Homeಸಾಮಾಜಿಕಶತಾಯುಷಿಯಿಂದ ಮಠಾಧೀಶರಿಗೆ ಒಂದು ಪತ್ರ

ಶತಾಯುಷಿಯಿಂದ ಮಠಾಧೀಶರಿಗೆ ಒಂದು ಪತ್ರ

- Advertisement -
- Advertisement -

ಗೌರವಾನ್ವಿತ ಸ್ವಾಮೀಜಿಗಳೆ,

ಬಸವ ತತ್ವ ಅಸ್ತಿತ್ವಕ್ಕೆ ಬಂದ ಮೇಲೆ ಬಸವ ಅನುಯಾಯಿಗಳು ಜಾತಿ, ಮತ, ಪಂಥಗಳನ್ನು ತೊರೆದು ನಿಜ ಮಾನವರಾಗಿ ಬಾಳಬೇಕೆಂದು ತೀರ್ಮಾನಿಸಿದರೆಂಬುದು ತಿಳಿದ ಸಂಗತಿ. ಆದರೆ ಬಸವ ತತ್ವದ ಅಸ್ತಿತ್ವಕ್ಕೆ ಮುಂಚೆಯೇ ನಮ್ಮದು ಲಿಂಗಾಯತ ಮತ ಇತ್ತೆಂಬ ವಾದವನ್ನು ಪಂಚಾಚಾರ್ಯರು ಮುಂದಿಟ್ಟಿದ್ದಾರೆ. ಈಗ ಬಸವ ತತ್ವದವರಿಗೂ ತಮ್ಮ ರಂಭಾಪುರಿ ಮಠದವರಿಗೂ ನಡುವೆ ಹೋರಾಟ ಶುರುವಾಗಿದೆ. ಈ ಭಿನ್ನಾಭಿಪ್ರಾಯದ ವಿಚಾರವನ್ನು ಉಭಯತ್ರರೂ ಕೂತು, ಗೌರವಯುತವಾಗಿ ಚರ್ಚಿಸಿ ಒಂದು ತೀರ್ಮಾನಕ್ಕೆ ಬರಬಹುದಿತ್ತು. ಬದಲಿಗೆ ನಿಮ್ಮ ಜಗಳ ಈಗ ಬೀದಿಗೆ ಬಂದಿದೆ.

ತಾವುಗಳು ಶಿವನ ಭಕ್ತರಿಗೂ ಹಾಗೂ ಬಸವನ ಅನುಯಾಯಿಗಳಿಗೂ ನಡುವೆ ಸಾಮರಸ್ಯ ಮೂಡಿಸುವ ಬದಲಿಗೆ ವೈಮನಸ್ಯ ಹೆಚ್ಚಾಗಲು ಕಾರಣರಾಗಿದ್ದೀರಿ ಎಂಬುದನ್ನು ಅತ್ಯಂತ ನೋವಿನಿಂದ ಹೇಳಲೇಬೇಕಿದೆ. ಮಠಾಧಿಪತಿಗಳು ಸಮಾಜದಲ್ಲಿ ಶಾಂತಿ, ನೆಮ್ಮದಿ, ಸೌಹಾರ್ದತೆ ಬಿತ್ತಬೇಕು. ಅದು ಬಿಟ್ಟು ನಿಮ್ಮ ಪರಸ್ಪರರ ಭಿನ್ನಾಭಿಪ್ರಾಯಗಳನ್ನು ಮುಂದಿಟ್ಟುಕೊಂಡು ನೀವೇ ಬೀದಿ ಹೋರಾಟಕ್ಕಿಳಿದರೆ ತಾವು ಭಕ್ತರಿಗೆ ಏನು ಸಂದೇಶ ಕೊಟ್ಟಂತಾಗುತ್ತದೆ?

ತಮ್ಮ ಅನುಯಾಯಿಗಳ ನಡುವೆಯೇ ತಾವು ಸಾಮರಸ್ಯ ಸಾಧಿಸಲಾಗದಿದ್ದ ಮೇಲೆ ಮತ್ತೇನನ್ನು ಸಾಧಿಸುತ್ತೀರಿ? ಹೋಗಲಿ, ಇಂಥ ಮಠಗಳಿದ್ದು ಸಮಾಜಕ್ಕೆ ಪ್ರಯೋಜನವಾದರೂ ಏನು?

ಭಿನ್ನಮತಗಳ ಕಾರಣಕ್ಕೆ ಮಠಾಧೀಶರಾದ ತಾವುಗಳೇ ಬೀದಿಗಿಳಿದಿರುವ ಸನ್ನಿವೇಶದಲ್ಲಿ ಜನಸಾಮಾನ್ಯರು ಮಾರ್ಗದರ್ಶನಕ್ಕಾಗಿ ಯಾರ ಬಳಿಗೆ ಹೋಗಬೇಕು?

ಇದು ನಿಮಗೆ ಸಲ್ಲದು. ಇದು ಮಠಾಧೀಶರಿಗೆ ತಕ್ಕುನಾದ ನಡೆಯಲ್ಲ. ನಿಮ್ಮ ಮಾತುಗಳು ಹಾಗೂ ನಡವಳಿಕೆ ಜನರಿಗೆ ಅಸಹ್ಯ ಉಂಟುಮಾಡುತ್ತಿವೆ. ಹೆಂಡ, ಹಣ ಹಂಚಿ ಓಟು ಗಳಿಸುವ ರಾಜಕಾರಣಿಗಳ ಮಟ್ಟಕ್ಕೆ ಕೆಲವು ಮಠಾಧೀಶರು ಇಳಿದಿರುವುದು ಜನರಲ್ಲಿ ಜಿಗುಪ್ಸೆ ಮೂಡಿಸಿದೆ.

ನಿಮಗೆ ರಾಜ್ಯಾಂಗದ ಪರಿಕಲ್ಪನೆಯೇ ಇಲ್ಲವೇ? ಸ್ವಾತಂತ್ರ್ಯ, ಸಮಾನತೆ, ಸಹೋದರತ್ವ ಸಾರುವ ರಾಜ್ಯಾಂಗದ ಮಹತ್ವದ ಬಗ್ಗೆ ಅರಿವಿದೆಯೆ? ಎಂಬ ಪ್ರಶ್ನೆಗಳು ಸಹಜವಾಗಿ ಮೂಡುತ್ತವೆ. ಮಠಾಧೀಶರೆನಿಸಿಕೊಂಡ ತಾವು ಸಮಾಜದಲ್ಲಿ ಉನ್ನತ ಮೌಲ್ಯಗಳನ್ನು, ಆದರ್ಶಗಳನ್ನು ಬೋಧಿಸಬೇಕೆಂಬುದು ಶ್ರೀಸಾಮಾನ್ಯರ ಅಪೇಕ್ಷೆ.

ಈ ಹಿಂದೆ ಸಿರಿಗೆರೆ ಮಠದವರು ಜಗಳೂರು ಕ್ಷೇತ್ರದಲ್ಲಿ ಭ್ರಷ್ಟಾಚಾರರಹಿತವಾಗಿ, ಸೌಹಾರ್ದಯುತವಾಗಿ ಚುನಾವಣೆ ನಡೆಸುವ ಪ್ರಯೋಗ ಮಾಡಿದ್ದಾರೆ. ಜನರ ನಡುವೆ ಸಾಮರಸ್ಯ ಮೂಡಿಸಲು ಪ್ರಯತ್ನಿಸಿದ್ದಾರೆ. ಇದು ಸಂತರು, ಸನ್ಯಾಸಿಗಳು ಮಾಡಬೇಕಾದ ಮಾದರಿ ಕೆಲಸ. ಆದರೆ ತಾವು ಇಂಥಾ ಸನ್ಮಾರ್ಗವನ್ನು ಬಿಟ್ಟು ದುರ್ಮಾರ್ಗವನ್ನು ತುಳಿದಿದ್ದೀರಿ. ತಮ್ಮ ಮೇಲೆ ವಿಶ್ವಾಸವಿರಿಸಿರುವ ಭಕ್ತರನ್ನು ದಿಕ್ಕುತಪ್ಪಿಸುವ ಕೃತ್ಯದಲ್ಲಿ ತೊಡಗಿದ್ದೀರಿ.

ಸ್ವಾಮಿಗಳೇ,
ಇಂದಿನ ರಾಜಕೀಯ ಯಾವ ಹಂತಕ್ಕೆ ತಲುಪಿದೆಯೆಂಬುದು ಪಾಮರರಿಗೂ ತಿಳಿದಿರುವ ವಿಚಾರ. ಹೀಗಿರುವಾಗ ನಿತ್ಯವೂ ಜನರಿಗೆ ಉಪದೇಶ ಮಾಡುವ ತಮಗೆ ಈ ವಿಷಯ ತಿಳಿಯದೇ ಹೋಗಿರುವುದು ವಿಷಾದಕರ. ಅಧೋಗತಿಗಿಳಿದಿರುವ ರಾಜಕೀಯದ ಜೊತೆಗೆ ಧರ್ಮವನ್ನು ಬೆರೆಸುವ ನಿಮ್ಮ ಕೃತ್ಯದಿಂದ ಸಮಾಜವನ್ನು ಮತ್ತಷ್ಟು ವಿಪ್ಪತ್ತಿಗೆ ದೂಡಿದಂತಾಗುತ್ತದೆ.

ಮಠಾಧೀಶರೆನಿಸಿಕೊಂಡವರು ಜನರಿಗೆ ಸಾತ್ವಿಕ ಮಾರ್ಗ ಸೂಚಿಸುವ ಮಹತ್ಕಾರ್ಯ ಮಾಡಬೇಕಿತ್ತು. ಆದರೆ ಅದು ಬಿಟ್ಟು ರಾಜಕೀಯ ಪಕ್ಷಗಳಿಗೆ ಓಟು ಹಾಕಿಸುವ ಏಜೆಂಟರಂತೆ ವರ್ತಿಸುತ್ತಿರುವ ನಿಮ್ಮ ನಡೆ ಖಂಡನಾರ್ಹವಾದುದು. ಇದು `ಮಠಾಧೀಶ’ರ ಸ್ಥಾನಮಾನಕ್ಕೆ ಎಸಗುವ ಮಹಾಪರಾಧವಾಗುತ್ತದೆ. ಪೀಠಕ್ಕೆ ಮಾಡುವ ದ್ರೋಹವಾಗುತ್ತದೆ.

ಆದ್ದರಿಂದ ತಮ್ಮಲ್ಲಿ ನನ್ನ ಕಳಕಳಿಯ ಮನವಿ ಇಷ್ಟೆ. ಜನರ ಭಾವನೆಗಳಿಗೆ ಬೆಲೆ ಕೊಟ್ಟು ದಯಮಾಡಿ ತಮ್ಮ ಬೀದಿ ಕಚ್ಚಾಟವನ್ನು ಕೂಡಲೇ ನಿಲ್ಲಿಸಿ, ತಮ್ಮ ತಾತ್ವಿಕ ಭಿನ್ನಮತವನ್ನು ಸೌಹಾರ್ದಯುತ ಚರ್ಚೆಯ ಮೂಲಕ ಪರಿಹರಿಸಿಕೊಳ್ಳಿ. ಹಾಗೆಯೆ ತಮ್ಮ ರಾಜಕೀಯ ಪ್ರೇರಿತ ನಡವಳಿಕೆಗಳನ್ನು ಬದಲಿಸಿಕೊಂಡು ಪೀಠದ ಗೌರವವನ್ನು ಹಾಗೂ ತಮ್ಮ ಸ್ಥಾನಮಾನದ ಘನತೆಯನ್ನು ಕಾಪಾಡುತ್ತೀರೆಂದು ಆಶಿಸುತ್ತೇನೆ.

ವಂದನೆಗಳೊಂದಿಗೆ,
ಎಚ್.ಎಸ್.ದೊರೆಸ್ವಾಮಿ
ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಸೋರಿಕೆಯಾದ ಸಂಪೂರ್ಣ ಆಡಿಯೋ ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಿಲ್ಲ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2023ರ ಜನಾಂಗೀಯ ಹಿಂಸಾಚಾರದಲ್ಲಿ ಮಣಿಪುರದ ಮಾಜಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪಾತ್ರವನ್ನು ಸೂಚಿಸಿರುವ ಅರ್ಜಿಯಲ್ಲಿ ಲಭ್ಯವಿರುವ ಸಂಪೂರ್ಣ ಸೋರಿಕೆಯಾದ ಆಡಿಯೋ ತುಣುಕುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಲಿಲ್ಲ ಎಂದು...

ಎಸ್‌ಐಆರ್‌ ಭಯಕ್ಕೆ ಮತ್ತೊಂದು ಬಲಿ: ಬಂಗಾಳದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ, ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಂಬಂಧಿಸಿದ ಭಯದಿಂದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರನ್ನು ರಣಘಾಟ್‌ನ...

MGNREGA ಬದಲು VB-G Ram G : ರಾಜ್ಯಗಳ ಮೇಲೆ 40 ಶೇಕಡ ಆರ್ಥಿಕ ಹೊರೆ

ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ 2005ರಲ್ಲಿ ಜಾರಿಗೆ ತಂದ ಮಹತ್ವಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಮತ್ತು ಅದರಡಿ ರೂಪಿಸಲಾದ ನರೇಗಾ ಯೋಜನೆಯ ಹೆಸರನ್ನು ಬದಲಿಸಲು ಕೇಂದ್ರ...

ಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

2025 ರ ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳು ರಾಜ್ಯದಲ್ಲಿ ಅತ್ಯಂತ ಅಚ್ಚರಿಯ ರಾಜಕೀಯ ಫಲಿತಾಂಶಳನ್ನು ನೀಡಿವೆ. ಅದರಲ್ಲಿ, ಕೊಲ್ಲಂ ಕಾರ್ಪೊರೇಷನ್‌ನಲ್ಲಿ ಎಡಪಂಥೀಯ ಪ್ರಜಾಸತ್ತಾತ್ಮಕ ರಂಗದ ನಿರಂತರ 25 ವರ್ಷಗಳ ನಿಯಂತ್ರಣವನ್ನು ಯುನೈಟೆಡ್...

‘ಇಂಡಿಯಾ ಬಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ’: ಕಾಂಗ್ರೆಸ್‌ನ ‘ವೋಟ್ ಚೋರಿ’ ಅಭಿಯಾನದ ಬಗ್ಗೆ ಒಮರ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕಾಂಗ್ರೆಸ್‌ನ "ಮತ ಚೋರಿ" ಅಭಿಯಾನದಿಂದ ದೂರ ಉಳಿದಿದ್ದಾರೆ, ಈ ವಿಷಯವು ಒಟ್ಟಾರೆಯಾಗಿ ವಿರೋಧ ಪಕ್ಷದ ಇಂಡಿಯಾ ಬಣದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ...

ಇಂಡಿಗೋ ವಿಮಾನ ರದ್ದತಿಗೆ ಸಂಬಂಧಿಸಿದ ಪಿಐಎಲ್ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನೂರಾರು ಇಂಡಿಗೋ ವಿಮಾನಗಳ ರದ್ದತಿಗೆ ನ್ಯಾಯಾಂಗ ಹಸ್ತಕ್ಷೇಪ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸೋಮವಾರ ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿದಾರರು ತಮ್ಮ ದೂರುಗಳೊಂದಿಗೆ ದೆಹಲಿ ಹೈಕೋರ್ಟ್ ಅನ್ನು...

ಹಣ ಅಕ್ರಮ ವರ್ಗಾವಣೆ ಪ್ರಕರಣ : ಪತ್ರಕರ್ತ ಮಹೇಶ್ ಲಾಂಗಾಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ವಂಚನೆ ಆರೋಪದ ಮೇಲೆ ದಾಖಲಾಗಿರುವ ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾ ಅವರಿಗೆ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ (ಡಿ.15) ಮಧ್ಯಂತರ ಜಾಮೀನು ನೀಡಿದೆ. ಜಿಎಸ್‌ಟಿ ವಂಚನೆ...

‘ಮಹಿಳೆಯರು ಗಂಡಂದಿರ ಜೊತೆ ಮಲಗಲು ಮಾತ್ರ’: ಸಿಪಿಎಂ ನಾಯಕನ ಅಸೂಕ್ಷ್ಮ ಹೇಳಿಕೆಗೆ ವ್ಯಾಪಕ ಆಕ್ರೋಶ

ಮಲಪ್ಪುರಂ ಜಿಲ್ಲೆಯಲ್ಲಿ ಸಿಪಿಎಂ ಪ್ರಾದೇಶಿಕ ನಾಯಕ ಸಯೀದ್ ಅಲಿ ಮಜೀದ್ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುವಾಗ ಸ್ತ್ರೀದ್ವೇಷದ ಹೇಳಿಕೆಗಳನ್ನು ನೀಡಿದ ನಂತರ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.  ಸಯೀದ್ ಅಲಿ ಮಜೀದ್, ತೆನ್ನೆಲಾ ಪಂಚಾಯತ್ ವಾರ್ಡ್ ಅನ್ನು...

ಅಖ್ಲಾಕ್ ಹತ್ಯೆ ಪ್ರಕರಣ ಹಿಂತೆಗೆದುಕೊಳ್ಳುವುದು ನ್ಯಾಯಾಂಗ ಪ್ರಕ್ರಿಯೆ ಹಳಿತಪ್ಪಿಸುವ ಪ್ರಯತ್ನ: ಬೃಂದಾ ಕಾರಟ್

ರಾಜ್ಯಪಾಲರ ಅನುಮತಿಯೊಂದಿಗೆ ಮೊಹಮ್ಮದ್ ಅಖ್ಲಾಕ್ ಅವರ ಕೊಲೆ ಮತ್ತು ಗುಂಪು ಹತ್ಯೆಗೆ ಸಂಬಂಧಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಖಂಡಿಸಿ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಹಿರಿಯ ನಾಯಕಿ ಬೃಂದಾ ಕಾರಟ್...

ಮತ್ತೆ ಮುನ್ನೆಲೆಗೆ ಬಂದ ‘Avalkoppam’: ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪಿಗೆ ಕೇರಳದಾದ್ಯಂತ ದೊಡ್ಡ ಮಟ್ಟದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. 2017ರಲ್ಲಿ ನಟಿ ಮೇಲೆ ದೌರ್ಜನ್ಯ ನಡೆದಾಗ...