Homeಸಿನಿಮಾಸಿನಿ ಸುದ್ದಿವಿಷ್ಣು ಸ್ಮಾರಕಕ್ಕೆ ಮೀನಾಮೇಷ ಏಕೆ?

ವಿಷ್ಣು ಸ್ಮಾರಕಕ್ಕೆ ಮೀನಾಮೇಷ ಏಕೆ?

- Advertisement -
- Advertisement -

ಸೋಮಶೇಖರ್ ಚಲ್ಯ |

ಕರ್ನಾಟಕ ಕಂಡ ಸ್ಟಾರ್ ನಟ ಅಂಬರೀಶ್, ಸಾವನ್ನಪ್ಪಿ ವಾರವೇ ಕಳೆದು ಹೋಗಿದೆ. ಇನ್ನು ಅಭಿಮಾನಿಗಳ ಮನದಲ್ಲಿ ಅಂಬರೀಶ್ ನಿಧನ ಕಹಿ ಘಟನೆ ಹಸಿರಾಗಿರುವಾಗಲೇ, ಮತ್ತೊಂದು ವಿವಾದ ಸ್ಯಾಂಡಲ್‌ವುಡ್‌ನಲ್ಲಿ ಸೌಂಡ್ ಮಾಡ್ತಾ ಇದೆ. ಅದುವೇ ವಿಷ್ಣು ಸ್ಮಾರಕ ವಿವಾದ..

ಕುಚುಕು ಗೆಳೆಯರಂತಿದ್ದ ಅಂಬರೀಶ್ ಹಾಗೂ ವಿಷ್ಣುವರ್ಧನ್, ಇಬ್ಬರೂ ಈಗ ನೆನಪು ಮಾತ್ರ. ಅಂಬರೀಶ್ ಅವರಿಗೆ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯ ಸಂಸ್ಕಾರ ಮಾಡಲಾಯಿತು. ಅಲ್ಲದೆ ೧.೫ ಎಕರೆ ಪ್ರದೇಶದಲ್ಲಿ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಹಸಿರು ನಿಶಾನೆ ನೀಡಿದೆ. ಈ ಬೆನ್ನಲ್ಲೆ ವಿಷ್ಣು ಅಭಿಮಾನಿಗಳು ಹಾಗೂ ವಿಷ್ಣು ಕುಟುಂಬಸ್ಥರು ಸ್ಮಾರಕ ನಿರ್ಮಾಣದ ಧ್ವನಿ ಎತ್ತಿದ್ದಾರೆ.

ಸುಮಾರು ವರ್ಷದಿಂದ ನಟ ಡಾ. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ವಿಚಾರಕ್ಕೆ ಹೋರಾಟ ನಡೆಸಲಾಗುತ್ತಿದೆ. ಆದ್ರೆ ಇನ್ನು ವಿಷ್ಣು ಸ್ಮಾರಕ ವಿಚಾರ ಕಗ್ಗಂಟಾಗಿಯೇ ಉಳಿದಿದೆ. ಇನ್ನು ಡಾ.ರಾಜಕುಮಾರ್ ಹೆಸರಲ್ಲಿ ಫಿಲ್ಮ್ ಯುನಿವರ್ಟಿಸಿ, ಅಂಬಿ ಹೆಸರಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ವಿಷ್ಣು ಅಳಿಯ ಅನಿರುದ್ಧ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ವಿಷ್ಣು ನಿಧನರಾಗಿ 9 ವರ್ಷ ಕಳೆಯುತ್ತಾ ಬಂದಿದೆ. ಎಲ್ಲಾ ಸರ್ಕಾರಗಳಿಗೂ ಮನವಿ ಸಲ್ಲಿಸಿದ್ದೇವೆ. ಅದ್ರೆ, ವಿಷ್ಣು ಸ್ಮಾರಕ ವಿಚಾರವನ್ನು ಯಾರು ಗಂಭೀರವಾಗಿ ಪರಿಗಣಿಸುತ್ತಿಲ್ಲ ಅನ್ನೋದು ವಿಷ್ಣು ಅಳಿಯ ಅನಿರುದ್ಧ ಅವರ ಆರೋಪ.

ವಿಷ್ಣು ಅಭಿಮಾನಿಗಳನ್ನು ಅಗಲಿದ ಮೇಲೆ ಇದುವರೆಗೂ ಐದು ಜನ ಮುಖ್ಯಮಂತ್ರಿಗಳು ರಾಜ್ಯವನ್ನಾಳಿದ್ದಾರೆ. ಆದರೆ ಯಾರಿಂದಲೂ ವಿಷ್ಣುಗೆ ಸ್ಮಾರಕ ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ. ಇದು ವಿಷ್ಣು ಅಭಿಮಾನಿಗಳು ಮತ್ತು ಕುಟುಂಬಕ್ಕೆ ಭಾವನಾತ್ಮಕ ವಿಚಾರವಾಗುತ್ತಾ ಬೇರೂರುತ್ತಿದೆ. 2009ರಲ್ಲಿ ವಿಷ್ಣುರ ಅಂತ್ಯಸಂಸ್ಕಾರವನ್ನು ಅಭಿಮಾನ್ ಸ್ಟುಡಿಯೋದಲ್ಲಿ ನಡೆಸಲಾಗಿತ್ತು. ಹಿರಿಯ ನಟ ಬಾಲಕೃಷ್ಣ ಅವರಿಗೆ ಸರ್ಕಾರವೇ ಅಭಿಮಾನ್ ಸ್ಟುಡಿಯೋ ನಿರ್ಮಾಣ ಮಾಡಲು ಈ ಜಾಗ ನೀಡಿತ್ತು. ಆದರೆ ಬಾಲಕೃಷ್ಣ ನಿಧನದ ನಂತರ ಅವರ ಮಗ 10 ಎಕರೆ ಜಾಗವನ್ನು ಮಾರಾಟ ಮಾಡಲು ಮುಂದಾಗಿದ್ದರು. ಹಾಗಾಗಿ ಅದು ಕುಟುಂಬ ವ್ಯಾಜ್ಯವಾಗಿ ಮಾರ್ಪಟ್ಟಿತ್ತು. ವಿವಾದ ಇತ್ಯರ್ಥವಾಗುವ ಮುನ್ನವೇ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕ ಕಟ್ಟಲು ಮುಂದಾದ ಸರ್ಕಾರಕ್ಕೆ ಹೈಕೋರ್ಟ್ ತಡೆನೀಡಿದ್ದರಿಂದ ಸ್ಮಾರಕ ನಿರ್ಮಾಣ ಕಗ್ಗಂಟಾಗಿ ಉಳಿಯಿತು.

ತದನಂತರ 2012ರ ಮುಖ್ಯಮಂತ್ರಿ ಸದಾನಂದಗೌಡರು ಅಭಿಮಾನ್ ಸ್ಟುಡಿಯೊದಲ್ಲಿ ಸ್ಮಾರಕ ನಿರ್ಮಾಣ ಸಾಧ್ಯವಿಲ್ಲ ಬೇರೆಡೆ ಜಾಗ ಕೊಡುತ್ತೇವೆ ಎಂದಿದ್ದರು. ಆಗಲೇ ವಿಷ್ಣು ಕುಟುಂಬ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸುವ ಇಂಗಿತ ಹೊರಹಾಕಿದ್ದು. ಇದು ಅಭಿಮಾನಿ ಸಂಘದ ಲೀಡರುಗಳಿಗೆ ಇಷ್ಟವಾಗಲಿಲ್ಲ. ಈ ನಡುವೆ ಸಿಎಂ ಗಾದಿಯೇರಿದ ಸಿದ್ದರಾಮಯ್ಯನವರು ಮೈಸೂರಿನಲ್ಲೇ ಸ್ಮಾರಕ ನಿರ್ಮಾಣಕ್ಕೆ ಐದು ಎಕರೆ ಜಾಗ ಮಂಜೂರು ಮಾಡಿ 2016ರಲ್ಲಿ ಭೂಮಿ ಪೂಜೆಗೂ ಮುಂದಾಗಿದ್ದರು. ಆದರೆ ಕೃಷಿ ಭೂಮಿ ನೀಡಲು ನಿರಾಕರಿಸಿದ ರೈತರು ಪ್ರತಿಭಟನೆಯಿಂದಾಗಿ ಅದೂ ಈಡೇರಲಿಲ್ಲ.

ಈ ಕಾರಣಗಳಿಂದಾಗಿ ನೆನೆಗುದಿಗೆ ಬಿದ್ದಿದ್ದ ವಿಷ್ಣು ಸ್ಮಾರಕ ವಿವಾದಕ್ಕೆ ಕುಮಾರಸ್ವಾಮಿಯವರ ಅವಧಿಯಲ್ಲಿ ಹೊಸ ಟ್ವಿಸ್ಟ್ ಸಿಕ್ಕಿದೆ. ರಾಜ್, ಅಂಬಿ ಸ್ಮಾರಕಗಳ ಜೊತೆ ವಿಷ್ಣು ಸ್ಮಾರಕವನ್ನೂ ಕಂಠೀರವದಲ್ಲೇ ನಿರ್ಮಾಣ ಮಾಡ್ತೀವಿ ಅಂದಿದ್ದು ವಿಷ್ಣು ಕುಟುಂಬ ಮತ್ತು ಅಭಿಮಾನಿಗಳನ್ನು ಸಹಜವಾಗಿಯೇ ಅಸಮಾಧಾನ ಮೂಡಿಸಿದೆ. ಕುಟುಂಬದ ಜೊತೆ ಒಂದು ಸಣ್ಣ ಚರ್ಚೆಯನ್ನೂ ಮಾಡದೆ, ಅಭಿಪ್ರಾಯ ಸಂಗ್ರಹಿಸದೆ ಏಕಾಏಕಿ ನಿರ್ಧಾರ ಪ್ರಕಟಿಸಿರೋದು ಎಷ್ಟು ಸರಿ ಅನ್ನೋದು ಕುಟುಂಬ ಮತ್ತು ಅಭಿಮಾನಿಗಳ ವಾದ.

ವಿಷ್ಣು ನಿಧನರಾದಾಗ ನಮ್ಮ ಕ್ಯಾಪ್ಟನ್ ಗೌರಿ ಲಂಕೇಶ್‌ರವರು ತಮ್ಮ ಸಂಪಾದಕೀಯದಲ್ಲಿ ‘ವಿಷ್ಣು ಬಗ್ಗೆ ಜಗತ್ತು ಇನ್ನಷ್ಟು ಔದಾರ್ಯ ತೋರಬೇಕಿತ್ತು’ ಎಂಬ ಮಾತು ಬರೆದಿದ್ದರು. ಅದ್ಯಾಕೊ ಆ ಮಾತು ಅವರ ಸ್ಮಾರಕಕ್ಕೂ ಅನ್ವಯಿಸುತ್ತಿರುವಂತೆ ಕಾಣುತ್ತೆ.

ಇಲ್ಲಿ ಇಡೀ ಸಮಸ್ಯೆಯನ್ನು ಏಕಾಏಕಿ ಯಾರೋ ಒಬ್ಬರ ಮೇಲೆ ಎತ್ತಿ ಬಿಸಾಡಲಾಗುವುದಿಲ್ಲ. ಯಾವಾಗ ಒಂದು ಕಾರ್ಯಕ್ಕೆ ಒಮ್ಮತ ಮತ್ತು ತಾಳ್ಮೆ ಇಲ್ಲವಾಗುತ್ತೊ ಆಗ ಸಹಜವಾಗಿಯೇ ಗೊಂದಲಕ್ಕೆ ತುತ್ತಾಗುತ್ತಾ ಸಾಗುತ್ತೆ. ಸರ್ಕಾರ ಸ್ಮಾರಕ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುತ್ತಿರುವಂತೆ ಕಂಡುಬಂದರು ಅದು ವಿಷ್ಣು ಸ್ಮಾರಕಕ್ಕೆ ಮಾತ್ರ ಸೀಮಿತವಾದುದಲ್ಲ, ರಾಜ್ ಸ್ಮಾರಕಕ್ಕೂ ಸರ್ಕಾರಗಳು ಇಂಥದ್ದೇ ಮೀನಾಮೇಷ ಎಣಿಸುತ್ತಾ ಬಂದಿದ್ದವು. ರಾಜ್ ನಮ್ಮನ್ನಗಲಿದ್ದು 2006ರಲ್ಲಾದರು ಎಂಟು ವರ್ಷಗಳ ನಂತರವೇ ೨೦೧೪ರಲ್ಲಿ ಸ್ಮಾರಕಕ್ಕೆ ಮುಕ್ತಿ ಸಿಕ್ಕಿದ್ದು. ಯಾವ ವಿವಾದವೂ ಇರದಿದ್ದ ಸರ್ಕಾರದ ಜಾಗದಲ್ಲೇ ಸ್ಮಾರಕ ನಿರ್ಮಾಣ ವಿಳಂಬವಾಗುತ್ತಿರುವುದರ ಬಗ್ಗೆ ರಾಜ್ ಕುಟುಂಬ ಹಲವು ಸಂದರ್ಭಗಳಲ್ಲಿ ಬೇಸರ ಹೊರಹಾಕಿದ್ದಿದೆ. ನಮ್ಮ ಸರ್ಕಾರಗಳ ಕಾರ್ಯವೈಖರಿಯೇ ಹಾಗಿರುತ್ತೆ.

ಅಂತದ್ದರಲ್ಲಿ ಲಿಟಿಗೇಷನ್ ಇರೋ ಜಾಗ ಹಾಗೂ ಸ್ಮಾರಕ ನಿರ್ಮಾಣ ಕುರಿತು ಕುಟುಂಬ, ಅಭಿಮಾನಿ ಬ್ಯಾನರ್ ಸಂಘಗಳ ನಡುವೆಯೇ ಬಿರುಕು ಇರುವಾಗ ಸರ್ಕಾರ ಮುತುವರ್ಜಿ ವಹಿಸೀತೆ? ಈ ಸತ್ಯವನ್ನು ಮೊದಲು ವಿಷ್ಣು ಕುಟುಂಬಸ್ಥರು ಹಾಗೂ ಅಭಿಮಾನಿ ಬ್ಯಾನರ್ ಸಂಘದವರು ಅರ್ಥ ಮಾಡಿಕೊಳ್ಳಬೇಕಿದೆ.

ವಿಷ್ಣುವನ್ನು ಕಳೆದುಕೊಂಡದ್ದು ಅವರ ಕುಟುಂಬಕ್ಕೆ ಹಾಗೂ ಯಾವ ಸಂಘದ ಬ್ಯಾನರೂ ಇಲ್ಲದೆ ಅವರನ್ನು ಆರಾಧಿಸುತ್ತಿದ್ದ ನಿಜ ಅಭಿಮಾನಿಗಳಿಗೆ ಮತ್ತು ಅಭಿಮಾನಿ ಬ್ಯಾನರ್ ಸಂಘಗಳಿಗೆ ಬಹುದೊಡ್ಡ ಎಮೋಷನಲ್ ಸಂಗತಿಯೇ ಆದರು, ಸ್ಮಾರಕ ವಿವಾದವನ್ನೂ ಅದೇ ಎಮೋಷನಲ್ ಆವೇಗದಲ್ಲಿ ಸರಿಪಡಿಸಲು ಮುಂದಾದರೆ ವಿಷಯ ಮತ್ತಷ್ಟು ಕಗ್ಗಂಟಾಗುವುದರಲ್ಲಿ ಅನುಮಾನವೇ ಇಲ್ಲ. ಅನಿರುದ್ಧ್ ಆಕ್ರೋಶದ ಮಾತುಗಳಿಗೆ ಸಿಎಂ ಕುಮಾರಸ್ವಾಮಿ ಗರಮ್ಮಾಗಿ ಉತ್ತರ ಕೊಟ್ಟದ್ದು ಇದೇ ಕಗ್ಗಂಟಿನ ಸೂಚನೆ ನೀಡುತ್ತಿವೆ.

ಜನರ ಆಕ್ರೋಶ, ಆವೇಶಗಳಿಗೆ ಸ್ಪಂದಿಸುವ ಸಂವೇದನೆಯನ್ನು ನಮ್ಮ ಸರ್ಕಾರಗಳು ಕಳೆದುಕೊಂಡು ಅದ್ಯಾವ ಕಾಲವೇ ಆಗಿಹೋಗಿದೆ. ಬಹುದೊಡ್ಡ ಸಮೂಹಗಳಾದ ರೈತರು, ಕಾರ್ಮಿಕರು ಬೀದಿಗಿಳಿದ ಪ್ರತಿಭಟಿಸಿದರೂ ಕ್ಯಾರೇ ಅನ್ನದ ಮನಸ್ಥಿತಿಗೆ ಸರ್ಕಾರದ ನರತಂತುಗಳು ಬಂದು ತಲುಪಿರುವ ಸಾಮಾಜಿಕ ವಾಸ್ತವವನ್ನು ವಿಷ್ಣು ಕುಟುಂಬ ಮತ್ತು ಅಭಿಮಾನಿ ಬ್ಯಾನರ್ ಸಂಘಗಳು ಅರ್ಥ ಮಾಡಿಕೊಳ್ಳಬೇಕಿದೆ. ಸ್ಮಾರಕದ ಆಗ್ರಹಕ್ಕೆ ಒಂದು ಕಾರ್ಯಯೋಜನೆಯನ್ನು ಸಿದ್ಧ ಮಾಡಿಕೊಳ್ಳದಿದ್ದರೆ ಹತಾಶೆಯ ನಡುವೆಯೇ ಸ್ಮಾರಕದ ಆಸೆಯನ್ನು ಕೈಚೆಲ್ಲುವ ಕಾಲಬಂದರೂ ಅಚ್ಚರಿಯಿಲ್ಲ. ಈಗಾಗಲೇ ಭಾರತಿಯವರು ‘ಅಭಿಮಾನಿಗಳು ತಮ್ಮ ಹೃದಯದಲ್ಲೇ ವಿಷ್ಣುಗೆ ಕೋಟೆ ಕಟ್ಟಿ ಸ್ಮಾರಕ ನಿರ್ಮಿಸಿದ್ದಾರೆ. ಇನ್ನು ಇಟ್ಟಿಗೆಗಳ ಸ್ಮಾರಕವನ್ನು ಸರ್ಕಾರ ಕಟ್ಟದಿದ್ದರೆ ಏನಂತೆ ಬಿಡಿ’ ಎಂದು ಹತಾಶೆಯಿಂದ ಹೇಳಿದ ಮಾತುಗಳೇ ಅಭಿಮಾನಿಗಳ ಪಾಲಿಗೆ ನಿಜವಾಗಿಬಿಡಲಿವೆ.

ಸರ್ಕಾರದ ಮೇಲೆ ಒತ್ತಡ ಹಾಕುವ ಮುನ್ನ ತಮ್ಮ ನಡುವೆ (ಕುಟುಂಬ ಮತ್ತು ಅಭಿಮಾನಿ ಬ್ಯಾನರ್ ಸಂಘಗಳು) ಬಂದಿರುವ ಭಿನ್ನಾಭಿಪ್ರಾಯವನ್ನು ಬಗೆಹರಿಸಿಕೊಳ್ಳದೆ ಹೋದರೆ ಸರ್ಕಾರಗಳು ಎಷ್ಟೇ ಬದಲಾದರು ಅದೊಂದು ನೆಪದ ಮೇಲೆ ದಿನದೂಡಿಬಿಡುತ್ತವೆ.

ಹಾಗೆ ನೋಡಿದರೆ ಕನ್ನಡ ಇಂಡಸ್ಟ್ರಿಗೆ ಹೊಸ ಮೆರಗು ಕೊಟ್ಟ ಶಂಕರ್‌ನಾಗ್‌ರವರಿಗೆ ಸ್ಮಾರಕ ಕಟ್ಟಬೇಕೆಂಬ ಮಾತು ಯಾವ ಸರ್ಕಾರದಿಂದಲೂ ಬಂದಿಲ್ಲ. ಆದರೆ ವಿಷ್ಣು ಬಗ್ಗೆ ಸರ್ಕಾರದಿಂದಲೇ ಅಂತಹ ಪ್ರಯತ್ನಕ್ಕೆ ಚಾಲನೆ ಸಿಕ್ಕಿರೋದ್ರಿಂದ ಬಲು ನಾಜೂಕಾಗಿ, ಅಷ್ಟೇ ವ್ಯವಸ್ಥಿತವಾಗಿ ಸರ್ಕಾರದಿಂದ ಕೆಲಸ ಮಾಡಿಸಬೇಕಿದೆ. ಆದಷ್ಟೂ ಬೇಗ ಆ ಕೆಲಸವಾಗಲಿ ಅನ್ನೋದು ಪತ್ರಿಕೆಯ ಆಶಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...