾಗಿದೆ”

“ನಾಡಿನ ಅನೇಕ ಪ್ರಜ್ಞಾವಂತರು ಧ್ವನಿ ಎತ್ತಿದ ಬಳಿಕ ಮತ್ತೆ ಪರಿಷ್ಕರಣೆ ಮಾಡುತ್ತೇವೆ ಎಂದಿದ್ದರೂ, ಇನ್ನೂ ಅನೇಕ ಅವಾಂತಾರಗಳಿವೆ. ಮಕ್ಕಳಿಗೆ ಸರಿಯಾದ ಇತಿಹಾಸ, ಚಾರಿತ್ಯ್ರ ಕೊಡದಿದ್ದರೆ ಅವರ ಭವಿಷ್ಯವೇನು ಎಂಬುವುದರ ಬಗ್ಗೆ ಶಿಕ್ಷಣ ತಜ್ಞರು, ರಾಜಕೀಯ ನೇತಾರರು ಗಂಭೀರವಾಗಿ ಯೋಚಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯ ಪುಸ್ತಕ ಹಗರಣ ವಿರೋಧಿಸಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಕ್ಷೇತ್ರ ತಿಪಟೂರಿನಲ್ಲಿ ಪಾದಯಾತ್ರೆ

ಬೆಂಗಳೂರಿನ ಶ್ರೀ ಬಸವಕುಮಾರ ಸ್ವಾಮೀಜಿ, ಕ್ಯಾತನಬೀಡು ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ರವೀಶ್ ಕ್ಯಾತನಬೀಡು, ನಟರಾಜ್ ಎಸ್. ಕೊಪ್ಪಲು, ಸಾಹಿತಿ ಶ್ರೀಪಾದ ಭಟ್, ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ, ನಿವೃತ್ತ ಅಧಿಕಾರಿ ರುದ್ರಪ್ಪ, ಸಾಹಿತಿ ಬಿ. ಚಂದ್ರೇಗೌಡ, ರೇಣುಕಾ ಆರಾಧ್ಯ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...