Homeಸಿನಿಮಾಸಿನಿ ಸುದ್ದಿವಿಷ್ಣು ಸ್ಮಾರಕಕ್ಕೆ ಮೀನಾಮೇಷ ಏಕೆ?

ವಿಷ್ಣು ಸ್ಮಾರಕಕ್ಕೆ ಮೀನಾಮೇಷ ಏಕೆ?

- Advertisement -
- Advertisement -

ಸೋಮಶೇಖರ್ ಚಲ್ಯ |

ಕರ್ನಾಟಕ ಕಂಡ ಸ್ಟಾರ್ ನಟ ಅಂಬರೀಶ್, ಸಾವನ್ನಪ್ಪಿ ವಾರವೇ ಕಳೆದು ಹೋಗಿದೆ. ಇನ್ನು ಅಭಿಮಾನಿಗಳ ಮನದಲ್ಲಿ ಅಂಬರೀಶ್ ನಿಧನ ಕಹಿ ಘಟನೆ ಹಸಿರಾಗಿರುವಾಗಲೇ, ಮತ್ತೊಂದು ವಿವಾದ ಸ್ಯಾಂಡಲ್‌ವುಡ್‌ನಲ್ಲಿ ಸೌಂಡ್ ಮಾಡ್ತಾ ಇದೆ. ಅದುವೇ ವಿಷ್ಣು ಸ್ಮಾರಕ ವಿವಾದ..

ಕುಚುಕು ಗೆಳೆಯರಂತಿದ್ದ ಅಂಬರೀಶ್ ಹಾಗೂ ವಿಷ್ಣುವರ್ಧನ್, ಇಬ್ಬರೂ ಈಗ ನೆನಪು ಮಾತ್ರ. ಅಂಬರೀಶ್ ಅವರಿಗೆ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯ ಸಂಸ್ಕಾರ ಮಾಡಲಾಯಿತು. ಅಲ್ಲದೆ ೧.೫ ಎಕರೆ ಪ್ರದೇಶದಲ್ಲಿ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಹಸಿರು ನಿಶಾನೆ ನೀಡಿದೆ. ಈ ಬೆನ್ನಲ್ಲೆ ವಿಷ್ಣು ಅಭಿಮಾನಿಗಳು ಹಾಗೂ ವಿಷ್ಣು ಕುಟುಂಬಸ್ಥರು ಸ್ಮಾರಕ ನಿರ್ಮಾಣದ ಧ್ವನಿ ಎತ್ತಿದ್ದಾರೆ.

ಸುಮಾರು ವರ್ಷದಿಂದ ನಟ ಡಾ. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ವಿಚಾರಕ್ಕೆ ಹೋರಾಟ ನಡೆಸಲಾಗುತ್ತಿದೆ. ಆದ್ರೆ ಇನ್ನು ವಿಷ್ಣು ಸ್ಮಾರಕ ವಿಚಾರ ಕಗ್ಗಂಟಾಗಿಯೇ ಉಳಿದಿದೆ. ಇನ್ನು ಡಾ.ರಾಜಕುಮಾರ್ ಹೆಸರಲ್ಲಿ ಫಿಲ್ಮ್ ಯುನಿವರ್ಟಿಸಿ, ಅಂಬಿ ಹೆಸರಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ವಿಷ್ಣು ಅಳಿಯ ಅನಿರುದ್ಧ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ವಿಷ್ಣು ನಿಧನರಾಗಿ 9 ವರ್ಷ ಕಳೆಯುತ್ತಾ ಬಂದಿದೆ. ಎಲ್ಲಾ ಸರ್ಕಾರಗಳಿಗೂ ಮನವಿ ಸಲ್ಲಿಸಿದ್ದೇವೆ. ಅದ್ರೆ, ವಿಷ್ಣು ಸ್ಮಾರಕ ವಿಚಾರವನ್ನು ಯಾರು ಗಂಭೀರವಾಗಿ ಪರಿಗಣಿಸುತ್ತಿಲ್ಲ ಅನ್ನೋದು ವಿಷ್ಣು ಅಳಿಯ ಅನಿರುದ್ಧ ಅವರ ಆರೋಪ.

ವಿಷ್ಣು ಅಭಿಮಾನಿಗಳನ್ನು ಅಗಲಿದ ಮೇಲೆ ಇದುವರೆಗೂ ಐದು ಜನ ಮುಖ್ಯಮಂತ್ರಿಗಳು ರಾಜ್ಯವನ್ನಾಳಿದ್ದಾರೆ. ಆದರೆ ಯಾರಿಂದಲೂ ವಿಷ್ಣುಗೆ ಸ್ಮಾರಕ ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ. ಇದು ವಿಷ್ಣು ಅಭಿಮಾನಿಗಳು ಮತ್ತು ಕುಟುಂಬಕ್ಕೆ ಭಾವನಾತ್ಮಕ ವಿಚಾರವಾಗುತ್ತಾ ಬೇರೂರುತ್ತಿದೆ. 2009ರಲ್ಲಿ ವಿಷ್ಣುರ ಅಂತ್ಯಸಂಸ್ಕಾರವನ್ನು ಅಭಿಮಾನ್ ಸ್ಟುಡಿಯೋದಲ್ಲಿ ನಡೆಸಲಾಗಿತ್ತು. ಹಿರಿಯ ನಟ ಬಾಲಕೃಷ್ಣ ಅವರಿಗೆ ಸರ್ಕಾರವೇ ಅಭಿಮಾನ್ ಸ್ಟುಡಿಯೋ ನಿರ್ಮಾಣ ಮಾಡಲು ಈ ಜಾಗ ನೀಡಿತ್ತು. ಆದರೆ ಬಾಲಕೃಷ್ಣ ನಿಧನದ ನಂತರ ಅವರ ಮಗ 10 ಎಕರೆ ಜಾಗವನ್ನು ಮಾರಾಟ ಮಾಡಲು ಮುಂದಾಗಿದ್ದರು. ಹಾಗಾಗಿ ಅದು ಕುಟುಂಬ ವ್ಯಾಜ್ಯವಾಗಿ ಮಾರ್ಪಟ್ಟಿತ್ತು. ವಿವಾದ ಇತ್ಯರ್ಥವಾಗುವ ಮುನ್ನವೇ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕ ಕಟ್ಟಲು ಮುಂದಾದ ಸರ್ಕಾರಕ್ಕೆ ಹೈಕೋರ್ಟ್ ತಡೆನೀಡಿದ್ದರಿಂದ ಸ್ಮಾರಕ ನಿರ್ಮಾಣ ಕಗ್ಗಂಟಾಗಿ ಉಳಿಯಿತು.

ತದನಂತರ 2012ರ ಮುಖ್ಯಮಂತ್ರಿ ಸದಾನಂದಗೌಡರು ಅಭಿಮಾನ್ ಸ್ಟುಡಿಯೊದಲ್ಲಿ ಸ್ಮಾರಕ ನಿರ್ಮಾಣ ಸಾಧ್ಯವಿಲ್ಲ ಬೇರೆಡೆ ಜಾಗ ಕೊಡುತ್ತೇವೆ ಎಂದಿದ್ದರು. ಆಗಲೇ ವಿಷ್ಣು ಕುಟುಂಬ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸುವ ಇಂಗಿತ ಹೊರಹಾಕಿದ್ದು. ಇದು ಅಭಿಮಾನಿ ಸಂಘದ ಲೀಡರುಗಳಿಗೆ ಇಷ್ಟವಾಗಲಿಲ್ಲ. ಈ ನಡುವೆ ಸಿಎಂ ಗಾದಿಯೇರಿದ ಸಿದ್ದರಾಮಯ್ಯನವರು ಮೈಸೂರಿನಲ್ಲೇ ಸ್ಮಾರಕ ನಿರ್ಮಾಣಕ್ಕೆ ಐದು ಎಕರೆ ಜಾಗ ಮಂಜೂರು ಮಾಡಿ 2016ರಲ್ಲಿ ಭೂಮಿ ಪೂಜೆಗೂ ಮುಂದಾಗಿದ್ದರು. ಆದರೆ ಕೃಷಿ ಭೂಮಿ ನೀಡಲು ನಿರಾಕರಿಸಿದ ರೈತರು ಪ್ರತಿಭಟನೆಯಿಂದಾಗಿ ಅದೂ ಈಡೇರಲಿಲ್ಲ.

ಈ ಕಾರಣಗಳಿಂದಾಗಿ ನೆನೆಗುದಿಗೆ ಬಿದ್ದಿದ್ದ ವಿಷ್ಣು ಸ್ಮಾರಕ ವಿವಾದಕ್ಕೆ ಕುಮಾರಸ್ವಾಮಿಯವರ ಅವಧಿಯಲ್ಲಿ ಹೊಸ ಟ್ವಿಸ್ಟ್ ಸಿಕ್ಕಿದೆ. ರಾಜ್, ಅಂಬಿ ಸ್ಮಾರಕಗಳ ಜೊತೆ ವಿಷ್ಣು ಸ್ಮಾರಕವನ್ನೂ ಕಂಠೀರವದಲ್ಲೇ ನಿರ್ಮಾಣ ಮಾಡ್ತೀವಿ ಅಂದಿದ್ದು ವಿಷ್ಣು ಕುಟುಂಬ ಮತ್ತು ಅಭಿಮಾನಿಗಳನ್ನು ಸಹಜವಾಗಿಯೇ ಅಸಮಾಧಾನ ಮೂಡಿಸಿದೆ. ಕುಟುಂಬದ ಜೊತೆ ಒಂದು ಸಣ್ಣ ಚರ್ಚೆಯನ್ನೂ ಮಾಡದೆ, ಅಭಿಪ್ರಾಯ ಸಂಗ್ರಹಿಸದೆ ಏಕಾಏಕಿ ನಿರ್ಧಾರ ಪ್ರಕಟಿಸಿರೋದು ಎಷ್ಟು ಸರಿ ಅನ್ನೋದು ಕುಟುಂಬ ಮತ್ತು ಅಭಿಮಾನಿಗಳ ವಾದ.

ವಿಷ್ಣು ನಿಧನರಾದಾಗ ನಮ್ಮ ಕ್ಯಾಪ್ಟನ್ ಗೌರಿ ಲಂಕೇಶ್‌ರವರು ತಮ್ಮ ಸಂಪಾದಕೀಯದಲ್ಲಿ ‘ವಿಷ್ಣು ಬಗ್ಗೆ ಜಗತ್ತು ಇನ್ನಷ್ಟು ಔದಾರ್ಯ ತೋರಬೇಕಿತ್ತು’ ಎಂಬ ಮಾತು ಬರೆದಿದ್ದರು. ಅದ್ಯಾಕೊ ಆ ಮಾತು ಅವರ ಸ್ಮಾರಕಕ್ಕೂ ಅನ್ವಯಿಸುತ್ತಿರುವಂತೆ ಕಾಣುತ್ತೆ.

ಇಲ್ಲಿ ಇಡೀ ಸಮಸ್ಯೆಯನ್ನು ಏಕಾಏಕಿ ಯಾರೋ ಒಬ್ಬರ ಮೇಲೆ ಎತ್ತಿ ಬಿಸಾಡಲಾಗುವುದಿಲ್ಲ. ಯಾವಾಗ ಒಂದು ಕಾರ್ಯಕ್ಕೆ ಒಮ್ಮತ ಮತ್ತು ತಾಳ್ಮೆ ಇಲ್ಲವಾಗುತ್ತೊ ಆಗ ಸಹಜವಾಗಿಯೇ ಗೊಂದಲಕ್ಕೆ ತುತ್ತಾಗುತ್ತಾ ಸಾಗುತ್ತೆ. ಸರ್ಕಾರ ಸ್ಮಾರಕ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುತ್ತಿರುವಂತೆ ಕಂಡುಬಂದರು ಅದು ವಿಷ್ಣು ಸ್ಮಾರಕಕ್ಕೆ ಮಾತ್ರ ಸೀಮಿತವಾದುದಲ್ಲ, ರಾಜ್ ಸ್ಮಾರಕಕ್ಕೂ ಸರ್ಕಾರಗಳು ಇಂಥದ್ದೇ ಮೀನಾಮೇಷ ಎಣಿಸುತ್ತಾ ಬಂದಿದ್ದವು. ರಾಜ್ ನಮ್ಮನ್ನಗಲಿದ್ದು 2006ರಲ್ಲಾದರು ಎಂಟು ವರ್ಷಗಳ ನಂತರವೇ ೨೦೧೪ರಲ್ಲಿ ಸ್ಮಾರಕಕ್ಕೆ ಮುಕ್ತಿ ಸಿಕ್ಕಿದ್ದು. ಯಾವ ವಿವಾದವೂ ಇರದಿದ್ದ ಸರ್ಕಾರದ ಜಾಗದಲ್ಲೇ ಸ್ಮಾರಕ ನಿರ್ಮಾಣ ವಿಳಂಬವಾಗುತ್ತಿರುವುದರ ಬಗ್ಗೆ ರಾಜ್ ಕುಟುಂಬ ಹಲವು ಸಂದರ್ಭಗಳಲ್ಲಿ ಬೇಸರ ಹೊರಹಾಕಿದ್ದಿದೆ. ನಮ್ಮ ಸರ್ಕಾರಗಳ ಕಾರ್ಯವೈಖರಿಯೇ ಹಾಗಿರುತ್ತೆ.

ಅಂತದ್ದರಲ್ಲಿ ಲಿಟಿಗೇಷನ್ ಇರೋ ಜಾಗ ಹಾಗೂ ಸ್ಮಾರಕ ನಿರ್ಮಾಣ ಕುರಿತು ಕುಟುಂಬ, ಅಭಿಮಾನಿ ಬ್ಯಾನರ್ ಸಂಘಗಳ ನಡುವೆಯೇ ಬಿರುಕು ಇರುವಾಗ ಸರ್ಕಾರ ಮುತುವರ್ಜಿ ವಹಿಸೀತೆ? ಈ ಸತ್ಯವನ್ನು ಮೊದಲು ವಿಷ್ಣು ಕುಟುಂಬಸ್ಥರು ಹಾಗೂ ಅಭಿಮಾನಿ ಬ್ಯಾನರ್ ಸಂಘದವರು ಅರ್ಥ ಮಾಡಿಕೊಳ್ಳಬೇಕಿದೆ.

ವಿಷ್ಣುವನ್ನು ಕಳೆದುಕೊಂಡದ್ದು ಅವರ ಕುಟುಂಬಕ್ಕೆ ಹಾಗೂ ಯಾವ ಸಂಘದ ಬ್ಯಾನರೂ ಇಲ್ಲದೆ ಅವರನ್ನು ಆರಾಧಿಸುತ್ತಿದ್ದ ನಿಜ ಅಭಿಮಾನಿಗಳಿಗೆ ಮತ್ತು ಅಭಿಮಾನಿ ಬ್ಯಾನರ್ ಸಂಘಗಳಿಗೆ ಬಹುದೊಡ್ಡ ಎಮೋಷನಲ್ ಸಂಗತಿಯೇ ಆದರು, ಸ್ಮಾರಕ ವಿವಾದವನ್ನೂ ಅದೇ ಎಮೋಷನಲ್ ಆವೇಗದಲ್ಲಿ ಸರಿಪಡಿಸಲು ಮುಂದಾದರೆ ವಿಷಯ ಮತ್ತಷ್ಟು ಕಗ್ಗಂಟಾಗುವುದರಲ್ಲಿ ಅನುಮಾನವೇ ಇಲ್ಲ. ಅನಿರುದ್ಧ್ ಆಕ್ರೋಶದ ಮಾತುಗಳಿಗೆ ಸಿಎಂ ಕುಮಾರಸ್ವಾಮಿ ಗರಮ್ಮಾಗಿ ಉತ್ತರ ಕೊಟ್ಟದ್ದು ಇದೇ ಕಗ್ಗಂಟಿನ ಸೂಚನೆ ನೀಡುತ್ತಿವೆ.

ಜನರ ಆಕ್ರೋಶ, ಆವೇಶಗಳಿಗೆ ಸ್ಪಂದಿಸುವ ಸಂವೇದನೆಯನ್ನು ನಮ್ಮ ಸರ್ಕಾರಗಳು ಕಳೆದುಕೊಂಡು ಅದ್ಯಾವ ಕಾಲವೇ ಆಗಿಹೋಗಿದೆ. ಬಹುದೊಡ್ಡ ಸಮೂಹಗಳಾದ ರೈತರು, ಕಾರ್ಮಿಕರು ಬೀದಿಗಿಳಿದ ಪ್ರತಿಭಟಿಸಿದರೂ ಕ್ಯಾರೇ ಅನ್ನದ ಮನಸ್ಥಿತಿಗೆ ಸರ್ಕಾರದ ನರತಂತುಗಳು ಬಂದು ತಲುಪಿರುವ ಸಾಮಾಜಿಕ ವಾಸ್ತವವನ್ನು ವಿಷ್ಣು ಕುಟುಂಬ ಮತ್ತು ಅಭಿಮಾನಿ ಬ್ಯಾನರ್ ಸಂಘಗಳು ಅರ್ಥ ಮಾಡಿಕೊಳ್ಳಬೇಕಿದೆ. ಸ್ಮಾರಕದ ಆಗ್ರಹಕ್ಕೆ ಒಂದು ಕಾರ್ಯಯೋಜನೆಯನ್ನು ಸಿದ್ಧ ಮಾಡಿಕೊಳ್ಳದಿದ್ದರೆ ಹತಾಶೆಯ ನಡುವೆಯೇ ಸ್ಮಾರಕದ ಆಸೆಯನ್ನು ಕೈಚೆಲ್ಲುವ ಕಾಲಬಂದರೂ ಅಚ್ಚರಿಯಿಲ್ಲ. ಈಗಾಗಲೇ ಭಾರತಿಯವರು ‘ಅಭಿಮಾನಿಗಳು ತಮ್ಮ ಹೃದಯದಲ್ಲೇ ವಿಷ್ಣುಗೆ ಕೋಟೆ ಕಟ್ಟಿ ಸ್ಮಾರಕ ನಿರ್ಮಿಸಿದ್ದಾರೆ. ಇನ್ನು ಇಟ್ಟಿಗೆಗಳ ಸ್ಮಾರಕವನ್ನು ಸರ್ಕಾರ ಕಟ್ಟದಿದ್ದರೆ ಏನಂತೆ ಬಿಡಿ’ ಎಂದು ಹತಾಶೆಯಿಂದ ಹೇಳಿದ ಮಾತುಗಳೇ ಅಭಿಮಾನಿಗಳ ಪಾಲಿಗೆ ನಿಜವಾಗಿಬಿಡಲಿವೆ.

ಸರ್ಕಾರದ ಮೇಲೆ ಒತ್ತಡ ಹಾಕುವ ಮುನ್ನ ತಮ್ಮ ನಡುವೆ (ಕುಟುಂಬ ಮತ್ತು ಅಭಿಮಾನಿ ಬ್ಯಾನರ್ ಸಂಘಗಳು) ಬಂದಿರುವ ಭಿನ್ನಾಭಿಪ್ರಾಯವನ್ನು ಬಗೆಹರಿಸಿಕೊಳ್ಳದೆ ಹೋದರೆ ಸರ್ಕಾರಗಳು ಎಷ್ಟೇ ಬದಲಾದರು ಅದೊಂದು ನೆಪದ ಮೇಲೆ ದಿನದೂಡಿಬಿಡುತ್ತವೆ.

ಹಾಗೆ ನೋಡಿದರೆ ಕನ್ನಡ ಇಂಡಸ್ಟ್ರಿಗೆ ಹೊಸ ಮೆರಗು ಕೊಟ್ಟ ಶಂಕರ್‌ನಾಗ್‌ರವರಿಗೆ ಸ್ಮಾರಕ ಕಟ್ಟಬೇಕೆಂಬ ಮಾತು ಯಾವ ಸರ್ಕಾರದಿಂದಲೂ ಬಂದಿಲ್ಲ. ಆದರೆ ವಿಷ್ಣು ಬಗ್ಗೆ ಸರ್ಕಾರದಿಂದಲೇ ಅಂತಹ ಪ್ರಯತ್ನಕ್ಕೆ ಚಾಲನೆ ಸಿಕ್ಕಿರೋದ್ರಿಂದ ಬಲು ನಾಜೂಕಾಗಿ, ಅಷ್ಟೇ ವ್ಯವಸ್ಥಿತವಾಗಿ ಸರ್ಕಾರದಿಂದ ಕೆಲಸ ಮಾಡಿಸಬೇಕಿದೆ. ಆದಷ್ಟೂ ಬೇಗ ಆ ಕೆಲಸವಾಗಲಿ ಅನ್ನೋದು ಪತ್ರಿಕೆಯ ಆಶಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...