Homeಕರ್ನಾಟಕವಿಶ್ವಾಸಮತ ಯಾಚನೆ ಇಂದೂ ನಡೆಯುವುದು ಅನುಮಾನ ಎಂಬ ವಾತಾವರಣ ಏಕೆ ನಿರ್ಮಾಣವಾಗಿದೆ?

ವಿಶ್ವಾಸಮತ ಯಾಚನೆ ಇಂದೂ ನಡೆಯುವುದು ಅನುಮಾನ ಎಂಬ ವಾತಾವರಣ ಏಕೆ ನಿರ್ಮಾಣವಾಗಿದೆ?

ಅನರ್ಹರಾಗಲಿ, ಸರ್ಕಾರ ಉಳಿಯೋದು ಬೇಡ ಎಂಬುದು ಸ್ಪೀಕರ್ ಅಪೇಕ್ಷೆಯಾಗಿತ್ತು

- Advertisement -
- Advertisement -

ಶಾಸಕರ ಅನರ್ಹತೆ ಕುರಿತ ಅಂತಿಮ ತೀರ್ಮಾನ ತೆಗೆದುಕೊಂಡಿದ್ದ ಸ್ಪೀಕರ್ ಮೇಲೆ ಬಂದ ಒತ್ತಡವು ವಿಶ್ವಾಸಮತ ಯಾಚನೆಯನ್ನು ಮಂಗಳವಾರಕ್ಕೆ ಮುಂದೂಡುವಂತೆ ಮಾಡುವ ಸಾಧ್ಯತೆ ಇದೆ. ಸೋಮವಾರ ಬೆಳಿಗ್ಗೆಯವರೆಗೆ ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಮುಖಂಡರ ಒತ್ತಡಕ್ಕೆ ಸ್ಪೀಕರ್ ಒಂದಿಂಚೂ ಬಗ್ಗಿರಲಿಲ್ಲ. ‘ನಿಮಗೆ ಇಷ್ಟು ಸಮಯ ಸಿಕ್ಕಿದ್ದರೂ ಒಬ್ಬರೂ ಬಂದಿಲ್ಲ. ಸದನದಲ್ಲಿ ನಡೆದ ಚರ್ಚೆಯು ಈಗಾಗಲೇ ಬಿಜೆಪಿಯವರು ಮಾಡಿದ್ದು ತಪ್ಪು ಎಂಬ ಭಾವನೆಯು ಬರುವಂತೆ ಆಗಿದೆ. ಆದರೆ, ಇದನ್ನು ಮತ್ತಷ್ಟು ಎಳೆಯುವುದು ಒಳ್ಳೆಯದಲ್ಲ. ನಾನೂ ಸಹಾ ಶುಕ್ರವಾರ ಸದನದಲ್ಲಿ ಸೋಮವಾರ ಮುಗಿಸುವ ವಿಚಾರ ಹೇಳಿದ್ದೇನೆ. ಒಂದು ವೇಳೆ ನೀವು ನನ್ನ ಮೇಲೆ ಒತ್ತಡ ತರುವುದಾದಲ್ಲಿ ನಾನು ರಾಜೀನಾಮೆ ಕೊಡುತ್ತೇನೆ’ ಎಂದು ಸ್ಪೀಕರ್ ಹೇಳಿದರೆಂದು ಅವರ ಸಮೀಪವರ್ತಿಗಳು ಹೇಳುತ್ತಾರೆ.

ಇಡೀ ಪ್ರಕರಣದ ಕೇಂದ್ರಬಿಂದುವಾಗಿರುವ ಸ್ಪೀಕರ್ ರಮೇಶ್ ಕುಮಾರ್ ಅವರ ನಿರ್ಧಾರದ ಮೇಲೆ ವಿಶ್ವಾಸಮತ ಯಾಚನೆ ಯಾವಾಗ ಆಗುತ್ತದೆಂಬುದು ತೀರ್ಮಾನವಾಗಲಿದೆ. ಇಂದು ಸಂಜೆಯವರೆಗೂ ಅವರ ಕಟು ನಿರ್ಧಾರ ‘ಆಪರೇಷನ್ ಕಮಲದ ಆಮಿಷಕ್ಕೆ ಪಕ್ಷಾಂತರ ಮಾಡಿರುವ ಶಾಸಕರನ್ನು ಅನರ್ಹಗೊಳಿಸಲೇಬೇಕು. ಅವರಿಗಾಗಿ ಕಾಯುತ್ತಾ ವಿಶ್ವಾಸಮತವನ್ನು ಎಳೆಯುವ ಸಮ್ಮಿಶ್ರ ಪಕ್ಷಗಳ ಉದ್ದೇಶವನ್ನು ತಾನು ಒಪ್ಪುವುದಿಲ್ಲ’ ಎಂದೇ ಆಗಿತ್ತು. ಆದರೆ, ‘ಗುರುವಾರದವರೆಗೆ ಕಾದರೆ ಗ್ರಹಗತಿಗಳು ಸರಿ ಹೋಗುತ್ತವೆ, ಸರ್ಕಾರ ಉಳಿಯುತ್ತದೆ’ ಎಂಬ ಮೌಢ್ಯಕ್ಕೆ ಬಲಿ ಬಿದ್ದಿರುವ ಗೌಡರ ಕುಟುಂಬವು ಅವರನ್ನು ಒಲಿಸುವ ಪ್ರಯತ್ನಕ್ಕೆ ಕೈ ಹಾಕಿ ಸಫಲವಾಗಿರಲಿಲ್ಲ. ಕನಿಷ್ಠ ಪಕ್ಷ ನಾಳೆ ಒಂದು ದಿನದ ಮಟ್ಟಿಗಾದರೂ ಮುಂದೂಡಿ ಎಂಬುದು ಅವರ ಆಗ್ರಹವಾಗಿತ್ತು. ಮೊದಮೊದಲು ಅವರ ದನಿಗೆ ಹ್ಞೂಂಗುಡದಿದ್ದ ಸಿದ್ದರಾಮಯ್ಯನವರೂ ನಂತರ ಸ್ಪೀಕರ್ ಅವರಿಗೆ ‘ಒಂದು ದಿನ ನೋಡೋಣ’ ಎಂಬ ಸಂದೇಶ ಕಳಿಸಿದ್ದಾರೆ.

ಅಂತಿಮವಾಗಿ ಕೆ.ಸಿ.ವೇಣುಗೋಪಾಲ್ ಅವರ ಮೂಲಕ ಫೋನ್ ಮಾಡಿಸಿ, ಸ್ಪೀಕರ್ ಮೇಲೆ ಇನ್ನಿಲ್ಲದ ಒತ್ತಡ ತಂದರೆಂದು ಹೇಳಲಾಗುತ್ತಿದೆ. ಈ ಮಧ್ಯೆ ಡಿ.ಕೆ.ಶಿವಕುಮಾರ್ ಮಾಧ್ಯಮಗಳ ಜೊತೆ ಮಾತನಾಡಿ ‘ರೆಬೆಲ್ ಶಾಸಕರು ಬೇಗ ತೀರ್ಮಾನ ತೆಗೆದುಕೊಂಡು ಬೆಳಿಗ್ಗೆ 11 ಗಂಟೆ ಒಳಗೆ ವಾಪಸ್ ಬರಲಿ. ಇಲ್ಲವಾದರೆ ಅನರ್ಹತೆ ಖಚಿತ. ಬಿಜೆಪಿಯವರು ನಿಮ್ಮ ತಲೆಗೆ ಮಂಗನ ಟೋಪಿ ತೊಡಿಸುತ್ತಾರೆ ಅಷ್ಟೇ’ ಎಂದು ಹೇಳಿದರು.

ಇವೆಲ್ಲದರ ಕಾರಣದಿಂದ ಒತ್ತಡಕ್ಕೆ ಒಳಗಾದ ಸ್ಪೀಕರ್ ಯಾವ ತೀರ್ಮಾನ ತೆಗೆದುಕೊಳ್ಳುವುದು ಎಂಬ ತೂಗುಯ್ಯಾಲೆಯಲ್ಲಿ ಬಿದ್ದಿರುವುದರಿಂದಲೇ ಯಾವ ನಿರ್ಧಾರವನ್ನೂ ಘೋಷಿಸದೇ ಮ್ಲಾನವದನರಾಗಿ ಕುಳಿತಿದ್ದಾರೆ. ಯಾರಿಗೂ ಚೈತನ್ಯದಿಂದ ಮಾತನಾಡುವ ಉಮೇದೂ ಇಲ್ಲದೇ, ಎಳೆಯುವ ಉದ್ದೇಶದಿಂದ ಮಾತ್ರ ಮಾತನಾಡುತ್ತಿರುವಾಗ ಅನಗತ್ಯವಾಗಿ ಮುಂದೂಡುವ ಮೂಲಕ ಮೈತ್ರಿ ಪಕ್ಷಗಳ ಒತ್ತಡಕ್ಕೆ ಗುರಿಯಾಗುತ್ತಾರಾ, ಇಲ್ಲವೇ ಅವರ ಮೂಲ ನಿಲುವಿಗೆ ಬದ್ಧರಾಗಿ ವಿಶ್ವಾಸಮತಯಾಚನೆಗೆ ಹಾಕುತ್ತಾರಾ ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....