Homeಅಂಕಣಗಳುವಿಶ್ವಾಸಾರ್ಹತೆ ಕಳೆದುಕೊಂಡ ತನಿಖಾ ಸಂಸ್ಥೆಗಳು, ಬಿಜೆಪಿ ಸೇರಿದವರಿಗೆ ಸಿಬಿಐ ಸ್ಮೂತ್!

ವಿಶ್ವಾಸಾರ್ಹತೆ ಕಳೆದುಕೊಂಡ ತನಿಖಾ ಸಂಸ್ಥೆಗಳು, ಬಿಜೆಪಿ ಸೇರಿದವರಿಗೆ ಸಿಬಿಐ ಸ್ಮೂತ್!

- Advertisement -
- Advertisement -

ಕೊಲ್ಕೊತ್ತಾದ ಪೊಲೀಸ್ ಕಮೀಷನರ್ ರಾಜೀವ ಕುಮಾರ್ ಅವರ ಕಚೇರಿಯ ಮೇಲೆ ದಾಳಿ ಮಾಡಲು ಹೋದ ಸಿಬಿಐಗೆ ಮುಖಭಂಗವಾಗಿದೆ. ಈಗ ಸುಪ್ರಿಂಕೋರ್ಟ್ ರಾಜೀವ ಕುಮಾರ್ ಅವರನ್ನು ಬಂಧಿಸದೇ ವಿಚಾರಣೆ ನಡೆಸಲು ಸೂಚಿಸಿದೆ.
ಸಿಬಿಐ ಅನ್ನು ಕೇಂದ್ರ ಹೇಗೆ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎನ್ನುವುದಕ್ಕೆ ಈ ಶಾರದಾ ಚಿಟ್‌ಫಂಡ್ ಹಗರಣದ ತನಿಖೆಯೇ ಸಾಕ್ಷಿಯಾಗಿದೆ. ಈ ಹಗರಣದಲ್ಲಿ ಆರೋಪಿಗಳೆಂದು ಪರಿಗಣಿತರಾದವರು ಬಿಜೆಪಿ ಸೇರಿದ ಮೇಲೆ ಅವರ ಮೇಲಿನ ತನಿಖೆಯನ್ನು ಮೃದುಗೊಳಿಸಲಾಗಿದೆ ಅಥವಾ ನಿಲ್ಲಿಸಿಯೇ ಬಿಡಲಾಗಿದೆ.

2015ರಲ್ಲಿ ಮಾಜಿ ರೈಲ್ವೆ ಸಚಿವ, ಅಂದಿನ ಟಿಎಂಸಿ ನಾಯಕ ಮುಕುಲ್ ರಾಯ್ ವಿರುದ್ಧ ಸಿಬಿಐ ತನಿಖೆ ಶುರು ಮಾಡಿತು. ಆದರೆ ಮುಕುಲ್‌ರಾಯ್ ಬಿಜೆಪಿ ಸೇರಿದ ನಂತರ ತನಿಖೆಗೆ ಮಂಕು ಬಡಿದಿದೆ. ಹಾಗೆಯೇ ಅಸ್ಸಾಂನ ಸಚಿವ ಹಿಮಂತ ಬಿಸ್ವಾಸ್ ಶರ್ಮಾ ಮನೆ ಮೇಲೂ ಸಿಬಿಐ ದಾಳಿ ಮಾಡಿತ್ತು. ಶರ್ಮಾ ಬಿಜೆಪಿ ಸೇರಿದ ನಂತರ ಯಾವ ಚಾರ್ಜ್ಶೀಟಿನಲ್ಲೂ ಅವರ ಹೆಸರನ್ನು ಸೇರಿಸಲೇ ಇಲ್ಲ.
ಸುಪ್ರಿಂಕೋಟ್ ಆದೇಶದಂತೆ ಸಿಬಿಐ ಶಾರದಾ ಹಗರಣದ ತನಿಖೆಯನ್ನು 2014ರಲ್ಲಿ ಆರಂಭಿಸಿತು. 2015ರ ಜನೆವರಿ 30ರಂದು ಸಿಬಿಐ ಮುಕುಲ್ ರಾಯ್ ಅವರ ವಿಚಾರಣೆ ನಡೆಸಿತ್ತು. ಶಾರದಾ ಸಂಸ್ಥೆಯ ನ್ಯೂಸ್ ಆಪರೇಷನ್ಸ್ ಮತ್ತು ಸಂಸ್ಥೆಯ ಮುಖ್ಯಸ್ಥ ಸುದೀಪ್ತ್ ಸೇನ್ ಜೊತೆಗಿನ ಆತ್ಮೀಯ ಸಂಬಂಧಗಳ ಕುರಿತಂತೆ ರಾಯ್ ಅವರ ವಿರುದ್ಧ ತನಿಖೆ ಆರಂಭಿಸಲಾಗಿತ್ತು. ಸುದೀಪ್ತ್ ಸೇನ್ ಅವರ ಕಾರು ಚಾಲಕನ ಹೇಳಿಕೆಯಲ್ಲಿ ಮುಕುಲ್ ರಾಯ್ ಹೆಸರು ಪ್ರಸ್ತಾಪವಾಗಿತ್ತು. ಬಂಧನ ಭೀತಿಯಲ್ಲಿದ್ದ ಸುದೀಪ್ತ್ ಸೇನ್ ಅವರನ್ನು ಕೊಲ್ಕೊತ್ತಾದಿಂದ ಹೊರಗೆ ಪಾರಾಗಿ ಹೋಗಲು ರಾಯ್ ಹೇಗೆ ನೆರವು ನೀಡಿದ್ದರು ಎಂಬುದನ್ನು ಚಾಲಕ ವಿವರಿಸಿದ್ದ.

ಟಿಎಂಸಿ ಸಂಸದ ಕುನಾಲ್ ಘೋಷ್ ಶಾರದಾ ಹಗರಣ ಕುರಿತಂತೆ ರಾಯ್ ವಿರುದ್ಧ ಅಪಾದನೆ ಮಾಡಿದ ನಂತರ ರಾಯ್‌ಗೆ ಸಿಬಿಐ ಸಮನ್ಸ್ ನೀಡಿತ್ತು. ಶಾರದಾ ಹಗರಣಕ್ಕೆ ಸಂಬಂಧಿಸಿ 2013ರಲ್ಲೇ ಮೋಸ, ಕ್ರಿಮಿನಲ್ ಸಂಚು ಆರೋಪದ ಮೇಲೆ ಘೋಷ್ ಅವರನ್ನು ಬಂಧಿಸಲಾಗಿತ್ತು. ಬಂಧನವಾದ ಒಂದು ತಾಸಿನಲ್ಲೇ ಘೋಷ್ 12 ಜನರ ಹೆಸರನ್ನು ಹೇಳಿದ್ದು, ಅದರಲ್ಲಿ ಮುಕುಲ್ ರಾಯ್ ಹೆಸರು ಕೂಡ ಸೇರಿತ್ತು.

2015ರಲ್ಲೇ ಮುಕುಲ್ ರಾಯ್ ಬಿಜೆಪಿಗೆ ಹತ್ತಿರವಾಗತೊಡಗಿದರು. 2017ರ ನವೆಂಬರ್ 3ರಂದು ರಾಯ್ ಬಿಜೆಪಿ ಸೇರಿದರು. ಬಿಜೆಪಿಗೆ ಹತ್ತಿರವಾದ ನಂತರ ರಾಯ್ ಪರ ಮೃದು ಧೋರಣೆ ತಳೆದಿದ್ದ ಸಿಬಿಐ ಬಿಜೆಪಿ ಸೇರಿದ ನಂತರ ಅವರನ್ನು ವಿಚಾರಣೆಗೆ ಕರೆಯುತ್ತಲೇ ಇಲ್ಲ.
ಅಸ್ಸಾಂನ ಹಿಮಂತ ಶರ್ಮಾರನ್ನು ನವೆಂಬರ್ 26, 2014ರಂದು ವಿಚಾರಣೆ ಮಾಡಲಾಗಿತ್ತು. ಅದಕ್ಕೂ ಎರಡು ತಿಂಗಳು ಮೊದಲು ಶರ್ಮಾ ಮನೆ ಮತ್ತು ಆತನ ಪತ್ನಿಯ ಟಿವಿ ಚಾನೆಲ್ ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿತ್ತು. ಅಸ್ಸಾಂನಲ್ಲಿ ತಮ್ಮ ಸಂಸ್ಥೆಯ ಕಾರ್ಯಾಚರಣೆ ಸುಗಮವಾಗಿ ನಡೆಯಲು ಪ್ರತಿ ತಿಂಗಳು ತಮ್ಮಿಂದ 20 ಲಕ್ಷ ರೂ.ಗಳನ್ನು ಶರ್ಮಾ ಪಡೆಯುತ್ತಿದ್ದರು ಎಂದು ಶಾರದಾ ಸಂಸ್ಥೆಯ ಮುಖ್ಯಸ್ಥ ಸುದೀಪ್ತ್ ಸೇನ್ ಆರೋಪಿಸಿದ್ದರು.

2015ರ ಅಗಸ್ಟ್ನಲ್ಲಿ ಶರ್ಮಾ ಬಿಜೆಪಿ ಸೇರಿದರು. ಆ ನಂತರ ಅವರನ್ನು ವಿಚಾರಣೆಗೆ ಕರೆಯಲೇ ಇಲ್ಲ. ಯಾವ ಚಾರ್ಜ್ಶೀಟಿನಲ್ಲೂ ಅವರ ಹೆಸರನ್ನು ಉಲ್ಲೇಖಿಸಲಿಲ್ಲ.
ಅಂದರೆ, ಬಿಜೆಪಿ ಸಿಬಿಐ ಅನ್ನು ತನ್ನ ಅನುಕೂಲಕ್ಕೆ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂಬುದು ಪಕ್ಕಾ ಆಗಿತಲ್ಲವೇ?

(ಕೃಪೆ: ನ್ಯೂ ಇಂಡಿಯನ್ ಎಕ್ಸ್ಪ್ರೆಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋವಿಡ್-19 ಲಸಿಕೆ ಮತ್ತು ಯುವ ವಯಸ್ಕರ ಹಠಾತ್ ಸಾವುಗಳ ನಡುವೆ ಯಾವುದೇ ವೈಜ್ಞಾನಿಕ ಸಂಬಂಧ ಕಂಡುಬಂದಿಲ್ಲ: ಏಮ್ಸ್ ಅಧ್ಯಯನ

ನವದೆಹಲಿ: ದೆಹಲಿಯ ಏಮ್ಸ್‌ನಲ್ಲಿ ನಡೆಸಿದ ಒಂದು ವರ್ಷದ ಸಮಗ್ರ, ಶವಪರೀಕ್ಷೆ ಆಧಾರಿತ ವೀಕ್ಷಣಾ ಅಧ್ಯಯನವು, ಯುವ ವಯಸ್ಕರಲ್ಲಿ ಕೋವಿಡ್-19 ಲಸಿಕೆಯನ್ನು ಹಠಾತ್ ಸಾವುಗಳೊಂದಿಗೆ ಸಂಪರ್ಕಿಸುವ ಯಾವುದೇ ಪುರಾವೆಗಳು ಕಂಡುಬಂದಿಲ್ಲ, ಇದು ಕೋವಿಡ್ ಲಸಿಕೆಗಳ...

ಬಿಜೆಪಿ ಜನ ನಾಟಕೀಯರು, ದೇಶದ್ರೋಹಿಗಳು; ಅವರನ್ನು ಅಧಿಕಾರದಿಂದ ಕಿತ್ತೊಗೆಯಬೇಕು: ಮಲ್ಲಿಕಾರ್ಜುನ ಖರ್ಗೆ

"ಬಿಜೆಪಿಯವರು 'ಗದ್ದಾರ್‌ಗಳು' (ದೇಶದ್ರೋಹಿಗಳು) ಮತ್ತು 'ಡ್ರಮೆಬಾಜ್' (ನಾಟಕೀಯದಲ್ಲಿ ತೊಡಗಿಸಿಕೊಳ್ಳುವವರು). ಅವರನ್ನು ಅಧಿಕಾರದಿಂದ ತೆಗೆದುಹಾಕಬೇಕು" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ಕೊಟ್ಟಿದ್ದಾರೆ.  ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ವೋಟ್ ಚೋರಿ ಕುರಿತ...

ಆಸ್ಟ್ರೇಲಿಯಾ | ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ಗುಂಡಿನ ದಾಳಿ : 12 ಜನರು ಸಾವು

ಭಾನುವಾರ (ಡಿ.14) ಆಸ್ಟ್ರೇಲಿಯಾದ ಸಿಡ್ನಿ ನಗರದ ಪ್ರಸಿದ್ಧ ಬೋಂಡಿ ಬೀಚ್‌ನಲ್ಲಿ ಆಯೋಜಿಸಿದ್ದ ಯಹೂದಿ ಸಮುದಾಯದ 'ಹನುಕ್ಕಾ' ಕಾರ್ಯಕ್ರಮದಲ್ಲಿ ಇಬ್ಬರು ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ 12 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ....

ಕೋಲ್ಕತ್ತಾದಲ್ಲಿ ನಡೆದ ಅವ್ಯವಸ್ಥೆ: ‘ಮೆಸ್ಸಿ ಭಾರತ ಪ್ರವಾಸ 2025’ರ ಪ್ರಮುಖ ಆಯೋಜಕರಿಗೆ 14 ದಿನಗಳ ಕಸ್ಟಡಿ

ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೊಡ್ಡ ಪ್ರಮಾಣದ ಅವ್ಯವಸ್ಥೆ ಉಂಟಾದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಪೊಲೀಸರು ಲಿಯೋನೆಲ್ ಮೆಸ್ಸಿ ಅವರ ಇಂಡಿಯಾ ಟೂರ್ 2025 ರ ಪ್ರಮುಖ ಆಯೋಜಕರನ್ನು ವಶಕ್ಕೆ ಪಡೆದಿದ್ದಾರೆ.  ಈ ಘಟನೆಯು ಪ್ರತಿಭಟನೆಗಳಿಗೆ...

ಹೆಡ್ಗೆವಾರ್ ಸ್ಮಾರಕ ಭೇಟಿ ತಪ್ಪಿಸಿಕೊಂಡ ಅಜಿತ್ ಪವಾರ್ : ನಮ್ಮದು ಅಂಬೇಡ್ಕರ್, ಫುಲೆ ಸಿದ್ಧಾಂತ ಎಂದ ಎನ್‌ಸಿಪಿ ವಕ್ತಾರ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಭಾನುವಾರ (ಡಿ.14) ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ. ಹೆಡ್ಗೆವಾರ್ ಸ್ಮಾರಕ ಭೇಟಿ ಕಾರ್ಯಕ್ರಮದಿಂದ ತಪ್ಪಿಸಿಕೊಂಡಿದ್ದು, ಅವರ ಪಕ್ಷ ಎನ್‌ಸಿಪಿ ರಾಜ್ಯದ ಅಭಿವೃದ್ಧಿಗಾಗಿ ಮಹಾಯುತಿ ಮೈತ್ರಿಕೂಟಕ್ಕೆ ಸೇರಿರುವುದಾಗಿ ಒತ್ತಿ...

ದೆಹಲಿಗೆ ಬರುವ ನಮ್ಮ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ : ಡಿಕೆಶಿ

ದೆಹಲಿ ಬರುತ್ತಿರುವ ನಮ್ಮವರ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ ಎಂಬ ಮಾಹಿತಿ ಬಂದಿದೆ. ಈ ಬಿಜೆಪಿಯವರಿಗೆ ಯಾಕಿಷ್ಟು ಆತಂಕ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯ ರಾಮ್‌ಲೀಲಾ...

ಹೊಸೂರು ವಿಮಾನ ನಿಲ್ದಾಣ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಿಂದ 2,900 ಎಕರೆ ಸ್ವಾಧೀನ ಸಾಧ್ಯತೆ

ಚೆನ್ನೈ: ಬೆಂಗಳೂರಿಗೆ ಬಹಳ ಹತ್ತಿರದಲ್ಲಿರುವ ವೇಗವಾಗಿ ಬೆಳೆಯುತ್ತಿರುವ ಕೈಗಾರಿಕಾ ನಗರ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಲ್ಲಿ ಸರ್ಕಾರಿ ಸ್ವಾಮ್ಯದ 800 ಎಕರೆ ಸೇರಿದಂತೆ ಸುಮಾರು 3,000...

ಸೋನಮ್ ವಾಂಗ್‌ಚುಕ್ ಸಂಸ್ಥೆ ಅನುಕರಣೀಯ ಕೆಲಸ ಮಾಡುತ್ತಿದೆ, ಯುಜಿಸಿ ಮಾನ್ಯತೆ ನೀಡಬೇಕು ಎಂದ ಸಂಸದೀಯ ಸಮಿತಿ

ಲಡಾಖ್‌ನ ಶಿಕ್ಷಣ ತಜ್ಞ ಹಾಗೂ ಹೋರಾಟಗಾರ ಸೋನಮ್ ವಾಂಗ್‌ಚುಕ್ ಸ್ಥಾಪಿಸಿರುವ ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ (ಹೆಚ್‌ಐಎಎಲ್‌) 'ಅನುಕರಣೀಯ' ಕೆಲಸ ಮಾಡುತ್ತಿದೆ. ಹಾಗಾಗಿ, ಆ ಸಂಸ್ಥೆಗೆ ವಿಶ್ವವಿದ್ಯಾಲಯ ಅನುದಾನ ಆಯೋಗದಿಂದ (ಯುಜಿಸಿ) ಮಾನ್ಯತೆ...

ಮುಸ್ಲಿಂ ಎಂದು ಪರಿಶೀಲಿಸಿ ಗುಂಪುಹಲ್ಲೆ: ತೀವ್ರ ದಾಳಿಗೆ ಒಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ  ಸಾವು

ನವಾಡಾ ಜಿಲ್ಲೆಯ ರೋಹ್ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದ ಗುಂಪು ಹಲ್ಲೆಯಲ್ಲಿ ಕ್ರೂರವಾಗಿ ಹಲ್ಲೆಗೊಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ ಮೊಹಮ್ಮದ್ ಅಥರ್ ಹುಸೇನ್ ಶುಕ್ರವಾರ ತಡರಾತ್ರಿ ಬಿಹಾರ್ಷರೀಫ್ ಸದರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಡಿಸೆಂಬರ್...

ಅಮೆರಿಕಾದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ: 2 ಸಾವು, 8 ಜನರಿಗೆ ತೀವ್ರ ಗಾಯಗಳಾಗಿವೆ

ಅಮೆರಿಕಾದ ರೊಡ್ ಐಲ್ಯಂಡ್ ರಾಜ್ಯದ ಪ್ರೊವಿಡೆನ್ಸ್ ನಗರದಲ್ಲಿರುವ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಪರೀಕ್ಷೆ ಸಮಯದಲ್ಲಿ ಎಂಜಿನಿಯರಿಂಗ್ ಕಟ್ಟಡದಲ್ಲಿ ಗುಂಡಿನ ದಾಳಿ ನಡೆದಿದೆ, ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಡಿಸೆಂಬರ್ 13ರ,...