Homeಕರ್ನಾಟಕಹೆಬ್ಬಾರ್ ಹಿಕಮತ್ತಿನ ಹಕೀಕತ್!!

ಹೆಬ್ಬಾರ್ ಹಿಕಮತ್ತಿನ ಹಕೀಕತ್!!

- Advertisement -
- Advertisement -

| ನಹುಷ |

ಉತ್ತರ ಕನ್ನಡದ ರಾಜಕಾರಣದ ರಂಗು ಬದಲಾಗುತ್ತಿದೆ. ಕಾರಣವಿಷ್ಟೆ ಆಪರೇಷನ್ ಕಮಲಕ್ಕೆ ಬಿಕರಿಗೊಂಡು ರಾಜೀನಾಮೆ ಕೊಟ್ಟಿರುವ ಯಲ್ಲಾಪುರ-ಮುಂಡಗೋಡ ಶಾಸಕ ಶಿವರಾಮ ಹೆಬ್ಬಾರ್ ಒಬ್ಬರೇ ಅಲ್ಲದೆ ಮಿನಿಸ್ಟರ್ ಆರ್.ವಿ.ದೇಶ್‍ಪಾಂಡೆಯೂ ಬಿಜೆಪಿ ಸೆಳೆತಕ್ಕೆ ಸಿಲುಕಿದ್ದಾರೆಂಬ ಸುದ್ದಿ ದೊಡ್ಡ ಚರ್ಚೆಗೀಡಾಗಿ ಹೋಗಿದೆ. ಮಜಾ ಎಂದರೆ, ಕಾಂಗ್ರೆಸಲ್ಲಿದ್ದರೆ ತನ್ನ ಆಸೆಗೆಲ್ಲ ದೇಶಪಾಂಡೆ ಕಲ್ಲು ಹಾಕುತ್ತಾರೆಂಬ ಸಿಟ್ಟಿಂದ ಬಿಜೆಪಿ ಪಾಳೆಯಕ್ಕೆ ಎಂಟ್ರಿ ಹೊಡೆದಿದ್ದ ಹೆಬ್ಬಾರ್ ಅದೇ ಹಿತಶತ್ರು ದೇಶಪಾಂಡೆ ತನ್ನ ಬೆನ್ನಟ್ಟಿ ಬರುತ್ತಿರುವುದು ಕೇಳಿ ಬೆಚ್ಚಿಬಿದ್ದಿದ್ದಾರೆ!!

ಕಾಂಗ್ರೆಸ್‍ನಿಂದಲೇ ಸ್ಪರ್ಧಿಸಿ ಏದುಸಿರು ಬಿಡುತ್ತಲೇ ಗೆಲ್ಲುತ್ತಿದ್ದಂತೆಯೇ ಹೆಬ್ಬಾರ್, ದೇಶಪಾಂಡೆಗೆ ಸೆಡ್ಡು ಹೊಡೆದು ಮಂತ್ರಿಗಿರಿಗೆ ಲಾಬಿ ಮಾಡಿದರು. ಮತ್ತೊಂದೆಡೆ ಬಿಜೆಪಿಯವರಿಂದ ಆಪರೇಷನ್ ಮಾಡಿಸಿಕೊಳ್ಳಲು ಪ್ರಯತ್ನಿಸಿದರು. ಯಡ್ಡಿ ಮಗ ಹೆಬ್ಬಾರ್ ಹೆಂಡತಿಯೊಂದಿಗೆ ಲೇವಾದೇವಿ ವ್ಯವಹಾರಕ್ಕಿಳಿದ ಆಡಿಯೋ ಕೂಡ ಆಗ ಹೊರಬಂದಿತ್ತು. ಹೆಬ್ಬಾರ್ ಪರಿವಾರ ಮಾನ ಹರಾಜಾದರೂ ಇದೇ ಸಾಹಸ ಎಂಬಂತೆ ಬೀಗಿದರು. ಮಂತ್ರಿಗಿರಿಗಾಗಿ ಕಾಂಗ್ರೆಸ್ ಹೈಕಮಾಂಡನ್ನು ಬ್ಲಾಕ್‍ಮೇಲ್ ಮಾಡುತ್ತಲೇ ಇದ್ದರು. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷತೆ ಕೊಟ್ಟರೂ ಬೇಡವೆನ್ನಲಿಲ್ಲ ಈ ಆಸೆಬುರುಕ!!

ಕೇವಲ ಒಂದು ಸಾವಿರದ ನಾಲ್ಕುನೂರು ಮತಗಳಂತರದಿಂದ ಬಚಾವಾಗಿರುವ ಹೆಬ್ಬಾರ್‍ಗೆ ಮತ್ತೆ ಅದೇ ಕಾಂಗ್ರೆಸ್‍ನಿಂದ ಗೆಲ್ಲುತ್ತೇನೆಂಬ ಧೈರ್ಯ ಉಳಿದಿಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಬಳ್ಳಾರಿಯ ಕಬ್ಬಿಣದ ಅದಿರು ಕದ್ದು ವಿದೇಶಕ್ಕೆ ರಪ್ತು ಮಾಡಿದ ಕೇಸಲ್ಲಿ ಸಿಬಿಐ ವಿಚಾರಣೆ ಎದುರಿಸುತ್ತಿರುವ ಹೆಬ್ಬಾರ್ ಹಾಗೂ ಆತನ ಕುಲೋದ್ಧಾರಕ ವಿವೇಕ್ ಹೆಬ್ಬಾರ್ ಆ ಕುಣಿಕೆಯಿಂದ ಪಾರಾಗಲು ಬಲಾಢ್ಯ ಬಿಜೆಪಿ ಸೇರುವುದು ಅನಿವಾರ್ಯವಾಗಿದೆ. ಒಂದು ಕಾಲದಲ್ಲಿ ಪ್ರಾಥಮಿಕ ಶಿಕ್ಷಣವೂ ಮುಗಿಸಲಾಗದೆ ಲಾರಿ ಡ್ರೈವರಿಕೆ ಮಾಡಿಕೊಂಡಿದ್ದ ಹೆಬ್ಬಾರ್ ಇವತ್ತು ಕೋಟಿ-ಕೋಟಿ ತೂಗುವ ಅದಿರು ಉದ್ಯಮಿಯಾಗಿ, ರಾಜ್ಯ ಸರ್ಕಾರವನ್ನೇ ಉರುಳಿಸುವ ಪ್ರಭಲ ಶಾಸಕ ಸಾಹೇಬನಾಗಿ ಬೆಳೆದಿರುವುದು ಪ್ರಜಾಪ್ರಭುತ್ವದ ದುರಂತವೇ ಸರಿ!

ಹೆಬ್ಬಾರ್‍ಗೆ ಬಿಜೆಪಿ “ಸಂಸ್ಕೃತಿ” ಹೊಸತೇನೂ ಅಲ್ಲ. 1990ರ ದಶಕದ ಅಂತ್ಯದಲ್ಲಿ ಆತ ಜಿಲ್ಲಾ ಬಿಜೆಪಿ ಅಧ್ಯಕ್ಷತೆ ನಿಭಾಯಿಸಿದ್ದ. ಆದರೆ ಬಿಜೆಪಿಯಲ್ಲಿ ಆತನಿಗೆ ಕಾಗೇರಿ ಮಾಣಿ, ಅನಂತ್ಮಾಣಿ ಜತೆ ಏಗಲಾಗಲಿಲ್ಲ. ಸಂಸದ ಅನಂತ್ಮಾಣಿ ಶಿರಸಿಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲೇ ಈ ಹೆಬ್ಬಾರ್‍ಗೆ ಅಂದು ಕೆನ್‍ಕೆನ್ನೆಗೆ ಬಾರಿಸಿದ್ದ. ತಾನು ಬಿಜೆಪಿಯಲ್ಲಿನ್ನೂ ಬಚಾವಾಗಲಾರೆನೆಂದು ಅರಿತ ಹೆಬ್ಬಾರ್ ಕಾಂಗ್ರೆಸ್‍ನ ಪವರ್‍ಫುಲ್ ನಾಯಕಿಯಾಗಿದ್ದ ಮ್ಯಾಗಿಯ ಸೆರಗು ಹಿಡಿದು ಕಾಂಗ್ರೆಸ್‍ಗೆ ನುಸುಳಿದ್ದ. ಬಂದವನೇ ಡಬಲ್‍ಗೇಮ್ ಶುರುಹಚ್ಚಿಕೊಂಡಿದ್ದ. ಹಗಲು ಮ್ಯಾಗಿ ಬಿಡಾರದಲ್ಲಿದ್ದರೆ ರಾತ್ರಿ ದೇಶ್‍ಪಾಂಡೆ ಕ್ಯಾಂಪಿನಲ್ಲಿ ಕಾಣಿಸುತ್ತಿದ್ದ. ಇದರಿಂದ ಕೆರಳಿದ ದೇಶಪಾಂಡೆ ಆತನ ಬಾಲ ಕಟ್ ಮಾಡಲು ಮುಂದಾದರು. ಮ್ಯಾಗಿ ಕಾಂಗ್ರೆಸಲ್ಲಿ ಕಾವು ಕಳಕೊಳ್ಳುತ್ತಿದ್ದಂತೆಯೇ ಹೆಬ್ಬಾರ್ ದೇಶಪಾಂಡೆಗೆ ಆಹಾರವಾಗಿ ಹೋದ!!
ಕಳೆದ ಅಸೆಂಬ್ಲಿ ಇಲೆಕ್ಷನ್‍ನಲ್ಲಿ ಹೆಬ್ಬಾರ್ ಎದುರು ಬಿಜೆಪಿಯಿಂದ ಸ್ಪರ್ಧಿಸಿದ್ದ ವಿ.ಎಸ್.ಪಾಟೀಲ್ ತಲೆ ಕಂಡರೆ ಸಂಸದ ಮಾಣಿಗೆ ಆಗದು. ಹಾಗಾಗಿ ಆತ ಹಳೆ ವೈರತ್ವ ಮರೆತು ಸ್ವ-ಜಾತಿಯ ಹೆಬ್ಬಾರ್‍ಗೆ ಸಹಕರಿಸಿದ್ದ. ಈ ಹವ್ಯಕ ಹಿತಾಸಕ್ತಿಯ ರಾಜಕಾರಣದಲ್ಲಿ ಸ್ವರ್ಣವಲ್ಲಿ ಸ್ವಾಮಿಯ “ಮಂತ್ರಾಕ್ಷತೆ”ಯೂ ಕೆಲಸ ಮಾಡಿತ್ತು.

ರಾಮಕೃಷ್ಣ ಹೆಗಡೆ ಕಾಲದಿಂದ ನಿರಂತರವಾಗಿ ಒಂದಿಲ್ಲೊಂದು ಅಧಿಕಾರ ಅನುಭವಿಸುತ್ತಿರುವ ದೇಶಪಾಂಡೆ ಈಗ ಹಣ್ಣಾಗಿದ್ದಾರೆ. ಈ ಮುದಿ ಕಾಲದಲ್ಲಿ ಎರಡು ಆಸೆ ಆತನಲ್ಲಿದೆ. ಒಂದು ತಾನು ಮುಖ್ಯಮಂತ್ರಿ ಆಗಬೇಕೆಂಬುದು. ಮತ್ತೊಂದು, ತನ್ನ ಸುಪುತ್ರ ಪ್ರಶಾಂತನನ್ನು ಎಂಪಿ ಅಥವಾ ಎಮ್ಮೆಲ್ಲೆ ಮಾಡಬೇಕೆಂಬುದು. ಬಿಜೆಪಿ ಸೇರಿದರೆ ಸಿಎಂ ಆಗುವುದು ಕಷ್ಟ. ಹಾಗೆಯೇ ಕಾಂಗ್ರೆಸಲ್ಲುಳಿದರೆ ಮಗನ ಭವಿಷ್ಯಕ್ಕೆ ಮಾರಕ. ಹೀಗಾಗಿ ದೇಶಪಾಂಡೆ ಎರಡು ದೋಣಿಯ ಮೇಲೆ ಕಾಲಿಟ್ಟು ಹೊಯ್ದಾಡುತ್ತಿದ್ದಾರೆ. ಈಗೀಗ ಕಾಂಗ್ರೆಸಲ್ಲೂ ದೇಶಪಾಂಡೆಗೆ ಅಂಥ ಪ್ರಾಮುಖ್ಯತೆ ಸಿಗುತ್ತಿಲ್ಲ. ಆದರೂ ತಾನೇನಾದರೂ ರಾಜಿ ಅಭ್ಯರ್ಥಿಯಾಗಿ ಸಮ್ಮಿಶ್ರದ ಸಿಎಂ ಆಗಬಹುದೆಂಬ ಯೋಚನೆಯಿಂದ ದೇಶಪಾಂಡೆ ಗಡಿಬಿಡಿಗೆ ಬಿದ್ದಿದ್ದಾರೆ. ದೇವೇಗೌಡರ ಮನೆಗೆ ಹೋಗಿ ಗಂಟೆಗಟ್ಟಲೆ ಮಾತಾಡುತ್ತಿದ್ದಾರೆ. ಅತ್ತ ಕಾಂಗ್ರೆಸ್ ಹೈಕಮಾಂಡ್‍ಗೆ ತನ್ನನ್ನು ಸಿಎಂ ಕ್ಯಾಂಡಿಡೇಟ್ ಮಾಡಿದರೆ ಓಡಿಹೋಗಿರುವ ಶಾಸಕರಲ್ಲಿ ಕೆಲವರನ್ನಾದರೂ ಖರೀದಿಸಿ ತರುತ್ತೇನೆಂದು ಭರವಸೆ ಕೊಡುತ್ತಿದ್ದಾರೆ.
ಈ ನೈಚ್ಯಾನುಸಂಧಾನದಲ್ಲಿ ಸೋತರೆ ದೇಶಪಾಂಡೆಗೆ ಮಗನ ಭವಿಷ್ಯ ಮುಖ್ಯವಾಗುತ್ತಿದೆ. ಅಂದರೆ ಆತ ಬಿಜೆಪಿ ಪಾಲಾಗುವುದು ಪಕ್ಕಾ. ಅಮಿತ್ ಶಾ ಈಚೆಗೆ ಗೋವಾಕ್ಕೆ ಬಂದಾಗ ದೇಶಪಾಂಡೆ ರಹಸ್ಯವಾಗಿ ಸಂಧಿಸಿ ಬಂದಿದ್ದಾರೆ. ಸಮ್ಮಿಶ್ರ ಸರ್ಕಾರ ಪತನವಾಗುತ್ತಲೇ ಆತ ಬಿಜೆಪಿಗೆ ಅಧಿಕೃತವಾಗಿ ಪ್ರವೇಶ ಪಡೆಯುತ್ತಾರೆ. ಯಾವ ಪಕ್ಷ ಅಧಿಕಾರಕ್ಕೆ ಬಂದರೂ ಮಂತ್ರಿಯಾಗುವ ಯೋಗದ ದೇಶಪಾಂಡೆ ಈ ಬಾರಿ ಬಿಜೆಪಿಯಲ್ಲಿ ಮಂತ್ರಿಗಿರಿ ಕೇಳುತ್ತಿಲ್ಲ. ಬದಲಿಗೆ ತನ್ನ ಮಗ ಪ್ರಶಾಂತನಿಗೆ ಎಂಪಿ ಅಥವಾ ಹಳಿಯಾಳದ ಎಮ್ಮೆಲ್ಲೆ ಟಿಕೆಟ್ ಕೇಸರಿ ಪಕ್ಷದಿಂದ ಬಯಸುತ್ತಿದ್ದಾರೆ. ಹಳಿಯಾಳದಲ್ಲಿ ಬಗಲಲ್ಲಿರುವವ ದುಷ್ಮನ್-ಎಮ್ಮೆಲ್ಲೆ ಎಸ್.ಎಲ್.ಘೋಟನೇಕರ್ ತಿರುಗಿ ಬಿದ್ದರೆ ಬಿಜೆಪಿಯಿಂದಲೂ ತನ್ನ ಮಗ ಗೆಲುವು ಕಷ್ಟವೆಂಬ ಲೆಕ್ಕಾಚಾರವೂ ಆತ ಹಾಕಿದ್ದಾರೆ. ಬಹುಸಂಖ್ಯಾತ ಮರಾಠ ಸಮಾಜದ ಘೋಟನೇಕರ್ ತನ್ನ ಮಗನನ್ನು ಹಳಿಯಾಳದ ಭಾವಿ ಎಮ್ಮೆಲ್ಲೆ ಎಂದೇ ದೃಢವಾಗಿ ನಂಬಿದ್ದಾರೆ. ಹೀಗಾಗಿ ದೇಶಪಾಂಡೆ ತನ್ನ ಬೀಗ, ಪ್ರಶಾಂತನಿಗೆ ಹೆಣ್ಣುಕೊಟ್ಟು ಮಾವ ಮುಂಬೈನ ಪ್ರಭಾವಿ ರಾಜಕಾರಣಿ ಪ್ರಫುಲ್ ಪಟೇಲ್ ಬಲವೂ ಸೇರಿಸಿಕೊಂಡು ಮಗನಿಗೆ ಎಂಪಿ ಮಾಡುವ ಯೋಜನೆ ಹಾಕಿಕೊಂಡಿದ್ದಾರೆ.
ದೇಶಪಾಂಡೆ ಬಿಜೆಪಿ ಸೇರಿದರೆ ಏನಾಗುತ್ತದೆ? ಆತನ ಮಗನ ಭವಿಷ್ಯ ಬೆಳಗುತ್ತದೆ. ಶಿವರಾಮ ಹೆಬ್ಬಾರನ ಗ್ರಹಚಾರ ಮತ್ತೆ ಕೆಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...