Homeಕರ್ನಾಟಕಮೈಸೂರಲ್ಲೂ ಸಾಹಸಸಿಂಹನ ಬೆಂಬಿಡದ ಪಜೀತಿ

ಮೈಸೂರಲ್ಲೂ ಸಾಹಸಸಿಂಹನ ಬೆಂಬಿಡದ ಪಜೀತಿ

- Advertisement -
- Advertisement -

| ಅನಿಲ್.ಎಸ್ ಚಲ್ಯ |

ಆತ ಒಬ್ಬ ನಟ ಅಥವಾ ಬೇರೆ ಯಾರೇ ಆಗಿರಲಿ ಸರ್ಕಾರ ತಾನೇ ಸ್ಮಾರಕ ನಿರ್ಮಾಣ ಮಾಡುವುದಾಗಿಯೋ ಅಥವಾ ಬೇರೇನೋ ಒಂದು ನಿರ್ಧಾರವನ್ನು ಘೋಷಿಸಿದ ಮೇಲೆ ಅದಕ್ಕೆ ಬದ್ಧವಾಗಿ ಕಾರ್ಯನಿರ್ವಹಿಸಬೇಕು. ಹೀಗೆ ಹತ್ತಾರು ವರ್ಷಗಳ ಕಾಲ ಒಂದು ವಿಷಯವನ್ನು ಚರ್ಚಾ ಸಾಮಗ್ರಿಯನ್ನಾಗಿಸುವುದು ಶೋಭೆಯಲ್ಲ. ವಿಷ್ಣು ಸ್ಮಾರಕ ನಿರ್ಮಾಣದ ವಿಚಾರದಲ್ಲಾಗುತ್ತಿರುವ ಚರ್ಚೆ ವಿಳಂಬಗಳು ಅಭಿಮಾನಿಗಳಿಗಷ್ಟೇ ಅಲ್ಲ ಸಾಮಾನ್ಯವಾಗಿ ನೋಡುವವರಿಗೂ ಅಸಹನೆಯನ್ನು ಮೂಡಿಸುತ್ತದೆ

ತುತ್ತು ಅನ್ನ ತಿನ್ನೋಕೆ, ಬೊಗಸೆ ನೀರು ಕುಡಿಯೋಕೆ, ತುಂಡುಬಟ್ಟೆ ಸಾಕು ನನ್ನ ಮಾನ ಮುಚ್ಚೋಕೆ, ಅಂಗೈ ಅಗಲ ಜಾಗ ಸಾಕು ಹಾಯಾಗಿರೋಕೆ ಎಂದು ಹಾಡಿ ಜೀವನದ ಸೂಕ್ಷ್ಮತೆಯನ್ನು ಸಾರಿದ್ದ ಕನ್ನಡ ಚಿತ್ರರಂಗದ ಮೇರು ನಟ ವಿಷ್ಣುವರ್ಧನ್ ಅಭಿಮಾನಿಗಳನ್ನಗಲಿ ಹತ್ತು ವರ್ಷಗಳೇ ಕಳೆದಿವೆ. ವಿಷ್ಣುವಿನ ಸ್ಮಾರಕಕ್ಕೆ ಅಂಗೈ ಅಗಲ ಜಾಗವೂ ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಶೋಚÀನೀಯ. ಸರ್ಕಾರ, ಅಭಿಮಾನಿಗಳು ಮತ್ತು ಕುಟುಂಬದವರ ಅಸಮಾಧಾನ ಅಸಹಕಾರಗಳಿಂದ ಒಬ್ಬ ಧೀಮಂತ ನಟ ದಿನನಿತ್ಯದ ಚರ್ಚೆಯ ವಿಷಯವಾಗಿದ್ದಾರೆ. ವಿಷ್ಣು ಕುಚುಕು ಗೆಳೆಯ ಅಂಬರೀಶ್ ಕೆಲವು ತಿಂಗಳುಗಳ ಹಿಂದೆ ಇಹಲೋಕ ತ್ಯಜಿಸಿದಾಗ ಅಂಬರೀಶ್ ಸ್ಮಾರಕ ನಿರ್ಮಾಣದ ವಿಷಯ ಪ್ರಸ್ತಾಪವಾಗಿತ್ತು. ಆಗಲೂ ಸಹ ವಿಷ್ಣು ಸ್ಮಾರಕ ನಿರ್ಮಾಣದ ಚರ್ಚೆ ಮುನ್ನೆಲೆಗೆ ಬಂದಿತ್ತು..

ಅಂಬರೀಶ್ ಸ್ಮಾರಕದ ಜೊತೆಗೆ ಕಂಠೀರವ ಸ್ಟುಡಿಯೋದಲ್ಲೇ ವಿಷ್ಣು ಸ್ಮಾರಕವನ್ನು ನಿರ್ಮಿಸುವ ನಿರ್ಧಾರವನ್ನು ಸರ್ಕಾರ ವ್ಯಕ್ತಪಡಿಸಿತ್ತು. ಇದಕ್ಕೆ ಅಭಿಮಾನಿಗಳು ಮತ್ತು ವಿಷ್ಣು ಕುಟುಂಬದಿಂದ ತೀವ್ರ ವಿರೋಧ ವ್ಯಕ್ತವಾದ ಮೇಲೆ ಸರ್ಕಾರ ಆ ವಿಚಾರದಲ್ಲಿ ತುಟಿ ಬಿಚ್ಚಲಿಲ್ಲ. ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಹಿಂದೇಟು ಹಾಕುತ್ತಿರುವುದನ್ನು ನೋಡಿ ಬೇಸರಗೊಂಡ ಅಭಿಮಾನಿಯೊಬ್ಬ ತಾನೆ ಸ್ಮಾರಕಕ್ಕೆ ಜಾಗ ಕೊಡುವುದಾಗಿ ಹೇಳಿ ಸರ್ಕಾರದ ಮೇಲಿನ ಆಕ್ರೋಶ ವ್ಯಕ್ತಪಡಿಸಿದ್ದ. ಈ ಮಧ್ಯೆ ವಿಷ್ಣು ಅಳಿಯ ಅನಿರುದ್ ಮೈಸೂರಿನಲ್ಲಿ ದಿಢೀರನೆ ಭೂಮಿ ಪೂಜೆಗೆ ಮುಂದಾಗಿರುವುದರಿಂದ ಸ್ಮಾರಕದ ವಿಚಾರ ಮತ್ತೆ ವಿವಾದದ ರೂಪ ಪಡೆದಿದೆ..

ಬೆಂಗಳೂರಿನ ಅಭಿಮಾನ್ ಸ್ಟೂಡಿಯೋದಲ್ಲಿ 2009ರಲ್ಲಿ ವಿಷ್ಣು ಅಂತಿಮ ಸಂಸ್ಕಾರವನ್ನು ಮಾಡಲಾಗಿತ್ತು. ಅಭಿಮಾನ್ ಸ್ಟುಡಿಯೋ ನಿರ್ಮಾಣಕ್ಕಾಗಿ 20 ಎಕರೆ ಜಾಗವನ್ನು ಸರ್ಕಾರವೇ ಬಾಲಕೃಷ್ಣವರಿಗೆ ಮಂಜೂರು ಮಾಡಿತ್ತು. ಅದರಲ್ಲಿ 10 ಎಕರೆ ಜಾಗವನ್ನು ಬಾಲಕೃಷ್ಣರ ಮಗ ಮಾರಾಟ ಮಾಡಲು ಮುಂದಾಗಿದ್ದರು. ಹಾಗಾಗಿ ಅಭಿಮಾನ್ ಸ್ಟುಡಿಯೋ ಬಾಲಣ್ಣನ ಕುಟುಂಬದ ವ್ಯಾಜ್ಯವಾಗಿ ಹೈ ಕೋರ್ಟ್ ಮೆಟ್ಟಿಲೇರಿತ್ತು. ಆದರೂ ಅಭಿಮಾನ್ ಸ್ಟುಡಿಯೋದಲ್ಲೇ ಸಂಸ್ಕಾರ ಮಾಡಿದ್ದರಿಂದ ವಿಷ್ಣು ಸ್ಮಾರಕವನ್ನು ಅಲ್ಲಯೇ ಕಟ್ಟಲು ಸರ್ಕಾರ ಮುಂದಾಗಿತ್ತು. ವ್ಯಾಜ್ಯವಿದ್ದರಿಂದ ಹೈ ಕೋರ್ಟ್ ಸ್ಮಾರಕ ನಿರ್ಮಾಣಕ್ಕೆ ತಡೆ ನೀಡಿತ್ತು. ಹೀಗಾಗಿ ವಿಷ್ಣು ಕುಟುಂಬ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡುವಂತೆ ಕೋರಿಕೆ ಸಲ್ಲಿಸಿತ್ತು. ಅದರಂತೆ 2016 ಮೈಸೂರಿನಲ್ಲಿ 5 ಎಕರೆ ಜಾಗವನ್ನು ಸರ್ಕಾರ ಮಂಜೂರು ಮಾಡಿತ್ತು. ಹೀಗೆ ಅವರ್ ಬಿಟ್ ಇವರ್ ಬಿಟ್ ಇನ್ಯಾರು ಎಂಬಂತೆ ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ ಓಡಾಡಿಸುತ್ತಾ ಸರ್ಕಾರ ಕಣ್ಣಾಮುಚ್ಚಾಲೆಯ ಆಟವಾಡುತ್ತಿದರೆ, ಇತ್ತ ಮೈಸೂರಿನಲ್ಲಿ ರೈತರು ತಮ್ಮ ಜಾಗವನ್ನು ಬಿಟ್ಟುಕೊಡಲು ನಿರಾಕರಿಸಿ, ಕೋರ್ಟ್ ಮೆಟ್ಟಿಲೇರಿದ್ದರು.

ಯಾವುದೇ ಅಭಿವೃದ್ಧಿ ಯೋಜನೆಗಳಿಗೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕಾದರೆ ರೈತರ ಅನುಮತಿಯೊಂದಿಗೆ, ಆ ಜಾಗದ ಮಾರುಕಟ್ಟೆ ಬೆಲೆಗಿಂತ ನಾಲ್ಕು ಪಟ್ಟು ಹೆಚ್ಚು ಬೆಲೆಕೊಟ್ಟು, ಅದು ಕೃಷಿ ಭೂಮಿಯಾಗಿದ್ದಲ್ಲಿ ಬೇರೆಡೆ ಭೂಮಿಯನ್ನೂ ಕೊಟ್ಟು ಸ್ವಾಧೀನ ಪಡಿಸಿಕೊಳ್ಳಬೇಕು ಎಂದು ಕಾನೂನು ಹೇಳುತ್ತದೆ. ಆದರೆ ಆ ಜಾಗಕ್ಕೆ ಇದಾವುದೂ ಅಪ್ಲೈ ಆಗಿಲ್ಲ. ಕಡಿಮೆ ಬೆಲೆ ಕೊಟ್ಟು ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಹೆಚ್ಚಿನ ಕಾಂಪೆನ್ಸೇಷನ್ ಕೊಡಬೇಕು ಎಂದು ಆ ಭೂಮಿಯ ಮಾಲೀಕರಾದ ರೈತರು ಕೋರ್ಟ್‍ನಲ್ಲಿ ಅಫಿಡವಿಟ್ ಸಲ್ಲಿಸಿದ್ದಾರೆ.

ಸದ್ಯಕ್ಕೆ ಆ ವಿಚಾರ ಹೈಕೋರ್ಟ್‍ನಲ್ಲಿ ವಿಚಾರಣೆ ನಡೆಯುತ್ತಿದೆ. ಇದೆಲ್ಲದರ ನಡುವೆ ವಿಷ್ಣು ಅಳಿಯ ಅನಿರುದ್ ಮೈಸೂರಿನಲ್ಲಿ ಭೂಮಿ ಪೂಜೆ ಮಾಡಲು ಹೋಗಿದ್ದರಿಂದ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೂ ಕೋರ್ಟ್‍ನಲ್ಲಿ ಕೇಸು ನಡೆಯುತ್ತಿರುವಾಗಲೇ ಭೂಮಿ ಪೂಜೆ ಮಾಡಲು ಹೇಗೆ ಸಾಧ್ಯ ಎಂದು ರೈತರು ತಡೆಯೊಡ್ಡಿದ್ದಾರೆ. ಇಲ್ಲ ಕೋರ್ಟ್ ಸ್ಮಾರಕ ನಿರ್ಮಾಣಕ್ಕೆ ಅನುಮತಿ ನೀಡಿದೆ ಎಂದು ಅನಿರುದ್ ಇಂಗ್ಲಿಷ್‍ನಲ್ಲಿದ್ದ ಒಂದು ಲೆಟರ್ ತೋರಿಸಿದ್ದಾರೆ. ಅದು ಕೋರ್ಟ್ ಆದೇಶ ಅಲ್ಲ, ಆಗಿದ್ದರೂ ನಮಗೆ ಇಂಗ್ಲಿಷ್ ಅರ್ಥವಾಗುವುದಿಲ್ಲ ಕನ್ನಡದಲ್ಲಿ ಲೆಟರ್ ತೆಗೆದುಕೊಂಡು ಬನ್ನಿ ಎಂದು ರೈತರು ವಾಪಸ್ ಕಳಿಸಿದ್ದಾರೆ.

ಕೋರ್ಟ್ ಆದೇಶ ಬರದೆ, ತಮಗೆ ಕಾಂಪೆನ್ಸೇಷನ್ ಸಿಗದೆ ಭೂಮಿ ಪೂಜೆ ಮಾಡಿ ಸ್ಮಾರಕ ಕಟ್ಟಿದರೆ ತಮಗೆ ನ್ಯಾಯ ಸಿಗುವುದಿಲ್ಲ, ಪರಿಹಾರವೂ ಬರುವುದಿಲ್ಲ, ಆ ವಿಚಾರ ಹಾಗೇ ಮುಚ್ಚಿಹೋಗುತ್ತದೆ ಎಂಬುದು ರೈತರ ಆತಂಕ. ಅದಷ್ಟೇ ಅಲ್ಲದೆ ಕೋರ್ಟ್ ಆದೇಶ ನೀಡಿದ್ದೇ ಆದಲ್ಲಿ ಪ್ರತಿವಾದಿಗೂ ಆದೇಶದ ಕಾಪಿ ನೀಡಲಾಗುತ್ತದೆ. ಆದರೆ ರೈತರಿಗೆ ಕೋರ್ಟ್‍ನಿಂದಾಗಲಿ ಅಥವಾ ತಮ್ಮ ಲಾಯರ್‍ನಿಂದಗಲೀ ಯಾವುದೇ ಆದೇಶದ ಪ್ರತಿ ದೊರೆತಿಲ್ಲ. ಇದು ಅನಿರುದ್ ಯಾವುದೋ ಅರ್ಥವಾಗದ ಲೆಟರ್ ತಂದು ನಮ್ಮನ್ನು ಯಾಮಾರಿಸುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಬಹುಶಃ ರೈತರ ಆತಂಕ ಸತ್ಯವೂ ಆಗಿರಬಹುದು. ಹಾಗೊಂದು ವೇಳೆ ಅನಿರುದ್ ರೈತರಿಗೆ ಯಾವುದೋ ಪತ್ರವನ್ನು ತೋರಿಸಿದ್ದೇ ಆಗಿದ್ದಲ್ಲಿ ಅದು ರೈತರಿಗಷ್ಟೇ ಅಲ್ಲ ವಿಷ್ಣು ಜೀವಿಸಿದ್ದ ಆದರ್ಶದ ಬದುಕಿಗೆ ಮಾಡುವ ಮೋಸವೂ, ಅವಮಾನವೂ ಆಗಿರುತ್ತದೆ. ಈಗಾಗಲೇ 10 ವರ್ಷ ಕಳೆದಿದ್ದು ಇನ್ನೂ ಸ್ಮಾರಕ ನಿರ್ಮಾಣವಾಗದೇ ಇರುವುದು ವಿಷ್ಣು ಕುಟುಂಬ ಮತ್ತು ಅಭಿಮಾನಿಗಳಿಗೆ ಬೇಸರದ ವಿಚಾರವೇ ಆಗಿದ್ದರೂ, ಆ ಕಾರಣಕ್ಕೆ ಮೋಸ ಮಾಡಿ ಸ್ಮಾರಕ ಕಟ್ಟುವುದರಿಂದ ಯಾವ ಪ್ರಯೋಜನವೂ ಆಗುವುದಿಲ್ಲ.

ರೈತರೂ ಭೂಮಿಯನ್ನು ಕೊಡುವುದೇ ಇಲ್ಲ ಎಂದೇನು ಹೇಳುತ್ತಿಲ್ಲ, ಇನ್ನೂ ಹೆಚ್ಚಿನ ಪರಿಹಾರವನ್ನಷ್ಟೇ ಕೇಳುತ್ತಿದ್ದಾರೆ. ಹಾಗಾಗಿ ಕೋರ್ಟ್‍ನಲ್ಲಿ ಆ ವಿಚಾರ ತೀರ್ಮಾನವಾಗಬೇಕಿದೆ. ಹೀಗಿರುವಾಗ ದುಡುಕಿನ ತೀರ್ಮಾನದಲ್ಲಿ ಕೋರ್ಟ್ ವಿಚಾರಣೆಯಲ್ಲಿರುವಾಗಲೇ ಭೂಮಿ ಪೂಜೆಗೆ ಮುಂದಾಗಿರುವುದು ಕಾನೂನು ಉಲ್ಲಂಘನೆಯೂ ಆಗುತ್ತದೆ. ಹಾಗಾಗಿ ಕಾನೂನು ಉಲ್ಲಂಘಿಸುವುದು, ರೈತರಿಗೆ ಮೋಸ ಮಾಡುವುದು ವಿಷ್ಣು ಬದುಕಿನ ಘನತೆಗೆ ಕಪ್ಪು ಚುಕ್ಕೆಯನ್ನು ತಂದೊಡ್ಡುತ್ತದೆ. ಕೋರ್ಟ್ ವ್ಯಾಜ್ಯ ಮುಗಿಯುವವರೆಗೆ ವಿಷ್ಣು ಕುಟುಂಬ ಕಾಯಬೇಕು.

ಆತ ಒಬ್ಬ ನಟ ಅಥವಾ ಬೇರೆ ಯಾರೇ ಆಗಿರಲಿ ಸರ್ಕಾರ ತಾನೇ ಸ್ಮಾರಕ ನಿರ್ಮಾಣ ಮಾಡುವುದಾಗಿಯೋ ಅಥವಾ ಬೇರೇನೋ ಒಂದು ನಿರ್ಧಾರವನ್ನು ಘೋಷಿಸಿದ ಮೇಲೆ ಅದಕ್ಕೆ ಬದ್ಧವಾಗಿ ಕಾರ್ಯನಿರ್ವಹಿಸಬೇಕು. ಹೀಗೆ ಹತ್ತಾರು ವರ್ಷಗಳ ಕಾಲ ಒಂದು ವಿಷಯವನ್ನು ಚರ್ಚಾ ಸಾಮಗ್ರಿಯನ್ನಾಗಿಸುವುದು ಶೋಭೆಯಲ್ಲ. ವಿಷ್ಣು ಸ್ಮಾರಕ ನಿರ್ಮಾಣದ ವಿಚಾರದಲ್ಲಾಗುತ್ತಿರುವ ಚರ್ಚೆ ವಿಳಂಬಗಳು ಅಭಿಮಾನಿಗಳಿಗಷ್ಟೇ ಅಲ್ಲ ಸಾಮಾನ್ಯವಾಗಿ ನೋಡುವವರಿಗೂ ಅಸಹನೆಯನ್ನು ಮೂಡಿಸುತ್ತದೆ.

ವಿಷ್ಣು ನಿಧನದ ಸಮಯದಲ್ಲಿ ನಮ್ಮ ಗೌರಿ ಮೇಡಂ ‘ವಿಷ್ಣು ಬಗ್ಗೆ ಜಗತ್ತು ಇನ್ನಷ್ಟು ಔದಾರ್ಯ ತೋರಬೇಕಿತ್ತು’ ಎಂದು ಬರೆದಿದ್ದರು. ಅಂತೆಯೇ ಸರ್ಕಾರ ವಿಷ್ಣು ಸ್ಮಾರಕಕ್ಕೂ ಔದಾರ್ಯ ತೋರಬೇಕಾಗಿದೆ ಎಂದೆನಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...