Homeಅಂಕಣಗಳುಆಘಾತವಾಣಿ | ವೃದ್ಧಕೋಣದ ಮೂಗಿಗೆ ಹಗ್ಗ ಹಾಕುವ ಆಟ

ಆಘಾತವಾಣಿ | ವೃದ್ಧಕೋಣದ ಮೂಗಿಗೆ ಹಗ್ಗ ಹಾಕುವ ಆಟ

- Advertisement -
- Advertisement -

ಅಟ್ಯಾಕ್ ಹನ್ಮಂತ |

ಕೇಳುಗರಿಗೆಲ್ಲ ನಮಸ್ಕಾರ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ. ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ.

ಮಿಷಿನ್ 150, ಮಿಷಿನ್ 150 ಎಂದು ಹೋದಲ್ಲಿ ಬಂದಲ್ಲಿ ಊಳಿಡುತ್ತಿದ್ದ ಬಿಜೇಪೀಪಿ ಪಕ್ಷದ ಧಡಿಯೂರಪ್ಪನ ಮುಸುಡಿಗೆ ಕರ್ನಾಟಕದ ಮತದಾರರು ಎಗರಿಸಿ ಎಡಗಾಲಲ್ಲಿ ಒದ್ದಿರುವ ಸುದ್ದಿ ಇದೀಗಷ್ಟೇ ಲಭ್ಯವಾಗಿದೆ. 150 ಮಿಷೀನು ಅಡ್ಡಡ್ಡ ಮಲಗಿಕೊಂಡು 104 ಸೀಟುಗಳನ್ನ ಮಾತ್ರ ಗೆಲ್ಲಲು ಶಕ್ತವಾದ ಧಡಿಯೂರಪ್ಪನ ಗೋಳಾಟ ಚಾಮರಾಜಪೇಟೆ ಸ್ಮಶಾಣದವರೆಗೂ ತಲುಪಿದೆ. ಅಲ್ಲೇ ಸ್ಮಶಾಣದ ಪಕ್ಕದಲ್ಲಿ `ಹೇ ಶವ ಕೃಪ’ ಎಂಬ ಲಡಾಸು ಮುದುಕರ ಅನಾಥಾಶ್ರಮದಲ್ಲಿ ಚೌಕಾಬಾರ ಆಡುತ್ತಿದ್ದ ಕಂತ್ರಿ-ಕುತಂತ್ರಿಗಳಿಗೂ ಹಾರ್ಟ್ ಅಟ್ಯಾಕ್ ಆಗಿ, ಜೈ ಶ್ರೀಮಾಮ್ ಎಂಬ ಉದ್ಘೋಷದೊಂದಿಗೆ ತಲೆತಿರುಗಿ ಬಿದ್ದಿದ್ದಾರೆಂದು ಬ್ರೇಕಿಂಗ್ ನ್ಯೂಸ್ ಲಭ್ಯವಾಗಿದೆ.

* * * * *

ಬಡವರ ಪರವಾದ ಹತ್ತಾರು ಯೋಜನೆಗಳನ್ನು ಕೊಟ್ಟು, ಸಮಾಜವಾದದ ಆಲದಮರದಂತೆ ಗಟ್ಟಿಯಾಗಿ ನಿಂತಿದ್ದ ಶಿದ್ರಾಮಯ್ಯನ ಪಾರ್ಟಿಗೂ ಈ ಚುನಾವಣೆಯಲ್ಲಿ ಜನರ ಆಶೀರ್ವಾದ ಅರ್ಧಕ್ಕರ್ಧ ಸಿಕ್ಕಿರುವುದು ಆಶ್ಚರ್ಯ ಹುಟ್ಟಿಸಿದೆ. ಎತ್ತಲೂ ಇಲ್ಲದಂತೆ ಇರೋ ಮೂರು ಪಾರ್ಟಿಗಳಿಗೂ ಇಷ್ಟಿಷ್ಟು ಎಂದು ಓಟು ಹಂಚಿರುವ ಮತದಾರರ ಪ್ಲಾನು ಅಸಲಿಗೆ ಏನಾಗಿತ್ತೆಂಬುದು ಯಾರಿಗೂ ತಿಳಿಯದೆ ಎಲ್ಲರೂ ಅವರವರ ಸ್ವಂತ ತಲೆಯ ಮೇಲೆ ಅವರದ್ದೇ ಕೈ ಹೊತ್ತುಕೊಂಡು ಕುಂತಿರುವ ಸನ್ನಿವೇಶ ನಿರ್ಮಾಣವಾಗಿದೆ. ಆಗಿದ್ದಾಗಲೆಂದು ಕೈ ಪಾರ್ಟಿ ಮತ್ತು ದೊಡ್ಡಗೌಡರ ಪಾರ್ಟಿಯು ಫ್ರೆಂಡ್ಶಿಪ್ ಮಾಡಿಕೊಂಡು ಬಿಜೆಪೀಪಿ ಪಕ್ಷಕ್ಕೆ ಈ ಸಲ ಉಣ್ಣಬಾರದ್ದನ್ನು ಉಣ್ಣಿಸೋಣವೆಂದು ತೊಡೆ ತಟ್ಟಿ ನಿಂತ ಸಂದರ್ಭವೂ ಜನರಲ್ಲಿ ಆತಂಕಭರಿತ ಸಂತೋಷವನ್ನು ಹುಟ್ಟಿಸಿದೆ.

* * * * *

ನಾನು ಗೆದ್ದರೆ ಮೋದಿ ಗೆದ್ದಂತೆ, ನಾನು ಗೆದ್ದರೆ ಹಿಂದೂ ಗೆದ್ದಂತೆ, ನಾನು ಗೆದ್ದರೆ ಗುಡೇಮಾರನಳ್ಳಿ ಬಾರ್ ಸಪ್ಲೈಯರ್ ಯಂಕಟಣ್ಣ ಗೆದ್ದಂತೆ ಅಂತ ಕೂಗಾಡಿಕೊಂಡು ತಿರುಗುತ್ತಿದ್ದ ಚಿತ್ರನಟ ಗುಗ್ಗೇಶ್ ಚುನಾವಣೆಯಲ್ಲಿ ಮಕಾಡೆ ಮಲಗಿಕೊಂಡಿದ್ದಾರೆ. ಮೊದಲಿಗೆ ಕೈ ಪಕ್ಷದಲ್ಲಿದ್ದು ನಂತರ ವ್ಯಾಸೆಕ್ಟಮಿ ಸಂತಾನಹರಣ ಚಿಕಿತ್ಸೆ ಮಾಡಿಸಿಕೊಂಡು ಬಿಜೆಪೀಪಿಗೆ ಪಲ್ಟಿ ಹೊಡೆದಿದ್ದ ನಟ ಗುಗ್ಗೇಶ್ ಪೃಷ್ಠಕ್ಕೆ ಬೆಂಗಳೂರಿನ ಯಶವಂತಪುರದ ಮತದಾರರು ಹಾರೆಕೋಲು ಹೆಟ್ಟಿದ್ದಲ್ಲದೇ ಗಾಯಕ್ಕೆ ಬ್ಯಾಂಡೇಜನ್ನೂ ಹಾಕಿಸದೆ ಮನೆಗೆ ಕಳಿಸಿದ್ದಾರೆ. ಎಲ್ಲ ರಾಯರ ಆಶೀರ್ವಾದ ಅಂತ ತಮ್ಮ ಹೀನಾಯ ಸೋಲನ್ನು ಮಂತ್ರಾಲಯಕ್ಕೆ ಅರ್ಪಿಸಿರುವ ಗುಗ್ಗೇಶ್ ಸದ್ಯಕ್ಕೆ ಯಾರಿಗೂ ಮುಖ ತೋರಿಸುವುದು ಬೇಡವೆಂದು ಆಫಘನಿಸ್ಥಾನಕ್ಕೆ ಬೊಬ್ಬೆಯೆದ್ದ ಕಾಲುಗಳಲ್ಲಿ ಪಾದಯಾತ್ರೆ ಹೊರಟಿದ್ದಾರೆಂದು ಬಲ್ಲ ಮೂಲಗಳು ತಿಳಿಸಿವೆ.

* * * * *

ಗೋವಾ, ನಾಗಾಲ್ಯಾಂಡ್, ಮೇಘಾಲಯ, ಬಿಹಾರ ಇವೆಲ್ಲ ಕಡೆಗಳಲ್ಲಿ ಜುಜುಬಿ ಸೀಟು ಗೆದ್ದ ಬಿಜೆಪೀಪಿ ಪಕ್ಷವು ಒಬ್ಬನಿಗೇ ಹುಟ್ಟಿದ ಹಲ್ಕಾ ಆಟವಾಡಿ ಆ ರಾಜ್ಯಗಳಲ್ಲಿ ಸರ್ಕಾರ ರಚಿಸಿರುವುದನ್ನು ಮರೆತಂತೆ ಕಾಣುತ್ತಿದೆಯೆಂದು ಹಾದಿಬೀದಿಯಲ್ಲಿ ಜನರು ಆಡಿಕೊಳ್ಳುತ್ತಿದ್ದಾರೆಂಬ ಸುದ್ದಿ ಬಂದಿದೆ. ಅದೆಲ್ಲವನ್ನೂ ಮರೆತು, ಇದೀಗ ಕೈ ಮತ್ತು ತೆನೆಮಹಿಳೆ ಪಕ್ಷಗಳು ಒಟ್ಟಿಗೇ ಹೋಗುವುದನ್ನು ಸಹಿಸದ ಬಿಜೆಪೀಪಿ ಪಕ್ಷವು ಇದು ಹೊಲಸು ರಾಜಕೀಯ ಎಂದು ಅರಚಾಡುತ್ತಿದೆ. ಇದೇ ಹೊಲಸು ಸೆಗಣಿಯನ್ನು 4 ರಾಜ್ಯಗಳಲ್ಲಿ ಬಾಚಿಬಾಚಿ ತಿನ್ನುವಾಗ ಏನೂ ಅನ್ನಿಸದಿದ್ದ ಈ ಪಕ್ಷಕ್ಕೆ ಇದೀಗ ನಾಚಿಕೆ-ಮಾನ-ಮರ್ಯಾದೆಗಳು ಸಟಾರೆಂದು ನೆನಪಾಗಿರುವುದು ಜಗತ್ತಿನ 9ನೇ ಅದ್ಭುತ ಎಂದು ಭಾವೀ ಪ್ರಧಾನಿ `ಹುಚ್ಚ ಸಂಕಟ್’ ಅಳುತ್ತ ನುಡಿದಿದ್ದಾರೆ. ಈಗಿರುವ ಪಕೋಡೇಂದ್ರನನ್ನು ಕಿಡ್ನಾಪ್ ಮಾಡಿ ಅರಬ್ಬೀಸಮುದ್ರದಲ್ಲಿ ಬಚ್ಚಿಟ್ಟು ತಾನೇ ಪ್ರಧಾನಿಯಾಗುತ್ತೇನೆಂದು ಹೊರಟಿರುವ ಹುಚ್ಚ ಸಂಕಟ್ ಅವರ ಗೋಳಾಟಕ್ಕೆ ನಾಡಿನ ಎಲ್ಲ ಮಾನಸಿಕ ಅಸ್ವಸ್ಥರೂ ತಮ್ಮ ಸಹಮತ ವ್ಯಕ್ತಪಡಿಸಿದ್ದಾರೆ.

* * * * *

ತಾನು ಈ ಬಾರಿ ಮುಖ್ಯಮಂತ್ರಿಯಾಗದೆ ಇದ್ದರೆ ನಿನ್ನ ಬುರುಡೆಗೆ ನನ್ನ ಬುರುಡೆಯನ್ನು ಜಜ್ಜಿ ಜಜ್ಜಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಬೆದರಿಸಿದ ಧಡಿಯೂರಪ್ಪನನ್ನು ಸಂಭಾಳಿಸುವುದು ಹೇಗೆಂದು ತಿಳಿಯದೆ ಬಿಜೆಪೀಪಿ ಪಕ್ಷದ ಏಕೈಕ ಕುಮಾರಿ ಕೋಭಾ ಶರಂದ್ಲಾಜೆಯವರು ಚಿಂತೆಗೊಳಗಾಗಿದ್ದಾರೆ ಎಂದು ತಿಳಿದು ಬಂದಿದೆ. ಇದೇ ದುಃಖದಲ್ಲಿ ತನ್ನ ಸಂಕಟವನ್ನು ಚೀಟಿ ರವಿ ಜೊತೆಗೆ ವಾಟ್ಸಾಪ್ ಚಾಟ್ ಮಾಡುವಾಗ ಚೀಟಿ ರವಿಯು `ಚಿಂತೆ ಮಾಡಬೇಡ, ನಾನಿದ್ದೇನೆ… … …’ ಎಂದು ಕೋಭಕ್ಕನಿಗೆ ಪ್ರಾಮಿಸ್ ಮಾಡಿರುವುದು ಬಯಲಾಗಿದೆ. ಈ ವಾಟ್ಸಾಪ್ ಚಾಟ್‍ನ ಸ್ಕ್ರೀನ್ ಶಾಟನ್ನು ಯಾರೋ ದುರುಳರು ಧಡಿಯೂರಪ್ಪನಿಗೆ ಕಳಿಸಲು ಸಕಲ ತಯಾರಿ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.

* * * * *

ಬಿಜೆಪೀಪಿಯ ವಯೋವೃದ್ಧ ಕೋಣದಂತಿರುವ ಗುಜರಾತಿ ಗುಜ್ಜೂವಾಲಾನನ್ನು ವ್ಯಾಜ್ಯಪಾಲನೆಂದು ಕರ್ನಾಟಕಕ್ಕೆ ಕುಕ್ಕರಿಸಿದ್ದ ಭಂಡಾಟ ಜನರ ಪಕ್ಷದವರು ಇದೀಗ ಅದೇ ವೃದ್ಧಕೋಣದ ಮೂಗಿಗೆ ಹಗ್ಗ ಹಾಕಿ ಕರ್ನಾಟಕದ ಗದ್ದುಗೆ ಹಿಡಿಯಲು ಮುಂದಾಗಿದ್ದಾರೆ. ಈ ಅವಕಾಶ ಕೈಜಾರಿ ಹೋಗಲು ಬಿಟ್ಟರೆ, ವೃದ್ದಾಪ್ಯದಲ್ಲಿ ಪುನರ್ವಸತಿ ಕಲ್ಪಿಸಿದ ತನ್ನವರ ಋಣ ತೀರಿಸಲು ಇದಕ್ಕಿಂತ ಸದಾವಕಾಶ ಈ ಜನ್ಮದಲ್ಲೇ ಮತ್ತೆ ಸಿಗುವುದಿಲ್ಲ ಎಂದು ಮನದಲ್ಲೇ ಲೆಕ್ಕ ಹಾಕಿದ ಈ ಗುಜ್ಜು ಋಣ ತೀರಿಸಲು ಮುಂದಾಗಿದ್ದಾರೆಂದು ವರದಿಯಾಗಿದೆ. ಇವರ ಒಳಮರ್ಮ ಏನೆಂದು ಹಿನ್ನೆಲೆ ಕೆದಕಿ ನೋಡಲಾಗಿ ಈ ಆಸಾಮಿಯ ಜಾತಕವೂ, ಜೈಲುಹಕ್ಕಿಗಳ ಬ್ಲೂಜೇಪಿಗಳ ಜಾತಕವೂ ಒಂದೇ ಆಗಿದೆಯೆಂಬ ಮಾಹಿತಿ ಲಭ್ಯವಾಗಿದೆ.

* * * * *

ತಾನು ನಡೆಸಿದ ಕೊಲೆಗಳ ವಿರುದ್ಧ ತೀರ್ಪು ಕೊಡಲು ಹೊರಟ ನ್ಯಾಯಾಧೀಶರನ್ನೇ ಕೊಂದು ಬಿಸಾಕಿದ ಆರೋಪ ಹೊತ್ತಿರುವ ಗುಜರಾತ್ ಮಾರ್ವಾಡಿ, ಹಳೇ ರೌಡಿ ಶೀಟರ್ `ಸುಮಿತ್ ಶಾ’ ಕುದುರೆಲದ್ದಿ ವ್ಯಾಪಾರ ಮಾಡಲು ಕರ್ನಾಟಕಕ್ಕೆ ಬರುತ್ತಿರುವ ಸುದ್ದಿ ತಿಳಿದುಬಂದಿದೆ. ಈ ಸುದ್ದಿ ತಿಳಿದ ಕುಮಾರಣ್ಣನಿಗೆ ಪಿತ್ಥ ಕೆದರಿ ತಲೆಯೊಳಗಿನ ಹುಳುಗಳೆಲ್ಲ ಥಕಥಕಥಕನೆಂದು ಕುಣಿದು, ನನ್ನ ಪಕ್ಷದ ಒಬ್ಬನನ್ನು ಕದ್ದೊಯ್ದರೆ ಬಿಜೆಪೀಪಿಯ ಒಬ್ಬ ನರಪಿಳ್ಳೆಯನ್ನೂ ಬಿಡದೆ ಕಸತುಂಬಿಕೊಂಡು ಬಂದಂತೆ ಲಾರಿಯಲ್ಲಿ ಅಪಹರಿಸಿಬಿಡುತ್ತೇನೆಂದು ಗುಟುರು ಹಾಕಿದ್ದಾರೆ. ಈ ಗುಟುರಿಗೆ ಉಟ್ಟ ಲಂಗೋಟಿ ಒದ್ದೆ ಮಾಡಿಕೊಂಡ ಸುಮಿತ್‍ಶಾಗೆ ವಾಂತಿ-ಬೇಧಿ ಎರಡೂ ಒಟ್ಟಿಗೇ ಆದ ಸುದ್ದಿ ಇನ್ನೂ ಲಭ್ಯವಾಗಿಲ್ಲ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಇನ್ನೊಂದಷ್ಟು ಎದೆಯೊಡುವ ಸುದ್ದಿಗಳೊಂದಿಗೆ ಮತ್ತೆ ಮುಂದಿನ ವಾರ ಭೇಟಿಯಾಗೋಣ. ಜೈ ಶ್ರೀಮಾಮ್..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....