Homeಅಂಕಣಗಳುವಿಶ್ವಾಸಾರ್ಹತೆ ಕಳೆದುಕೊಂಡ ತನಿಖಾ ಸಂಸ್ಥೆಗಳು, ಬಿಜೆಪಿ ಸೇರಿದವರಿಗೆ ಸಿಬಿಐ ಸ್ಮೂತ್!

ವಿಶ್ವಾಸಾರ್ಹತೆ ಕಳೆದುಕೊಂಡ ತನಿಖಾ ಸಂಸ್ಥೆಗಳು, ಬಿಜೆಪಿ ಸೇರಿದವರಿಗೆ ಸಿಬಿಐ ಸ್ಮೂತ್!

- Advertisement -
- Advertisement -

ಕೊಲ್ಕೊತ್ತಾದ ಪೊಲೀಸ್ ಕಮೀಷನರ್ ರಾಜೀವ ಕುಮಾರ್ ಅವರ ಕಚೇರಿಯ ಮೇಲೆ ದಾಳಿ ಮಾಡಲು ಹೋದ ಸಿಬಿಐಗೆ ಮುಖಭಂಗವಾಗಿದೆ. ಈಗ ಸುಪ್ರಿಂಕೋರ್ಟ್ ರಾಜೀವ ಕುಮಾರ್ ಅವರನ್ನು ಬಂಧಿಸದೇ ವಿಚಾರಣೆ ನಡೆಸಲು ಸೂಚಿಸಿದೆ.
ಸಿಬಿಐ ಅನ್ನು ಕೇಂದ್ರ ಹೇಗೆ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎನ್ನುವುದಕ್ಕೆ ಈ ಶಾರದಾ ಚಿಟ್‌ಫಂಡ್ ಹಗರಣದ ತನಿಖೆಯೇ ಸಾಕ್ಷಿಯಾಗಿದೆ. ಈ ಹಗರಣದಲ್ಲಿ ಆರೋಪಿಗಳೆಂದು ಪರಿಗಣಿತರಾದವರು ಬಿಜೆಪಿ ಸೇರಿದ ಮೇಲೆ ಅವರ ಮೇಲಿನ ತನಿಖೆಯನ್ನು ಮೃದುಗೊಳಿಸಲಾಗಿದೆ ಅಥವಾ ನಿಲ್ಲಿಸಿಯೇ ಬಿಡಲಾಗಿದೆ.

2015ರಲ್ಲಿ ಮಾಜಿ ರೈಲ್ವೆ ಸಚಿವ, ಅಂದಿನ ಟಿಎಂಸಿ ನಾಯಕ ಮುಕುಲ್ ರಾಯ್ ವಿರುದ್ಧ ಸಿಬಿಐ ತನಿಖೆ ಶುರು ಮಾಡಿತು. ಆದರೆ ಮುಕುಲ್‌ರಾಯ್ ಬಿಜೆಪಿ ಸೇರಿದ ನಂತರ ತನಿಖೆಗೆ ಮಂಕು ಬಡಿದಿದೆ. ಹಾಗೆಯೇ ಅಸ್ಸಾಂನ ಸಚಿವ ಹಿಮಂತ ಬಿಸ್ವಾಸ್ ಶರ್ಮಾ ಮನೆ ಮೇಲೂ ಸಿಬಿಐ ದಾಳಿ ಮಾಡಿತ್ತು. ಶರ್ಮಾ ಬಿಜೆಪಿ ಸೇರಿದ ನಂತರ ಯಾವ ಚಾರ್ಜ್ಶೀಟಿನಲ್ಲೂ ಅವರ ಹೆಸರನ್ನು ಸೇರಿಸಲೇ ಇಲ್ಲ.
ಸುಪ್ರಿಂಕೋಟ್ ಆದೇಶದಂತೆ ಸಿಬಿಐ ಶಾರದಾ ಹಗರಣದ ತನಿಖೆಯನ್ನು 2014ರಲ್ಲಿ ಆರಂಭಿಸಿತು. 2015ರ ಜನೆವರಿ 30ರಂದು ಸಿಬಿಐ ಮುಕುಲ್ ರಾಯ್ ಅವರ ವಿಚಾರಣೆ ನಡೆಸಿತ್ತು. ಶಾರದಾ ಸಂಸ್ಥೆಯ ನ್ಯೂಸ್ ಆಪರೇಷನ್ಸ್ ಮತ್ತು ಸಂಸ್ಥೆಯ ಮುಖ್ಯಸ್ಥ ಸುದೀಪ್ತ್ ಸೇನ್ ಜೊತೆಗಿನ ಆತ್ಮೀಯ ಸಂಬಂಧಗಳ ಕುರಿತಂತೆ ರಾಯ್ ಅವರ ವಿರುದ್ಧ ತನಿಖೆ ಆರಂಭಿಸಲಾಗಿತ್ತು. ಸುದೀಪ್ತ್ ಸೇನ್ ಅವರ ಕಾರು ಚಾಲಕನ ಹೇಳಿಕೆಯಲ್ಲಿ ಮುಕುಲ್ ರಾಯ್ ಹೆಸರು ಪ್ರಸ್ತಾಪವಾಗಿತ್ತು. ಬಂಧನ ಭೀತಿಯಲ್ಲಿದ್ದ ಸುದೀಪ್ತ್ ಸೇನ್ ಅವರನ್ನು ಕೊಲ್ಕೊತ್ತಾದಿಂದ ಹೊರಗೆ ಪಾರಾಗಿ ಹೋಗಲು ರಾಯ್ ಹೇಗೆ ನೆರವು ನೀಡಿದ್ದರು ಎಂಬುದನ್ನು ಚಾಲಕ ವಿವರಿಸಿದ್ದ.

ಟಿಎಂಸಿ ಸಂಸದ ಕುನಾಲ್ ಘೋಷ್ ಶಾರದಾ ಹಗರಣ ಕುರಿತಂತೆ ರಾಯ್ ವಿರುದ್ಧ ಅಪಾದನೆ ಮಾಡಿದ ನಂತರ ರಾಯ್‌ಗೆ ಸಿಬಿಐ ಸಮನ್ಸ್ ನೀಡಿತ್ತು. ಶಾರದಾ ಹಗರಣಕ್ಕೆ ಸಂಬಂಧಿಸಿ 2013ರಲ್ಲೇ ಮೋಸ, ಕ್ರಿಮಿನಲ್ ಸಂಚು ಆರೋಪದ ಮೇಲೆ ಘೋಷ್ ಅವರನ್ನು ಬಂಧಿಸಲಾಗಿತ್ತು. ಬಂಧನವಾದ ಒಂದು ತಾಸಿನಲ್ಲೇ ಘೋಷ್ 12 ಜನರ ಹೆಸರನ್ನು ಹೇಳಿದ್ದು, ಅದರಲ್ಲಿ ಮುಕುಲ್ ರಾಯ್ ಹೆಸರು ಕೂಡ ಸೇರಿತ್ತು.

2015ರಲ್ಲೇ ಮುಕುಲ್ ರಾಯ್ ಬಿಜೆಪಿಗೆ ಹತ್ತಿರವಾಗತೊಡಗಿದರು. 2017ರ ನವೆಂಬರ್ 3ರಂದು ರಾಯ್ ಬಿಜೆಪಿ ಸೇರಿದರು. ಬಿಜೆಪಿಗೆ ಹತ್ತಿರವಾದ ನಂತರ ರಾಯ್ ಪರ ಮೃದು ಧೋರಣೆ ತಳೆದಿದ್ದ ಸಿಬಿಐ ಬಿಜೆಪಿ ಸೇರಿದ ನಂತರ ಅವರನ್ನು ವಿಚಾರಣೆಗೆ ಕರೆಯುತ್ತಲೇ ಇಲ್ಲ.
ಅಸ್ಸಾಂನ ಹಿಮಂತ ಶರ್ಮಾರನ್ನು ನವೆಂಬರ್ 26, 2014ರಂದು ವಿಚಾರಣೆ ಮಾಡಲಾಗಿತ್ತು. ಅದಕ್ಕೂ ಎರಡು ತಿಂಗಳು ಮೊದಲು ಶರ್ಮಾ ಮನೆ ಮತ್ತು ಆತನ ಪತ್ನಿಯ ಟಿವಿ ಚಾನೆಲ್ ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿತ್ತು. ಅಸ್ಸಾಂನಲ್ಲಿ ತಮ್ಮ ಸಂಸ್ಥೆಯ ಕಾರ್ಯಾಚರಣೆ ಸುಗಮವಾಗಿ ನಡೆಯಲು ಪ್ರತಿ ತಿಂಗಳು ತಮ್ಮಿಂದ 20 ಲಕ್ಷ ರೂ.ಗಳನ್ನು ಶರ್ಮಾ ಪಡೆಯುತ್ತಿದ್ದರು ಎಂದು ಶಾರದಾ ಸಂಸ್ಥೆಯ ಮುಖ್ಯಸ್ಥ ಸುದೀಪ್ತ್ ಸೇನ್ ಆರೋಪಿಸಿದ್ದರು.

2015ರ ಅಗಸ್ಟ್ನಲ್ಲಿ ಶರ್ಮಾ ಬಿಜೆಪಿ ಸೇರಿದರು. ಆ ನಂತರ ಅವರನ್ನು ವಿಚಾರಣೆಗೆ ಕರೆಯಲೇ ಇಲ್ಲ. ಯಾವ ಚಾರ್ಜ್ಶೀಟಿನಲ್ಲೂ ಅವರ ಹೆಸರನ್ನು ಉಲ್ಲೇಖಿಸಲಿಲ್ಲ.
ಅಂದರೆ, ಬಿಜೆಪಿ ಸಿಬಿಐ ಅನ್ನು ತನ್ನ ಅನುಕೂಲಕ್ಕೆ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂಬುದು ಪಕ್ಕಾ ಆಗಿತಲ್ಲವೇ?

(ಕೃಪೆ: ನ್ಯೂ ಇಂಡಿಯನ್ ಎಕ್ಸ್ಪ್ರೆಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...