Homeಸಾಮಾಜಿಕಶತಾಯುಷಿಯಿಂದ ಮಠಾಧೀಶರಿಗೆ ಒಂದು ಪತ್ರ

ಶತಾಯುಷಿಯಿಂದ ಮಠಾಧೀಶರಿಗೆ ಒಂದು ಪತ್ರ

- Advertisement -
- Advertisement -

ಗೌರವಾನ್ವಿತ ಸ್ವಾಮೀಜಿಗಳೆ,

ಬಸವ ತತ್ವ ಅಸ್ತಿತ್ವಕ್ಕೆ ಬಂದ ಮೇಲೆ ಬಸವ ಅನುಯಾಯಿಗಳು ಜಾತಿ, ಮತ, ಪಂಥಗಳನ್ನು ತೊರೆದು ನಿಜ ಮಾನವರಾಗಿ ಬಾಳಬೇಕೆಂದು ತೀರ್ಮಾನಿಸಿದರೆಂಬುದು ತಿಳಿದ ಸಂಗತಿ. ಆದರೆ ಬಸವ ತತ್ವದ ಅಸ್ತಿತ್ವಕ್ಕೆ ಮುಂಚೆಯೇ ನಮ್ಮದು ಲಿಂಗಾಯತ ಮತ ಇತ್ತೆಂಬ ವಾದವನ್ನು ಪಂಚಾಚಾರ್ಯರು ಮುಂದಿಟ್ಟಿದ್ದಾರೆ. ಈಗ ಬಸವ ತತ್ವದವರಿಗೂ ತಮ್ಮ ರಂಭಾಪುರಿ ಮಠದವರಿಗೂ ನಡುವೆ ಹೋರಾಟ ಶುರುವಾಗಿದೆ. ಈ ಭಿನ್ನಾಭಿಪ್ರಾಯದ ವಿಚಾರವನ್ನು ಉಭಯತ್ರರೂ ಕೂತು, ಗೌರವಯುತವಾಗಿ ಚರ್ಚಿಸಿ ಒಂದು ತೀರ್ಮಾನಕ್ಕೆ ಬರಬಹುದಿತ್ತು. ಬದಲಿಗೆ ನಿಮ್ಮ ಜಗಳ ಈಗ ಬೀದಿಗೆ ಬಂದಿದೆ.

ತಾವುಗಳು ಶಿವನ ಭಕ್ತರಿಗೂ ಹಾಗೂ ಬಸವನ ಅನುಯಾಯಿಗಳಿಗೂ ನಡುವೆ ಸಾಮರಸ್ಯ ಮೂಡಿಸುವ ಬದಲಿಗೆ ವೈಮನಸ್ಯ ಹೆಚ್ಚಾಗಲು ಕಾರಣರಾಗಿದ್ದೀರಿ ಎಂಬುದನ್ನು ಅತ್ಯಂತ ನೋವಿನಿಂದ ಹೇಳಲೇಬೇಕಿದೆ. ಮಠಾಧಿಪತಿಗಳು ಸಮಾಜದಲ್ಲಿ ಶಾಂತಿ, ನೆಮ್ಮದಿ, ಸೌಹಾರ್ದತೆ ಬಿತ್ತಬೇಕು. ಅದು ಬಿಟ್ಟು ನಿಮ್ಮ ಪರಸ್ಪರರ ಭಿನ್ನಾಭಿಪ್ರಾಯಗಳನ್ನು ಮುಂದಿಟ್ಟುಕೊಂಡು ನೀವೇ ಬೀದಿ ಹೋರಾಟಕ್ಕಿಳಿದರೆ ತಾವು ಭಕ್ತರಿಗೆ ಏನು ಸಂದೇಶ ಕೊಟ್ಟಂತಾಗುತ್ತದೆ?

ತಮ್ಮ ಅನುಯಾಯಿಗಳ ನಡುವೆಯೇ ತಾವು ಸಾಮರಸ್ಯ ಸಾಧಿಸಲಾಗದಿದ್ದ ಮೇಲೆ ಮತ್ತೇನನ್ನು ಸಾಧಿಸುತ್ತೀರಿ? ಹೋಗಲಿ, ಇಂಥ ಮಠಗಳಿದ್ದು ಸಮಾಜಕ್ಕೆ ಪ್ರಯೋಜನವಾದರೂ ಏನು?

ಭಿನ್ನಮತಗಳ ಕಾರಣಕ್ಕೆ ಮಠಾಧೀಶರಾದ ತಾವುಗಳೇ ಬೀದಿಗಿಳಿದಿರುವ ಸನ್ನಿವೇಶದಲ್ಲಿ ಜನಸಾಮಾನ್ಯರು ಮಾರ್ಗದರ್ಶನಕ್ಕಾಗಿ ಯಾರ ಬಳಿಗೆ ಹೋಗಬೇಕು?

ಇದು ನಿಮಗೆ ಸಲ್ಲದು. ಇದು ಮಠಾಧೀಶರಿಗೆ ತಕ್ಕುನಾದ ನಡೆಯಲ್ಲ. ನಿಮ್ಮ ಮಾತುಗಳು ಹಾಗೂ ನಡವಳಿಕೆ ಜನರಿಗೆ ಅಸಹ್ಯ ಉಂಟುಮಾಡುತ್ತಿವೆ. ಹೆಂಡ, ಹಣ ಹಂಚಿ ಓಟು ಗಳಿಸುವ ರಾಜಕಾರಣಿಗಳ ಮಟ್ಟಕ್ಕೆ ಕೆಲವು ಮಠಾಧೀಶರು ಇಳಿದಿರುವುದು ಜನರಲ್ಲಿ ಜಿಗುಪ್ಸೆ ಮೂಡಿಸಿದೆ.

ನಿಮಗೆ ರಾಜ್ಯಾಂಗದ ಪರಿಕಲ್ಪನೆಯೇ ಇಲ್ಲವೇ? ಸ್ವಾತಂತ್ರ್ಯ, ಸಮಾನತೆ, ಸಹೋದರತ್ವ ಸಾರುವ ರಾಜ್ಯಾಂಗದ ಮಹತ್ವದ ಬಗ್ಗೆ ಅರಿವಿದೆಯೆ? ಎಂಬ ಪ್ರಶ್ನೆಗಳು ಸಹಜವಾಗಿ ಮೂಡುತ್ತವೆ. ಮಠಾಧೀಶರೆನಿಸಿಕೊಂಡ ತಾವು ಸಮಾಜದಲ್ಲಿ ಉನ್ನತ ಮೌಲ್ಯಗಳನ್ನು, ಆದರ್ಶಗಳನ್ನು ಬೋಧಿಸಬೇಕೆಂಬುದು ಶ್ರೀಸಾಮಾನ್ಯರ ಅಪೇಕ್ಷೆ.

ಈ ಹಿಂದೆ ಸಿರಿಗೆರೆ ಮಠದವರು ಜಗಳೂರು ಕ್ಷೇತ್ರದಲ್ಲಿ ಭ್ರಷ್ಟಾಚಾರರಹಿತವಾಗಿ, ಸೌಹಾರ್ದಯುತವಾಗಿ ಚುನಾವಣೆ ನಡೆಸುವ ಪ್ರಯೋಗ ಮಾಡಿದ್ದಾರೆ. ಜನರ ನಡುವೆ ಸಾಮರಸ್ಯ ಮೂಡಿಸಲು ಪ್ರಯತ್ನಿಸಿದ್ದಾರೆ. ಇದು ಸಂತರು, ಸನ್ಯಾಸಿಗಳು ಮಾಡಬೇಕಾದ ಮಾದರಿ ಕೆಲಸ. ಆದರೆ ತಾವು ಇಂಥಾ ಸನ್ಮಾರ್ಗವನ್ನು ಬಿಟ್ಟು ದುರ್ಮಾರ್ಗವನ್ನು ತುಳಿದಿದ್ದೀರಿ. ತಮ್ಮ ಮೇಲೆ ವಿಶ್ವಾಸವಿರಿಸಿರುವ ಭಕ್ತರನ್ನು ದಿಕ್ಕುತಪ್ಪಿಸುವ ಕೃತ್ಯದಲ್ಲಿ ತೊಡಗಿದ್ದೀರಿ.

ಸ್ವಾಮಿಗಳೇ,
ಇಂದಿನ ರಾಜಕೀಯ ಯಾವ ಹಂತಕ್ಕೆ ತಲುಪಿದೆಯೆಂಬುದು ಪಾಮರರಿಗೂ ತಿಳಿದಿರುವ ವಿಚಾರ. ಹೀಗಿರುವಾಗ ನಿತ್ಯವೂ ಜನರಿಗೆ ಉಪದೇಶ ಮಾಡುವ ತಮಗೆ ಈ ವಿಷಯ ತಿಳಿಯದೇ ಹೋಗಿರುವುದು ವಿಷಾದಕರ. ಅಧೋಗತಿಗಿಳಿದಿರುವ ರಾಜಕೀಯದ ಜೊತೆಗೆ ಧರ್ಮವನ್ನು ಬೆರೆಸುವ ನಿಮ್ಮ ಕೃತ್ಯದಿಂದ ಸಮಾಜವನ್ನು ಮತ್ತಷ್ಟು ವಿಪ್ಪತ್ತಿಗೆ ದೂಡಿದಂತಾಗುತ್ತದೆ.

ಮಠಾಧೀಶರೆನಿಸಿಕೊಂಡವರು ಜನರಿಗೆ ಸಾತ್ವಿಕ ಮಾರ್ಗ ಸೂಚಿಸುವ ಮಹತ್ಕಾರ್ಯ ಮಾಡಬೇಕಿತ್ತು. ಆದರೆ ಅದು ಬಿಟ್ಟು ರಾಜಕೀಯ ಪಕ್ಷಗಳಿಗೆ ಓಟು ಹಾಕಿಸುವ ಏಜೆಂಟರಂತೆ ವರ್ತಿಸುತ್ತಿರುವ ನಿಮ್ಮ ನಡೆ ಖಂಡನಾರ್ಹವಾದುದು. ಇದು `ಮಠಾಧೀಶ’ರ ಸ್ಥಾನಮಾನಕ್ಕೆ ಎಸಗುವ ಮಹಾಪರಾಧವಾಗುತ್ತದೆ. ಪೀಠಕ್ಕೆ ಮಾಡುವ ದ್ರೋಹವಾಗುತ್ತದೆ.

ಆದ್ದರಿಂದ ತಮ್ಮಲ್ಲಿ ನನ್ನ ಕಳಕಳಿಯ ಮನವಿ ಇಷ್ಟೆ. ಜನರ ಭಾವನೆಗಳಿಗೆ ಬೆಲೆ ಕೊಟ್ಟು ದಯಮಾಡಿ ತಮ್ಮ ಬೀದಿ ಕಚ್ಚಾಟವನ್ನು ಕೂಡಲೇ ನಿಲ್ಲಿಸಿ, ತಮ್ಮ ತಾತ್ವಿಕ ಭಿನ್ನಮತವನ್ನು ಸೌಹಾರ್ದಯುತ ಚರ್ಚೆಯ ಮೂಲಕ ಪರಿಹರಿಸಿಕೊಳ್ಳಿ. ಹಾಗೆಯೆ ತಮ್ಮ ರಾಜಕೀಯ ಪ್ರೇರಿತ ನಡವಳಿಕೆಗಳನ್ನು ಬದಲಿಸಿಕೊಂಡು ಪೀಠದ ಗೌರವವನ್ನು ಹಾಗೂ ತಮ್ಮ ಸ್ಥಾನಮಾನದ ಘನತೆಯನ್ನು ಕಾಪಾಡುತ್ತೀರೆಂದು ಆಶಿಸುತ್ತೇನೆ.

ವಂದನೆಗಳೊಂದಿಗೆ,
ಎಚ್.ಎಸ್.ದೊರೆಸ್ವಾಮಿ
ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...