Homeಕರ್ನಾಟಕಮೈಸೂರಲ್ಲೂ ಸಾಹಸಸಿಂಹನ ಬೆಂಬಿಡದ ಪಜೀತಿ

ಮೈಸೂರಲ್ಲೂ ಸಾಹಸಸಿಂಹನ ಬೆಂಬಿಡದ ಪಜೀತಿ

- Advertisement -
- Advertisement -

| ಅನಿಲ್.ಎಸ್ ಚಲ್ಯ |

ಆತ ಒಬ್ಬ ನಟ ಅಥವಾ ಬೇರೆ ಯಾರೇ ಆಗಿರಲಿ ಸರ್ಕಾರ ತಾನೇ ಸ್ಮಾರಕ ನಿರ್ಮಾಣ ಮಾಡುವುದಾಗಿಯೋ ಅಥವಾ ಬೇರೇನೋ ಒಂದು ನಿರ್ಧಾರವನ್ನು ಘೋಷಿಸಿದ ಮೇಲೆ ಅದಕ್ಕೆ ಬದ್ಧವಾಗಿ ಕಾರ್ಯನಿರ್ವಹಿಸಬೇಕು. ಹೀಗೆ ಹತ್ತಾರು ವರ್ಷಗಳ ಕಾಲ ಒಂದು ವಿಷಯವನ್ನು ಚರ್ಚಾ ಸಾಮಗ್ರಿಯನ್ನಾಗಿಸುವುದು ಶೋಭೆಯಲ್ಲ. ವಿಷ್ಣು ಸ್ಮಾರಕ ನಿರ್ಮಾಣದ ವಿಚಾರದಲ್ಲಾಗುತ್ತಿರುವ ಚರ್ಚೆ ವಿಳಂಬಗಳು ಅಭಿಮಾನಿಗಳಿಗಷ್ಟೇ ಅಲ್ಲ ಸಾಮಾನ್ಯವಾಗಿ ನೋಡುವವರಿಗೂ ಅಸಹನೆಯನ್ನು ಮೂಡಿಸುತ್ತದೆ

ತುತ್ತು ಅನ್ನ ತಿನ್ನೋಕೆ, ಬೊಗಸೆ ನೀರು ಕುಡಿಯೋಕೆ, ತುಂಡುಬಟ್ಟೆ ಸಾಕು ನನ್ನ ಮಾನ ಮುಚ್ಚೋಕೆ, ಅಂಗೈ ಅಗಲ ಜಾಗ ಸಾಕು ಹಾಯಾಗಿರೋಕೆ ಎಂದು ಹಾಡಿ ಜೀವನದ ಸೂಕ್ಷ್ಮತೆಯನ್ನು ಸಾರಿದ್ದ ಕನ್ನಡ ಚಿತ್ರರಂಗದ ಮೇರು ನಟ ವಿಷ್ಣುವರ್ಧನ್ ಅಭಿಮಾನಿಗಳನ್ನಗಲಿ ಹತ್ತು ವರ್ಷಗಳೇ ಕಳೆದಿವೆ. ವಿಷ್ಣುವಿನ ಸ್ಮಾರಕಕ್ಕೆ ಅಂಗೈ ಅಗಲ ಜಾಗವೂ ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಶೋಚÀನೀಯ. ಸರ್ಕಾರ, ಅಭಿಮಾನಿಗಳು ಮತ್ತು ಕುಟುಂಬದವರ ಅಸಮಾಧಾನ ಅಸಹಕಾರಗಳಿಂದ ಒಬ್ಬ ಧೀಮಂತ ನಟ ದಿನನಿತ್ಯದ ಚರ್ಚೆಯ ವಿಷಯವಾಗಿದ್ದಾರೆ. ವಿಷ್ಣು ಕುಚುಕು ಗೆಳೆಯ ಅಂಬರೀಶ್ ಕೆಲವು ತಿಂಗಳುಗಳ ಹಿಂದೆ ಇಹಲೋಕ ತ್ಯಜಿಸಿದಾಗ ಅಂಬರೀಶ್ ಸ್ಮಾರಕ ನಿರ್ಮಾಣದ ವಿಷಯ ಪ್ರಸ್ತಾಪವಾಗಿತ್ತು. ಆಗಲೂ ಸಹ ವಿಷ್ಣು ಸ್ಮಾರಕ ನಿರ್ಮಾಣದ ಚರ್ಚೆ ಮುನ್ನೆಲೆಗೆ ಬಂದಿತ್ತು..

ಅಂಬರೀಶ್ ಸ್ಮಾರಕದ ಜೊತೆಗೆ ಕಂಠೀರವ ಸ್ಟುಡಿಯೋದಲ್ಲೇ ವಿಷ್ಣು ಸ್ಮಾರಕವನ್ನು ನಿರ್ಮಿಸುವ ನಿರ್ಧಾರವನ್ನು ಸರ್ಕಾರ ವ್ಯಕ್ತಪಡಿಸಿತ್ತು. ಇದಕ್ಕೆ ಅಭಿಮಾನಿಗಳು ಮತ್ತು ವಿಷ್ಣು ಕುಟುಂಬದಿಂದ ತೀವ್ರ ವಿರೋಧ ವ್ಯಕ್ತವಾದ ಮೇಲೆ ಸರ್ಕಾರ ಆ ವಿಚಾರದಲ್ಲಿ ತುಟಿ ಬಿಚ್ಚಲಿಲ್ಲ. ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಹಿಂದೇಟು ಹಾಕುತ್ತಿರುವುದನ್ನು ನೋಡಿ ಬೇಸರಗೊಂಡ ಅಭಿಮಾನಿಯೊಬ್ಬ ತಾನೆ ಸ್ಮಾರಕಕ್ಕೆ ಜಾಗ ಕೊಡುವುದಾಗಿ ಹೇಳಿ ಸರ್ಕಾರದ ಮೇಲಿನ ಆಕ್ರೋಶ ವ್ಯಕ್ತಪಡಿಸಿದ್ದ. ಈ ಮಧ್ಯೆ ವಿಷ್ಣು ಅಳಿಯ ಅನಿರುದ್ ಮೈಸೂರಿನಲ್ಲಿ ದಿಢೀರನೆ ಭೂಮಿ ಪೂಜೆಗೆ ಮುಂದಾಗಿರುವುದರಿಂದ ಸ್ಮಾರಕದ ವಿಚಾರ ಮತ್ತೆ ವಿವಾದದ ರೂಪ ಪಡೆದಿದೆ..

ಬೆಂಗಳೂರಿನ ಅಭಿಮಾನ್ ಸ್ಟೂಡಿಯೋದಲ್ಲಿ 2009ರಲ್ಲಿ ವಿಷ್ಣು ಅಂತಿಮ ಸಂಸ್ಕಾರವನ್ನು ಮಾಡಲಾಗಿತ್ತು. ಅಭಿಮಾನ್ ಸ್ಟುಡಿಯೋ ನಿರ್ಮಾಣಕ್ಕಾಗಿ 20 ಎಕರೆ ಜಾಗವನ್ನು ಸರ್ಕಾರವೇ ಬಾಲಕೃಷ್ಣವರಿಗೆ ಮಂಜೂರು ಮಾಡಿತ್ತು. ಅದರಲ್ಲಿ 10 ಎಕರೆ ಜಾಗವನ್ನು ಬಾಲಕೃಷ್ಣರ ಮಗ ಮಾರಾಟ ಮಾಡಲು ಮುಂದಾಗಿದ್ದರು. ಹಾಗಾಗಿ ಅಭಿಮಾನ್ ಸ್ಟುಡಿಯೋ ಬಾಲಣ್ಣನ ಕುಟುಂಬದ ವ್ಯಾಜ್ಯವಾಗಿ ಹೈ ಕೋರ್ಟ್ ಮೆಟ್ಟಿಲೇರಿತ್ತು. ಆದರೂ ಅಭಿಮಾನ್ ಸ್ಟುಡಿಯೋದಲ್ಲೇ ಸಂಸ್ಕಾರ ಮಾಡಿದ್ದರಿಂದ ವಿಷ್ಣು ಸ್ಮಾರಕವನ್ನು ಅಲ್ಲಯೇ ಕಟ್ಟಲು ಸರ್ಕಾರ ಮುಂದಾಗಿತ್ತು. ವ್ಯಾಜ್ಯವಿದ್ದರಿಂದ ಹೈ ಕೋರ್ಟ್ ಸ್ಮಾರಕ ನಿರ್ಮಾಣಕ್ಕೆ ತಡೆ ನೀಡಿತ್ತು. ಹೀಗಾಗಿ ವಿಷ್ಣು ಕುಟುಂಬ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡುವಂತೆ ಕೋರಿಕೆ ಸಲ್ಲಿಸಿತ್ತು. ಅದರಂತೆ 2016 ಮೈಸೂರಿನಲ್ಲಿ 5 ಎಕರೆ ಜಾಗವನ್ನು ಸರ್ಕಾರ ಮಂಜೂರು ಮಾಡಿತ್ತು. ಹೀಗೆ ಅವರ್ ಬಿಟ್ ಇವರ್ ಬಿಟ್ ಇನ್ಯಾರು ಎಂಬಂತೆ ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ ಓಡಾಡಿಸುತ್ತಾ ಸರ್ಕಾರ ಕಣ್ಣಾಮುಚ್ಚಾಲೆಯ ಆಟವಾಡುತ್ತಿದರೆ, ಇತ್ತ ಮೈಸೂರಿನಲ್ಲಿ ರೈತರು ತಮ್ಮ ಜಾಗವನ್ನು ಬಿಟ್ಟುಕೊಡಲು ನಿರಾಕರಿಸಿ, ಕೋರ್ಟ್ ಮೆಟ್ಟಿಲೇರಿದ್ದರು.

ಯಾವುದೇ ಅಭಿವೃದ್ಧಿ ಯೋಜನೆಗಳಿಗೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕಾದರೆ ರೈತರ ಅನುಮತಿಯೊಂದಿಗೆ, ಆ ಜಾಗದ ಮಾರುಕಟ್ಟೆ ಬೆಲೆಗಿಂತ ನಾಲ್ಕು ಪಟ್ಟು ಹೆಚ್ಚು ಬೆಲೆಕೊಟ್ಟು, ಅದು ಕೃಷಿ ಭೂಮಿಯಾಗಿದ್ದಲ್ಲಿ ಬೇರೆಡೆ ಭೂಮಿಯನ್ನೂ ಕೊಟ್ಟು ಸ್ವಾಧೀನ ಪಡಿಸಿಕೊಳ್ಳಬೇಕು ಎಂದು ಕಾನೂನು ಹೇಳುತ್ತದೆ. ಆದರೆ ಆ ಜಾಗಕ್ಕೆ ಇದಾವುದೂ ಅಪ್ಲೈ ಆಗಿಲ್ಲ. ಕಡಿಮೆ ಬೆಲೆ ಕೊಟ್ಟು ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಹೆಚ್ಚಿನ ಕಾಂಪೆನ್ಸೇಷನ್ ಕೊಡಬೇಕು ಎಂದು ಆ ಭೂಮಿಯ ಮಾಲೀಕರಾದ ರೈತರು ಕೋರ್ಟ್‍ನಲ್ಲಿ ಅಫಿಡವಿಟ್ ಸಲ್ಲಿಸಿದ್ದಾರೆ.

ಸದ್ಯಕ್ಕೆ ಆ ವಿಚಾರ ಹೈಕೋರ್ಟ್‍ನಲ್ಲಿ ವಿಚಾರಣೆ ನಡೆಯುತ್ತಿದೆ. ಇದೆಲ್ಲದರ ನಡುವೆ ವಿಷ್ಣು ಅಳಿಯ ಅನಿರುದ್ ಮೈಸೂರಿನಲ್ಲಿ ಭೂಮಿ ಪೂಜೆ ಮಾಡಲು ಹೋಗಿದ್ದರಿಂದ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೂ ಕೋರ್ಟ್‍ನಲ್ಲಿ ಕೇಸು ನಡೆಯುತ್ತಿರುವಾಗಲೇ ಭೂಮಿ ಪೂಜೆ ಮಾಡಲು ಹೇಗೆ ಸಾಧ್ಯ ಎಂದು ರೈತರು ತಡೆಯೊಡ್ಡಿದ್ದಾರೆ. ಇಲ್ಲ ಕೋರ್ಟ್ ಸ್ಮಾರಕ ನಿರ್ಮಾಣಕ್ಕೆ ಅನುಮತಿ ನೀಡಿದೆ ಎಂದು ಅನಿರುದ್ ಇಂಗ್ಲಿಷ್‍ನಲ್ಲಿದ್ದ ಒಂದು ಲೆಟರ್ ತೋರಿಸಿದ್ದಾರೆ. ಅದು ಕೋರ್ಟ್ ಆದೇಶ ಅಲ್ಲ, ಆಗಿದ್ದರೂ ನಮಗೆ ಇಂಗ್ಲಿಷ್ ಅರ್ಥವಾಗುವುದಿಲ್ಲ ಕನ್ನಡದಲ್ಲಿ ಲೆಟರ್ ತೆಗೆದುಕೊಂಡು ಬನ್ನಿ ಎಂದು ರೈತರು ವಾಪಸ್ ಕಳಿಸಿದ್ದಾರೆ.

ಕೋರ್ಟ್ ಆದೇಶ ಬರದೆ, ತಮಗೆ ಕಾಂಪೆನ್ಸೇಷನ್ ಸಿಗದೆ ಭೂಮಿ ಪೂಜೆ ಮಾಡಿ ಸ್ಮಾರಕ ಕಟ್ಟಿದರೆ ತಮಗೆ ನ್ಯಾಯ ಸಿಗುವುದಿಲ್ಲ, ಪರಿಹಾರವೂ ಬರುವುದಿಲ್ಲ, ಆ ವಿಚಾರ ಹಾಗೇ ಮುಚ್ಚಿಹೋಗುತ್ತದೆ ಎಂಬುದು ರೈತರ ಆತಂಕ. ಅದಷ್ಟೇ ಅಲ್ಲದೆ ಕೋರ್ಟ್ ಆದೇಶ ನೀಡಿದ್ದೇ ಆದಲ್ಲಿ ಪ್ರತಿವಾದಿಗೂ ಆದೇಶದ ಕಾಪಿ ನೀಡಲಾಗುತ್ತದೆ. ಆದರೆ ರೈತರಿಗೆ ಕೋರ್ಟ್‍ನಿಂದಾಗಲಿ ಅಥವಾ ತಮ್ಮ ಲಾಯರ್‍ನಿಂದಗಲೀ ಯಾವುದೇ ಆದೇಶದ ಪ್ರತಿ ದೊರೆತಿಲ್ಲ. ಇದು ಅನಿರುದ್ ಯಾವುದೋ ಅರ್ಥವಾಗದ ಲೆಟರ್ ತಂದು ನಮ್ಮನ್ನು ಯಾಮಾರಿಸುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಬಹುಶಃ ರೈತರ ಆತಂಕ ಸತ್ಯವೂ ಆಗಿರಬಹುದು. ಹಾಗೊಂದು ವೇಳೆ ಅನಿರುದ್ ರೈತರಿಗೆ ಯಾವುದೋ ಪತ್ರವನ್ನು ತೋರಿಸಿದ್ದೇ ಆಗಿದ್ದಲ್ಲಿ ಅದು ರೈತರಿಗಷ್ಟೇ ಅಲ್ಲ ವಿಷ್ಣು ಜೀವಿಸಿದ್ದ ಆದರ್ಶದ ಬದುಕಿಗೆ ಮಾಡುವ ಮೋಸವೂ, ಅವಮಾನವೂ ಆಗಿರುತ್ತದೆ. ಈಗಾಗಲೇ 10 ವರ್ಷ ಕಳೆದಿದ್ದು ಇನ್ನೂ ಸ್ಮಾರಕ ನಿರ್ಮಾಣವಾಗದೇ ಇರುವುದು ವಿಷ್ಣು ಕುಟುಂಬ ಮತ್ತು ಅಭಿಮಾನಿಗಳಿಗೆ ಬೇಸರದ ವಿಚಾರವೇ ಆಗಿದ್ದರೂ, ಆ ಕಾರಣಕ್ಕೆ ಮೋಸ ಮಾಡಿ ಸ್ಮಾರಕ ಕಟ್ಟುವುದರಿಂದ ಯಾವ ಪ್ರಯೋಜನವೂ ಆಗುವುದಿಲ್ಲ.

ರೈತರೂ ಭೂಮಿಯನ್ನು ಕೊಡುವುದೇ ಇಲ್ಲ ಎಂದೇನು ಹೇಳುತ್ತಿಲ್ಲ, ಇನ್ನೂ ಹೆಚ್ಚಿನ ಪರಿಹಾರವನ್ನಷ್ಟೇ ಕೇಳುತ್ತಿದ್ದಾರೆ. ಹಾಗಾಗಿ ಕೋರ್ಟ್‍ನಲ್ಲಿ ಆ ವಿಚಾರ ತೀರ್ಮಾನವಾಗಬೇಕಿದೆ. ಹೀಗಿರುವಾಗ ದುಡುಕಿನ ತೀರ್ಮಾನದಲ್ಲಿ ಕೋರ್ಟ್ ವಿಚಾರಣೆಯಲ್ಲಿರುವಾಗಲೇ ಭೂಮಿ ಪೂಜೆಗೆ ಮುಂದಾಗಿರುವುದು ಕಾನೂನು ಉಲ್ಲಂಘನೆಯೂ ಆಗುತ್ತದೆ. ಹಾಗಾಗಿ ಕಾನೂನು ಉಲ್ಲಂಘಿಸುವುದು, ರೈತರಿಗೆ ಮೋಸ ಮಾಡುವುದು ವಿಷ್ಣು ಬದುಕಿನ ಘನತೆಗೆ ಕಪ್ಪು ಚುಕ್ಕೆಯನ್ನು ತಂದೊಡ್ಡುತ್ತದೆ. ಕೋರ್ಟ್ ವ್ಯಾಜ್ಯ ಮುಗಿಯುವವರೆಗೆ ವಿಷ್ಣು ಕುಟುಂಬ ಕಾಯಬೇಕು.

ಆತ ಒಬ್ಬ ನಟ ಅಥವಾ ಬೇರೆ ಯಾರೇ ಆಗಿರಲಿ ಸರ್ಕಾರ ತಾನೇ ಸ್ಮಾರಕ ನಿರ್ಮಾಣ ಮಾಡುವುದಾಗಿಯೋ ಅಥವಾ ಬೇರೇನೋ ಒಂದು ನಿರ್ಧಾರವನ್ನು ಘೋಷಿಸಿದ ಮೇಲೆ ಅದಕ್ಕೆ ಬದ್ಧವಾಗಿ ಕಾರ್ಯನಿರ್ವಹಿಸಬೇಕು. ಹೀಗೆ ಹತ್ತಾರು ವರ್ಷಗಳ ಕಾಲ ಒಂದು ವಿಷಯವನ್ನು ಚರ್ಚಾ ಸಾಮಗ್ರಿಯನ್ನಾಗಿಸುವುದು ಶೋಭೆಯಲ್ಲ. ವಿಷ್ಣು ಸ್ಮಾರಕ ನಿರ್ಮಾಣದ ವಿಚಾರದಲ್ಲಾಗುತ್ತಿರುವ ಚರ್ಚೆ ವಿಳಂಬಗಳು ಅಭಿಮಾನಿಗಳಿಗಷ್ಟೇ ಅಲ್ಲ ಸಾಮಾನ್ಯವಾಗಿ ನೋಡುವವರಿಗೂ ಅಸಹನೆಯನ್ನು ಮೂಡಿಸುತ್ತದೆ.

ವಿಷ್ಣು ನಿಧನದ ಸಮಯದಲ್ಲಿ ನಮ್ಮ ಗೌರಿ ಮೇಡಂ ‘ವಿಷ್ಣು ಬಗ್ಗೆ ಜಗತ್ತು ಇನ್ನಷ್ಟು ಔದಾರ್ಯ ತೋರಬೇಕಿತ್ತು’ ಎಂದು ಬರೆದಿದ್ದರು. ಅಂತೆಯೇ ಸರ್ಕಾರ ವಿಷ್ಣು ಸ್ಮಾರಕಕ್ಕೂ ಔದಾರ್ಯ ತೋರಬೇಕಾಗಿದೆ ಎಂದೆನಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...