Homeಅಂಕಣಗಳುವಿಶ್ವಾಸಾರ್ಹತೆ ಕಳೆದುಕೊಂಡ ತನಿಖಾ ಸಂಸ್ಥೆಗಳು, ಬಿಜೆಪಿ ಸೇರಿದವರಿಗೆ ಸಿಬಿಐ ಸ್ಮೂತ್!

ವಿಶ್ವಾಸಾರ್ಹತೆ ಕಳೆದುಕೊಂಡ ತನಿಖಾ ಸಂಸ್ಥೆಗಳು, ಬಿಜೆಪಿ ಸೇರಿದವರಿಗೆ ಸಿಬಿಐ ಸ್ಮೂತ್!

- Advertisement -
- Advertisement -

ಕೊಲ್ಕೊತ್ತಾದ ಪೊಲೀಸ್ ಕಮೀಷನರ್ ರಾಜೀವ ಕುಮಾರ್ ಅವರ ಕಚೇರಿಯ ಮೇಲೆ ದಾಳಿ ಮಾಡಲು ಹೋದ ಸಿಬಿಐಗೆ ಮುಖಭಂಗವಾಗಿದೆ. ಈಗ ಸುಪ್ರಿಂಕೋರ್ಟ್ ರಾಜೀವ ಕುಮಾರ್ ಅವರನ್ನು ಬಂಧಿಸದೇ ವಿಚಾರಣೆ ನಡೆಸಲು ಸೂಚಿಸಿದೆ.
ಸಿಬಿಐ ಅನ್ನು ಕೇಂದ್ರ ಹೇಗೆ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎನ್ನುವುದಕ್ಕೆ ಈ ಶಾರದಾ ಚಿಟ್‌ಫಂಡ್ ಹಗರಣದ ತನಿಖೆಯೇ ಸಾಕ್ಷಿಯಾಗಿದೆ. ಈ ಹಗರಣದಲ್ಲಿ ಆರೋಪಿಗಳೆಂದು ಪರಿಗಣಿತರಾದವರು ಬಿಜೆಪಿ ಸೇರಿದ ಮೇಲೆ ಅವರ ಮೇಲಿನ ತನಿಖೆಯನ್ನು ಮೃದುಗೊಳಿಸಲಾಗಿದೆ ಅಥವಾ ನಿಲ್ಲಿಸಿಯೇ ಬಿಡಲಾಗಿದೆ.

2015ರಲ್ಲಿ ಮಾಜಿ ರೈಲ್ವೆ ಸಚಿವ, ಅಂದಿನ ಟಿಎಂಸಿ ನಾಯಕ ಮುಕುಲ್ ರಾಯ್ ವಿರುದ್ಧ ಸಿಬಿಐ ತನಿಖೆ ಶುರು ಮಾಡಿತು. ಆದರೆ ಮುಕುಲ್‌ರಾಯ್ ಬಿಜೆಪಿ ಸೇರಿದ ನಂತರ ತನಿಖೆಗೆ ಮಂಕು ಬಡಿದಿದೆ. ಹಾಗೆಯೇ ಅಸ್ಸಾಂನ ಸಚಿವ ಹಿಮಂತ ಬಿಸ್ವಾಸ್ ಶರ್ಮಾ ಮನೆ ಮೇಲೂ ಸಿಬಿಐ ದಾಳಿ ಮಾಡಿತ್ತು. ಶರ್ಮಾ ಬಿಜೆಪಿ ಸೇರಿದ ನಂತರ ಯಾವ ಚಾರ್ಜ್ಶೀಟಿನಲ್ಲೂ ಅವರ ಹೆಸರನ್ನು ಸೇರಿಸಲೇ ಇಲ್ಲ.
ಸುಪ್ರಿಂಕೋಟ್ ಆದೇಶದಂತೆ ಸಿಬಿಐ ಶಾರದಾ ಹಗರಣದ ತನಿಖೆಯನ್ನು 2014ರಲ್ಲಿ ಆರಂಭಿಸಿತು. 2015ರ ಜನೆವರಿ 30ರಂದು ಸಿಬಿಐ ಮುಕುಲ್ ರಾಯ್ ಅವರ ವಿಚಾರಣೆ ನಡೆಸಿತ್ತು. ಶಾರದಾ ಸಂಸ್ಥೆಯ ನ್ಯೂಸ್ ಆಪರೇಷನ್ಸ್ ಮತ್ತು ಸಂಸ್ಥೆಯ ಮುಖ್ಯಸ್ಥ ಸುದೀಪ್ತ್ ಸೇನ್ ಜೊತೆಗಿನ ಆತ್ಮೀಯ ಸಂಬಂಧಗಳ ಕುರಿತಂತೆ ರಾಯ್ ಅವರ ವಿರುದ್ಧ ತನಿಖೆ ಆರಂಭಿಸಲಾಗಿತ್ತು. ಸುದೀಪ್ತ್ ಸೇನ್ ಅವರ ಕಾರು ಚಾಲಕನ ಹೇಳಿಕೆಯಲ್ಲಿ ಮುಕುಲ್ ರಾಯ್ ಹೆಸರು ಪ್ರಸ್ತಾಪವಾಗಿತ್ತು. ಬಂಧನ ಭೀತಿಯಲ್ಲಿದ್ದ ಸುದೀಪ್ತ್ ಸೇನ್ ಅವರನ್ನು ಕೊಲ್ಕೊತ್ತಾದಿಂದ ಹೊರಗೆ ಪಾರಾಗಿ ಹೋಗಲು ರಾಯ್ ಹೇಗೆ ನೆರವು ನೀಡಿದ್ದರು ಎಂಬುದನ್ನು ಚಾಲಕ ವಿವರಿಸಿದ್ದ.

ಟಿಎಂಸಿ ಸಂಸದ ಕುನಾಲ್ ಘೋಷ್ ಶಾರದಾ ಹಗರಣ ಕುರಿತಂತೆ ರಾಯ್ ವಿರುದ್ಧ ಅಪಾದನೆ ಮಾಡಿದ ನಂತರ ರಾಯ್‌ಗೆ ಸಿಬಿಐ ಸಮನ್ಸ್ ನೀಡಿತ್ತು. ಶಾರದಾ ಹಗರಣಕ್ಕೆ ಸಂಬಂಧಿಸಿ 2013ರಲ್ಲೇ ಮೋಸ, ಕ್ರಿಮಿನಲ್ ಸಂಚು ಆರೋಪದ ಮೇಲೆ ಘೋಷ್ ಅವರನ್ನು ಬಂಧಿಸಲಾಗಿತ್ತು. ಬಂಧನವಾದ ಒಂದು ತಾಸಿನಲ್ಲೇ ಘೋಷ್ 12 ಜನರ ಹೆಸರನ್ನು ಹೇಳಿದ್ದು, ಅದರಲ್ಲಿ ಮುಕುಲ್ ರಾಯ್ ಹೆಸರು ಕೂಡ ಸೇರಿತ್ತು.

2015ರಲ್ಲೇ ಮುಕುಲ್ ರಾಯ್ ಬಿಜೆಪಿಗೆ ಹತ್ತಿರವಾಗತೊಡಗಿದರು. 2017ರ ನವೆಂಬರ್ 3ರಂದು ರಾಯ್ ಬಿಜೆಪಿ ಸೇರಿದರು. ಬಿಜೆಪಿಗೆ ಹತ್ತಿರವಾದ ನಂತರ ರಾಯ್ ಪರ ಮೃದು ಧೋರಣೆ ತಳೆದಿದ್ದ ಸಿಬಿಐ ಬಿಜೆಪಿ ಸೇರಿದ ನಂತರ ಅವರನ್ನು ವಿಚಾರಣೆಗೆ ಕರೆಯುತ್ತಲೇ ಇಲ್ಲ.
ಅಸ್ಸಾಂನ ಹಿಮಂತ ಶರ್ಮಾರನ್ನು ನವೆಂಬರ್ 26, 2014ರಂದು ವಿಚಾರಣೆ ಮಾಡಲಾಗಿತ್ತು. ಅದಕ್ಕೂ ಎರಡು ತಿಂಗಳು ಮೊದಲು ಶರ್ಮಾ ಮನೆ ಮತ್ತು ಆತನ ಪತ್ನಿಯ ಟಿವಿ ಚಾನೆಲ್ ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿತ್ತು. ಅಸ್ಸಾಂನಲ್ಲಿ ತಮ್ಮ ಸಂಸ್ಥೆಯ ಕಾರ್ಯಾಚರಣೆ ಸುಗಮವಾಗಿ ನಡೆಯಲು ಪ್ರತಿ ತಿಂಗಳು ತಮ್ಮಿಂದ 20 ಲಕ್ಷ ರೂ.ಗಳನ್ನು ಶರ್ಮಾ ಪಡೆಯುತ್ತಿದ್ದರು ಎಂದು ಶಾರದಾ ಸಂಸ್ಥೆಯ ಮುಖ್ಯಸ್ಥ ಸುದೀಪ್ತ್ ಸೇನ್ ಆರೋಪಿಸಿದ್ದರು.

2015ರ ಅಗಸ್ಟ್ನಲ್ಲಿ ಶರ್ಮಾ ಬಿಜೆಪಿ ಸೇರಿದರು. ಆ ನಂತರ ಅವರನ್ನು ವಿಚಾರಣೆಗೆ ಕರೆಯಲೇ ಇಲ್ಲ. ಯಾವ ಚಾರ್ಜ್ಶೀಟಿನಲ್ಲೂ ಅವರ ಹೆಸರನ್ನು ಉಲ್ಲೇಖಿಸಲಿಲ್ಲ.
ಅಂದರೆ, ಬಿಜೆಪಿ ಸಿಬಿಐ ಅನ್ನು ತನ್ನ ಅನುಕೂಲಕ್ಕೆ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂಬುದು ಪಕ್ಕಾ ಆಗಿತಲ್ಲವೇ?

(ಕೃಪೆ: ನ್ಯೂ ಇಂಡಿಯನ್ ಎಕ್ಸ್ಪ್ರೆಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....