Homeಅಂಕಣಗಳುಆಘಾತವಾಣಿ | ವೃದ್ಧಕೋಣದ ಮೂಗಿಗೆ ಹಗ್ಗ ಹಾಕುವ ಆಟ

ಆಘಾತವಾಣಿ | ವೃದ್ಧಕೋಣದ ಮೂಗಿಗೆ ಹಗ್ಗ ಹಾಕುವ ಆಟ

- Advertisement -
- Advertisement -

ಅಟ್ಯಾಕ್ ಹನ್ಮಂತ |

ಕೇಳುಗರಿಗೆಲ್ಲ ನಮಸ್ಕಾರ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ. ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ.

ಮಿಷಿನ್ 150, ಮಿಷಿನ್ 150 ಎಂದು ಹೋದಲ್ಲಿ ಬಂದಲ್ಲಿ ಊಳಿಡುತ್ತಿದ್ದ ಬಿಜೇಪೀಪಿ ಪಕ್ಷದ ಧಡಿಯೂರಪ್ಪನ ಮುಸುಡಿಗೆ ಕರ್ನಾಟಕದ ಮತದಾರರು ಎಗರಿಸಿ ಎಡಗಾಲಲ್ಲಿ ಒದ್ದಿರುವ ಸುದ್ದಿ ಇದೀಗಷ್ಟೇ ಲಭ್ಯವಾಗಿದೆ. 150 ಮಿಷೀನು ಅಡ್ಡಡ್ಡ ಮಲಗಿಕೊಂಡು 104 ಸೀಟುಗಳನ್ನ ಮಾತ್ರ ಗೆಲ್ಲಲು ಶಕ್ತವಾದ ಧಡಿಯೂರಪ್ಪನ ಗೋಳಾಟ ಚಾಮರಾಜಪೇಟೆ ಸ್ಮಶಾಣದವರೆಗೂ ತಲುಪಿದೆ. ಅಲ್ಲೇ ಸ್ಮಶಾಣದ ಪಕ್ಕದಲ್ಲಿ `ಹೇ ಶವ ಕೃಪ’ ಎಂಬ ಲಡಾಸು ಮುದುಕರ ಅನಾಥಾಶ್ರಮದಲ್ಲಿ ಚೌಕಾಬಾರ ಆಡುತ್ತಿದ್ದ ಕಂತ್ರಿ-ಕುತಂತ್ರಿಗಳಿಗೂ ಹಾರ್ಟ್ ಅಟ್ಯಾಕ್ ಆಗಿ, ಜೈ ಶ್ರೀಮಾಮ್ ಎಂಬ ಉದ್ಘೋಷದೊಂದಿಗೆ ತಲೆತಿರುಗಿ ಬಿದ್ದಿದ್ದಾರೆಂದು ಬ್ರೇಕಿಂಗ್ ನ್ಯೂಸ್ ಲಭ್ಯವಾಗಿದೆ.

* * * * *

ಬಡವರ ಪರವಾದ ಹತ್ತಾರು ಯೋಜನೆಗಳನ್ನು ಕೊಟ್ಟು, ಸಮಾಜವಾದದ ಆಲದಮರದಂತೆ ಗಟ್ಟಿಯಾಗಿ ನಿಂತಿದ್ದ ಶಿದ್ರಾಮಯ್ಯನ ಪಾರ್ಟಿಗೂ ಈ ಚುನಾವಣೆಯಲ್ಲಿ ಜನರ ಆಶೀರ್ವಾದ ಅರ್ಧಕ್ಕರ್ಧ ಸಿಕ್ಕಿರುವುದು ಆಶ್ಚರ್ಯ ಹುಟ್ಟಿಸಿದೆ. ಎತ್ತಲೂ ಇಲ್ಲದಂತೆ ಇರೋ ಮೂರು ಪಾರ್ಟಿಗಳಿಗೂ ಇಷ್ಟಿಷ್ಟು ಎಂದು ಓಟು ಹಂಚಿರುವ ಮತದಾರರ ಪ್ಲಾನು ಅಸಲಿಗೆ ಏನಾಗಿತ್ತೆಂಬುದು ಯಾರಿಗೂ ತಿಳಿಯದೆ ಎಲ್ಲರೂ ಅವರವರ ಸ್ವಂತ ತಲೆಯ ಮೇಲೆ ಅವರದ್ದೇ ಕೈ ಹೊತ್ತುಕೊಂಡು ಕುಂತಿರುವ ಸನ್ನಿವೇಶ ನಿರ್ಮಾಣವಾಗಿದೆ. ಆಗಿದ್ದಾಗಲೆಂದು ಕೈ ಪಾರ್ಟಿ ಮತ್ತು ದೊಡ್ಡಗೌಡರ ಪಾರ್ಟಿಯು ಫ್ರೆಂಡ್ಶಿಪ್ ಮಾಡಿಕೊಂಡು ಬಿಜೆಪೀಪಿ ಪಕ್ಷಕ್ಕೆ ಈ ಸಲ ಉಣ್ಣಬಾರದ್ದನ್ನು ಉಣ್ಣಿಸೋಣವೆಂದು ತೊಡೆ ತಟ್ಟಿ ನಿಂತ ಸಂದರ್ಭವೂ ಜನರಲ್ಲಿ ಆತಂಕಭರಿತ ಸಂತೋಷವನ್ನು ಹುಟ್ಟಿಸಿದೆ.

* * * * *

ನಾನು ಗೆದ್ದರೆ ಮೋದಿ ಗೆದ್ದಂತೆ, ನಾನು ಗೆದ್ದರೆ ಹಿಂದೂ ಗೆದ್ದಂತೆ, ನಾನು ಗೆದ್ದರೆ ಗುಡೇಮಾರನಳ್ಳಿ ಬಾರ್ ಸಪ್ಲೈಯರ್ ಯಂಕಟಣ್ಣ ಗೆದ್ದಂತೆ ಅಂತ ಕೂಗಾಡಿಕೊಂಡು ತಿರುಗುತ್ತಿದ್ದ ಚಿತ್ರನಟ ಗುಗ್ಗೇಶ್ ಚುನಾವಣೆಯಲ್ಲಿ ಮಕಾಡೆ ಮಲಗಿಕೊಂಡಿದ್ದಾರೆ. ಮೊದಲಿಗೆ ಕೈ ಪಕ್ಷದಲ್ಲಿದ್ದು ನಂತರ ವ್ಯಾಸೆಕ್ಟಮಿ ಸಂತಾನಹರಣ ಚಿಕಿತ್ಸೆ ಮಾಡಿಸಿಕೊಂಡು ಬಿಜೆಪೀಪಿಗೆ ಪಲ್ಟಿ ಹೊಡೆದಿದ್ದ ನಟ ಗುಗ್ಗೇಶ್ ಪೃಷ್ಠಕ್ಕೆ ಬೆಂಗಳೂರಿನ ಯಶವಂತಪುರದ ಮತದಾರರು ಹಾರೆಕೋಲು ಹೆಟ್ಟಿದ್ದಲ್ಲದೇ ಗಾಯಕ್ಕೆ ಬ್ಯಾಂಡೇಜನ್ನೂ ಹಾಕಿಸದೆ ಮನೆಗೆ ಕಳಿಸಿದ್ದಾರೆ. ಎಲ್ಲ ರಾಯರ ಆಶೀರ್ವಾದ ಅಂತ ತಮ್ಮ ಹೀನಾಯ ಸೋಲನ್ನು ಮಂತ್ರಾಲಯಕ್ಕೆ ಅರ್ಪಿಸಿರುವ ಗುಗ್ಗೇಶ್ ಸದ್ಯಕ್ಕೆ ಯಾರಿಗೂ ಮುಖ ತೋರಿಸುವುದು ಬೇಡವೆಂದು ಆಫಘನಿಸ್ಥಾನಕ್ಕೆ ಬೊಬ್ಬೆಯೆದ್ದ ಕಾಲುಗಳಲ್ಲಿ ಪಾದಯಾತ್ರೆ ಹೊರಟಿದ್ದಾರೆಂದು ಬಲ್ಲ ಮೂಲಗಳು ತಿಳಿಸಿವೆ.

* * * * *

ಗೋವಾ, ನಾಗಾಲ್ಯಾಂಡ್, ಮೇಘಾಲಯ, ಬಿಹಾರ ಇವೆಲ್ಲ ಕಡೆಗಳಲ್ಲಿ ಜುಜುಬಿ ಸೀಟು ಗೆದ್ದ ಬಿಜೆಪೀಪಿ ಪಕ್ಷವು ಒಬ್ಬನಿಗೇ ಹುಟ್ಟಿದ ಹಲ್ಕಾ ಆಟವಾಡಿ ಆ ರಾಜ್ಯಗಳಲ್ಲಿ ಸರ್ಕಾರ ರಚಿಸಿರುವುದನ್ನು ಮರೆತಂತೆ ಕಾಣುತ್ತಿದೆಯೆಂದು ಹಾದಿಬೀದಿಯಲ್ಲಿ ಜನರು ಆಡಿಕೊಳ್ಳುತ್ತಿದ್ದಾರೆಂಬ ಸುದ್ದಿ ಬಂದಿದೆ. ಅದೆಲ್ಲವನ್ನೂ ಮರೆತು, ಇದೀಗ ಕೈ ಮತ್ತು ತೆನೆಮಹಿಳೆ ಪಕ್ಷಗಳು ಒಟ್ಟಿಗೇ ಹೋಗುವುದನ್ನು ಸಹಿಸದ ಬಿಜೆಪೀಪಿ ಪಕ್ಷವು ಇದು ಹೊಲಸು ರಾಜಕೀಯ ಎಂದು ಅರಚಾಡುತ್ತಿದೆ. ಇದೇ ಹೊಲಸು ಸೆಗಣಿಯನ್ನು 4 ರಾಜ್ಯಗಳಲ್ಲಿ ಬಾಚಿಬಾಚಿ ತಿನ್ನುವಾಗ ಏನೂ ಅನ್ನಿಸದಿದ್ದ ಈ ಪಕ್ಷಕ್ಕೆ ಇದೀಗ ನಾಚಿಕೆ-ಮಾನ-ಮರ್ಯಾದೆಗಳು ಸಟಾರೆಂದು ನೆನಪಾಗಿರುವುದು ಜಗತ್ತಿನ 9ನೇ ಅದ್ಭುತ ಎಂದು ಭಾವೀ ಪ್ರಧಾನಿ `ಹುಚ್ಚ ಸಂಕಟ್’ ಅಳುತ್ತ ನುಡಿದಿದ್ದಾರೆ. ಈಗಿರುವ ಪಕೋಡೇಂದ್ರನನ್ನು ಕಿಡ್ನಾಪ್ ಮಾಡಿ ಅರಬ್ಬೀಸಮುದ್ರದಲ್ಲಿ ಬಚ್ಚಿಟ್ಟು ತಾನೇ ಪ್ರಧಾನಿಯಾಗುತ್ತೇನೆಂದು ಹೊರಟಿರುವ ಹುಚ್ಚ ಸಂಕಟ್ ಅವರ ಗೋಳಾಟಕ್ಕೆ ನಾಡಿನ ಎಲ್ಲ ಮಾನಸಿಕ ಅಸ್ವಸ್ಥರೂ ತಮ್ಮ ಸಹಮತ ವ್ಯಕ್ತಪಡಿಸಿದ್ದಾರೆ.

* * * * *

ತಾನು ಈ ಬಾರಿ ಮುಖ್ಯಮಂತ್ರಿಯಾಗದೆ ಇದ್ದರೆ ನಿನ್ನ ಬುರುಡೆಗೆ ನನ್ನ ಬುರುಡೆಯನ್ನು ಜಜ್ಜಿ ಜಜ್ಜಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಬೆದರಿಸಿದ ಧಡಿಯೂರಪ್ಪನನ್ನು ಸಂಭಾಳಿಸುವುದು ಹೇಗೆಂದು ತಿಳಿಯದೆ ಬಿಜೆಪೀಪಿ ಪಕ್ಷದ ಏಕೈಕ ಕುಮಾರಿ ಕೋಭಾ ಶರಂದ್ಲಾಜೆಯವರು ಚಿಂತೆಗೊಳಗಾಗಿದ್ದಾರೆ ಎಂದು ತಿಳಿದು ಬಂದಿದೆ. ಇದೇ ದುಃಖದಲ್ಲಿ ತನ್ನ ಸಂಕಟವನ್ನು ಚೀಟಿ ರವಿ ಜೊತೆಗೆ ವಾಟ್ಸಾಪ್ ಚಾಟ್ ಮಾಡುವಾಗ ಚೀಟಿ ರವಿಯು `ಚಿಂತೆ ಮಾಡಬೇಡ, ನಾನಿದ್ದೇನೆ… … …’ ಎಂದು ಕೋಭಕ್ಕನಿಗೆ ಪ್ರಾಮಿಸ್ ಮಾಡಿರುವುದು ಬಯಲಾಗಿದೆ. ಈ ವಾಟ್ಸಾಪ್ ಚಾಟ್‍ನ ಸ್ಕ್ರೀನ್ ಶಾಟನ್ನು ಯಾರೋ ದುರುಳರು ಧಡಿಯೂರಪ್ಪನಿಗೆ ಕಳಿಸಲು ಸಕಲ ತಯಾರಿ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.

* * * * *

ಬಿಜೆಪೀಪಿಯ ವಯೋವೃದ್ಧ ಕೋಣದಂತಿರುವ ಗುಜರಾತಿ ಗುಜ್ಜೂವಾಲಾನನ್ನು ವ್ಯಾಜ್ಯಪಾಲನೆಂದು ಕರ್ನಾಟಕಕ್ಕೆ ಕುಕ್ಕರಿಸಿದ್ದ ಭಂಡಾಟ ಜನರ ಪಕ್ಷದವರು ಇದೀಗ ಅದೇ ವೃದ್ಧಕೋಣದ ಮೂಗಿಗೆ ಹಗ್ಗ ಹಾಕಿ ಕರ್ನಾಟಕದ ಗದ್ದುಗೆ ಹಿಡಿಯಲು ಮುಂದಾಗಿದ್ದಾರೆ. ಈ ಅವಕಾಶ ಕೈಜಾರಿ ಹೋಗಲು ಬಿಟ್ಟರೆ, ವೃದ್ದಾಪ್ಯದಲ್ಲಿ ಪುನರ್ವಸತಿ ಕಲ್ಪಿಸಿದ ತನ್ನವರ ಋಣ ತೀರಿಸಲು ಇದಕ್ಕಿಂತ ಸದಾವಕಾಶ ಈ ಜನ್ಮದಲ್ಲೇ ಮತ್ತೆ ಸಿಗುವುದಿಲ್ಲ ಎಂದು ಮನದಲ್ಲೇ ಲೆಕ್ಕ ಹಾಕಿದ ಈ ಗುಜ್ಜು ಋಣ ತೀರಿಸಲು ಮುಂದಾಗಿದ್ದಾರೆಂದು ವರದಿಯಾಗಿದೆ. ಇವರ ಒಳಮರ್ಮ ಏನೆಂದು ಹಿನ್ನೆಲೆ ಕೆದಕಿ ನೋಡಲಾಗಿ ಈ ಆಸಾಮಿಯ ಜಾತಕವೂ, ಜೈಲುಹಕ್ಕಿಗಳ ಬ್ಲೂಜೇಪಿಗಳ ಜಾತಕವೂ ಒಂದೇ ಆಗಿದೆಯೆಂಬ ಮಾಹಿತಿ ಲಭ್ಯವಾಗಿದೆ.

* * * * *

ತಾನು ನಡೆಸಿದ ಕೊಲೆಗಳ ವಿರುದ್ಧ ತೀರ್ಪು ಕೊಡಲು ಹೊರಟ ನ್ಯಾಯಾಧೀಶರನ್ನೇ ಕೊಂದು ಬಿಸಾಕಿದ ಆರೋಪ ಹೊತ್ತಿರುವ ಗುಜರಾತ್ ಮಾರ್ವಾಡಿ, ಹಳೇ ರೌಡಿ ಶೀಟರ್ `ಸುಮಿತ್ ಶಾ’ ಕುದುರೆಲದ್ದಿ ವ್ಯಾಪಾರ ಮಾಡಲು ಕರ್ನಾಟಕಕ್ಕೆ ಬರುತ್ತಿರುವ ಸುದ್ದಿ ತಿಳಿದುಬಂದಿದೆ. ಈ ಸುದ್ದಿ ತಿಳಿದ ಕುಮಾರಣ್ಣನಿಗೆ ಪಿತ್ಥ ಕೆದರಿ ತಲೆಯೊಳಗಿನ ಹುಳುಗಳೆಲ್ಲ ಥಕಥಕಥಕನೆಂದು ಕುಣಿದು, ನನ್ನ ಪಕ್ಷದ ಒಬ್ಬನನ್ನು ಕದ್ದೊಯ್ದರೆ ಬಿಜೆಪೀಪಿಯ ಒಬ್ಬ ನರಪಿಳ್ಳೆಯನ್ನೂ ಬಿಡದೆ ಕಸತುಂಬಿಕೊಂಡು ಬಂದಂತೆ ಲಾರಿಯಲ್ಲಿ ಅಪಹರಿಸಿಬಿಡುತ್ತೇನೆಂದು ಗುಟುರು ಹಾಕಿದ್ದಾರೆ. ಈ ಗುಟುರಿಗೆ ಉಟ್ಟ ಲಂಗೋಟಿ ಒದ್ದೆ ಮಾಡಿಕೊಂಡ ಸುಮಿತ್‍ಶಾಗೆ ವಾಂತಿ-ಬೇಧಿ ಎರಡೂ ಒಟ್ಟಿಗೇ ಆದ ಸುದ್ದಿ ಇನ್ನೂ ಲಭ್ಯವಾಗಿಲ್ಲ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಇನ್ನೊಂದಷ್ಟು ಎದೆಯೊಡುವ ಸುದ್ದಿಗಳೊಂದಿಗೆ ಮತ್ತೆ ಮುಂದಿನ ವಾರ ಭೇಟಿಯಾಗೋಣ. ಜೈ ಶ್ರೀಮಾಮ್..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...