Homeರಾಜಕೀಯಶಿವಮೊಗ್ಗದಲ್ಲಿ ಬಿಜೆಪಿಗೆ ಸಿಗುತ್ತಿದೆ ಬ್ರೀತಿಂಗ್ ಸ್ಪೇಸ್

ಶಿವಮೊಗ್ಗದಲ್ಲಿ ಬಿಜೆಪಿಗೆ ಸಿಗುತ್ತಿದೆ ಬ್ರೀತಿಂಗ್ ಸ್ಪೇಸ್

- Advertisement -
- Advertisement -
  • ಈಶ್ವರ್ |

ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಗೆ ಮತದಾರ ಕೊಂಚ ಉಸಿರಾಡುವಷ್ಟು ಅವಕಾಶ ನೀಡುವ ಸಾಧ್ಯತೆ ಕಾಣಿಸುತ್ತಿದೆ. ಯಡ್ಡಿ-ಈಶು ಗ್ಯಾಂಗಿನ ಪರಸ್ಪರ ಜಗಳದ ನಡುವೆ ಬಿಜೆಪಿಯನ್ನು ಬಚಾವು ಮಾಡಲು ಆರೆಸ್ಸೆಸ್ ಧಾವಿಸಿದೆ. ಬಡಾಯಿ ಭಾಷಣದ ನರೇಂದ್ರ ಮೋದಿ ಬಂದು ಹೋದಮೇಲೆ ಶಿವಮೊಗ್ಗ ಬಿಜೆಪಿಯಲ್ಲಿ ಸಂಚಲನ ಕಂಡುಬರುತ್ತಿದೆ.
ಮುಖ್ಯವಾಗಿ ಸಾಗರ, ಶಿವಮೊಗ್ಗ ಗ್ರಾಮಾಂತರ ಹಾಗು ಸೊರಬ ಕ್ಷೇತ್ರಗಳಲ್ಲಿ ಬಿಜೆಪಿ ಹೀನಾಯವಾಗಿ ಸೋಲಲಿದೆ ಎಂಬ ವಾತಾವರಣ ಬದಲಾಗಿದೆ.

ಸಾಗರದಲ್ಲಿ ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಸೇರಿದ ಮೇಲೆ ಕಾಗೋಡು ತಿಮ್ಮಪ್ಪರ ಗೆಲುವು ನಿಚ್ಚಳವಾಯಿತು ಎಂಬ ವಾತಾವರಣವಿತ್ತು. ಆದರೆ ಚುನಾವಣೆ 4 ದಿನವಿರುವಾಗ ಗುಪ್ತಚರ ಇಲಾಖೆ ನೀಡುತ್ತಿರುವ ವರದಿ ಹೇಳುವಂತೆ ಹಾಲಪ್ಪಗಿಂತ ಕಾಗೋಡು ಕೇವಲ 5 ಸಾವಿರ ಮತಗಳಷ್ಟು ಮುನ್ನಡೆಯಲ್ಲಿದ್ದಾರೆ. ಇದು ಮತದಾನದ ಹೊತ್ತಿಗೆ ಬದಲಾಗಬಹುದು. 40 ಸಾವಿರ ಮತಗಳ ಅಂತರದಿಂದ ಗೆದ್ದಿದ್ದ ಕಾಗೋಡು ಬೆಂಬಲಕ್ಕೆ 23 ಸಾವಿರ ಮತ ಪಡೆದು ಸೋತಿದ್ದ ಬೇಳೂರು ಇರುವಾಗಲೂ ಸಾಗರದಲ್ಲಿ ಹರತಾಳ ಹಾಲಪ್ಪ ಎಲ್ಲರ ನಿರೀಕ್ಷೆ ಮೀರಿ ಮತ ಪಡೆಯುವತ್ತ ಮುಂದೆ ಸಾಗಿದ್ದಾರೆ. ಸ್ವರಾಜ್ ಇಂಡಿಯಾದ ಅಭ್ಯರ್ಥಿ ದೂಗೂರು ಪರಮೇಶ್ವರ್ ಕೂಡ ಕಾಂಗ್ರೆಸ್ ಮತಗಳಿಗೆ ಲಗ್ಗೆ ಹಾಕುತ್ತಿರೋದು ಕೈಗೆ ನುಂಗಲಾರದ ತುತ್ತು.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಅಶೋಕ ನಾಯ್ಕ ವಿರುದ್ಧ ಬಿಜೆಪಿಯಲ್ಲೇ ಭಾರೀ ವಿರೋಧವಿತ್ತು. ಲಿಂಗಾಯತರು ಸಿಟ್ಟು ಮಾಡಿಕೊಂಡಿದ್ದರು. ಯಡಿಯೂರಪ್ಪ ಸುತ್ತಾಟ ಆರಂಭಿಸಿದ ನಂತರ ಅಶೋಕನಾಯ್ಕನ ಕುದುರೆ ಕುಂಟುವುದನ್ನು ಬಿಟ್ಟು ಓಡ ತೊಡಗಿತು. ಗೆಲ್ಲಬೇಕಾದ ಜೆಡಿಎಸ್‍ನ ಶಾರದ ಪೂರ್ಯನಾಯ್ಕ ಏದುಸಿರು ಬಿಡತೊಡಗಿದ್ದಾರೆ. ಕಾಂಗ್ರೆಸ್‍ನ ಡಾ.ಶ್ರೀನಿವಾಸ್ ಡಮ್ಮಿಯಾಗುವ ಸಾಧ್ಯತೆಯೇ ಹೆಚ್ಚು.

ಸೊರಬದಲ್ಲೂ ಇದೇ ಕತೆ. ಜೆಡಿಎಸ್‍ನ ಮಧು ಬಂಗಾರಪ್ಪರೆದುರು ಅವರ ಸೋದರ ಬಿಜೆಪಿಯ ಕುಮಾರ ಬಂಗಾರಪ್ಪ ಡಮ್ಮಿಯಾಗಿ ಹೋಗುವ ವಾತಾವರಣವಿತ್ತು. ಆದರಿಲ್ಲಿ ಯಡ್ಡಿ ಮ್ಯಾಜಿಕ್ ನಡೆಯತೊಡಗಿದೆ. ಸೋದರರ ನಡುವೆ ನೇರ ಹಣಾಹಣಿ ಇದೆ. ಕುಮಾರ ಬಂಗಾರಪ್ಪ ನಿರೀಕ್ಷೆಗಿಂತ ಹೆಚ್ಚು ಮತ ಪಡೆವ ಸಾಧ್ಯತೆ ನಿಚ್ಚಳವಾಗತೊಡಗಿದೆ. ಅಂದರೆ ಗೆಲುವಿನ ಸಾಧಯತೆಯೇ ಇಲ್ಲವೆಂದು ಭಾವಿಸಲಾಗಿದ್ದ ಸೊರಬ, ಸಾಗರ ಮತ್ತು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಗಳಲ್ಲಿ ಯಡ್ಡಿಯ ಛಾಯೆ ಸ್ಪಷ್ಟವಾಗಿ ಗೋಚರವಾಗ ತೊಡಗಿದ್ದು ಬಿಜೆಪಿ ಗೆಲುವಿನ ಆಶಾವಾದ ಮೂಡತೊಡಗಿದೆ.
ಶಿಕಾರಿಪುರದಲ್ಲಿ ಯಡಿಯೂರಪ್ಪರ ಲೀಡ್ ಕಡಿಮೆಯಾಗಲಿದೆ. ಭದ್ರಾವತಿಯಲ್ಲಿ ಕಾಂಗ್ರೆಸ್‍ನ ಸಂಗಮೇಶ್ ಗೆಲ್ಲುವ ಸಾಧ್ಯತೆ ನಿಚ್ಚಳವಾಗಿದೆ. ತೀರ್ಥಹಳ್ಳಿಯಲ್ಲಿ ಬಿಜೆಪಿಯ ಆರಗ ಜ್ಞಾನೇಂದ್ರ ಈ ಬಾರಿಯೂ 3ನೇ ಸ್ಥಾನ ಪಡೆಯುವ ಸಾಧ್ಯತೆ ಇದ್ದು ಕಾಂಗ್ರೆಸ್‍ನ ಕಿಮ್ಮನೆ ರತ್ನಾಕರ್, ಜೆಡಿಎಸ್‍ನ ಆರ್.ಎಂ. ಮಂಜುನಾಥ್ ಗೌಡರ ನಡುವೆ ನೇರ ಹಣಾಹಣಿ ಇದೆ.

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಈಶ್ವರಪ್ಪ ದುಡ್ಡಿನ ಹೊಳೆ ಹರಿಸುತ್ತಿದ್ದಾರಾದರೂ ಅವರ ಸೋಲು ಕಟ್ಟಿಟ್ಟ ಬುತ್ತಿ. ಚುನಾವಣಾ ತಂತ್ರ ಗೊತ್ತಿಲ್ಲದ ಜೆಡಿಎಸ್‍ನ ನಿರಂಜನ್ ಡಮ್ಮಿಯಾಗುತ್ತಾರೆ ಅಂತ ಭಾವಿಸಿದವರು ಅಚ್ಚರಿ ಪಡುವಷ್ಟು ಸ್ಪರ್ಧೆ ಗಟ್ಟಿಗೊಳ್ಳತೊಡಗಿದೆ. ಕಾಂಗ್ರೆಸ್‍ನ ಪ್ರಸನ್ನಕುಮಾರ್ ಗೆಲುವು ನಿಶ್ಚಿತವಾಗಿದೆ.

ಹೀಗೆ ಭದ್ರಾವತಿ, ತೀರ್ಥಹಳ್ಳಿ, ಶಿವಮೊಗ್ಗದಲ್ಲಿ ಕಾಂಗ್ರೆಸ್ ಗೆಲ್ಲುವ ಎಲ್ಲಾ ಸಾಧ್ಯತೆ ಇದ್ದು, ಶಿಕಾರಿಪುರದಲ್ಲಿ ಯಡಿಯೂರಪ್ಪ ಗೆಲ್ಲಲಿದ್ದಾರೆ. ಉಳಿದಂತೆ ಸೊರಬ, ಸಾಗರ, ಶಿವಮೊಗ್ಗ ಗ್ರಾಮಾಂತರದಲ್ಲಿ ಬಿಜೆಪಿ ಪ್ರಬಲ ಸ್ಪರ್ಧೆ ಒಡ್ಡಲಿದೆ. ಮಧು, ಕಾಗೋಡು ಹಾಗು ಶಾರದ ಪೂರ್ಯ ನಾಯ್ಕರ ಭವಿಷ್ಯ ಡೋಲಾಯಮಾನವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...