Homeಕರ್ನಾಟಕವಕ್ರಬುದ್ಧಿಯ ಚಕ್ರತೀರ್ಥ ಪರಿಷ್ಕರಿಸಿರುವ ಪಠ್ಯವನ್ನು ಸರ್ಕಾರ ಹಿಂಪಡೆಯುವವರೆಗೂ ಹೋರಾಟ: ಹೊಳಲಕೆರೆ ತಿಪ್ಪೆರುದ್ರ ಸ್ವಾಮಿಜಿ

ವಕ್ರಬುದ್ಧಿಯ ಚಕ್ರತೀರ್ಥ ಪರಿಷ್ಕರಿಸಿರುವ ಪಠ್ಯವನ್ನು ಸರ್ಕಾರ ಹಿಂಪಡೆಯುವವರೆಗೂ ಹೋರಾಟ: ಹೊಳಲಕೆರೆ ತಿಪ್ಪೆರುದ್ರ ಸ್ವಾಮಿಜಿ

ಪಠ್ಯಪುಸ್ತಕ ಹಗರಣ ವಿರೋಧಿಸಿ ಚಿಕ್ಕಮಗಳೂರಿನಲ್ಲಿ ಪ್ರತಿಭಟನಾ ಪಾದಯಾತ್ರೆ

- Advertisement -
- Advertisement -

ಬಿಜೆಪಿಯ ಪಠ್ಯ ಪುಸ್ತಕ ಹಗರಣ ವಿರೋಧಿಸಿ ಚಿಕ್ಕಮಗಳೂರಿನ ದೇವನೂರುನಿಂದ ಪ್ರಾರಂಭವಾದ ಜನ ಜಾಗೃತಿ ಪಾದಯಾತ್ರೆ ನಿಡಘಟ್ಟ ಗ್ರಾಮದ ಗಾಂಧಿ ಗುಡಿಯಲ್ಲಿ ಶುಕ್ರವಾರ ಸಮಾರೋಪಗೊಂಡಿತು. ವಿವಿಧ ಸಂಘಟನೆಗಳು ಆಯೋಜಿಸಿದ್ದ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಹೊಳಲಕೆರೆ ತಿಪ್ಪೆರುದ್ರ ಸ್ವಾಮಿಜಿ, “ಶಿಕ್ಷಣ ಜ್ಞಾನೆವೇ ಇಲ್ಲದವನಿಗೆ ಪಠ್ಯ ಪುಸ್ತಕ ಪರಿಷ್ಕರಣೆ ಜವಾಬ್ದಾರಿ ನೀಡಿರುವುದು ದೊಡ್ಡ ದುರಂತ. ವಕ್ರಬುದ್ಧಿಯ ರೋಹಿತ್ ಚಕ್ರತೀರ್ಥ ಪರಿಷ್ಕರಿಸಿರುವ ಪಠ್ಯವನ್ನು ಸರ್ಕಾರ ಹಿಂಪಡೆಯುವವರೆಗೂ ಹೋರಾಟ ಮುಂದುವರೆಸಬೇಕು” ಎಂದು ಕರೆ ನೀಡಿದ್ದಾರೆ.

“ಬಡತನ, ಅಸೂಯೆ ನಿವಾರಣೆಗೆ ಹೋರಾಡಿದಂತಹ ಬಸವಣ್ಣ, ಬುದ್ಧ, ಅಂಬೇಡ್ಕರ್‌ ಅಂತಹ ಮಹನೀಯರ ಸಾಧನೆಯನ್ನು ಪಠ್ಯದಿಂದ ತೆಗೆದು ಅವರಿಗೆ ಅವಮಾನ ಮಾಡುವಂತಹ ಕೆಲಸ ಪ್ರಸ್ತುತ ನಡೆಯುತ್ತಿದೆ. ಇದರ ವಿರುದ್ಧ ಸಮಾಜದ ಎಲ್ಲಾ ನಾಗರೀಕರು ಒಗ್ಗಟ್ಟಾಗಿ ಹೋರಾಟ ನಡೆಬೇಕು. ಅಂಹತ ಮಹನೀಯರಿಂದಲೇ ಪ್ರಸ್ತುತ ಹಿಂದೂ ಧರ್ಮ ಉಳಿದಿರುವುದಕ್ಕೆ ಸಾಕ್ಷಿ. ಇಲ್ಲದಿದ್ದರೆ ನಮ್ಮನ್ನು ಗರ್‌ ವಾಪಸ್ಸಿ ಎಂದು ಕರೆದುಕೊಂಡು ಬರಬೇಕಿತ್ತು. ಇದನ್ನು ಅರಿಯದ ಸರ್ಕಾರ, ಶಿಕ್ಷಣ ಜ್ಞಾನೆವೇ ಇಲ್ಲದವನಿಗೆ ಪಠ್ಯ ಪುಸ್ತಕ ಪರಿಷ್ಕರಣೆ ಜವಾಬ್ದಾರಿ ನೀಡಿದರುವುದು ದೊಡ್ಡ ದುರಂತ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸರ್ಕಾರ ಮಕ್ಕಳ ಪಠ್ಯದಲ್ಲಿ ಹಸಿ ಸಳ್ಳನ್ನು ಸೇರಿಸುವ ಕೆಲಸ ಮಾಡುತ್ತಿದೆ. ಇದರಿಂದ ನಾಡಿನ ಮಹಾನೀಯರ ಇತಿಹಾಸಗಳು ಕಣ್ಮರೆಯಾಗುವ ಸಂಭವವಿರುವುದರಿಂದ ಅದನ್ನು ಪ್ರತಿಯೊಬ್ಬರು ವಿರೋಧಿಸುವ ಮೂಲಕ ಹೋರಾಟಗಳಲ್ಲಿ ಭಾಗವಹಿಸಬೇಕು. ವಕ್ರಬುದ್ಧಿಯ ರೋಹಿತ್ ಚಕ್ರತೀರ್ಥ ಪರಿಷ್ಕರಿಸುವ ಪಠ್ಯವನ್ನು ಸರ್ಕಾರ ಹಿಂಪಡೆಯುವವರೆಗೂ ಹೋರಾಟ ಮುಂದುವರೆಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯ ಪುಸ್ತಕ ಹಗರಣ – ಸಚಿವ ಬಿಸಿ ನಾಗೇಶ್‌ ‘ಮೂರ್ಖ’: ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ

ಹಿರಿಯ ಲೇಖಕ ಎಸ್‌.ಜಿ. ಸಿದ್ದರಾಮಯ್ಯ ಅವರು ಮಾತನಾಡಿ,“ಯಾವುದೇ ಶಿಕ್ಷಣ ಹಿನ್ನೆಲೆ ಹೊಂದಿರದೇ ಟ್ಯುಟೋರಿಯಲ್ ನಡೆಸಿಕೊಂಡು ಜೀವನ ಮಾಡುತ್ತಿದ್ದ ರೋಹಿತ್ ಚಕ್ರತೀರ್ಥನಿಗೆ ರಾಜ್ಯದ ಪಠ್ಯಪುಸ್ತಕ ಪರಿಷ್ಕರಣೆಯ ದೊಡ್ಡ ಜವಾಬ್ದಾರಿ ನೀಡಿರುವುದು ವಿಪರ್ಯಾಸ. ಮುಂದಿನ ಮಕ್ಕಳ ಭವಿಷ್ಯದ ದೃಷ್ಟಿಯಲ್ಲಿ ಅವರ ಕಲಿಕೆಯ ಜೀವನ ಎಂದಿಗೂ ವ್ಯರ್ಥವಾಗಬಾರದೆಂಬುದರಿಂದ ಈ ಪರಿಷ್ಕರಣೆ ವಿರುದ್ಧ ನಾವೆಲ್ಲರೂ ಹೋರಾಡಬೇಕಿದೆ” ಎಂದು ಹೇಳಿದ್ದಾರೆ.

“ರಾಜ್ಯದ ಯಾವ ಪಕ್ಷವು ಮಕ್ಕಳ ಪಠ್ಯ ವಿಷಯದಲ್ಲಿ ಈ ರೀತಿಯ ದ್ವಂದ್ವ ನಿಲುವುಗಳನ್ನು ಮಾಡಿರಲಿಲ್ಲ. ಪ್ರಜಾಪ್ರಭುತ್ವವಾಗಿ ಪಠ್ಯ ರಚನೆ ಮಾಡಿದ್ದರು. ಅದರೆ ಇಂದಿನ ಸರ್ಕಾರ ಬಂದಾಗಿನಿಂದ ಹಿಂದುತ್ವದ ಹೆಸರನ್ನು ಹೇಳಿಕೊಂಡು ಮಕ್ಕಳ ಪಠ್ಯದಲ್ಲೂ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿರುವುದು ದುರ್ದೈವ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಕಡೂರು ತಾಲೂಕಿನ ಎಸ್. ಕೊಪ್ಪಲಿನಲ್ಲಿ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಸ್ವಾಮೀಜಿ, “ಮನುಷ್ಯರ ನಡುವೆ ಬೇಲಿ ಕಟ್ಟಲಾಗುತ್ತಿದೆ. ಸಮಾಜದಲ್ಲಿ ವಿಷಬೀಜ ಬಿತ್ತುವವರ ಎದುರು ಜಾಗೃತಿ ಅವಶ್ಯಕವಾಗಿದೆ. ಪಠ್ಯ ಪುಸ್ತಕದಲ್ಲಿ ಸಾಕಷ್ಟು ಗೊಂದಲ ನಿರ್ಮಾಣವಾಗಿದೆ”

“ನಾಡಿನ ಅನೇಕ ಪ್ರಜ್ಞಾವಂತರು ಧ್ವನಿ ಎತ್ತಿದ ಬಳಿಕ ಮತ್ತೆ ಪರಿಷ್ಕರಣೆ ಮಾಡುತ್ತೇವೆ ಎಂದಿದ್ದರೂ, ಇನ್ನೂ ಅನೇಕ ಅವಾಂತಾರಗಳಿವೆ. ಮಕ್ಕಳಿಗೆ ಸರಿಯಾದ ಇತಿಹಾಸ, ಚಾರಿತ್ಯ್ರ ಕೊಡದಿದ್ದರೆ ಅವರ ಭವಿಷ್ಯವೇನು ಎಂಬುವುದರ ಬಗ್ಗೆ ಶಿಕ್ಷಣ ತಜ್ಞರು, ರಾಜಕೀಯ ನೇತಾರರು ಗಂಭೀರವಾಗಿ ಯೋಚಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯ ಪುಸ್ತಕ ಹಗರಣ ವಿರೋಧಿಸಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಕ್ಷೇತ್ರ ತಿಪಟೂರಿನಲ್ಲಿ ಪಾದಯಾತ್ರೆ

ಬೆಂಗಳೂರಿನ ಶ್ರೀ ಬಸವಕುಮಾರ ಸ್ವಾಮೀಜಿ, ಕ್ಯಾತನಬೀಡು ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ರವೀಶ್ ಕ್ಯಾತನಬೀಡು, ನಟರಾಜ್ ಎಸ್. ಕೊಪ್ಪಲು, ಸಾಹಿತಿ ಶ್ರೀಪಾದ ಭಟ್, ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ, ನಿವೃತ್ತ ಅಧಿಕಾರಿ ರುದ್ರಪ್ಪ, ಸಾಹಿತಿ ಬಿ. ಚಂದ್ರೇಗೌಡ, ರೇಣುಕಾ ಆರಾಧ್ಯ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...