Homeಅಂಕಣಗಳುಶಾರದೆ ಪೂಜೆ ಸಂವಿಧಾನದಲ್ಲೇ ಅದೆ ಕಂಡ್ರಿ !

ಶಾರದೆ ಪೂಜೆ ಸಂವಿಧಾನದಲ್ಲೇ ಅದೆ ಕಂಡ್ರಿ !

- Advertisement -
- Advertisement -

ದಷ್ಟಪುಷ್ಟವಾಗಿ ಬೆಳೆದ ಹಳ್ಳಿಕಾರ ಹೋರಿಯ ಬೀಜದಂತೆ ಕಾಣುವ ಈ ಸರಕಾರವನ್ನು ನೋಡಿದ ಬಿಜೆಪಿ ನರಿಗಳು ಖುಷಿಯಿಂದ ಊಳಿಡುತ್ತಿರಬೇಕಾದರೆ, ಅತ್ತ ದೇವೇಗೌಡರು ಮತ್ತು ಕುಮಾರಣ್ಣನವರು ಶೃಂಗೇರಿಯ ಶಾರದಾಂಬೆಯ ಆವರಣದಲ್ಲಿ ರವಿಕೆ ಹಾಕದ ವಡ್ಡರಂತೆ ಕುಳಿತು ಅದೇನೇನೋ ಮಾಡುತ್ತಿರುವ ದೃಶ್ಯ ನೋಡಿ ಫೋನು ಮಾಡಿ ಕೇಳಬೇಕೆನಿಸಿತ್ತಲ್ಲಾ. ಕೂಡಲೇ ಫೋನ್ ಮಾಡಲಾಗಿ ಕುಮಾರಣ್ಣನ ಫೋನ್ ರಿಂಗಾಯ್ತು.
ರಿಂಗ್ ಟೋನ್- “ಎಂಥ ಅಂದ ಎಂಥ ಚಂದ ಶಾರದಮ್ಮ ನಿನ್ನ ನೋಡಲೆರಡು ಕಣ್ಣು ನಮಗೆ ಸಾಲದಮ್ಮ…………..

ಹಲೋ ಯಾರ್ರಿ ಮಾತಾಡದು”
“ತಾವ್ಯಾರು ಸಾರ್”
“ನಾನು ಭೋಜೆಗೌಡ.”
“ಭೋಜೆಗೌಡ್ರೆ ಕುಮಾರಣ್ಣನಿಗೆ ಫೋನ್ ಕೊಡಿ ನಾನು ಯಾಹೂ.”
“ಕೊಟ್ಟೆ ಮಾತಾಡಿ.”
“ನಮಸ್ಕಾರ ಕುಮಾರಣ್ಣರಿಗೆ ನಾನು ಯಾಹೂ.”
“ಏನೇಳ್ರಿ ಯಾಹೂ ಟೈಮಿಲ್ಲ.”
“ಒಂದೆರಡು ಮಾತು ಸಾರ್.”
“ಕೇಳಿ.”
“ಶೃಂಗೇರಿಲಿ ನಿಮ್ಮನ್ನ ಅಂಥ ಆಕಾರದಲ್ಲಿ ನೋಡಿ ಬಾಳ ಖುಷಿಯಾಯ್ತು ಸಾರ್. ಪೂಜೆ ಚೆನ್ನಾಗಿತ್ತಾ?”
“ಚೆನ್ನಾಗಿತ್ತು ಕಂಡ್ರಿ, ಕರ್ನಾಟಕ ಸರಕಾರದ ಕೆಲಸ ಮಾಡದರ ಜೊತೆಗೆ ಆಗಾಗ್ಗೆ ಬಂದು ಶಾರದಾಂಬೆ ಪೂಜೆ ಮಾಡತಕ್ಕಂತ ಪರಿಪಾಠವನ್ನ ಇಟ್ಟುಗೊಬೇಕು ಅಂತ ಅನ್ನಸ್ತು.”
“ಅದು ಸಹಜ ಸಾರ್, ವಿದ್ಯೆ ಬುದ್ಧಿಯ ಕೊರತೆ ಇದ್ದೋರು ಶಾರದೆ ಪೂಜೆ ಮಾಡ್ತಾರೆ.”
“ಅಂಗೇನು ಇಲ್ಲ. ನಮಿಗೆಲ್ಲಾ ಬುದ್ಧಿ ಕೊಡತಕ್ಕಂತ ಶಾರದೆ ನನ್ನ ಸರಕಾರದ ವಿರುದ್ಧ ಏನು ಅಪಸ್ವರಗಳಿಂದ ಮಾತನಾಡ್ತಾರೆ, ಅಂತವರಿಗೆಲ್ಲಾ ಒಳ್ಳೆ ಬುದ್ಧಿ ಕೊಡ್ಲಿ ಅಂತ ಹೇಳಿ ನಾನು ನಮ್ಮ ತಂದೆಯವರ ಸಲಹೆ ಮೇರೆಗೆ ಇಲ್ಲಿಗೆ ಬಂದು ಪೂಜೆ ಮಾಡಿ ಬೆಳಗಾವಿಗೆ ಹೋದೆ.”
“ಕುಮಾರಣ್ಣಂಗೆ ಬುದ್ಧಿ ಕೊಡುವವನು ಗಣೇಶ, ವಿದ್ಯೆ ಕೊಡೋಳು ಸರಸ್ವತಿ, ದುಡ್ಡು ಕೊಡೋಳು ಲಕ್ಷ್ಮಿ. ನಿಮಗೆ ಲಕ್ಷ್ಮಿ ಕೊರತೆ ಇಲ್ಲ ವಿದ್ಯೆ ಬುದ್ದಿ ಕೊರತೆ ಎದ್ದು ಕಾಣ್ತಾಯಿದೆ ಅಂತ ಕರ್ನಾಟಕದ ಜನ ಆಡಿಕೊಳ್ತ ಅವುರೆ.”
“ಆಡಿಕೊಳ್ತಕಂತ ಜನಗಳಿಗೆ ನಾವು ತಲೆ ಕೆಡಿಸಿಕೋಬೇಕಾಗಿಲ್ಲ ಅವರು ಸುಮ್ಮನಿದ್ರು ಆಡಿಕೊಳ್ತಾರೆ ಹೀಗೆ ಪೂಜೆ ಮಾಡಿದ್ರು ಆಡಿಕೊಳ್ತಾರೆ.”
“ಅಲ್ಲ ಸಾರ್, ಆ ಶೃಂಗೇರಿ ಬಿಜೆಪಿ ಪಾರ್ಟಿಯ ಬ್ರಾಂಚ್ ತರ ಕೆಲಸ ಮಾಡುತ್ತೆ. ಅವುರು ಏನೇ ಮಾಡಿದ್ರು ಅದು ಶ್ರೇಣೀಕೃತ ಸಮಾಜದ ಕಳಸದಂಗಿರೊ ಬ್ರಾಹ್ಮಣರಿಗಾಗಿ ಇರೊ ಮಠ ಗೊತ್ತ.”
“ನಿಮ್ಮ ಆಪಾದನೆ ನಾನು ಅಲ್ಲಗಳೀತಿನಿ.”
“ನೀವು ಅಲ್ಲಗಳೆಯೋದು ಸಹಜ. ದೇವಸ್ಥಾನದ ಹೊಸಿಲಲ್ಲೇ ಮೂರು ಕಮಲದ ಚಿತ್ರ ಕೆತ್ತಿದಾರೆ. ಆ ಕಮಲ ಬಿಜೆಪಿ ಸಿಂಬಲ್ಲು ಗೊತ್ತ.”
“ನಾನು ಹೊಸಲು ದಾಟಿಕೊಂಡೋದೆ ನೋಡಲಿಲ್ಲ.”
“ವಿದ್ಯೆ ಬುದ್ಧಿ ಕೊರತೆ ಇದ್ದಾಗ ಅಂಥವು ಅರಿವಿಗೇ ಬರದಿಲ್ಲ ಇರ್ಲಿ. ಈ ಹಿಂದೆ ಶಾರದಾಂಬೆನ ಬಂಡೆ ಮೇಲೆ ಕೂರಿಸಿದ ಚಿತ್ರ ಬರಿತಿದ್ರು.”
“ಹೌದೆ.”
“ಹೌದು ಸಾರ್ ವಿದ್ಯೆ ಬಂಡೆ ಇದ್ದಂಗೆ ನಾವು ಸಾಯೋವರಿಗೂ ಆ ಬಂಡೆ ಮೇಲೆ ಕೂತಗಂಡು ದೇಶ ಆಳಬಹುದು ಅನ್ನೊ ಸಂಕೇತ ಆ ಬಂಡೆ.”
“ಹೌದೆ.”
“ಈಗ ಬಿಜೆಪಿ ಆರ್ಟಿಸ್ಟುಗಳು ಏನು ಮಾಡ್ಯವುರೆ ಗೊತ್ತ ಸಾರ್, ಶೃಂಗೇರಿ ಶಾರದಾಂಬೆನ ಕಮಲದ ಮೇಲೆ ಕೂರಿಸಿದಾರೆ. ಅಷ್ಟೇ ಅಲ್ಲ, ಪೀಠದ ಮೇಲಿದ್ದ ಗಣಪತಿನೂ ಕಮಲದ ಮೇಲೆ ಕೂರಿಸಿದಾರೆ, ಇನ್ನು ಲಕ್ಷ್ಮಿಯಂತೂ ಯಾವಾಗ್ಲೂ ಕಮಲದ ಮೇಲಿದ್ಲು. ಅವುಳ ಅಂಗೇ ಬರದವುರೆ. ಇನ್ನ ಮುಂದೆ ಈ ಚೆಡ್ಡಿ ಕಲಾವಿದರು ನಮ್ಮ ಎಲ್ಲಾ ದೇವರುಗಳನ್ನ ಕಮಲದ ಮೇಲೆ ಕೂರುಸ್ತಾರೆ ಸಾರ್.”
“ಕೂರುಸ್ಲಿ ಬಿಡಿ.”
“ಅಲ್ಲ ಸಾರ್, ಈಗಾಗ್ಲೆ ಕಾರಿನ ಹಿಂಬದಿ ಗಾಜಿನಲ್ಲಿ ಮೆಡ್ಡಗಣ್ಣಿನ ಆಂಜನೇಯನ ಫೋಟಾ ಬರ್ಯೆಕತ್ತಾ ಅವುರೆ. ಪಾಪ ಆಂಜನೇಯನ ಆಕಾರನ ಹಾಳು ಮಾಡಿದ ಜನ, ಮುಂದೆ ಏನಾದ್ರೂ ಮಾಡ್ತಾರೆ. ನೀವು ಇದನ್ನೆಲ್ಲಾ ಸೂಕ್ಷ್ಮವಾಗಿ ಗಮನಿಸಿ ಎಚ್ಚರಿಕೆಯಿಂದಿರಬೇಕು.”
“ಎಚ್ಚರಿಕೆ ಅಂದ್ರೆ.”
“ಆ ಶೃಂಗೇರಿಗ್ಯಾಕೊಯ್ತಿರಿ ಅದರ ಬದ್ಲು ಜಾರಕಿಹೊಳಿ ಮಾತಾಡಿಸಿ. ಎಂ.ಬಿ ಪಾಟೀಲ, ಬಿ.ಸಿ ಪಾಟೀಲನ ಮಾತಾಡಿಸಿ. ಅವುರ ಕೈಗೊಂದು ಉಂಗುರ ಕೊಡಿ, ಮುತ್ತು ಕೊಡಿ ಅದು ಬುಟ್ಟು ಆ ಶೃಂಗೇರಿ ಬ್ರಾಹ್ಮಣರಿಗೆ ಕೇಳಿದಷ್ಟು ಒಡವೆ ವಸ್ತ್ರ ಕೊಡ್ತಿರಲ್ಲಾ ಟಿಪ್ಪು ಸುಲ್ತಾನ್ ತರ, ನಿಮ್ಮ ಸರಕಾರ ಉಳಿತಾದ ಸಾರ್”
“ನಮ್ಮ ತಂದೆಯವರು ಹೇಳಿದ ಪ್ರಕಾರ ಶೃಂಗೇರಿ ಶಾರದಾಂಬೆ ಕೃಪೆಯಿಂದ ನಮ್ಮ ಸರಕಾರ ರಚನೆಯಾಯ್ತಂತೆ. ಆಕೆಯ ಅನುಗ್ರಹ ಇದ್ರೆ ಮುಂದೆ ಅವುಳೆ ಸರಕಾರನ ಕಾಪಾಡ್ತಳೆ ಅಂತ ಪೂಜೆ ಮಾಡಿಸಿದ್ದು. ಪೂಜೆ ಮಾಡದÀು ತಪ್ಪಾ.”
“ತಪ್ಪು ಸಾರ್, ನಿಮ್ಮ ಸರಕಾರ ರಚನೆ ಮಾಡಂಗೆ ಮಾಡಿದೋರು ಒಕ್ಕಲಿಗರು. ಅವುರು ಸಾಮೂಹಿಕವಾಗಿ ನಮ್ಮ ಕುಮಾರಣ್ಣನ ಮುಖ್ಯಮಂತ್ರಿ ಮಾಡಬೇಕು ಅಂತ ಓಟು ಮಾಡಿದ್ರು, ಶೃಂಗೇರಿ ಬ್ರಾಹ್ಮಣರಲ್ಲ. ನೀವು ಕೃತಜ್ಞತೆ ಸಲ್ಲಿಸಬೇಕಾದ್ದು ಜನಾಂಗದ ಮತದಾರರಿಗೆ, ಅದು ಬಿಟ್ಟು ಪುರೋಹಿತರ ದೇವರಿಗಲ್ಲ.”
“ಶಾರದಾಂಬೆ ಎಲ್ಲರಿಗೂ ದೇವರು ಗೊತ್ತ.”
“ಗೋಪಾಲಗೌಡ್ರು ಗೊತ್ತ ಸಾರ್”
“ಗೊತ್ತು ಅದೇ ಜಡಜು ಗೋಪಾಲಗೌಡ್ರು.”
“ಅವುರಲ್ಲ ಸಾರ್ ತೀರ್ಥಹಳ್ಳಿ-ಸಾಗರದಿಂದ ಮೂರು ಸಾರಿ ಗೆದ್ದು ಶಾಸಕರಾಗಿದ್ರು.”
“ಕೇಳಿದ್ದಿನಿ.”
“ಅವುರು ಮೂರು ಬಾರಿ ಶಾಸಕರಾಗಿದ್ರು ತೀರಿಕೊಂಡಾಗ ಒಂದು ಮನೆ ಇರಲಿಲ್ಲ, ಒಂದು ಸೈಟು ಇರಲಿಲ್ಲ, ಬ್ಯಾಂಕ್ ಅಕವುಂಟೇ ಇರಲಿಲ್ಲ.”
“ಪಾಪ ಯಾಕಂಗಿದ್ರು.”
“ಸೋಷಲಿಸ್ಟ್ ಪಾರ್ಟಿ ಕಟ್ಟೋರ ಸಿದ್ಧಾಂತ ಫಾಲೊ ಮಾಡಿ ಅಂಗಿದ್ರು. ಅವುರು ಹೇಳಿದ ಪ್ರಕಾರ ಕಾಗದವನ್ನ ಸರಸ್ವತಿ ಅನ್ನಕ್ಕಾಗಲ್ಲಾ ಈ ಬ್ರಾಹ್ಮಣರು ಹೊಟ್ಟೆಪಾಡಿಗೆ ಎಲ್ಲದಕ್ಕೂ ಒಂದು ಆಕಾರ ಕೊಟ್ಟು, ವಿಗ್ರಹ ಮಾಡಿ ಗರ್ಭಗುಡಿ ಮಾಡಿಕೊಂಡು ದಕ್ಷಿಣೆ ದತ್ತೀಲಿ ಜೀವನ ಮಾಡ್ತ ಅವುರಂತೆ, ಅಂತ ಜಾಗಕ್ಕೋಗಿ ಸರಕಾರ ಉಳಿಸಕ್ಕೆ ಪೂಜೆ ಮಾಡ್ತಾ ಸಮಯ ಹಾಳು ಮಾಡ್ತ ಕುಂತಿದ್ದೀರಲ್ಲಾ ಇದು ಸಂವಿಧಾನ ವಿರೋಧಿ ಕೆಲಸ ಅಲ್ಲವೆ?”
“ಪೂಜೆ ಮಾಡ್ತಕಂತ ವಿಷಯ ಏನಿದೆ ಅದು ನಮ್ಮ ಸಂವಿಧಾನದಲ್ಲೇ ಅದೆ ಕಂಡ್ರಿ.”
ಥೂತ್ತೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...