Homeಸಿನಿಮಾಕ್ರೀಡೆವಿಶ್ವಕಪ್ ಕ್ರಿಕೆಟ್: ಭಾರತ ನ್ಯೂಝಿಲೆಂಡ್ ಆಟಕ್ಕೆ ಮಳೆ ಅಡ್ಡಿ: ಮುಂದೇನಾಗುತ್ತೇ ಗೊತ್ತೆ?

ವಿಶ್ವಕಪ್ ಕ್ರಿಕೆಟ್: ಭಾರತ ನ್ಯೂಝಿಲೆಂಡ್ ಆಟಕ್ಕೆ ಮಳೆ ಅಡ್ಡಿ: ಮುಂದೇನಾಗುತ್ತೇ ಗೊತ್ತೆ?

- Advertisement -
- Advertisement -

ಬಹುನಿರೀಕ್ಷಿತ ಸೆಮಿಫೈನಲ್ ಪಂದ್ಯದಲ್ಲಿ ಮಳೆಯದ್ದೇ ಆಟ!

4 ವರ್ಷಕ್ಕೊಮ್ಮೆ ನಡೆಯುವ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಬಹುನಿರೀಕ್ಷಿತ ಘಟ್ಟವಾಗಿದ್ದ ಸೆಮಿಫೈನಲ್ ಪಂದ್ಯ ಇಂದು ಭಾರತ ಮತ್ತು ನ್ಯೂಝಿಲೆಂಡ್ ತಂಡದ ನಡುವೆ ನಡೆಯುತ್ತಿತ್ತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ನ್ಯೂಝಿಲೆಂಡ್ ತಂಡದ ವಿರುದ್ಧ ಭಾರತದ ಬೌಲರ್ ಗಳು ಆರಂಭದಿಂದಲೂ ಕಟ್ಟುನಿಟ್ಟಾದ ಬೌಲಿಂಗ್ ದಾಳಿಯಿಂದಾಗಿ ಅಲ್ಪ ಮೊತ್ತೊಕ್ಕೆ ಕಟ್ಟಿಹಾಕಲು ಸಫಲವಾಗಿತ್ತು. ಆರಂಭದ ಎರಡೂ ಓವರ್ ಅನ್ನು ಭುವನೇಶ್ವರ್ ಕುಮಾರ್ ಮತ್ತು ಜಸ್ಪ್ರೀತ್ ಭುಮ್ರಾ ಮೇಡೆನ್ ಸಾಧನೆ ಮಾಡಿದ್ದರು. ನಾಲ್ಕನೇ ಓವರ್ ನ ಹೊತ್ತಿಗೆ 1 ರನ್ ಗೆ ಒಂದು ವಿಕೆಟ್ ಉರುಳಿಸಿ 46.1 ಓವರ್ ಗೆ 5 ವಿಕೆಟ್ ಫತನಕ್ಕೆ ಕೇವಲ 211 ರನ್ ಗೆ ನ್ಯೂಝಿಲೆಂಡ್ ಅನ್ನು ಕಟ್ಟಿಹಾಕಿತ್ತು.

ಈ ಮಧ್ಯೆ ಭಾರಿ ಮಳೆ ಶುರುವಾಗಿದ್ದು ಪಂದ್ಯವನ್ನು ಸ್ಥಗಿತ ಗೊಳಿಸಲಾಗಿದೆ. ಮುಂದಿನ ಎರಡು ಗಂಟೆಗಳ ಕಾಲ ಕಾದು ಹವಮಾನವನ್ನು ಮತ್ತೊಮ್ಮೆ ವೀಕ್ಷಣೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳುವ ಬಗ್ಗೆ ಪಂದ್ಯದ ಅಂಪೈರ್ ಗಳು ತಿಳಿಸಿದ್ದಾರೆ. ಒಂದು ವೇಳೆ ಮಳೆ ನಿಂತು ಆಟವನ್ನು ಡೆಕ್ವರ್ಥ್ ಲೂಯಿಸ್ ನಿಯಮದ ಪ್ರಕಾರ ಆಟವನ್ನು 20 ಓವರ್ ಗೆ ಇಳಿಸಿ ಪಂದ್ಯವನ್ನು ಮುಂದುವರೆಸಿದರೆ ಸಧ್ಯ ಪಂದ್ಯವನ್ನು ಸಂಪೂರ್ಣ ಹಿಡಿತದಲ್ಲಿ ಇಟ್ಟುಕೊಂಡಿರುವ ಭಾರತಕ್ಕೆ ಕಷ್ಟದ ಗುರಿ ನೀಡಬಹುದೆಂಬ ಅಸಮಧಾನ ಭಾರತೀಯ ಅಭಿಮಾನಿಗಳಲ್ಲಿ ಮೂಡಿದೆ. ಅಥವಾ ಪಂದ್ಯವನ್ನು 46 ಓವರ್ ಗೆ ಇಳಿಸಿ, 237 ರನ್ ನ ಗುರಿಯನ್ನು ಭಾರತಕ್ಕೆ ನೀಡಬಹುದಾಗಿದೆ.

ಮಳೆ ಇನ್ನೂ ನಿಲ್ಲುವ ಸೂಚನೆ ನೀಡದೇ ಇದ್ದರೆ ಇದೇ ಪಂದ್ಯವನ್ನು (211/5, 46.1ಓವರ್) ನಾಳೆಗೆ ಮುಂದುವರೆಸುವ ನಿಯಮಗಳಿವೆ ಎಂಬ ಅಭಿಪ್ರಾಯವನ್ನು ವೀಕ್ಷಕ ವಿವವರಣೆಯವರು ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೂ 1999 ರ ಟೂರ್ನಿಯಲ್ಲಿ ಹಾಗೂ 2002 ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿಯೂ ಹೀಗೆ ಮುಂದೂಡಲಾಗಿತ್ತು. ಒಟ್ಟಾರೆ ಇನ್ನೂ ಕಲವು ಹೊತ್ತು ಕಾದು ನೋಡಬೇಕಿದೆ. ಮುಂದಿನ ಮಾಹಿತಿಗಾಗಿ ನಮ್ಮ ವೆಬ್ ಹಾಗೂ Naanu Gauri ಫೇಸ್ಬುಕ್ ಪೇಜ್ ನಲ್ಲಿ ನಿರೀಕ್ಷಿಸಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...