Homeರಾಜಕೀಯಶಿರಸಿ-ಕುಮಟಾ ಹೆದ್ದಾರಿಗೆ ಗಂಟು ಬಿದ್ದಿರುವ  ಪರಿಸರವ್ಯಾಧಿಗಳು!!

ಶಿರಸಿ-ಕುಮಟಾ ಹೆದ್ದಾರಿಗೆ ಗಂಟು ಬಿದ್ದಿರುವ  ಪರಿಸರವ್ಯಾಧಿಗಳು!!

- Advertisement -
ಢೋಂಗಿ ಪರಿಸರ ಪರಾಕ್ರಮಿಗಳ ದಗಲುಬಾಜಿ ಆಟದಿಂದ ಉತ್ತರ ಕನ್ನಡಿಗರೀಗ ಬೇಸತ್ತು ಹೋಗಿದ್ದಾರೆ. ಮೂಲತಃ ತಮ್ಮ ಅಡಿಕೆ ತೋಟಗಳ ಸಾಮ್ರಾಜ್ಯವನ್ನು ಕಾಪಾಡಿಕೊಳ್ಳುವ ಹವ್ಯಕ ಬ್ರಾಹ್ಮಣರ ಮುಖವಾಡವಾಗಿಯಷ್ಟೆÃ ಚಲಾವಣೆಗೆ ಬರುವ ಈ ಢೋಂಗಿ ಪರಿಸರವಾದ ಅಬ್ರಾಹ್ಮಣ ಸಮುದಾಯಗಳಿಗೆ ದಕ್ಕೆಯಾಗುವ ಯಾವ ಯೋಜನೆಗಳಿಗೂ ಚಕಾರವೆತ್ತುವುದಿಲ್ಲ. ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸ್ವಾಮಿಯಿಂದ ಅನಂತ್ ಹೆಗಡೆ ಆಶೀಸರನಂಥ ಬ್ರಾಹ್ಮಣ ಜಾತ್ಯಸ್ಥರೆಲ್ಲ ಪರಿಸರವಾದವನ್ನು ತಮ್ಮಿಷ್ಟದಂತೆ ಕನವರಿಸೋದು ತಮ್ಮ ಜಾತಿಯ ಹಿತ ಕಾಪಾಡುವುದಕ್ಕಷ್ಟೆÃ!
ಜಿಲ್ಲೆಯ ಅಭಿವೃದ್ಧಿಗೆ ಅನಿವಾರ್ಯ ಅಗತ್ಯವಾದ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗಕ್ಕೆ ಅಡ್ಡಗಾಲು ಹಾಕುವ ಈ ಪ್ರಚಂಡರು, ತಮ್ಮ ಶಿರಸಿ-ಯಲ್ಲಾಪುರ ಹೈಗರ ಸೀಮೆಗೆ ಅನುಕೂಲವಾಗುವ ತಾಳಗುಪ್ಪಾ-ಸಿದ್ಧಾಪುರ-ಶಿರಸಿ-ಹಾವೇರಿ ರೈಲು ಮಾರ್ಗಕ್ಕೆ ಒತ್ತಾಯಿಸುತ್ತಾರೆ. ಆಗ ಆಗುವ ಪರಿಸರ-ಅರಣ್ಯ ನಾಶ ಇವರಿಗೆ ಕಾಣಿಸುವುದಿಲ್ಲ. ಈ ದ್ವಿಮುಖ ನಾಟಕದ ಪರಿಸರವಾದಿ ತಂಡದಲ್ಲಿ ಆರಂಭದಲ್ಲಿ ಕೇಂದ್ರ ಮಂತ್ರಿ ಅನಂತ್ಮಾಣಿಯೂ ಇದ್ದ. ಯಾವಾಗ ಅನಂತ್ ಹೆಗಡೆ ಆಶೀಸರ ಎಂಬ ಮತ್ತೊÃರ್ವ ಬ್ರಾಹ್ಮಣ ಪಟು ಪರಿಸರ ಹೋರಾಟವನ್ನೆÃ ತನ್ನ ಚೆಡ್ಡಿ ರಾಜಕಾರಣಕ್ಕೆ ಚಿಮ್ಮುಹಲಗೆ ಮಾಡಿಕೊಳ್ಳಲು ಹವಣಿಸಿದನೋ ಆಗ ಅನಂತ್ಮಾಣಿ ತಿರುಗಿಬಿದ್ದ. ಒಂದು ಹಂತದಲ್ಲಿ ಈ ಪರಿಸರವ್ಯಾಧಿ ಅಶೀಸರ ಆರೆಸ್ಸೆಸ್ ಸಂಪರ್ಕ ಸಾಧಿಸಿ, ಮಾಣಿಗೆ ಕೊಕ್ ಕೊಟ್ಟು  ಬಿಜೆಪಿ ಸಂಸದಗಿರಿ ಟಿಕೆಟ್ ತರಲು ಹವಣಿಸಿದ್ದೂ ಇದೆ. ಅದೇ ಕಾರಣಕ್ಕೆ ಅನಂತ್ಮಾಣಿ ಈಗ ಈ ಪರಿಸರ ಗ್ಯಾಂಗನ್ನು ಅಭಿವೃದ್ಧಿ ವಿರೋಧಿ ಅಡ್ನಾಡಿಗಳು ಎಂಬಂತೆ ಮೂದಲಿಸುತ್ತಿದ್ದಾನೆ.
ಢೋಂಗಿ ಪರಿಸರವಾದಿ ತಂಡದ ಕೆಟ್ಟ ಕಣ್ಣಿÃಗ ಕುಮಟಾ-ಶಿರಸಿ ರಸ್ತೆ ಅಗಲೀಕರಣ ಯೋಜನೆ ಮೇಲೆ ಬಿದ್ದಿದೆ. ರಾಜ್ಯ ಹೆದ್ದಾರಿಯಾಗಿದ್ದ ಸದ್ರಿ ರಸ್ತೆಯನ್ನು ಹಾವೇರಿಯಿಂದ ಕುಮಟಾವರೆಗೆ ರಾಷ್ಟಿçಯ ಹೆದ್ದಾರಿ 766ಇ ಎಂದು ಘೋಷಿಸಲಾಗಿದೆ. ಸಾಗರಮಾಲಾ ಯೋಜನೆಯಲ್ಲಿ ಮಂಜೂರಾಗಿರುವ ಈ 60 ಕಿ.ಮೀ ಉದ್ದದ ರಸ್ತೆ ಯೋಜನಾ ವೆಚ್ಚ ಬರೋಬ್ಬರಿ 360.60 ಕೋಟಿ ರೂಪಾಯಿಗಳು. ಈ ಕಾಮಗಾರಿ ಗುತ್ತಿಗೆ ಆರ್‌ಎನ್‌ಎಸ್ ಇನ್‌ಫ್ರಾಸ್ಟçಕ್ಚರ್ ಲಿಮಿಟೆಡ್ ಮತ್ತು ಗಾಯತ್ರಿ ಪ್ರಾಜೆಕ್ಟ್ ಲಿಮಿಟೆಡ್ ಕಂಪನಿ ಸಹಭಾಗಿತ್ವದಲ್ಲಿ ಪಡೆದುಕೊಂಡಿವೆ. ಯೋಜನೆಯ ವಿಸ್ತೃತ ವರದಿ(ಡಿಪಿಆರ್)ನಂತೆ ಈಗಿರುವ ರಸ್ತೆಯನ್ನು 11 ಮೀಟರ್‌ನಿಂದ 18 ಮೀಟರ್ ಅಗಲ ಮಾಡಲಾಗುತ್ತದೆ. ಈಗಿರುವ 11 ಸೇತುವೆಗಳನ್ನು ಪುನರ್ ನಿರ್ಮಿಸಲಾಗುತ್ತದೆ.
ಹಾಗೆ ನೊಡಿದರೆ ಈ ಅಗಲೀಕರಣ ಬಹುದಿನದ ಅಗತ್ಯವಾಗಿತ್ತು. ಆದರೆ ಇಲ್ಲಿಯ ಹೊಣೆಗೇಡಿ ಎಂಪಿ, ಎಮ್ಮೆಲ್ಲೆ, ಮಿನಿಸ್ಟರ್‌ಗಳು ಎಷ್ಟೆÃ ಸಾವು-ನೋವಾದರೂ, ಸರಕು ಸಾಗಾಣಿಕೆಗೆ ತೊಂದರೆಯಾದರೂ, ಅಭಿವೃದ್ಧಿ ವೇಗಕ್ಕೆ ಬ್ರೆÃಕ್ ಬಿದ್ದಿದ್ದರೂ ತಲೆಯೇ ಕೆಡಿಸಿಕೊಂಡಿರಲಿಲ್ಲ. ಆದರೆ ಸದ್ರಿ ಯೋಜನೆಯ ಪ್ರಸ್ತಾಪ ಹೊರೆ ಬೀಳುತ್ತಿದ್ದಂತೆಯೇ ಘಟ್ಟದ ಮೇಲಿನ ಪರಿಸರ ವ್ಯಾಧಿ ತಂಡ ಹುಸಿ ಹಸಿರು ಕಳಕಳಿ ಪ್ರದರ್ಶಿಸತೊಡಗಿದೆ. ಅನಂತ ಹೆಗಡೆ ಆಶೀಸರನ ಗ್ಯಾಂಗ್ ಪಶ್ಚಿಮ ಘಟ್ಟ ನಾಶವಾಗುತ್ತದೆ, ವನ್ಯ ಪ್ರಾಣಿಗಳಿಗೆ ಗಂಡಾಂತರ ಬರುತ್ತದೆ; ಗಿಡಮೂಲಿಕೆ ಸಂರಕ್ಷಿತ ದೇವಿಮನೆ ಘಟ್ಟ ಪ್ರದೇಶ ಧ್ವಂಸವಾಗಲಿದೆ ಎಂದೆಲ್ಲಾ ಬೊಬ್ಬೆ ಹೊಡೆಯುತ್ತಿದೆ. ಕಂಡ-ಕಂಡ ಅಧಿಕಾರಿಗಳಿಗೆಲ್ಲಾ ಮನವಿ ಕೊಟ್ಟು ಉದ್ದುದ್ದ ಬೋಗಸ್ ಭಾಷಣ ಬಿಗಿಯುತ್ತಿದ್ದಾರೆ.
ಆದರೆ ವಾಸ್ತವ ಇವರೇಳುವಷ್ಟು ಭೀಭತ್ಸವಾಗೇನೂ ಇಲ್ಲ. ದೇವಿಮನೆಯ ಔಷಧಿ ಮೂಲಿಕೆಗಳ ಸಂರಕ್ಷಿತ ಪ್ರದೇಶ ರಸ್ತೆಯಿಂದ ತುಂಬ ದೂರದಲ್ಲಿದೆ. ಇಲ್ಲಿಯ ಔಷಧಿ ಮೂಲಿಕೆಗಳ ವಾಸ್ತವ ಸ್ಥಿತಿ ಅರಣ್ಯ ಇಲಾಖೆಗೂ ಗೊತ್ತಿಲ್ಲ. ಪರಿಸರ ವ್ಯಾಧಿಗಳು ಮಾತ್ರ ಅಮೂಲ್ಯ ಗಿಡಮೂಲಿಕೆಯಿದೆ ಎಂದು ಬೊಂಬಡಾ ಬಜಾಯಿಸುತ್ತಿದ್ದಾರೆ. ಸ್ವಾತಂತ್ರö್ಯ ನಂತರ ಶಿರಸಿ-ಕುಮಟಾ ರಸ್ತೆ ನಿರ್ಮಾಣವಾಗಿದೆ. ಆಗಾಗ ರಸ್ತೆ ಅಗಲೀಕರಣವೂ ಆಗಿದೆ. ಇದರಿಂದ ಗುಡ್ಡಗಳ ಕುಸಿತವಾಗಲಿ, ಹತ್ತಿರದ ಗ್ರಾಮಗಳಿಗೆ ಅನಾಹುತವಾಗಲಿ ಆಗಿದ್ದಿಲ್ಲ; ರಸ್ತೆ ಅಗಲೀಕರಣದಿಂದ ವನ್ಯಜೀವಿಗಳ ಓಡಾಟಕ್ಕೆ ಕಷ್ಟವಾಗಲಿದೆ ಎಂಬುದೇ ಹಾಸ್ಯಾಸ್ಪದ. ಈಗಾಗಲೇ ಇಲ್ಲಿ ರಸ್ತೆಯಿದೆ. ಹಗಲೂ-ಇರುಳು ವಾಹನ ಓಡಾಟವಿದೆ. ಪ್ರಾಣಿಗಳಿಗೆ ತೊಂದರೆಯೇನಾಗಿಲ್ಲ. ದೇವಿಮನೆ ಘಟ್ಟ-ಕಣಿವೆಯಲ್ಲಿ ವಿದ್ಯುತ್ ಮಾರ್ಗದ ಕಾರಿಡಾರ್ ಕೂಡ ಇದೆ. ಇದರಿಂದ ಪರಿಸರಕ್ಕೆ ಹಾನಿಯೇನಾಗಿಲ್ಲ. ಅಷ್ಟಕ್ಕೂ ಕಡಿಯುವುದು ರಸ್ತೆ ಅಂಚಿನ ಸ್ವಲ್ಪ ಕಾಡಷ್ಟೆÃ! ಹೆದ್ದಾರಿ ನಿರ್ಮಾಣದ ನಂತರ ಅಕ್ಕ-ಪಕ್ಕದಲ್ಲಿ ಮರ ಬೆಳೆಸಲು ಅವಕಾಶ ಇದ್ದೆÃಯಿದೆ.
ಮೂರು ದಶಕದಿಂದ ಹಾವೇರಿ-ಕುಮಟಾ-ತಡಸ-ಕುಮಟಾ ರಸ್ತೆ ಮೇಲ್ದರ್ಜೆಗೇರಿಸುವ ಬೇಡಿಕೆ ವಾಣಿಜ್ಯೊÃದ್ಯಮಿಗಳು, ಜನಸಾಮಾನ್ಯರು ಮಂಡಿಸುತ್ತಾ ಬಂದಿದ್ದರು. ಈ ರಸ್ತೆ ಅಗಲೀಕರಣ ಜಿಲ್ಲೆಯ ಅಭಿವೃದ್ಧಿಗೆ ಹೆಬ್ಬಾಗಿಲು. ಜಿಲ್ಲೆಯ ಬಂದರುಗಳ ಅಭಿವೃದ್ಧಿ ಇದರಿಂದಾಗುತ್ತದೆ. ಹುಬ್ಬಳ್ಳಿ-ಹಾವೇರಿ-ದಾವಣಗೆರೆ ಮುಂತಾದೆಡೆಯಿಂದ ಕರಾವಳಿಗೆ ಉತ್ಪಾದಿತ ವಸ್ತುಗಳ ರಫ್ತಿಗೆ ಉತ್ತೆÃಜನ ಸಿಗುತ್ತದೆ. ಜಿಲ್ಲೆಯ ಪ್ರವಾಸೋದ್ಯಮ, ಸ್ಕೊಬಾ ಡ್ರೆöÊವಿಂಗ್‌ಗೆ ಈ ಹೆದ್ದಾರಿ ಪೂರಕÀವಾಗುತ್ತದೆ. ಕಡಿಮೆ ಅವಧಿಯಲ್ಲಿ ಸುರಕ್ಷಿತ ಪ್ರಯಾಣ ಮಾಡಬಹುದು. ಈಗಿನದು ಯಮಯಾತನೆಯ ಪ್ರವಾಸ!! ರಸ್ತೆ ಅಗಲಿಕರಣ ಉದ್ಯಮಿಗಳಗಷ್ಟೆÃ ಅಲ್ಲ. ಶಿಕ್ಷಣ, ಆರೋಗ್ಯ, ಮತ್ತಿತರ ಕಾರಣಕ್ಕೆ ಕರಾವಳಿಯತ್ತ ಹೋಗುವವರಿಗೆ ಮತ್ತು ಕರಾವಳಿಯಿಂದ ಬಯಲು ಸೀಮೆಗೆ ಹೋಗುವವರಿಗೂ ವರದಾನವೇ ಸರಿ.
ರಸ್ತೆಗಳನ್ನು ಮೇಲ್ದರ್ಜೆಗೆ ಏರಿಸಲು ತುಲನಾತ್ಮಕವಾಗಿ ಕಡಿಮೆ ಬಂಡವಾಳ ಸಾಕು. ಯಲ್ಲಾಪುರ-ಶಿರಸಿ-ಸಿದ್ಧಾಪುರ-ಮುಂಡಗೋಡ ತಾಲ್ಲೂಕುಗಳು ರೈಲು ಮಾರ್ಗ ಕಾಣುವುದು ಅನುಮಾನ ಎಂದು ಹೊಣೆಗೇಡಿ ಸಂಸದ ಕಮ್ ಕೇಂದ್ರ ಮಂತ್ರಿ ಅನಂತ್ಮಾಣಿಯೇ ಬಡಬಡಿಸುತ್ತಿದ್ದಾನೆ. ಹೀಗಿರುವಾಗ ರಾಷ್ಟಿçÃಯ ಹೆದ್ದಾರಿಯಾಗಿ ರಸ್ತೆ ಅಗಲೀಕರಣವೂ ಬೇಡವೆಂದರೆ ಹೇಗೆ? ಸ್ವಾರ್ಥಕ್ಕಾಗಿ ಪರಿಸರ ಸಂರಕ್ಷಣೆ ಪ್ರಹಸನ ಮಾಡುತ್ತಿರುವ ಹುಸಿ ಪರಿಸರವಾದಿಗಳಿಗೆ ಜನರೀಗ ಉಗಿಯುತ್ತಿದ್ದಾರೆ. ಉತ್ತರ ಕನ್ನಡಿಗರು ಈ ಛಲವನ್ನು ದಶಕದ ಹಿಂದೆಯೇ ತೋರಿಸಬೇಕಿತ್ತು. ಸೋಗಲಾಡಿ ಪರಿಸರ ಪರಾಕ್ರಮಿಗಳ ಬಂಡಲ್ ಭಾಷಣ, ಅಂಕಣ, ಮಾನವ ಸರಪಳಿಗಳಿಗೆ ಜಿಲ್ಲೆಯ ಮುಗ್ಧ ಜನ ಸಿಲುಕಿದ್ದರಿಂದಲೇ ಅಭಿವೃದ್ಧಿ ಕಾಣದಂತಾಯ್ತು. ಪರಿಸರವಾದಿಗಳ ಕಿರಿಕಿರಿಯೊಂದಿಲ್ಲದಿದ್ದರೆ ಎಂದೋ ಜಿಲ್ಲೆಗೆ ರೈಲು-ಸುಸಜ್ಜಿತ ರಸ್ತೆ, ಬಂದರು, ಬೃಹತ್ ಉದ್ಯಮ ಬರುತ್ತಿತ್ತು. ವಿದ್ಯೆ, ಉದ್ಯೊಗ, ವ್ಯವಹಾರಕ್ಕೆ ಗುಳೇ ಹೋಗುವುದು ತಪ್ಪುತ್ತಿತ್ತು. ಉತ್ತರ ಕನ್ನಡ ಪಕ್ಕದ ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡದಂತೆ ಪ್ರಗತಿ ಕಾಣುತ್ತಿತ್ತು.
ಈಗ ಜನರಿಗೆ ಪರಿಸರ ವ್ಯಾಧಿಗಳ ಬಣ್ಣ ಗೊತ್ತಾಗಿದೆ. ತದಡಿ ಬಂದರು ಬೇಕೆಂದು ಪರಿಸರವಾದಿಗಳಿಗೆ ತಿರುಗಿ ಬಿದ್ದಿದ್ದ ಜನರೀಗ ಕುಮಟಾ-ಹಾವೇರಿ ರಸ್ತೆ ಅಗಲೀಕರಣದ ಪರವಿದ್ದಾರೆ. ಇನ್ನಾದರೂ ಪರಿಸರವಾದಿಗಳು ದ್ರೊÃಹದ ಆಟ ನಿಲ್ಲಿಸುವರಾ?
– ಶುದ್ಧೊಧನ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...