Homeರಾಜಕೀಯಶಿವಮೊಗ್ಗದಲ್ಲಿ ಬಿಜೆಪಿಗೆ ಸಿಗುತ್ತಿದೆ ಬ್ರೀತಿಂಗ್ ಸ್ಪೇಸ್

ಶಿವಮೊಗ್ಗದಲ್ಲಿ ಬಿಜೆಪಿಗೆ ಸಿಗುತ್ತಿದೆ ಬ್ರೀತಿಂಗ್ ಸ್ಪೇಸ್

- Advertisement -
- Advertisement -
  • ಈಶ್ವರ್ |

ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಗೆ ಮತದಾರ ಕೊಂಚ ಉಸಿರಾಡುವಷ್ಟು ಅವಕಾಶ ನೀಡುವ ಸಾಧ್ಯತೆ ಕಾಣಿಸುತ್ತಿದೆ. ಯಡ್ಡಿ-ಈಶು ಗ್ಯಾಂಗಿನ ಪರಸ್ಪರ ಜಗಳದ ನಡುವೆ ಬಿಜೆಪಿಯನ್ನು ಬಚಾವು ಮಾಡಲು ಆರೆಸ್ಸೆಸ್ ಧಾವಿಸಿದೆ. ಬಡಾಯಿ ಭಾಷಣದ ನರೇಂದ್ರ ಮೋದಿ ಬಂದು ಹೋದಮೇಲೆ ಶಿವಮೊಗ್ಗ ಬಿಜೆಪಿಯಲ್ಲಿ ಸಂಚಲನ ಕಂಡುಬರುತ್ತಿದೆ.
ಮುಖ್ಯವಾಗಿ ಸಾಗರ, ಶಿವಮೊಗ್ಗ ಗ್ರಾಮಾಂತರ ಹಾಗು ಸೊರಬ ಕ್ಷೇತ್ರಗಳಲ್ಲಿ ಬಿಜೆಪಿ ಹೀನಾಯವಾಗಿ ಸೋಲಲಿದೆ ಎಂಬ ವಾತಾವರಣ ಬದಲಾಗಿದೆ.

ಸಾಗರದಲ್ಲಿ ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಸೇರಿದ ಮೇಲೆ ಕಾಗೋಡು ತಿಮ್ಮಪ್ಪರ ಗೆಲುವು ನಿಚ್ಚಳವಾಯಿತು ಎಂಬ ವಾತಾವರಣವಿತ್ತು. ಆದರೆ ಚುನಾವಣೆ 4 ದಿನವಿರುವಾಗ ಗುಪ್ತಚರ ಇಲಾಖೆ ನೀಡುತ್ತಿರುವ ವರದಿ ಹೇಳುವಂತೆ ಹಾಲಪ್ಪಗಿಂತ ಕಾಗೋಡು ಕೇವಲ 5 ಸಾವಿರ ಮತಗಳಷ್ಟು ಮುನ್ನಡೆಯಲ್ಲಿದ್ದಾರೆ. ಇದು ಮತದಾನದ ಹೊತ್ತಿಗೆ ಬದಲಾಗಬಹುದು. 40 ಸಾವಿರ ಮತಗಳ ಅಂತರದಿಂದ ಗೆದ್ದಿದ್ದ ಕಾಗೋಡು ಬೆಂಬಲಕ್ಕೆ 23 ಸಾವಿರ ಮತ ಪಡೆದು ಸೋತಿದ್ದ ಬೇಳೂರು ಇರುವಾಗಲೂ ಸಾಗರದಲ್ಲಿ ಹರತಾಳ ಹಾಲಪ್ಪ ಎಲ್ಲರ ನಿರೀಕ್ಷೆ ಮೀರಿ ಮತ ಪಡೆಯುವತ್ತ ಮುಂದೆ ಸಾಗಿದ್ದಾರೆ. ಸ್ವರಾಜ್ ಇಂಡಿಯಾದ ಅಭ್ಯರ್ಥಿ ದೂಗೂರು ಪರಮೇಶ್ವರ್ ಕೂಡ ಕಾಂಗ್ರೆಸ್ ಮತಗಳಿಗೆ ಲಗ್ಗೆ ಹಾಕುತ್ತಿರೋದು ಕೈಗೆ ನುಂಗಲಾರದ ತುತ್ತು.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಅಶೋಕ ನಾಯ್ಕ ವಿರುದ್ಧ ಬಿಜೆಪಿಯಲ್ಲೇ ಭಾರೀ ವಿರೋಧವಿತ್ತು. ಲಿಂಗಾಯತರು ಸಿಟ್ಟು ಮಾಡಿಕೊಂಡಿದ್ದರು. ಯಡಿಯೂರಪ್ಪ ಸುತ್ತಾಟ ಆರಂಭಿಸಿದ ನಂತರ ಅಶೋಕನಾಯ್ಕನ ಕುದುರೆ ಕುಂಟುವುದನ್ನು ಬಿಟ್ಟು ಓಡ ತೊಡಗಿತು. ಗೆಲ್ಲಬೇಕಾದ ಜೆಡಿಎಸ್‍ನ ಶಾರದ ಪೂರ್ಯನಾಯ್ಕ ಏದುಸಿರು ಬಿಡತೊಡಗಿದ್ದಾರೆ. ಕಾಂಗ್ರೆಸ್‍ನ ಡಾ.ಶ್ರೀನಿವಾಸ್ ಡಮ್ಮಿಯಾಗುವ ಸಾಧ್ಯತೆಯೇ ಹೆಚ್ಚು.

ಸೊರಬದಲ್ಲೂ ಇದೇ ಕತೆ. ಜೆಡಿಎಸ್‍ನ ಮಧು ಬಂಗಾರಪ್ಪರೆದುರು ಅವರ ಸೋದರ ಬಿಜೆಪಿಯ ಕುಮಾರ ಬಂಗಾರಪ್ಪ ಡಮ್ಮಿಯಾಗಿ ಹೋಗುವ ವಾತಾವರಣವಿತ್ತು. ಆದರಿಲ್ಲಿ ಯಡ್ಡಿ ಮ್ಯಾಜಿಕ್ ನಡೆಯತೊಡಗಿದೆ. ಸೋದರರ ನಡುವೆ ನೇರ ಹಣಾಹಣಿ ಇದೆ. ಕುಮಾರ ಬಂಗಾರಪ್ಪ ನಿರೀಕ್ಷೆಗಿಂತ ಹೆಚ್ಚು ಮತ ಪಡೆವ ಸಾಧ್ಯತೆ ನಿಚ್ಚಳವಾಗತೊಡಗಿದೆ. ಅಂದರೆ ಗೆಲುವಿನ ಸಾಧಯತೆಯೇ ಇಲ್ಲವೆಂದು ಭಾವಿಸಲಾಗಿದ್ದ ಸೊರಬ, ಸಾಗರ ಮತ್ತು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಗಳಲ್ಲಿ ಯಡ್ಡಿಯ ಛಾಯೆ ಸ್ಪಷ್ಟವಾಗಿ ಗೋಚರವಾಗ ತೊಡಗಿದ್ದು ಬಿಜೆಪಿ ಗೆಲುವಿನ ಆಶಾವಾದ ಮೂಡತೊಡಗಿದೆ.
ಶಿಕಾರಿಪುರದಲ್ಲಿ ಯಡಿಯೂರಪ್ಪರ ಲೀಡ್ ಕಡಿಮೆಯಾಗಲಿದೆ. ಭದ್ರಾವತಿಯಲ್ಲಿ ಕಾಂಗ್ರೆಸ್‍ನ ಸಂಗಮೇಶ್ ಗೆಲ್ಲುವ ಸಾಧ್ಯತೆ ನಿಚ್ಚಳವಾಗಿದೆ. ತೀರ್ಥಹಳ್ಳಿಯಲ್ಲಿ ಬಿಜೆಪಿಯ ಆರಗ ಜ್ಞಾನೇಂದ್ರ ಈ ಬಾರಿಯೂ 3ನೇ ಸ್ಥಾನ ಪಡೆಯುವ ಸಾಧ್ಯತೆ ಇದ್ದು ಕಾಂಗ್ರೆಸ್‍ನ ಕಿಮ್ಮನೆ ರತ್ನಾಕರ್, ಜೆಡಿಎಸ್‍ನ ಆರ್.ಎಂ. ಮಂಜುನಾಥ್ ಗೌಡರ ನಡುವೆ ನೇರ ಹಣಾಹಣಿ ಇದೆ.

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಈಶ್ವರಪ್ಪ ದುಡ್ಡಿನ ಹೊಳೆ ಹರಿಸುತ್ತಿದ್ದಾರಾದರೂ ಅವರ ಸೋಲು ಕಟ್ಟಿಟ್ಟ ಬುತ್ತಿ. ಚುನಾವಣಾ ತಂತ್ರ ಗೊತ್ತಿಲ್ಲದ ಜೆಡಿಎಸ್‍ನ ನಿರಂಜನ್ ಡಮ್ಮಿಯಾಗುತ್ತಾರೆ ಅಂತ ಭಾವಿಸಿದವರು ಅಚ್ಚರಿ ಪಡುವಷ್ಟು ಸ್ಪರ್ಧೆ ಗಟ್ಟಿಗೊಳ್ಳತೊಡಗಿದೆ. ಕಾಂಗ್ರೆಸ್‍ನ ಪ್ರಸನ್ನಕುಮಾರ್ ಗೆಲುವು ನಿಶ್ಚಿತವಾಗಿದೆ.

ಹೀಗೆ ಭದ್ರಾವತಿ, ತೀರ್ಥಹಳ್ಳಿ, ಶಿವಮೊಗ್ಗದಲ್ಲಿ ಕಾಂಗ್ರೆಸ್ ಗೆಲ್ಲುವ ಎಲ್ಲಾ ಸಾಧ್ಯತೆ ಇದ್ದು, ಶಿಕಾರಿಪುರದಲ್ಲಿ ಯಡಿಯೂರಪ್ಪ ಗೆಲ್ಲಲಿದ್ದಾರೆ. ಉಳಿದಂತೆ ಸೊರಬ, ಸಾಗರ, ಶಿವಮೊಗ್ಗ ಗ್ರಾಮಾಂತರದಲ್ಲಿ ಬಿಜೆಪಿ ಪ್ರಬಲ ಸ್ಪರ್ಧೆ ಒಡ್ಡಲಿದೆ. ಮಧು, ಕಾಗೋಡು ಹಾಗು ಶಾರದ ಪೂರ್ಯ ನಾಯ್ಕರ ಭವಿಷ್ಯ ಡೋಲಾಯಮಾನವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...