Homeಕರ್ನಾಟಕವಿಶ್ವಾಸಮತ ಯಾಚನೆ ಇಂದೂ ನಡೆಯುವುದು ಅನುಮಾನ ಎಂಬ ವಾತಾವರಣ ಏಕೆ ನಿರ್ಮಾಣವಾಗಿದೆ?

ವಿಶ್ವಾಸಮತ ಯಾಚನೆ ಇಂದೂ ನಡೆಯುವುದು ಅನುಮಾನ ಎಂಬ ವಾತಾವರಣ ಏಕೆ ನಿರ್ಮಾಣವಾಗಿದೆ?

ಅನರ್ಹರಾಗಲಿ, ಸರ್ಕಾರ ಉಳಿಯೋದು ಬೇಡ ಎಂಬುದು ಸ್ಪೀಕರ್ ಅಪೇಕ್ಷೆಯಾಗಿತ್ತು

- Advertisement -
- Advertisement -

ಶಾಸಕರ ಅನರ್ಹತೆ ಕುರಿತ ಅಂತಿಮ ತೀರ್ಮಾನ ತೆಗೆದುಕೊಂಡಿದ್ದ ಸ್ಪೀಕರ್ ಮೇಲೆ ಬಂದ ಒತ್ತಡವು ವಿಶ್ವಾಸಮತ ಯಾಚನೆಯನ್ನು ಮಂಗಳವಾರಕ್ಕೆ ಮುಂದೂಡುವಂತೆ ಮಾಡುವ ಸಾಧ್ಯತೆ ಇದೆ. ಸೋಮವಾರ ಬೆಳಿಗ್ಗೆಯವರೆಗೆ ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಮುಖಂಡರ ಒತ್ತಡಕ್ಕೆ ಸ್ಪೀಕರ್ ಒಂದಿಂಚೂ ಬಗ್ಗಿರಲಿಲ್ಲ. ‘ನಿಮಗೆ ಇಷ್ಟು ಸಮಯ ಸಿಕ್ಕಿದ್ದರೂ ಒಬ್ಬರೂ ಬಂದಿಲ್ಲ. ಸದನದಲ್ಲಿ ನಡೆದ ಚರ್ಚೆಯು ಈಗಾಗಲೇ ಬಿಜೆಪಿಯವರು ಮಾಡಿದ್ದು ತಪ್ಪು ಎಂಬ ಭಾವನೆಯು ಬರುವಂತೆ ಆಗಿದೆ. ಆದರೆ, ಇದನ್ನು ಮತ್ತಷ್ಟು ಎಳೆಯುವುದು ಒಳ್ಳೆಯದಲ್ಲ. ನಾನೂ ಸಹಾ ಶುಕ್ರವಾರ ಸದನದಲ್ಲಿ ಸೋಮವಾರ ಮುಗಿಸುವ ವಿಚಾರ ಹೇಳಿದ್ದೇನೆ. ಒಂದು ವೇಳೆ ನೀವು ನನ್ನ ಮೇಲೆ ಒತ್ತಡ ತರುವುದಾದಲ್ಲಿ ನಾನು ರಾಜೀನಾಮೆ ಕೊಡುತ್ತೇನೆ’ ಎಂದು ಸ್ಪೀಕರ್ ಹೇಳಿದರೆಂದು ಅವರ ಸಮೀಪವರ್ತಿಗಳು ಹೇಳುತ್ತಾರೆ.

ಇಡೀ ಪ್ರಕರಣದ ಕೇಂದ್ರಬಿಂದುವಾಗಿರುವ ಸ್ಪೀಕರ್ ರಮೇಶ್ ಕುಮಾರ್ ಅವರ ನಿರ್ಧಾರದ ಮೇಲೆ ವಿಶ್ವಾಸಮತ ಯಾಚನೆ ಯಾವಾಗ ಆಗುತ್ತದೆಂಬುದು ತೀರ್ಮಾನವಾಗಲಿದೆ. ಇಂದು ಸಂಜೆಯವರೆಗೂ ಅವರ ಕಟು ನಿರ್ಧಾರ ‘ಆಪರೇಷನ್ ಕಮಲದ ಆಮಿಷಕ್ಕೆ ಪಕ್ಷಾಂತರ ಮಾಡಿರುವ ಶಾಸಕರನ್ನು ಅನರ್ಹಗೊಳಿಸಲೇಬೇಕು. ಅವರಿಗಾಗಿ ಕಾಯುತ್ತಾ ವಿಶ್ವಾಸಮತವನ್ನು ಎಳೆಯುವ ಸಮ್ಮಿಶ್ರ ಪಕ್ಷಗಳ ಉದ್ದೇಶವನ್ನು ತಾನು ಒಪ್ಪುವುದಿಲ್ಲ’ ಎಂದೇ ಆಗಿತ್ತು. ಆದರೆ, ‘ಗುರುವಾರದವರೆಗೆ ಕಾದರೆ ಗ್ರಹಗತಿಗಳು ಸರಿ ಹೋಗುತ್ತವೆ, ಸರ್ಕಾರ ಉಳಿಯುತ್ತದೆ’ ಎಂಬ ಮೌಢ್ಯಕ್ಕೆ ಬಲಿ ಬಿದ್ದಿರುವ ಗೌಡರ ಕುಟುಂಬವು ಅವರನ್ನು ಒಲಿಸುವ ಪ್ರಯತ್ನಕ್ಕೆ ಕೈ ಹಾಕಿ ಸಫಲವಾಗಿರಲಿಲ್ಲ. ಕನಿಷ್ಠ ಪಕ್ಷ ನಾಳೆ ಒಂದು ದಿನದ ಮಟ್ಟಿಗಾದರೂ ಮುಂದೂಡಿ ಎಂಬುದು ಅವರ ಆಗ್ರಹವಾಗಿತ್ತು. ಮೊದಮೊದಲು ಅವರ ದನಿಗೆ ಹ್ಞೂಂಗುಡದಿದ್ದ ಸಿದ್ದರಾಮಯ್ಯನವರೂ ನಂತರ ಸ್ಪೀಕರ್ ಅವರಿಗೆ ‘ಒಂದು ದಿನ ನೋಡೋಣ’ ಎಂಬ ಸಂದೇಶ ಕಳಿಸಿದ್ದಾರೆ.

ಅಂತಿಮವಾಗಿ ಕೆ.ಸಿ.ವೇಣುಗೋಪಾಲ್ ಅವರ ಮೂಲಕ ಫೋನ್ ಮಾಡಿಸಿ, ಸ್ಪೀಕರ್ ಮೇಲೆ ಇನ್ನಿಲ್ಲದ ಒತ್ತಡ ತಂದರೆಂದು ಹೇಳಲಾಗುತ್ತಿದೆ. ಈ ಮಧ್ಯೆ ಡಿ.ಕೆ.ಶಿವಕುಮಾರ್ ಮಾಧ್ಯಮಗಳ ಜೊತೆ ಮಾತನಾಡಿ ‘ರೆಬೆಲ್ ಶಾಸಕರು ಬೇಗ ತೀರ್ಮಾನ ತೆಗೆದುಕೊಂಡು ಬೆಳಿಗ್ಗೆ 11 ಗಂಟೆ ಒಳಗೆ ವಾಪಸ್ ಬರಲಿ. ಇಲ್ಲವಾದರೆ ಅನರ್ಹತೆ ಖಚಿತ. ಬಿಜೆಪಿಯವರು ನಿಮ್ಮ ತಲೆಗೆ ಮಂಗನ ಟೋಪಿ ತೊಡಿಸುತ್ತಾರೆ ಅಷ್ಟೇ’ ಎಂದು ಹೇಳಿದರು.

ಇವೆಲ್ಲದರ ಕಾರಣದಿಂದ ಒತ್ತಡಕ್ಕೆ ಒಳಗಾದ ಸ್ಪೀಕರ್ ಯಾವ ತೀರ್ಮಾನ ತೆಗೆದುಕೊಳ್ಳುವುದು ಎಂಬ ತೂಗುಯ್ಯಾಲೆಯಲ್ಲಿ ಬಿದ್ದಿರುವುದರಿಂದಲೇ ಯಾವ ನಿರ್ಧಾರವನ್ನೂ ಘೋಷಿಸದೇ ಮ್ಲಾನವದನರಾಗಿ ಕುಳಿತಿದ್ದಾರೆ. ಯಾರಿಗೂ ಚೈತನ್ಯದಿಂದ ಮಾತನಾಡುವ ಉಮೇದೂ ಇಲ್ಲದೇ, ಎಳೆಯುವ ಉದ್ದೇಶದಿಂದ ಮಾತ್ರ ಮಾತನಾಡುತ್ತಿರುವಾಗ ಅನಗತ್ಯವಾಗಿ ಮುಂದೂಡುವ ಮೂಲಕ ಮೈತ್ರಿ ಪಕ್ಷಗಳ ಒತ್ತಡಕ್ಕೆ ಗುರಿಯಾಗುತ್ತಾರಾ, ಇಲ್ಲವೇ ಅವರ ಮೂಲ ನಿಲುವಿಗೆ ಬದ್ಧರಾಗಿ ವಿಶ್ವಾಸಮತಯಾಚನೆಗೆ ಹಾಕುತ್ತಾರಾ ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...