Homeಮುಖಪುಟವ್ಯಂಗ್ಯದಿಂದ ಸಮಸ್ಯೆಗೆ ಸಿಲುಕಿಕೊಂಡ ನಿಜ ಗಾಂಧಿ ಪ್ರೇಮಿ ಐಎಎಸ್ ಅಧಿಕಾರಿ ನಿಧಿ ಚೌಧುರಿ

ವ್ಯಂಗ್ಯದಿಂದ ಸಮಸ್ಯೆಗೆ ಸಿಲುಕಿಕೊಂಡ ನಿಜ ಗಾಂಧಿ ಪ್ರೇಮಿ ಐಎಎಸ್ ಅಧಿಕಾರಿ ನಿಧಿ ಚೌಧುರಿ

ನಿಜ ಗಾಂಧಿ ಪ್ರೇಮಿ ನಿಧಿ ಚೌಧರಿಯವರು ಮಾಡಿದ್ದ ಟ್ವೀಟ್‍ನಿಂದ ಅವರು ಸಮಸ್ಯೆಗೆ ಗುರಿಯಾಗುತ್ತಿದ್ದಾರೆ. ಅದೇ ಸಂದರ್ಭದಲ್ಲಿ ಗಾಂಧೀಜಿಯವರ ಕುರಿತು ದ್ವೇಷ ಭಾವ ಮೂಡಿಸುತ್ತಾ, ಗೋಡ್ಸೆಗೆ ಮಂದಿರ ಕಟ್ಟಿ ಬಹಿರಂಗವಾಗಿ ಜೈಕಾರ ಹಾಕುತ್ತಿರುವವರು ದೇಶಭಕ್ತರೆಂದು ಕರೆಸಿಕೊಳ್ಳುತ್ತಿರುವುದು ದುರಂತ

- Advertisement -
- Advertisement -

| ನಾನುಗೌರಿ |

ಪ್ರಪಂಚಾದ್ಯಂತ ಗಾಂಧಿ ಪ್ರತಿಮೆಗಳನ್ನು ನಿರ್ನಾಮ ಮಾಡಲು ಇದು ಸಕಾಲ, ಹಾಗೆಯೇ ಭಾರತದ ಕರೆನ್ಸಿ ನೋಟುಗಳಿಂದಲೂ ಸಹ ಗಾಂಧಿ ಭಾವಚಿತ್ರ ತೆಗೆದುಬಿಡಿ’ ಎಂದು ವ್ಯಂಗ್ಯದಿಂದ ಅಣಕ ಮಾಡಿ ಮೇ 17ರಂದು ಟ್ವೀಟ್ ಮಾಡಿದ್ದ ಮಹಾರಾಷ್ಟ್ರದ ಐಎಎಸ್ ಅಧಿಕಾರಿ ನಿಧಿ ಚೌಧರಿಯವರ ಹುದ್ದೆಗೆ ಸಂಚಕಾರ ಬಂದಿದೆ. ಈ ಕುರಿತು ತ್ವರಿತ ಕ್ರಮಕ್ಕೆ ಮಹಾರಾಷ್ಟ್ರ ಸರ್ಕಾರ ಸೂಚಿಸಲಾಗಿದೆ ಎನ್ನಲಾಗಿದೆ.

ಈ ಕುರಿತು ಸ್ಪಷ್ಟೀಕರಣ ನೀಡಿರುವ ನಿಧಿ ಚೌಧರಿಯವರು ಸರಣಿ ಟ್ವೀಟ್‍ಗಳನ್ನು ಮಾಡಿ ತನ್ನ ಗಾಂಧಿ ಪ್ರೇಮವನ್ನು ತೋರಿಸಬೇಕಾಗಿ ಬಂದಿದೆ. ಗಾಂಧಿಯವರ ಹೇಳಿಕೆಗಳನ್ನು ಉಲ್ಲೇಖಿಸಿ ಮಾಡಿರುವ ಹಳೆಯ ಟ್ವೀಟ್‍ಗಳನ್ನು ಮತ್ತೆ ಷೇರ್ ಮಾಡಿರುವ ಅವರು ‘ನಾನೆಂದೂ ಗಾಂಧೀಜಿಯವರನ್ನು ಅವಮಾನಿಸುವುದಿಲ್ಲ, ಅವರ ನನ್ನ ಸತ್ಯಾನ್ವೇಷಣೆ ಪುಸ್ತಕ ನನ್ನ ಎಲ್ಲಾ ಕಾಲದ ನೆಚ್ಚಿನ ಪುಸ್ತಕ’ ಎಂತಲೂ ಟ್ವೀಟ್ ಮಾಡಿದ್ದಾರೆ.

ಆದರೆ ಮೇ 17ರಂದು ನಿಧಿ ಚೌದರಿಯವರು ಟ್ವೀಟ್ ಮಾಡಿದ್ದನ್ನು ಸುದ್ದಿ ಮಾಡುವ ಭರದಲ್ಲಿ ಕೆಲ ಮಾಧ್ಯಮಗಳು ಅದರೊಳಗಿನ ವ್ಯಂಗ್ಯ, ಅಣಕವನ್ನು ಗುರುತಿಸಿರಲಿಲ್ಲ. ಇನ್ನು ಕೆಲವು ಮಾಧ್ಯಮಗಳಿಗೆ ಗೊತ್ತಿದ್ದರೂ ಸಹ ಆಕೆಯನ್ನು ದೇಶದ್ರೋಹಿ ರೀತಿಯಲ್ಲಿ ಚಿತ್ರಿಸಲಾಯಿತು. ಈಗ ಸರ್ಕಾರ ಅವರ ಮೇಲೆ ಕ್ರಮ ತೆಗೆದುಕೊಳ್ಳಲು ಸೂಚಿಸುವಷ್ಟರ ಮಟ್ಟಿಗೆ ಪ್ರಕರಣ ಬಂದು ನಿಂತಿದೆ.

ಇದೇ ಸಂದರ್ಭದಲ್ಲಿ ಚುನಾವಣಾ ಸಮಯದಲ್ಲಿ ಪ್ರಗ್ಯಾ ಸಿಂಗ್ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯನ್ನು ಹೊಗಳಿದ್ದರು. ಅದನ್ನೇ ದಕ್ಷಿಣ ಕನ್ನಡದ ಸಂಸದ ನಳೀನ್ ಕುಮಾರ್ ಕಟೀಲ್ ಮತ್ತು ಉತ್ತರ ಕನ್ನಡದ ಅನಂತ್ ಕುಮಾರ್ ಹೆಗ್ಡೆ ಪುನಾರಾವರ್ತಿಸಿದ್ದರು. ಆ ಮೂವರು ಈಗ ಲಕ್ಷ ಲಕ್ಷ ಮತಗಳ ಅಂತರದಿಂದ ಗೆದ್ದು ಸಂಸತ್ ಪ್ರವೇಶಿಸಿರುವುದನ್ನು ನಾವು ನೆನಪಿಸಿಕೊಳ್ಳಬೇಕಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಪತ್ರಕರ್ತ ಗಿರೀಶ್ ತಾಳಿಕಟ್ಟೆ ಅವರು ಹೀಗೆಂದರು. ‘ಇಂದಿನ ಕಾಲ ಎತ್ತ ಸಾಗುತ್ತಿದೆ ಎಂಬುದಕ್ಕೆ ಈ ಘಟನೆ ನಿದರ್ಶನ. ನಿಜ ಗಾಂಧಿ ಪ್ರೇಮಿ ನಿಧಿ ಚೌಧರಿಯವರು ಮಾಡಿದ್ದ ಟ್ವೀಟ್‍ನಿಂದ ಅವರು ಸಮಸ್ಯೆಗೆ ಗುರಿಯಾಗುತ್ತಿದ್ದಾರೆ. ಅದೇ ಸಂದರ್ಭದಲ್ಲಿ ಗಾಂಧೀಜಿಯವರ ಕುರಿತು ದ್ವೇಷ ಭಾವ ಮೂಡಿಸುತ್ತಾ, ಗೋಡ್ಸೆಗೆ ಮಂದಿರ ಕಟ್ಟಿ ಬಹಿರಂಗವಾಗಿ ಜೈಕಾರ ಹಾಕುತ್ತಿರುವವರು ದೇಶಭಕ್ತರೆಂದು ಕರೆಸಿಕೊಳ್ಳುತ್ತಿರುವುದು ದುರಂತ’.

ಈ ಕುರಿತು ಮೊದಲು ಡೆಕ್ಕನ್ ಹೆರಾಲ್ಡ್ ಪತ್ರಿಕೆ ವರದಿ ಮಾಡಿತ್ತು. ನಂತರ ಅವರ ಸ್ಪಷ್ಟೀಕರಣವನ್ನು ಸೇರಿಸಿ ವರದಿ ಪ್ರಕಟಿಸಿದೆ. ಈ ಕುರಿತು ಕನ್ನಡದ ಪ್ರಮುಖ ಬರಹಗಾರರಾದ ಕೆ.ಪಿ ನಟರಾಜ್‍ರವರು ಮೊದಲು ಆ ಐಎಎಸ್ ಅಧಿಕಾರಿಯ ವಿರುದ್ಧ ಷೇರ್ ಮಾಡಿದ್ದ ಲೇಖನವನ್ನು ಅಳಿಸಿ ಪೂರ್ತಿ ಗಮನಿಸದೇ ಷೇರ್ ಮಾಡಿದ್ದಕ್ಕೆ ಕ್ಷಮೆ ಕೇಳುವ ಮೂಲಕ ಮಾದರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...