Homeರಾಜಕೀಯಶಿರಸಿ-ಕುಮಟಾ ಹೆದ್ದಾರಿಗೆ ಗಂಟು ಬಿದ್ದಿರುವ  ಪರಿಸರವ್ಯಾಧಿಗಳು!!

ಶಿರಸಿ-ಕುಮಟಾ ಹೆದ್ದಾರಿಗೆ ಗಂಟು ಬಿದ್ದಿರುವ  ಪರಿಸರವ್ಯಾಧಿಗಳು!!

- Advertisement -
ಢೋಂಗಿ ಪರಿಸರ ಪರಾಕ್ರಮಿಗಳ ದಗಲುಬಾಜಿ ಆಟದಿಂದ ಉತ್ತರ ಕನ್ನಡಿಗರೀಗ ಬೇಸತ್ತು ಹೋಗಿದ್ದಾರೆ. ಮೂಲತಃ ತಮ್ಮ ಅಡಿಕೆ ತೋಟಗಳ ಸಾಮ್ರಾಜ್ಯವನ್ನು ಕಾಪಾಡಿಕೊಳ್ಳುವ ಹವ್ಯಕ ಬ್ರಾಹ್ಮಣರ ಮುಖವಾಡವಾಗಿಯಷ್ಟೆÃ ಚಲಾವಣೆಗೆ ಬರುವ ಈ ಢೋಂಗಿ ಪರಿಸರವಾದ ಅಬ್ರಾಹ್ಮಣ ಸಮುದಾಯಗಳಿಗೆ ದಕ್ಕೆಯಾಗುವ ಯಾವ ಯೋಜನೆಗಳಿಗೂ ಚಕಾರವೆತ್ತುವುದಿಲ್ಲ. ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸ್ವಾಮಿಯಿಂದ ಅನಂತ್ ಹೆಗಡೆ ಆಶೀಸರನಂಥ ಬ್ರಾಹ್ಮಣ ಜಾತ್ಯಸ್ಥರೆಲ್ಲ ಪರಿಸರವಾದವನ್ನು ತಮ್ಮಿಷ್ಟದಂತೆ ಕನವರಿಸೋದು ತಮ್ಮ ಜಾತಿಯ ಹಿತ ಕಾಪಾಡುವುದಕ್ಕಷ್ಟೆÃ!
ಜಿಲ್ಲೆಯ ಅಭಿವೃದ್ಧಿಗೆ ಅನಿವಾರ್ಯ ಅಗತ್ಯವಾದ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗಕ್ಕೆ ಅಡ್ಡಗಾಲು ಹಾಕುವ ಈ ಪ್ರಚಂಡರು, ತಮ್ಮ ಶಿರಸಿ-ಯಲ್ಲಾಪುರ ಹೈಗರ ಸೀಮೆಗೆ ಅನುಕೂಲವಾಗುವ ತಾಳಗುಪ್ಪಾ-ಸಿದ್ಧಾಪುರ-ಶಿರಸಿ-ಹಾವೇರಿ ರೈಲು ಮಾರ್ಗಕ್ಕೆ ಒತ್ತಾಯಿಸುತ್ತಾರೆ. ಆಗ ಆಗುವ ಪರಿಸರ-ಅರಣ್ಯ ನಾಶ ಇವರಿಗೆ ಕಾಣಿಸುವುದಿಲ್ಲ. ಈ ದ್ವಿಮುಖ ನಾಟಕದ ಪರಿಸರವಾದಿ ತಂಡದಲ್ಲಿ ಆರಂಭದಲ್ಲಿ ಕೇಂದ್ರ ಮಂತ್ರಿ ಅನಂತ್ಮಾಣಿಯೂ ಇದ್ದ. ಯಾವಾಗ ಅನಂತ್ ಹೆಗಡೆ ಆಶೀಸರ ಎಂಬ ಮತ್ತೊÃರ್ವ ಬ್ರಾಹ್ಮಣ ಪಟು ಪರಿಸರ ಹೋರಾಟವನ್ನೆÃ ತನ್ನ ಚೆಡ್ಡಿ ರಾಜಕಾರಣಕ್ಕೆ ಚಿಮ್ಮುಹಲಗೆ ಮಾಡಿಕೊಳ್ಳಲು ಹವಣಿಸಿದನೋ ಆಗ ಅನಂತ್ಮಾಣಿ ತಿರುಗಿಬಿದ್ದ. ಒಂದು ಹಂತದಲ್ಲಿ ಈ ಪರಿಸರವ್ಯಾಧಿ ಅಶೀಸರ ಆರೆಸ್ಸೆಸ್ ಸಂಪರ್ಕ ಸಾಧಿಸಿ, ಮಾಣಿಗೆ ಕೊಕ್ ಕೊಟ್ಟು  ಬಿಜೆಪಿ ಸಂಸದಗಿರಿ ಟಿಕೆಟ್ ತರಲು ಹವಣಿಸಿದ್ದೂ ಇದೆ. ಅದೇ ಕಾರಣಕ್ಕೆ ಅನಂತ್ಮಾಣಿ ಈಗ ಈ ಪರಿಸರ ಗ್ಯಾಂಗನ್ನು ಅಭಿವೃದ್ಧಿ ವಿರೋಧಿ ಅಡ್ನಾಡಿಗಳು ಎಂಬಂತೆ ಮೂದಲಿಸುತ್ತಿದ್ದಾನೆ.
ಢೋಂಗಿ ಪರಿಸರವಾದಿ ತಂಡದ ಕೆಟ್ಟ ಕಣ್ಣಿÃಗ ಕುಮಟಾ-ಶಿರಸಿ ರಸ್ತೆ ಅಗಲೀಕರಣ ಯೋಜನೆ ಮೇಲೆ ಬಿದ್ದಿದೆ. ರಾಜ್ಯ ಹೆದ್ದಾರಿಯಾಗಿದ್ದ ಸದ್ರಿ ರಸ್ತೆಯನ್ನು ಹಾವೇರಿಯಿಂದ ಕುಮಟಾವರೆಗೆ ರಾಷ್ಟಿçಯ ಹೆದ್ದಾರಿ 766ಇ ಎಂದು ಘೋಷಿಸಲಾಗಿದೆ. ಸಾಗರಮಾಲಾ ಯೋಜನೆಯಲ್ಲಿ ಮಂಜೂರಾಗಿರುವ ಈ 60 ಕಿ.ಮೀ ಉದ್ದದ ರಸ್ತೆ ಯೋಜನಾ ವೆಚ್ಚ ಬರೋಬ್ಬರಿ 360.60 ಕೋಟಿ ರೂಪಾಯಿಗಳು. ಈ ಕಾಮಗಾರಿ ಗುತ್ತಿಗೆ ಆರ್‌ಎನ್‌ಎಸ್ ಇನ್‌ಫ್ರಾಸ್ಟçಕ್ಚರ್ ಲಿಮಿಟೆಡ್ ಮತ್ತು ಗಾಯತ್ರಿ ಪ್ರಾಜೆಕ್ಟ್ ಲಿಮಿಟೆಡ್ ಕಂಪನಿ ಸಹಭಾಗಿತ್ವದಲ್ಲಿ ಪಡೆದುಕೊಂಡಿವೆ. ಯೋಜನೆಯ ವಿಸ್ತೃತ ವರದಿ(ಡಿಪಿಆರ್)ನಂತೆ ಈಗಿರುವ ರಸ್ತೆಯನ್ನು 11 ಮೀಟರ್‌ನಿಂದ 18 ಮೀಟರ್ ಅಗಲ ಮಾಡಲಾಗುತ್ತದೆ. ಈಗಿರುವ 11 ಸೇತುವೆಗಳನ್ನು ಪುನರ್ ನಿರ್ಮಿಸಲಾಗುತ್ತದೆ.
ಹಾಗೆ ನೊಡಿದರೆ ಈ ಅಗಲೀಕರಣ ಬಹುದಿನದ ಅಗತ್ಯವಾಗಿತ್ತು. ಆದರೆ ಇಲ್ಲಿಯ ಹೊಣೆಗೇಡಿ ಎಂಪಿ, ಎಮ್ಮೆಲ್ಲೆ, ಮಿನಿಸ್ಟರ್‌ಗಳು ಎಷ್ಟೆÃ ಸಾವು-ನೋವಾದರೂ, ಸರಕು ಸಾಗಾಣಿಕೆಗೆ ತೊಂದರೆಯಾದರೂ, ಅಭಿವೃದ್ಧಿ ವೇಗಕ್ಕೆ ಬ್ರೆÃಕ್ ಬಿದ್ದಿದ್ದರೂ ತಲೆಯೇ ಕೆಡಿಸಿಕೊಂಡಿರಲಿಲ್ಲ. ಆದರೆ ಸದ್ರಿ ಯೋಜನೆಯ ಪ್ರಸ್ತಾಪ ಹೊರೆ ಬೀಳುತ್ತಿದ್ದಂತೆಯೇ ಘಟ್ಟದ ಮೇಲಿನ ಪರಿಸರ ವ್ಯಾಧಿ ತಂಡ ಹುಸಿ ಹಸಿರು ಕಳಕಳಿ ಪ್ರದರ್ಶಿಸತೊಡಗಿದೆ. ಅನಂತ ಹೆಗಡೆ ಆಶೀಸರನ ಗ್ಯಾಂಗ್ ಪಶ್ಚಿಮ ಘಟ್ಟ ನಾಶವಾಗುತ್ತದೆ, ವನ್ಯ ಪ್ರಾಣಿಗಳಿಗೆ ಗಂಡಾಂತರ ಬರುತ್ತದೆ; ಗಿಡಮೂಲಿಕೆ ಸಂರಕ್ಷಿತ ದೇವಿಮನೆ ಘಟ್ಟ ಪ್ರದೇಶ ಧ್ವಂಸವಾಗಲಿದೆ ಎಂದೆಲ್ಲಾ ಬೊಬ್ಬೆ ಹೊಡೆಯುತ್ತಿದೆ. ಕಂಡ-ಕಂಡ ಅಧಿಕಾರಿಗಳಿಗೆಲ್ಲಾ ಮನವಿ ಕೊಟ್ಟು ಉದ್ದುದ್ದ ಬೋಗಸ್ ಭಾಷಣ ಬಿಗಿಯುತ್ತಿದ್ದಾರೆ.
ಆದರೆ ವಾಸ್ತವ ಇವರೇಳುವಷ್ಟು ಭೀಭತ್ಸವಾಗೇನೂ ಇಲ್ಲ. ದೇವಿಮನೆಯ ಔಷಧಿ ಮೂಲಿಕೆಗಳ ಸಂರಕ್ಷಿತ ಪ್ರದೇಶ ರಸ್ತೆಯಿಂದ ತುಂಬ ದೂರದಲ್ಲಿದೆ. ಇಲ್ಲಿಯ ಔಷಧಿ ಮೂಲಿಕೆಗಳ ವಾಸ್ತವ ಸ್ಥಿತಿ ಅರಣ್ಯ ಇಲಾಖೆಗೂ ಗೊತ್ತಿಲ್ಲ. ಪರಿಸರ ವ್ಯಾಧಿಗಳು ಮಾತ್ರ ಅಮೂಲ್ಯ ಗಿಡಮೂಲಿಕೆಯಿದೆ ಎಂದು ಬೊಂಬಡಾ ಬಜಾಯಿಸುತ್ತಿದ್ದಾರೆ. ಸ್ವಾತಂತ್ರö್ಯ ನಂತರ ಶಿರಸಿ-ಕುಮಟಾ ರಸ್ತೆ ನಿರ್ಮಾಣವಾಗಿದೆ. ಆಗಾಗ ರಸ್ತೆ ಅಗಲೀಕರಣವೂ ಆಗಿದೆ. ಇದರಿಂದ ಗುಡ್ಡಗಳ ಕುಸಿತವಾಗಲಿ, ಹತ್ತಿರದ ಗ್ರಾಮಗಳಿಗೆ ಅನಾಹುತವಾಗಲಿ ಆಗಿದ್ದಿಲ್ಲ; ರಸ್ತೆ ಅಗಲೀಕರಣದಿಂದ ವನ್ಯಜೀವಿಗಳ ಓಡಾಟಕ್ಕೆ ಕಷ್ಟವಾಗಲಿದೆ ಎಂಬುದೇ ಹಾಸ್ಯಾಸ್ಪದ. ಈಗಾಗಲೇ ಇಲ್ಲಿ ರಸ್ತೆಯಿದೆ. ಹಗಲೂ-ಇರುಳು ವಾಹನ ಓಡಾಟವಿದೆ. ಪ್ರಾಣಿಗಳಿಗೆ ತೊಂದರೆಯೇನಾಗಿಲ್ಲ. ದೇವಿಮನೆ ಘಟ್ಟ-ಕಣಿವೆಯಲ್ಲಿ ವಿದ್ಯುತ್ ಮಾರ್ಗದ ಕಾರಿಡಾರ್ ಕೂಡ ಇದೆ. ಇದರಿಂದ ಪರಿಸರಕ್ಕೆ ಹಾನಿಯೇನಾಗಿಲ್ಲ. ಅಷ್ಟಕ್ಕೂ ಕಡಿಯುವುದು ರಸ್ತೆ ಅಂಚಿನ ಸ್ವಲ್ಪ ಕಾಡಷ್ಟೆÃ! ಹೆದ್ದಾರಿ ನಿರ್ಮಾಣದ ನಂತರ ಅಕ್ಕ-ಪಕ್ಕದಲ್ಲಿ ಮರ ಬೆಳೆಸಲು ಅವಕಾಶ ಇದ್ದೆÃಯಿದೆ.
ಮೂರು ದಶಕದಿಂದ ಹಾವೇರಿ-ಕುಮಟಾ-ತಡಸ-ಕುಮಟಾ ರಸ್ತೆ ಮೇಲ್ದರ್ಜೆಗೇರಿಸುವ ಬೇಡಿಕೆ ವಾಣಿಜ್ಯೊÃದ್ಯಮಿಗಳು, ಜನಸಾಮಾನ್ಯರು ಮಂಡಿಸುತ್ತಾ ಬಂದಿದ್ದರು. ಈ ರಸ್ತೆ ಅಗಲೀಕರಣ ಜಿಲ್ಲೆಯ ಅಭಿವೃದ್ಧಿಗೆ ಹೆಬ್ಬಾಗಿಲು. ಜಿಲ್ಲೆಯ ಬಂದರುಗಳ ಅಭಿವೃದ್ಧಿ ಇದರಿಂದಾಗುತ್ತದೆ. ಹುಬ್ಬಳ್ಳಿ-ಹಾವೇರಿ-ದಾವಣಗೆರೆ ಮುಂತಾದೆಡೆಯಿಂದ ಕರಾವಳಿಗೆ ಉತ್ಪಾದಿತ ವಸ್ತುಗಳ ರಫ್ತಿಗೆ ಉತ್ತೆÃಜನ ಸಿಗುತ್ತದೆ. ಜಿಲ್ಲೆಯ ಪ್ರವಾಸೋದ್ಯಮ, ಸ್ಕೊಬಾ ಡ್ರೆöÊವಿಂಗ್‌ಗೆ ಈ ಹೆದ್ದಾರಿ ಪೂರಕÀವಾಗುತ್ತದೆ. ಕಡಿಮೆ ಅವಧಿಯಲ್ಲಿ ಸುರಕ್ಷಿತ ಪ್ರಯಾಣ ಮಾಡಬಹುದು. ಈಗಿನದು ಯಮಯಾತನೆಯ ಪ್ರವಾಸ!! ರಸ್ತೆ ಅಗಲಿಕರಣ ಉದ್ಯಮಿಗಳಗಷ್ಟೆÃ ಅಲ್ಲ. ಶಿಕ್ಷಣ, ಆರೋಗ್ಯ, ಮತ್ತಿತರ ಕಾರಣಕ್ಕೆ ಕರಾವಳಿಯತ್ತ ಹೋಗುವವರಿಗೆ ಮತ್ತು ಕರಾವಳಿಯಿಂದ ಬಯಲು ಸೀಮೆಗೆ ಹೋಗುವವರಿಗೂ ವರದಾನವೇ ಸರಿ.
ರಸ್ತೆಗಳನ್ನು ಮೇಲ್ದರ್ಜೆಗೆ ಏರಿಸಲು ತುಲನಾತ್ಮಕವಾಗಿ ಕಡಿಮೆ ಬಂಡವಾಳ ಸಾಕು. ಯಲ್ಲಾಪುರ-ಶಿರಸಿ-ಸಿದ್ಧಾಪುರ-ಮುಂಡಗೋಡ ತಾಲ್ಲೂಕುಗಳು ರೈಲು ಮಾರ್ಗ ಕಾಣುವುದು ಅನುಮಾನ ಎಂದು ಹೊಣೆಗೇಡಿ ಸಂಸದ ಕಮ್ ಕೇಂದ್ರ ಮಂತ್ರಿ ಅನಂತ್ಮಾಣಿಯೇ ಬಡಬಡಿಸುತ್ತಿದ್ದಾನೆ. ಹೀಗಿರುವಾಗ ರಾಷ್ಟಿçÃಯ ಹೆದ್ದಾರಿಯಾಗಿ ರಸ್ತೆ ಅಗಲೀಕರಣವೂ ಬೇಡವೆಂದರೆ ಹೇಗೆ? ಸ್ವಾರ್ಥಕ್ಕಾಗಿ ಪರಿಸರ ಸಂರಕ್ಷಣೆ ಪ್ರಹಸನ ಮಾಡುತ್ತಿರುವ ಹುಸಿ ಪರಿಸರವಾದಿಗಳಿಗೆ ಜನರೀಗ ಉಗಿಯುತ್ತಿದ್ದಾರೆ. ಉತ್ತರ ಕನ್ನಡಿಗರು ಈ ಛಲವನ್ನು ದಶಕದ ಹಿಂದೆಯೇ ತೋರಿಸಬೇಕಿತ್ತು. ಸೋಗಲಾಡಿ ಪರಿಸರ ಪರಾಕ್ರಮಿಗಳ ಬಂಡಲ್ ಭಾಷಣ, ಅಂಕಣ, ಮಾನವ ಸರಪಳಿಗಳಿಗೆ ಜಿಲ್ಲೆಯ ಮುಗ್ಧ ಜನ ಸಿಲುಕಿದ್ದರಿಂದಲೇ ಅಭಿವೃದ್ಧಿ ಕಾಣದಂತಾಯ್ತು. ಪರಿಸರವಾದಿಗಳ ಕಿರಿಕಿರಿಯೊಂದಿಲ್ಲದಿದ್ದರೆ ಎಂದೋ ಜಿಲ್ಲೆಗೆ ರೈಲು-ಸುಸಜ್ಜಿತ ರಸ್ತೆ, ಬಂದರು, ಬೃಹತ್ ಉದ್ಯಮ ಬರುತ್ತಿತ್ತು. ವಿದ್ಯೆ, ಉದ್ಯೊಗ, ವ್ಯವಹಾರಕ್ಕೆ ಗುಳೇ ಹೋಗುವುದು ತಪ್ಪುತ್ತಿತ್ತು. ಉತ್ತರ ಕನ್ನಡ ಪಕ್ಕದ ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡದಂತೆ ಪ್ರಗತಿ ಕಾಣುತ್ತಿತ್ತು.
ಈಗ ಜನರಿಗೆ ಪರಿಸರ ವ್ಯಾಧಿಗಳ ಬಣ್ಣ ಗೊತ್ತಾಗಿದೆ. ತದಡಿ ಬಂದರು ಬೇಕೆಂದು ಪರಿಸರವಾದಿಗಳಿಗೆ ತಿರುಗಿ ಬಿದ್ದಿದ್ದ ಜನರೀಗ ಕುಮಟಾ-ಹಾವೇರಿ ರಸ್ತೆ ಅಗಲೀಕರಣದ ಪರವಿದ್ದಾರೆ. ಇನ್ನಾದರೂ ಪರಿಸರವಾದಿಗಳು ದ್ರೊÃಹದ ಆಟ ನಿಲ್ಲಿಸುವರಾ?
– ಶುದ್ಧೊಧನ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋವಿಡ್-19 ಲಸಿಕೆ ಮತ್ತು ಯುವ ವಯಸ್ಕರ ಹಠಾತ್ ಸಾವುಗಳ ನಡುವೆ ಯಾವುದೇ ವೈಜ್ಞಾನಿಕ ಸಂಬಂಧ ಕಂಡುಬಂದಿಲ್ಲ: ಏಮ್ಸ್ ಅಧ್ಯಯನ

ನವದೆಹಲಿ: ದೆಹಲಿಯ ಏಮ್ಸ್‌ನಲ್ಲಿ ನಡೆಸಿದ ಒಂದು ವರ್ಷದ ಸಮಗ್ರ, ಶವಪರೀಕ್ಷೆ ಆಧಾರಿತ ವೀಕ್ಷಣಾ ಅಧ್ಯಯನವು, ಯುವ ವಯಸ್ಕರಲ್ಲಿ ಕೋವಿಡ್-19 ಲಸಿಕೆಯನ್ನು ಹಠಾತ್ ಸಾವುಗಳೊಂದಿಗೆ ಸಂಪರ್ಕಿಸುವ ಯಾವುದೇ ಪುರಾವೆಗಳು ಕಂಡುಬಂದಿಲ್ಲ, ಇದು ಕೋವಿಡ್ ಲಸಿಕೆಗಳ...

ಬಿಜೆಪಿ ಜನ ನಾಟಕೀಯರು, ದೇಶದ್ರೋಹಿಗಳು; ಅವರನ್ನು ಅಧಿಕಾರದಿಂದ ಕಿತ್ತೊಗೆಯಬೇಕು: ಮಲ್ಲಿಕಾರ್ಜುನ ಖರ್ಗೆ

"ಬಿಜೆಪಿಯವರು 'ಗದ್ದಾರ್‌ಗಳು' (ದೇಶದ್ರೋಹಿಗಳು) ಮತ್ತು 'ಡ್ರಮೆಬಾಜ್' (ನಾಟಕೀಯದಲ್ಲಿ ತೊಡಗಿಸಿಕೊಳ್ಳುವವರು). ಅವರನ್ನು ಅಧಿಕಾರದಿಂದ ತೆಗೆದುಹಾಕಬೇಕು" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ಕೊಟ್ಟಿದ್ದಾರೆ.  ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ವೋಟ್ ಚೋರಿ ಕುರಿತ...

ಆಸ್ಟ್ರೇಲಿಯಾ | ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ಗುಂಡಿನ ದಾಳಿ : 12 ಜನರು ಸಾವು

ಭಾನುವಾರ (ಡಿ.14) ಆಸ್ಟ್ರೇಲಿಯಾದ ಸಿಡ್ನಿ ನಗರದ ಪ್ರಸಿದ್ಧ ಬೋಂಡಿ ಬೀಚ್‌ನಲ್ಲಿ ಆಯೋಜಿಸಿದ್ದ ಯಹೂದಿ ಸಮುದಾಯದ 'ಹನುಕ್ಕಾ' ಕಾರ್ಯಕ್ರಮದಲ್ಲಿ ಇಬ್ಬರು ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ 12 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ....

ಕೋಲ್ಕತ್ತಾದಲ್ಲಿ ನಡೆದ ಅವ್ಯವಸ್ಥೆ: ‘ಮೆಸ್ಸಿ ಭಾರತ ಪ್ರವಾಸ 2025’ರ ಪ್ರಮುಖ ಆಯೋಜಕರಿಗೆ 14 ದಿನಗಳ ಕಸ್ಟಡಿ

ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೊಡ್ಡ ಪ್ರಮಾಣದ ಅವ್ಯವಸ್ಥೆ ಉಂಟಾದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಪೊಲೀಸರು ಲಿಯೋನೆಲ್ ಮೆಸ್ಸಿ ಅವರ ಇಂಡಿಯಾ ಟೂರ್ 2025 ರ ಪ್ರಮುಖ ಆಯೋಜಕರನ್ನು ವಶಕ್ಕೆ ಪಡೆದಿದ್ದಾರೆ.  ಈ ಘಟನೆಯು ಪ್ರತಿಭಟನೆಗಳಿಗೆ...

ಹೆಡ್ಗೆವಾರ್ ಸ್ಮಾರಕ ಭೇಟಿ ತಪ್ಪಿಸಿಕೊಂಡ ಅಜಿತ್ ಪವಾರ್ : ನಮ್ಮದು ಅಂಬೇಡ್ಕರ್, ಫುಲೆ ಸಿದ್ಧಾಂತ ಎಂದ ಎನ್‌ಸಿಪಿ ವಕ್ತಾರ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಭಾನುವಾರ (ಡಿ.14) ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ. ಹೆಡ್ಗೆವಾರ್ ಸ್ಮಾರಕ ಭೇಟಿ ಕಾರ್ಯಕ್ರಮದಿಂದ ತಪ್ಪಿಸಿಕೊಂಡಿದ್ದು, ಅವರ ಪಕ್ಷ ಎನ್‌ಸಿಪಿ ರಾಜ್ಯದ ಅಭಿವೃದ್ಧಿಗಾಗಿ ಮಹಾಯುತಿ ಮೈತ್ರಿಕೂಟಕ್ಕೆ ಸೇರಿರುವುದಾಗಿ ಒತ್ತಿ...

ದೆಹಲಿಗೆ ಬರುವ ನಮ್ಮ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ : ಡಿಕೆಶಿ

ದೆಹಲಿ ಬರುತ್ತಿರುವ ನಮ್ಮವರ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ ಎಂಬ ಮಾಹಿತಿ ಬಂದಿದೆ. ಈ ಬಿಜೆಪಿಯವರಿಗೆ ಯಾಕಿಷ್ಟು ಆತಂಕ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯ ರಾಮ್‌ಲೀಲಾ...

ಹೊಸೂರು ವಿಮಾನ ನಿಲ್ದಾಣ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಿಂದ 2,900 ಎಕರೆ ಸ್ವಾಧೀನ ಸಾಧ್ಯತೆ

ಚೆನ್ನೈ: ಬೆಂಗಳೂರಿಗೆ ಬಹಳ ಹತ್ತಿರದಲ್ಲಿರುವ ವೇಗವಾಗಿ ಬೆಳೆಯುತ್ತಿರುವ ಕೈಗಾರಿಕಾ ನಗರ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಲ್ಲಿ ಸರ್ಕಾರಿ ಸ್ವಾಮ್ಯದ 800 ಎಕರೆ ಸೇರಿದಂತೆ ಸುಮಾರು 3,000...

ಸೋನಮ್ ವಾಂಗ್‌ಚುಕ್ ಸಂಸ್ಥೆ ಅನುಕರಣೀಯ ಕೆಲಸ ಮಾಡುತ್ತಿದೆ, ಯುಜಿಸಿ ಮಾನ್ಯತೆ ನೀಡಬೇಕು ಎಂದ ಸಂಸದೀಯ ಸಮಿತಿ

ಲಡಾಖ್‌ನ ಶಿಕ್ಷಣ ತಜ್ಞ ಹಾಗೂ ಹೋರಾಟಗಾರ ಸೋನಮ್ ವಾಂಗ್‌ಚುಕ್ ಸ್ಥಾಪಿಸಿರುವ ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ (ಹೆಚ್‌ಐಎಎಲ್‌) 'ಅನುಕರಣೀಯ' ಕೆಲಸ ಮಾಡುತ್ತಿದೆ. ಹಾಗಾಗಿ, ಆ ಸಂಸ್ಥೆಗೆ ವಿಶ್ವವಿದ್ಯಾಲಯ ಅನುದಾನ ಆಯೋಗದಿಂದ (ಯುಜಿಸಿ) ಮಾನ್ಯತೆ...

ಮುಸ್ಲಿಂ ಎಂದು ಪರಿಶೀಲಿಸಿ ಗುಂಪುಹಲ್ಲೆ: ತೀವ್ರ ದಾಳಿಗೆ ಒಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ  ಸಾವು

ನವಾಡಾ ಜಿಲ್ಲೆಯ ರೋಹ್ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದ ಗುಂಪು ಹಲ್ಲೆಯಲ್ಲಿ ಕ್ರೂರವಾಗಿ ಹಲ್ಲೆಗೊಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ ಮೊಹಮ್ಮದ್ ಅಥರ್ ಹುಸೇನ್ ಶುಕ್ರವಾರ ತಡರಾತ್ರಿ ಬಿಹಾರ್ಷರೀಫ್ ಸದರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಡಿಸೆಂಬರ್...

ಅಮೆರಿಕಾದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ: 2 ಸಾವು, 8 ಜನರಿಗೆ ತೀವ್ರ ಗಾಯಗಳಾಗಿವೆ

ಅಮೆರಿಕಾದ ರೊಡ್ ಐಲ್ಯಂಡ್ ರಾಜ್ಯದ ಪ್ರೊವಿಡೆನ್ಸ್ ನಗರದಲ್ಲಿರುವ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಪರೀಕ್ಷೆ ಸಮಯದಲ್ಲಿ ಎಂಜಿನಿಯರಿಂಗ್ ಕಟ್ಟಡದಲ್ಲಿ ಗುಂಡಿನ ದಾಳಿ ನಡೆದಿದೆ, ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಡಿಸೆಂಬರ್ 13ರ,...